Homeಮುಖಪುಟನಾಸಿರ್ ಮದನಿ ಕುರಿತು ಟೀಕೆ : ಸಿಪಿಐ(ಎಂ) ನಾಯಕ ಜಯರಾಜನ್ ಪುಸ್ತಕದ ವಿರುದ್ದ ಸಿಡಿದೆದ್ದ ಪಿಡಿಪಿ...

ನಾಸಿರ್ ಮದನಿ ಕುರಿತು ಟೀಕೆ : ಸಿಪಿಐ(ಎಂ) ನಾಯಕ ಜಯರಾಜನ್ ಪುಸ್ತಕದ ವಿರುದ್ದ ಸಿಡಿದೆದ್ದ ಪಿಡಿಪಿ ಕಾರ್ಯಕರ್ತರು

- Advertisement -
- Advertisement -

ಅಕ್ಟೋಬರ್ 26,2024ರಂದು ಕೋಝೀಕ್ಕೋಡ್‌ನಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬಿಡುಗಡೆ ಮಾಡಿರುವ ಸಿಪಿಐ(ಎಂ) ನಾಯಕ ಪಿ ಜಯರಾಜನ್ ಅವರ ಪುಸ್ತಕ, ‘ಕೇರಳಂ: ಮುಸ್ಲಿಂ ರಾಷ್ಟ್ರಿಯಂ, ರಾಷ್ಟ್ರೀಯ ಇಸ್ಲಾಂ’ ಎಂಬ ಪುಸ್ತಕ ವಿವಾದದ ಕಿಡಿ ಹೊತ್ತಿಸಿದೆ.

ವಿಶೇಷವಾಗಿ ಪುಸ್ತಕದ ವಿರುದ್ದ ನಾಸಿರ್ ಮದನಿ ಅವರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಸಿಡಿದೆದ್ದಿದೆ. ವರದಿಗಳ ಪ್ರಕಾರ, ಪುಸ್ತಕವು ಅಬ್ದುಲ್ ನಾಸಿರ್ ಮದನಿ ಅವರನ್ನು ವಿಮರ್ಶೆ ಮಾಡಿದ್ದು, ಮದನಿ ಕೇರಳದ ಮುಸ್ಲಿಂ ಯುವಕರನ್ನು ಮೂಲಭೂತವಾದದ ಕಡೆಗೆ ಪ್ರಭಾವಿಸಿದ ವ್ಯಕ್ತಿ ಎಂದು ವಿವರಿಸಿದೆ.

ಮದನಿಯ ಭಾಷಣಗಳು ಉಗ್ರವಾದಿ ಚಿಂತನೆಗಳನ್ನು ಬೆಳೆಸುವಲ್ಲಿ ಪ್ರಮುಖವಾಗಿದೆ ಎಂದು ಪುಸ್ತಕವು ಆರೋಪಿಸಿದೆ. ಆದರೂ, ಅವರು ಕೊಯಮತ್ತೂರು ಸ್ಫೋಟ ಪ್ರಕರಣದಲ್ಲಿ ಬಂಧನ ಮತ್ತು ನಂತರದ ಜೈಲುವಾಸದ ಬಳಿಕ ವಿಭಿನ್ನ ವಿಧಾನವನ್ನು ಅಳವಡಿಸಿಕೊಂಡರು ಎಂದಿದೆ.

ಜಯರಾಜನ್ ವಿರುದ್ದ ಪಿಡಿಪಿ ಕಾರ್ಯಕರ್ತರು ಕೋಝಿಕ್ಕೋಡ್‌ನಲ್ಲಿ ಪ್ರತಿಭಟನೆ ನಡೆಸಿದ್ದು, ಪುಸ್ತಕದ ಪ್ರತಿಗಳನ್ನು ಸುಟ್ಟು ಹಾಕಿದ್ದಾರೆ. ಪಿಡಿಪಿ ನಾಯಕರು ಪುಸ್ತಕದಲ್ಲಿನ ಆರೋಪಗಳನ್ನು ತಳ್ಳಿ ಹಾಕಿದ್ದು, “ಮದನಿ ಯಾರನ್ನೂ ಮೂಲಭೂತವಾದಿಗಳನ್ನಾಗಿಸಿಲ್ಲ ಎಂದು ಸ್ವತಃ ಸಿಪಿಐ(ಎಂ) ಈ ಹಿಂದೆ ಸಮರ್ಥಿಸಿಕೊಂಡಿದೆ. ಪಿಣರಾಯಿ ವಿಜಯನ್ ಸೇರಿದಂತೆ ಸಿಪಿಐ(ಎಂ) ನಾಯಕರು ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ. 2021ರ ವಿಧಾನಸಭಾ ಚುನಾವಣೆಯಲ್ಲಿ ಮತ್ತು 2024 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಪಿಡಿಪಿ ಎಡ ಪ್ರಜಾಸತ್ತಾತ್ಮಕ ರಂಗವನ್ನು (ಎಲ್‌ಡಿಎಫ್) ಬೆಂಬಲಿಸಿದೆ” ಎಂದಿದ್ದಾರೆ.

ಜಯರಾಜನ್ ಅವರನ್ನು ಸಮರ್ಥಿಸಿಕೊಂಡಿರುವ ಸಿಎಂ ಪಿಣರಾಯಿ ವಿಜಯನ್, ಲೇಖಕರ ಅಭಿಪ್ರಾಯಗಳನ್ನು ಪಕ್ಷದ ನಿಲುವಿನಿಂದ ಸ್ವತಂತ್ರವಾಗಿ ನೋಡಬೇಕು ಎಂದು ಒತ್ತಿ ಹೇಳಿದ್ದಾರೆ. “ಲೇಖಕನಿಗೆ ತನ್ನದೇ ಆದ ದೃಷ್ಟಿಕೋನವಿದೆ, ಅದು ಚಳವಳಿಯ ರಾಜಕೀಯ ಸಿದ್ಧಾಂತದಿಂದ ಭಿನ್ನವಾಗಿರಬಹುದು. ಪುಸ್ತಕ ಬಿಡುಗಡೆ ಮಾಡಲು ವೈಯಕ್ತಿಕ ಅಭಿಪ್ರಾಯಗಳನ್ನು ಒಪ್ಪಿಕೊಳ್ಳುವ ಅಗತ್ಯವಿಲ್ಲ. ಅಭಿಪ್ರಾಯವು ವ್ಯಕ್ತಿಯ ದೃಷ್ಟಿಕೋನವಾಗಿದೆ ಮತ್ತು ಅದನ್ನು ಹಾಗೆ ನೋಡಬೇಕು” ಎಂದಿದ್ದಾರೆ.

ಇದೇ ವೇಳೆ ಮುಸ್ಲಿಂ ಲೀಗ್ (ಐಯುಎಂಎಲ್‌) ಮತ್ತು ಜಮಾಅತೇ ಇಸ್ಲಾಮಿ ಬಗ್ಗೆ ಮಾತನಾಡಿದ ಪಿಣರಾಯಿ ವಿಜಯನ್, “ಲೀಗ್ ಮತ್ತು ಜಮಾಅತೇ ಇಸ್ಲಾಮಿಯನ್ನು ಒಂದೇ ಲೆನ್ಸ್ ಮೂಲಕ ನೋಡಲು ಸಾಧ್ಯವಿಲ್ಲ. ಜಮಾತ್‌ನ ಗುರಿ ಇಸ್ಲಾಮಿಕ್ ರಾಜ್ಯವಾಗಿದೆ, ಆದರೆ ಲೀಗ್ ಭಾರತದ ಹೊರಗೆ ಮೈತ್ರಿಗಳಿಲ್ಲದ ಸುಧಾರಣಾವಾದಿ ಚಳುವಳಿಯಾಗಿದೆ. ಜಮಾತ್ ವಿದೇಶದಲ್ಲಿ ಉಗ್ರಗಾಮಿ ಗುಂಪುಗಳೊಂದಿಗೆ ಸಂಪರ್ಕವನ್ನು ಹೊಂದಿದೆ ಮತ್ತು ಲೀಗ್‌ಗಿಂತ ಭಿನ್ನವಾಗಿ ಇಸ್ಲಾಮಿಕ್ ಸಾರ್ವತ್ರಿಕತೆಯ ಗುರಿಯನ್ನು ಹೊಂದಿದೆ. ಆರ್‌ಎಸ್‌ಎಸ್ ಮತ್ತು ಜಮಾತ್ ಒಂದೇ ಗರಿಗಳ ಪಕ್ಷಿಗಳು. ಲೀಗ್ ತನ್ನ ಕಮ್ಯುನಿಸ್ಟ್ ವಿರೋಧಿ ಕಾರ್ಯಸೂಚಿಯಲ್ಲಿ ಮಾತ್ರ ಈ ಕೋಮು ಗುಂಪುಗಳೊಂದಿಗೆ ಸಹಕರಿಸುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ಸಮಾನತೆ-ಸಾಮಾಜಿಕ ನ್ಯಾಯಕ್ಕೆ ಒತ್ತು, ಜಾತಿಗಣತಿ ಭರವಸೆ : ಸಂಚಲನ ಸೃಷ್ಟಿಸಿದ ಹೊಸ ಪಕ್ಷ ಟಿವಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...