Homeಮುಖಪುಟನಾಸಿರ್ ಮದನಿ ಕುರಿತು ಟೀಕೆ : ಸಿಪಿಐ(ಎಂ) ನಾಯಕ ಜಯರಾಜನ್ ಪುಸ್ತಕದ ವಿರುದ್ದ ಸಿಡಿದೆದ್ದ ಪಿಡಿಪಿ...

ನಾಸಿರ್ ಮದನಿ ಕುರಿತು ಟೀಕೆ : ಸಿಪಿಐ(ಎಂ) ನಾಯಕ ಜಯರಾಜನ್ ಪುಸ್ತಕದ ವಿರುದ್ದ ಸಿಡಿದೆದ್ದ ಪಿಡಿಪಿ ಕಾರ್ಯಕರ್ತರು

- Advertisement -
- Advertisement -

ಅಕ್ಟೋಬರ್ 26,2024ರಂದು ಕೋಝೀಕ್ಕೋಡ್‌ನಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬಿಡುಗಡೆ ಮಾಡಿರುವ ಸಿಪಿಐ(ಎಂ) ನಾಯಕ ಪಿ ಜಯರಾಜನ್ ಅವರ ಪುಸ್ತಕ, ‘ಕೇರಳಂ: ಮುಸ್ಲಿಂ ರಾಷ್ಟ್ರಿಯಂ, ರಾಷ್ಟ್ರೀಯ ಇಸ್ಲಾಂ’ ಎಂಬ ಪುಸ್ತಕ ವಿವಾದದ ಕಿಡಿ ಹೊತ್ತಿಸಿದೆ.

ವಿಶೇಷವಾಗಿ ಪುಸ್ತಕದ ವಿರುದ್ದ ನಾಸಿರ್ ಮದನಿ ಅವರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಸಿಡಿದೆದ್ದಿದೆ. ವರದಿಗಳ ಪ್ರಕಾರ, ಪುಸ್ತಕವು ಅಬ್ದುಲ್ ನಾಸಿರ್ ಮದನಿ ಅವರನ್ನು ವಿಮರ್ಶೆ ಮಾಡಿದ್ದು, ಮದನಿ ಕೇರಳದ ಮುಸ್ಲಿಂ ಯುವಕರನ್ನು ಮೂಲಭೂತವಾದದ ಕಡೆಗೆ ಪ್ರಭಾವಿಸಿದ ವ್ಯಕ್ತಿ ಎಂದು ವಿವರಿಸಿದೆ.

ಮದನಿಯ ಭಾಷಣಗಳು ಉಗ್ರವಾದಿ ಚಿಂತನೆಗಳನ್ನು ಬೆಳೆಸುವಲ್ಲಿ ಪ್ರಮುಖವಾಗಿದೆ ಎಂದು ಪುಸ್ತಕವು ಆರೋಪಿಸಿದೆ. ಆದರೂ, ಅವರು ಕೊಯಮತ್ತೂರು ಸ್ಫೋಟ ಪ್ರಕರಣದಲ್ಲಿ ಬಂಧನ ಮತ್ತು ನಂತರದ ಜೈಲುವಾಸದ ಬಳಿಕ ವಿಭಿನ್ನ ವಿಧಾನವನ್ನು ಅಳವಡಿಸಿಕೊಂಡರು ಎಂದಿದೆ.

ಜಯರಾಜನ್ ವಿರುದ್ದ ಪಿಡಿಪಿ ಕಾರ್ಯಕರ್ತರು ಕೋಝಿಕ್ಕೋಡ್‌ನಲ್ಲಿ ಪ್ರತಿಭಟನೆ ನಡೆಸಿದ್ದು, ಪುಸ್ತಕದ ಪ್ರತಿಗಳನ್ನು ಸುಟ್ಟು ಹಾಕಿದ್ದಾರೆ. ಪಿಡಿಪಿ ನಾಯಕರು ಪುಸ್ತಕದಲ್ಲಿನ ಆರೋಪಗಳನ್ನು ತಳ್ಳಿ ಹಾಕಿದ್ದು, “ಮದನಿ ಯಾರನ್ನೂ ಮೂಲಭೂತವಾದಿಗಳನ್ನಾಗಿಸಿಲ್ಲ ಎಂದು ಸ್ವತಃ ಸಿಪಿಐ(ಎಂ) ಈ ಹಿಂದೆ ಸಮರ್ಥಿಸಿಕೊಂಡಿದೆ. ಪಿಣರಾಯಿ ವಿಜಯನ್ ಸೇರಿದಂತೆ ಸಿಪಿಐ(ಎಂ) ನಾಯಕರು ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ. 2021ರ ವಿಧಾನಸಭಾ ಚುನಾವಣೆಯಲ್ಲಿ ಮತ್ತು 2024 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಪಿಡಿಪಿ ಎಡ ಪ್ರಜಾಸತ್ತಾತ್ಮಕ ರಂಗವನ್ನು (ಎಲ್‌ಡಿಎಫ್) ಬೆಂಬಲಿಸಿದೆ” ಎಂದಿದ್ದಾರೆ.

ಜಯರಾಜನ್ ಅವರನ್ನು ಸಮರ್ಥಿಸಿಕೊಂಡಿರುವ ಸಿಎಂ ಪಿಣರಾಯಿ ವಿಜಯನ್, ಲೇಖಕರ ಅಭಿಪ್ರಾಯಗಳನ್ನು ಪಕ್ಷದ ನಿಲುವಿನಿಂದ ಸ್ವತಂತ್ರವಾಗಿ ನೋಡಬೇಕು ಎಂದು ಒತ್ತಿ ಹೇಳಿದ್ದಾರೆ. “ಲೇಖಕನಿಗೆ ತನ್ನದೇ ಆದ ದೃಷ್ಟಿಕೋನವಿದೆ, ಅದು ಚಳವಳಿಯ ರಾಜಕೀಯ ಸಿದ್ಧಾಂತದಿಂದ ಭಿನ್ನವಾಗಿರಬಹುದು. ಪುಸ್ತಕ ಬಿಡುಗಡೆ ಮಾಡಲು ವೈಯಕ್ತಿಕ ಅಭಿಪ್ರಾಯಗಳನ್ನು ಒಪ್ಪಿಕೊಳ್ಳುವ ಅಗತ್ಯವಿಲ್ಲ. ಅಭಿಪ್ರಾಯವು ವ್ಯಕ್ತಿಯ ದೃಷ್ಟಿಕೋನವಾಗಿದೆ ಮತ್ತು ಅದನ್ನು ಹಾಗೆ ನೋಡಬೇಕು” ಎಂದಿದ್ದಾರೆ.

ಇದೇ ವೇಳೆ ಮುಸ್ಲಿಂ ಲೀಗ್ (ಐಯುಎಂಎಲ್‌) ಮತ್ತು ಜಮಾಅತೇ ಇಸ್ಲಾಮಿ ಬಗ್ಗೆ ಮಾತನಾಡಿದ ಪಿಣರಾಯಿ ವಿಜಯನ್, “ಲೀಗ್ ಮತ್ತು ಜಮಾಅತೇ ಇಸ್ಲಾಮಿಯನ್ನು ಒಂದೇ ಲೆನ್ಸ್ ಮೂಲಕ ನೋಡಲು ಸಾಧ್ಯವಿಲ್ಲ. ಜಮಾತ್‌ನ ಗುರಿ ಇಸ್ಲಾಮಿಕ್ ರಾಜ್ಯವಾಗಿದೆ, ಆದರೆ ಲೀಗ್ ಭಾರತದ ಹೊರಗೆ ಮೈತ್ರಿಗಳಿಲ್ಲದ ಸುಧಾರಣಾವಾದಿ ಚಳುವಳಿಯಾಗಿದೆ. ಜಮಾತ್ ವಿದೇಶದಲ್ಲಿ ಉಗ್ರಗಾಮಿ ಗುಂಪುಗಳೊಂದಿಗೆ ಸಂಪರ್ಕವನ್ನು ಹೊಂದಿದೆ ಮತ್ತು ಲೀಗ್‌ಗಿಂತ ಭಿನ್ನವಾಗಿ ಇಸ್ಲಾಮಿಕ್ ಸಾರ್ವತ್ರಿಕತೆಯ ಗುರಿಯನ್ನು ಹೊಂದಿದೆ. ಆರ್‌ಎಸ್‌ಎಸ್ ಮತ್ತು ಜಮಾತ್ ಒಂದೇ ಗರಿಗಳ ಪಕ್ಷಿಗಳು. ಲೀಗ್ ತನ್ನ ಕಮ್ಯುನಿಸ್ಟ್ ವಿರೋಧಿ ಕಾರ್ಯಸೂಚಿಯಲ್ಲಿ ಮಾತ್ರ ಈ ಕೋಮು ಗುಂಪುಗಳೊಂದಿಗೆ ಸಹಕರಿಸುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ಸಮಾನತೆ-ಸಾಮಾಜಿಕ ನ್ಯಾಯಕ್ಕೆ ಒತ್ತು, ಜಾತಿಗಣತಿ ಭರವಸೆ : ಸಂಚಲನ ಸೃಷ್ಟಿಸಿದ ಹೊಸ ಪಕ್ಷ ಟಿವಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...