Homeಕರ್ನಾಟಕಟಿವಿ ಚಾನೆಲ್‌‌‌ ಕಚೇರಿಗಳ ಮುಂದೆ ಶಾಂತಿಯುತ ಸತ್ಯಾಗ್ರಹ: ವಶಕ್ಕೆ ಪಡೆದ ಪೊಲೀಸರು

ಟಿವಿ ಚಾನೆಲ್‌‌‌ ಕಚೇರಿಗಳ ಮುಂದೆ ಶಾಂತಿಯುತ ಸತ್ಯಾಗ್ರಹ: ವಶಕ್ಕೆ ಪಡೆದ ಪೊಲೀಸರು

ಸುವರ್ಣ ಟಿವಿ & ಬಿಟಿವಿ ಕಚೇರಿಯ ರಸ್ತೆಯಲ್ಲಿ ಕೂಡಾ ತೆರಳಬಾರದು ಎಂದು ಪೊಲೀಸರು ಹೇಳಿದ್ದಾರೆ ಸತ್ಯಾಗ್ರಹಿಗಳು ಆರೋಪಿಸಿದ್ದಾರೆ

- Advertisement -
- Advertisement -

ಕನ್ನಡದ ಮಾಧ್ಯಮಗಳಾದ ಸುವರ್ಣ ಟಿವಿ, ಟಿವಿ9 ಮತ್ತು ಬಿಟಿವಿ ಕಚೇರಿಗಳ ಮುಂದೆ ‘ಆತ್ಮಾವಲೋಕನ ಸತ್ಯಾಗ್ರಹ’ ನಡೆಸಲು ತೆರಳುತ್ತಿದ್ದ ಸತ್ಯಾಗ್ರಹಿಗಳನ್ನು ಬೆಂಗಳೂರಿನ ಹೈಗ್ರೌಂಡ್‌ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕನ್ನಡದ ಸುದ್ದಿ ಮಾಧ್ಯಮಗಳು ತಮ್ಮ ಕರ್ತವ್ಯವನ್ನು ಮರೆತು ಜನರನ್ನು ದಾರಿ ತಪ್ಪಿಸುತ್ತಿರುವ ಹಿನ್ನಲೆಯಲ್ಲಿ ಅವರ ಕರ್ತವ್ಯವನ್ನು ನೆನಪಿಸಲು ಬೆಂಗಳೂರಿನ ಸಮಾನ ಮನಸ್ಕರ ಗುಂಪು ಸತ್ಯಾಗ್ರಹ ನಡೆಸಲು ಯೋಜಿಸಿದ್ದರು.

ಸತ್ಯಾಗ್ರಹವು ಬೆಳಿಗ್ಗೆ 09:30ಕ್ಕೆ ಪಬ್ಲಿಕ್‌ ಟಿವಿ ಕಚೇರಿಯಿಂದ ಪ್ರಾರಂಭವಾಗಿ, ನಂತರ 11:30ಕ್ಕೆ ಸುವರ್ಣ ಟಿವಿ ಕಚೇರಿಯ ಮುಂದೆ ತಲುಪಿ, ಅದರ ನಂತರ ಮಧ್ಯಾಹ್ನ 2 ಗಂಟೆಗೆ ಬಿಟಿವಿ ಕಚೇರಿ ಬಳಿ ತೆರಳಿ, ಸಂಜೆ 4 ಗಂಟೆಗೆ ಟಿವಿ9 ಕಚೇರಿ ಮುಂದೆ ಸೇರಲಿತ್ತು. ಆದರೆ ಸತ್ಯಾಗ್ರಹಿಗಳು ಪಬ್ಲಿಕ್ ಟಿವಿ ಮುಂದೆ ತೆರಳಿ ಅಲ್ಲಿನ ಮಾಧ್ಯಮ ಸಿಬ್ಬಂದಿಗೆ ಆಗ್ರಹಗಳ ಮನವಿ ಪತ್ರ ಸಲ್ಲಿಸಿ ಸುವರ್ಣ ಟಿವಿ ಕಚೇರಿಗೆ ತೆರಳುತ್ತಿದ್ದಾಗ, ಹೈಗ್ರೌಂಡ್‌ ಪೊಲೀಸರು ಸತ್ಯಾಗ್ರಹಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಎಂ. ಯುವರಾಜ್, “ಸತ್ಯಾಗ್ರಹಿಗಳನ್ನು ಪೊಲೀಸರು ಹೈಗ್ರೌಂಡ್‌ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ನಾವು ಮೊದಲಿಗೆ ಪಬ್ಲಿಕ್ ಟಿವಿ ಕಚೇರಿ ಮುಂದೆ ಮೊದಲಿಗೆ ಹೋದೆವು. ಅವರು ನಮ್ಮನ್ನು ಬರಮಾಡಿಕೊಂಡು, ನಮಗೆ ಒಳ್ಳೆಯ ಪ್ರತಿಕ್ರಿಯೆ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

‘ನಾವು ಅವರಿಗೆ ಗುಲಾಬಿ ಕೊಟ್ಟು, ಮನವಿಯನ್ನು ನೀಡಿದೆವು, ಅವರು ಕೂಡಾ ನಮ್ಮ ಮನವಿಯನ್ನು ಸ್ವೀಕರಿಸಿದರು. ನಾವು ಶಾಂತಿಯುತವಾಗಿಯೆ ಗಾಂಧೀಜಿಯ ಭಜನೆಯಾದ ರಘುಪತಿ ರಾಘವ ರಾಜಾರಾಂ ಹಾಡಿ ಅಲ್ಲಿಂದ ತೆರಳಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಆದರೆ ಅಲ್ಲಿಂದ ಸುವರ್ಣ ಮತ್ತು ಬಿಟಿವಿ ಕಚೇರಿ ತೆಳುತ್ತಿದ್ದಾಗ ಪೊಲೀಸರು ಸತ್ಯಾಗ್ರಹಿಗಳನ್ನು ವಶಕ್ಕೆ ಪಡೆದಿದ್ದಾರೆ. “ಪಬ್ಲಿಕ್ ಟಿವಿ ಕಚೇರಿಯಿಂದ ನಾವು ಸುವರ್ಣ ಮತ್ತು ಬಿಟಿವಿ ಕಚೇರಿಗೆ ಹೊರಟಾಗ ಹೈಗ್ರೌಂಡ್‌ ಠಾಣೆಯ ಪೊಲೀಸರು ರಸ್ತೆಯಲ್ಲೇ ನಮ್ಮನ್ನು ತಡೆಹಿಡಿದರು” ಎಂದು ಯುವರಾಜ್ ನಾನುಗೌರಿ.ಕಾಂಗೆ ಹೇಳಿದ್ದಾರೆ.

ಇದನ್ನೂ ಓದಿ: ಪಬ್ಲಿಕ್‌, ಸುವರ್ಣ, ಟಿವಿ9 ಮತ್ತು ಪಬ್ಲಿಕ್ ಟಿವಿ ಕಚೇರಿ ಮುಂದೆ ಬುಧವಾರ ‘ಆತ್ಮಾವಲೋಕನ ಸತ್ಯಾಗ್ರಹ’

“ನಾವು ಪೊಲೀಸರೊಂದಿಗೆ ಪಬ್ಲಿಕ್ ಟಿವಿ ಕಚೇರಿಯಲ್ಲಿ ಮನವಿ ಮಾಡಿದಂತೆ ಬೇರೆ ಟಿವಿ ಕಚೇರಿ ಮುಂದೆಯು ಮನವಿ ಮಾಡಿ ಹೋಗುತ್ತೇವೆ ಎಂದು ತಿಳಿಸಿದೆವು. ಆದರೆ ವ್ಯಕ್ತಿಯೊಬ್ಬರು ಬಂದು, ‘ಸುವರ್ಣ ಕಚೇರಿ ಮುಂದೆ ಬರುವುದು ಬೇಡ. ಬಿಟಿವಿ ಮುಂದೆ ಕೂಡಾ ಬರುವುದು ಬೇಡ ಎಂದು ಅವರು ಹೇಳುತ್ತಿದ್ದಾರೆ’ ಎಂದು ಹೇಳಿದರು. ನಾವು ಅವರಿಗೆ ಒಂದು ಮನವಿ ಪತ್ರ ಕೂಡಾ ಕೊಡಲು ಅವಕಾಶ ಇಲ್ಲವೆ ಎಂದು ಕೇಳಿದೆವು. ಅಷ್ಟರಲ್ಲಿ ಹೈಗ್ರೌಂಡ್ ಠಾಣೆಯ ಪೊಲೀಸರು ನಮ್ಮನ್ನು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ನಾವು ಕಳೆದ ಒಂದು ಗಂಟೆಯಿಂದ 15 ಜನರು ಹೈಗ್ರೌಂಡ್ ಠಾಣೆಯಲ್ಲಿ ಇದ್ದೇವೆ” ಎಂದು ಯುವರಾಜ್ ಮಾಹಿತಿ ನೀಡಿದ್ದಾರೆ.


ತಾವು ಯಾವ ದಾರಿಯಲ್ಲಿ ಸಾಗುತ್ತಿದ್ದೇವೆ ಎಂಬ ಬಗ್ಗೆ ಒಂದು ಆತ್ಮಾವಲೋಕನ ಮಾಡಿಕೊಳ್ಳುವಂತೆ ಸತ್ಯಾಗ್ರಹಿಗಳು ಕನ್ನಡದ ಮಾಧ್ಯಮಗಳಿಗೆ ವಿನಂತಿಸಲಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...