Homeಕರ್ನಾಟಕಟಿವಿ ಚಾನೆಲ್‌‌‌ ಕಚೇರಿಗಳ ಮುಂದೆ ಶಾಂತಿಯುತ ಸತ್ಯಾಗ್ರಹ: ವಶಕ್ಕೆ ಪಡೆದ ಪೊಲೀಸರು

ಟಿವಿ ಚಾನೆಲ್‌‌‌ ಕಚೇರಿಗಳ ಮುಂದೆ ಶಾಂತಿಯುತ ಸತ್ಯಾಗ್ರಹ: ವಶಕ್ಕೆ ಪಡೆದ ಪೊಲೀಸರು

ಸುವರ್ಣ ಟಿವಿ & ಬಿಟಿವಿ ಕಚೇರಿಯ ರಸ್ತೆಯಲ್ಲಿ ಕೂಡಾ ತೆರಳಬಾರದು ಎಂದು ಪೊಲೀಸರು ಹೇಳಿದ್ದಾರೆ ಸತ್ಯಾಗ್ರಹಿಗಳು ಆರೋಪಿಸಿದ್ದಾರೆ

- Advertisement -
- Advertisement -

ಕನ್ನಡದ ಮಾಧ್ಯಮಗಳಾದ ಸುವರ್ಣ ಟಿವಿ, ಟಿವಿ9 ಮತ್ತು ಬಿಟಿವಿ ಕಚೇರಿಗಳ ಮುಂದೆ ‘ಆತ್ಮಾವಲೋಕನ ಸತ್ಯಾಗ್ರಹ’ ನಡೆಸಲು ತೆರಳುತ್ತಿದ್ದ ಸತ್ಯಾಗ್ರಹಿಗಳನ್ನು ಬೆಂಗಳೂರಿನ ಹೈಗ್ರೌಂಡ್‌ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕನ್ನಡದ ಸುದ್ದಿ ಮಾಧ್ಯಮಗಳು ತಮ್ಮ ಕರ್ತವ್ಯವನ್ನು ಮರೆತು ಜನರನ್ನು ದಾರಿ ತಪ್ಪಿಸುತ್ತಿರುವ ಹಿನ್ನಲೆಯಲ್ಲಿ ಅವರ ಕರ್ತವ್ಯವನ್ನು ನೆನಪಿಸಲು ಬೆಂಗಳೂರಿನ ಸಮಾನ ಮನಸ್ಕರ ಗುಂಪು ಸತ್ಯಾಗ್ರಹ ನಡೆಸಲು ಯೋಜಿಸಿದ್ದರು.

ಸತ್ಯಾಗ್ರಹವು ಬೆಳಿಗ್ಗೆ 09:30ಕ್ಕೆ ಪಬ್ಲಿಕ್‌ ಟಿವಿ ಕಚೇರಿಯಿಂದ ಪ್ರಾರಂಭವಾಗಿ, ನಂತರ 11:30ಕ್ಕೆ ಸುವರ್ಣ ಟಿವಿ ಕಚೇರಿಯ ಮುಂದೆ ತಲುಪಿ, ಅದರ ನಂತರ ಮಧ್ಯಾಹ್ನ 2 ಗಂಟೆಗೆ ಬಿಟಿವಿ ಕಚೇರಿ ಬಳಿ ತೆರಳಿ, ಸಂಜೆ 4 ಗಂಟೆಗೆ ಟಿವಿ9 ಕಚೇರಿ ಮುಂದೆ ಸೇರಲಿತ್ತು. ಆದರೆ ಸತ್ಯಾಗ್ರಹಿಗಳು ಪಬ್ಲಿಕ್ ಟಿವಿ ಮುಂದೆ ತೆರಳಿ ಅಲ್ಲಿನ ಮಾಧ್ಯಮ ಸಿಬ್ಬಂದಿಗೆ ಆಗ್ರಹಗಳ ಮನವಿ ಪತ್ರ ಸಲ್ಲಿಸಿ ಸುವರ್ಣ ಟಿವಿ ಕಚೇರಿಗೆ ತೆರಳುತ್ತಿದ್ದಾಗ, ಹೈಗ್ರೌಂಡ್‌ ಪೊಲೀಸರು ಸತ್ಯಾಗ್ರಹಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಎಂ. ಯುವರಾಜ್, “ಸತ್ಯಾಗ್ರಹಿಗಳನ್ನು ಪೊಲೀಸರು ಹೈಗ್ರೌಂಡ್‌ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ನಾವು ಮೊದಲಿಗೆ ಪಬ್ಲಿಕ್ ಟಿವಿ ಕಚೇರಿ ಮುಂದೆ ಮೊದಲಿಗೆ ಹೋದೆವು. ಅವರು ನಮ್ಮನ್ನು ಬರಮಾಡಿಕೊಂಡು, ನಮಗೆ ಒಳ್ಳೆಯ ಪ್ರತಿಕ್ರಿಯೆ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

‘ನಾವು ಅವರಿಗೆ ಗುಲಾಬಿ ಕೊಟ್ಟು, ಮನವಿಯನ್ನು ನೀಡಿದೆವು, ಅವರು ಕೂಡಾ ನಮ್ಮ ಮನವಿಯನ್ನು ಸ್ವೀಕರಿಸಿದರು. ನಾವು ಶಾಂತಿಯುತವಾಗಿಯೆ ಗಾಂಧೀಜಿಯ ಭಜನೆಯಾದ ರಘುಪತಿ ರಾಘವ ರಾಜಾರಾಂ ಹಾಡಿ ಅಲ್ಲಿಂದ ತೆರಳಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಆದರೆ ಅಲ್ಲಿಂದ ಸುವರ್ಣ ಮತ್ತು ಬಿಟಿವಿ ಕಚೇರಿ ತೆಳುತ್ತಿದ್ದಾಗ ಪೊಲೀಸರು ಸತ್ಯಾಗ್ರಹಿಗಳನ್ನು ವಶಕ್ಕೆ ಪಡೆದಿದ್ದಾರೆ. “ಪಬ್ಲಿಕ್ ಟಿವಿ ಕಚೇರಿಯಿಂದ ನಾವು ಸುವರ್ಣ ಮತ್ತು ಬಿಟಿವಿ ಕಚೇರಿಗೆ ಹೊರಟಾಗ ಹೈಗ್ರೌಂಡ್‌ ಠಾಣೆಯ ಪೊಲೀಸರು ರಸ್ತೆಯಲ್ಲೇ ನಮ್ಮನ್ನು ತಡೆಹಿಡಿದರು” ಎಂದು ಯುವರಾಜ್ ನಾನುಗೌರಿ.ಕಾಂಗೆ ಹೇಳಿದ್ದಾರೆ.

ಇದನ್ನೂ ಓದಿ: ಪಬ್ಲಿಕ್‌, ಸುವರ್ಣ, ಟಿವಿ9 ಮತ್ತು ಪಬ್ಲಿಕ್ ಟಿವಿ ಕಚೇರಿ ಮುಂದೆ ಬುಧವಾರ ‘ಆತ್ಮಾವಲೋಕನ ಸತ್ಯಾಗ್ರಹ’

“ನಾವು ಪೊಲೀಸರೊಂದಿಗೆ ಪಬ್ಲಿಕ್ ಟಿವಿ ಕಚೇರಿಯಲ್ಲಿ ಮನವಿ ಮಾಡಿದಂತೆ ಬೇರೆ ಟಿವಿ ಕಚೇರಿ ಮುಂದೆಯು ಮನವಿ ಮಾಡಿ ಹೋಗುತ್ತೇವೆ ಎಂದು ತಿಳಿಸಿದೆವು. ಆದರೆ ವ್ಯಕ್ತಿಯೊಬ್ಬರು ಬಂದು, ‘ಸುವರ್ಣ ಕಚೇರಿ ಮುಂದೆ ಬರುವುದು ಬೇಡ. ಬಿಟಿವಿ ಮುಂದೆ ಕೂಡಾ ಬರುವುದು ಬೇಡ ಎಂದು ಅವರು ಹೇಳುತ್ತಿದ್ದಾರೆ’ ಎಂದು ಹೇಳಿದರು. ನಾವು ಅವರಿಗೆ ಒಂದು ಮನವಿ ಪತ್ರ ಕೂಡಾ ಕೊಡಲು ಅವಕಾಶ ಇಲ್ಲವೆ ಎಂದು ಕೇಳಿದೆವು. ಅಷ್ಟರಲ್ಲಿ ಹೈಗ್ರೌಂಡ್ ಠಾಣೆಯ ಪೊಲೀಸರು ನಮ್ಮನ್ನು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ನಾವು ಕಳೆದ ಒಂದು ಗಂಟೆಯಿಂದ 15 ಜನರು ಹೈಗ್ರೌಂಡ್ ಠಾಣೆಯಲ್ಲಿ ಇದ್ದೇವೆ” ಎಂದು ಯುವರಾಜ್ ಮಾಹಿತಿ ನೀಡಿದ್ದಾರೆ.


ತಾವು ಯಾವ ದಾರಿಯಲ್ಲಿ ಸಾಗುತ್ತಿದ್ದೇವೆ ಎಂಬ ಬಗ್ಗೆ ಒಂದು ಆತ್ಮಾವಲೋಕನ ಮಾಡಿಕೊಳ್ಳುವಂತೆ ಸತ್ಯಾಗ್ರಹಿಗಳು ಕನ್ನಡದ ಮಾಧ್ಯಮಗಳಿಗೆ ವಿನಂತಿಸಲಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...