Homeಕರ್ನಾಟಕಟಿವಿ ಚಾನೆಲ್‌‌‌ ಕಚೇರಿಗಳ ಮುಂದೆ ಶಾಂತಿಯುತ ಸತ್ಯಾಗ್ರಹ: ವಶಕ್ಕೆ ಪಡೆದ ಪೊಲೀಸರು

ಟಿವಿ ಚಾನೆಲ್‌‌‌ ಕಚೇರಿಗಳ ಮುಂದೆ ಶಾಂತಿಯುತ ಸತ್ಯಾಗ್ರಹ: ವಶಕ್ಕೆ ಪಡೆದ ಪೊಲೀಸರು

ಸುವರ್ಣ ಟಿವಿ & ಬಿಟಿವಿ ಕಚೇರಿಯ ರಸ್ತೆಯಲ್ಲಿ ಕೂಡಾ ತೆರಳಬಾರದು ಎಂದು ಪೊಲೀಸರು ಹೇಳಿದ್ದಾರೆ ಸತ್ಯಾಗ್ರಹಿಗಳು ಆರೋಪಿಸಿದ್ದಾರೆ

- Advertisement -
- Advertisement -

ಕನ್ನಡದ ಮಾಧ್ಯಮಗಳಾದ ಸುವರ್ಣ ಟಿವಿ, ಟಿವಿ9 ಮತ್ತು ಬಿಟಿವಿ ಕಚೇರಿಗಳ ಮುಂದೆ ‘ಆತ್ಮಾವಲೋಕನ ಸತ್ಯಾಗ್ರಹ’ ನಡೆಸಲು ತೆರಳುತ್ತಿದ್ದ ಸತ್ಯಾಗ್ರಹಿಗಳನ್ನು ಬೆಂಗಳೂರಿನ ಹೈಗ್ರೌಂಡ್‌ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕನ್ನಡದ ಸುದ್ದಿ ಮಾಧ್ಯಮಗಳು ತಮ್ಮ ಕರ್ತವ್ಯವನ್ನು ಮರೆತು ಜನರನ್ನು ದಾರಿ ತಪ್ಪಿಸುತ್ತಿರುವ ಹಿನ್ನಲೆಯಲ್ಲಿ ಅವರ ಕರ್ತವ್ಯವನ್ನು ನೆನಪಿಸಲು ಬೆಂಗಳೂರಿನ ಸಮಾನ ಮನಸ್ಕರ ಗುಂಪು ಸತ್ಯಾಗ್ರಹ ನಡೆಸಲು ಯೋಜಿಸಿದ್ದರು.

ಸತ್ಯಾಗ್ರಹವು ಬೆಳಿಗ್ಗೆ 09:30ಕ್ಕೆ ಪಬ್ಲಿಕ್‌ ಟಿವಿ ಕಚೇರಿಯಿಂದ ಪ್ರಾರಂಭವಾಗಿ, ನಂತರ 11:30ಕ್ಕೆ ಸುವರ್ಣ ಟಿವಿ ಕಚೇರಿಯ ಮುಂದೆ ತಲುಪಿ, ಅದರ ನಂತರ ಮಧ್ಯಾಹ್ನ 2 ಗಂಟೆಗೆ ಬಿಟಿವಿ ಕಚೇರಿ ಬಳಿ ತೆರಳಿ, ಸಂಜೆ 4 ಗಂಟೆಗೆ ಟಿವಿ9 ಕಚೇರಿ ಮುಂದೆ ಸೇರಲಿತ್ತು. ಆದರೆ ಸತ್ಯಾಗ್ರಹಿಗಳು ಪಬ್ಲಿಕ್ ಟಿವಿ ಮುಂದೆ ತೆರಳಿ ಅಲ್ಲಿನ ಮಾಧ್ಯಮ ಸಿಬ್ಬಂದಿಗೆ ಆಗ್ರಹಗಳ ಮನವಿ ಪತ್ರ ಸಲ್ಲಿಸಿ ಸುವರ್ಣ ಟಿವಿ ಕಚೇರಿಗೆ ತೆರಳುತ್ತಿದ್ದಾಗ, ಹೈಗ್ರೌಂಡ್‌ ಪೊಲೀಸರು ಸತ್ಯಾಗ್ರಹಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಎಂ. ಯುವರಾಜ್, “ಸತ್ಯಾಗ್ರಹಿಗಳನ್ನು ಪೊಲೀಸರು ಹೈಗ್ರೌಂಡ್‌ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ನಾವು ಮೊದಲಿಗೆ ಪಬ್ಲಿಕ್ ಟಿವಿ ಕಚೇರಿ ಮುಂದೆ ಮೊದಲಿಗೆ ಹೋದೆವು. ಅವರು ನಮ್ಮನ್ನು ಬರಮಾಡಿಕೊಂಡು, ನಮಗೆ ಒಳ್ಳೆಯ ಪ್ರತಿಕ್ರಿಯೆ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

‘ನಾವು ಅವರಿಗೆ ಗುಲಾಬಿ ಕೊಟ್ಟು, ಮನವಿಯನ್ನು ನೀಡಿದೆವು, ಅವರು ಕೂಡಾ ನಮ್ಮ ಮನವಿಯನ್ನು ಸ್ವೀಕರಿಸಿದರು. ನಾವು ಶಾಂತಿಯುತವಾಗಿಯೆ ಗಾಂಧೀಜಿಯ ಭಜನೆಯಾದ ರಘುಪತಿ ರಾಘವ ರಾಜಾರಾಂ ಹಾಡಿ ಅಲ್ಲಿಂದ ತೆರಳಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಆದರೆ ಅಲ್ಲಿಂದ ಸುವರ್ಣ ಮತ್ತು ಬಿಟಿವಿ ಕಚೇರಿ ತೆಳುತ್ತಿದ್ದಾಗ ಪೊಲೀಸರು ಸತ್ಯಾಗ್ರಹಿಗಳನ್ನು ವಶಕ್ಕೆ ಪಡೆದಿದ್ದಾರೆ. “ಪಬ್ಲಿಕ್ ಟಿವಿ ಕಚೇರಿಯಿಂದ ನಾವು ಸುವರ್ಣ ಮತ್ತು ಬಿಟಿವಿ ಕಚೇರಿಗೆ ಹೊರಟಾಗ ಹೈಗ್ರೌಂಡ್‌ ಠಾಣೆಯ ಪೊಲೀಸರು ರಸ್ತೆಯಲ್ಲೇ ನಮ್ಮನ್ನು ತಡೆಹಿಡಿದರು” ಎಂದು ಯುವರಾಜ್ ನಾನುಗೌರಿ.ಕಾಂಗೆ ಹೇಳಿದ್ದಾರೆ.

ಇದನ್ನೂ ಓದಿ: ಪಬ್ಲಿಕ್‌, ಸುವರ್ಣ, ಟಿವಿ9 ಮತ್ತು ಪಬ್ಲಿಕ್ ಟಿವಿ ಕಚೇರಿ ಮುಂದೆ ಬುಧವಾರ ‘ಆತ್ಮಾವಲೋಕನ ಸತ್ಯಾಗ್ರಹ’

“ನಾವು ಪೊಲೀಸರೊಂದಿಗೆ ಪಬ್ಲಿಕ್ ಟಿವಿ ಕಚೇರಿಯಲ್ಲಿ ಮನವಿ ಮಾಡಿದಂತೆ ಬೇರೆ ಟಿವಿ ಕಚೇರಿ ಮುಂದೆಯು ಮನವಿ ಮಾಡಿ ಹೋಗುತ್ತೇವೆ ಎಂದು ತಿಳಿಸಿದೆವು. ಆದರೆ ವ್ಯಕ್ತಿಯೊಬ್ಬರು ಬಂದು, ‘ಸುವರ್ಣ ಕಚೇರಿ ಮುಂದೆ ಬರುವುದು ಬೇಡ. ಬಿಟಿವಿ ಮುಂದೆ ಕೂಡಾ ಬರುವುದು ಬೇಡ ಎಂದು ಅವರು ಹೇಳುತ್ತಿದ್ದಾರೆ’ ಎಂದು ಹೇಳಿದರು. ನಾವು ಅವರಿಗೆ ಒಂದು ಮನವಿ ಪತ್ರ ಕೂಡಾ ಕೊಡಲು ಅವಕಾಶ ಇಲ್ಲವೆ ಎಂದು ಕೇಳಿದೆವು. ಅಷ್ಟರಲ್ಲಿ ಹೈಗ್ರೌಂಡ್ ಠಾಣೆಯ ಪೊಲೀಸರು ನಮ್ಮನ್ನು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ನಾವು ಕಳೆದ ಒಂದು ಗಂಟೆಯಿಂದ 15 ಜನರು ಹೈಗ್ರೌಂಡ್ ಠಾಣೆಯಲ್ಲಿ ಇದ್ದೇವೆ” ಎಂದು ಯುವರಾಜ್ ಮಾಹಿತಿ ನೀಡಿದ್ದಾರೆ.


ತಾವು ಯಾವ ದಾರಿಯಲ್ಲಿ ಸಾಗುತ್ತಿದ್ದೇವೆ ಎಂಬ ಬಗ್ಗೆ ಒಂದು ಆತ್ಮಾವಲೋಕನ ಮಾಡಿಕೊಳ್ಳುವಂತೆ ಸತ್ಯಾಗ್ರಹಿಗಳು ಕನ್ನಡದ ಮಾಧ್ಯಮಗಳಿಗೆ ವಿನಂತಿಸಲಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...