Homeಕರ್ನಾಟಕಟಿವಿ ಚಾನೆಲ್‌‌‌ ಕಚೇರಿಗಳ ಮುಂದೆ ಶಾಂತಿಯುತ ಸತ್ಯಾಗ್ರಹ: ವಶಕ್ಕೆ ಪಡೆದ ಪೊಲೀಸರು

ಟಿವಿ ಚಾನೆಲ್‌‌‌ ಕಚೇರಿಗಳ ಮುಂದೆ ಶಾಂತಿಯುತ ಸತ್ಯಾಗ್ರಹ: ವಶಕ್ಕೆ ಪಡೆದ ಪೊಲೀಸರು

ಸುವರ್ಣ ಟಿವಿ & ಬಿಟಿವಿ ಕಚೇರಿಯ ರಸ್ತೆಯಲ್ಲಿ ಕೂಡಾ ತೆರಳಬಾರದು ಎಂದು ಪೊಲೀಸರು ಹೇಳಿದ್ದಾರೆ ಸತ್ಯಾಗ್ರಹಿಗಳು ಆರೋಪಿಸಿದ್ದಾರೆ

- Advertisement -
- Advertisement -

ಕನ್ನಡದ ಮಾಧ್ಯಮಗಳಾದ ಸುವರ್ಣ ಟಿವಿ, ಟಿವಿ9 ಮತ್ತು ಬಿಟಿವಿ ಕಚೇರಿಗಳ ಮುಂದೆ ‘ಆತ್ಮಾವಲೋಕನ ಸತ್ಯಾಗ್ರಹ’ ನಡೆಸಲು ತೆರಳುತ್ತಿದ್ದ ಸತ್ಯಾಗ್ರಹಿಗಳನ್ನು ಬೆಂಗಳೂರಿನ ಹೈಗ್ರೌಂಡ್‌ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕನ್ನಡದ ಸುದ್ದಿ ಮಾಧ್ಯಮಗಳು ತಮ್ಮ ಕರ್ತವ್ಯವನ್ನು ಮರೆತು ಜನರನ್ನು ದಾರಿ ತಪ್ಪಿಸುತ್ತಿರುವ ಹಿನ್ನಲೆಯಲ್ಲಿ ಅವರ ಕರ್ತವ್ಯವನ್ನು ನೆನಪಿಸಲು ಬೆಂಗಳೂರಿನ ಸಮಾನ ಮನಸ್ಕರ ಗುಂಪು ಸತ್ಯಾಗ್ರಹ ನಡೆಸಲು ಯೋಜಿಸಿದ್ದರು.

ಸತ್ಯಾಗ್ರಹವು ಬೆಳಿಗ್ಗೆ 09:30ಕ್ಕೆ ಪಬ್ಲಿಕ್‌ ಟಿವಿ ಕಚೇರಿಯಿಂದ ಪ್ರಾರಂಭವಾಗಿ, ನಂತರ 11:30ಕ್ಕೆ ಸುವರ್ಣ ಟಿವಿ ಕಚೇರಿಯ ಮುಂದೆ ತಲುಪಿ, ಅದರ ನಂತರ ಮಧ್ಯಾಹ್ನ 2 ಗಂಟೆಗೆ ಬಿಟಿವಿ ಕಚೇರಿ ಬಳಿ ತೆರಳಿ, ಸಂಜೆ 4 ಗಂಟೆಗೆ ಟಿವಿ9 ಕಚೇರಿ ಮುಂದೆ ಸೇರಲಿತ್ತು. ಆದರೆ ಸತ್ಯಾಗ್ರಹಿಗಳು ಪಬ್ಲಿಕ್ ಟಿವಿ ಮುಂದೆ ತೆರಳಿ ಅಲ್ಲಿನ ಮಾಧ್ಯಮ ಸಿಬ್ಬಂದಿಗೆ ಆಗ್ರಹಗಳ ಮನವಿ ಪತ್ರ ಸಲ್ಲಿಸಿ ಸುವರ್ಣ ಟಿವಿ ಕಚೇರಿಗೆ ತೆರಳುತ್ತಿದ್ದಾಗ, ಹೈಗ್ರೌಂಡ್‌ ಪೊಲೀಸರು ಸತ್ಯಾಗ್ರಹಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಎಂ. ಯುವರಾಜ್, “ಸತ್ಯಾಗ್ರಹಿಗಳನ್ನು ಪೊಲೀಸರು ಹೈಗ್ರೌಂಡ್‌ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ನಾವು ಮೊದಲಿಗೆ ಪಬ್ಲಿಕ್ ಟಿವಿ ಕಚೇರಿ ಮುಂದೆ ಮೊದಲಿಗೆ ಹೋದೆವು. ಅವರು ನಮ್ಮನ್ನು ಬರಮಾಡಿಕೊಂಡು, ನಮಗೆ ಒಳ್ಳೆಯ ಪ್ರತಿಕ್ರಿಯೆ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

‘ನಾವು ಅವರಿಗೆ ಗುಲಾಬಿ ಕೊಟ್ಟು, ಮನವಿಯನ್ನು ನೀಡಿದೆವು, ಅವರು ಕೂಡಾ ನಮ್ಮ ಮನವಿಯನ್ನು ಸ್ವೀಕರಿಸಿದರು. ನಾವು ಶಾಂತಿಯುತವಾಗಿಯೆ ಗಾಂಧೀಜಿಯ ಭಜನೆಯಾದ ರಘುಪತಿ ರಾಘವ ರಾಜಾರಾಂ ಹಾಡಿ ಅಲ್ಲಿಂದ ತೆರಳಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಆದರೆ ಅಲ್ಲಿಂದ ಸುವರ್ಣ ಮತ್ತು ಬಿಟಿವಿ ಕಚೇರಿ ತೆಳುತ್ತಿದ್ದಾಗ ಪೊಲೀಸರು ಸತ್ಯಾಗ್ರಹಿಗಳನ್ನು ವಶಕ್ಕೆ ಪಡೆದಿದ್ದಾರೆ. “ಪಬ್ಲಿಕ್ ಟಿವಿ ಕಚೇರಿಯಿಂದ ನಾವು ಸುವರ್ಣ ಮತ್ತು ಬಿಟಿವಿ ಕಚೇರಿಗೆ ಹೊರಟಾಗ ಹೈಗ್ರೌಂಡ್‌ ಠಾಣೆಯ ಪೊಲೀಸರು ರಸ್ತೆಯಲ್ಲೇ ನಮ್ಮನ್ನು ತಡೆಹಿಡಿದರು” ಎಂದು ಯುವರಾಜ್ ನಾನುಗೌರಿ.ಕಾಂಗೆ ಹೇಳಿದ್ದಾರೆ.

ಇದನ್ನೂ ಓದಿ: ಪಬ್ಲಿಕ್‌, ಸುವರ್ಣ, ಟಿವಿ9 ಮತ್ತು ಪಬ್ಲಿಕ್ ಟಿವಿ ಕಚೇರಿ ಮುಂದೆ ಬುಧವಾರ ‘ಆತ್ಮಾವಲೋಕನ ಸತ್ಯಾಗ್ರಹ’

“ನಾವು ಪೊಲೀಸರೊಂದಿಗೆ ಪಬ್ಲಿಕ್ ಟಿವಿ ಕಚೇರಿಯಲ್ಲಿ ಮನವಿ ಮಾಡಿದಂತೆ ಬೇರೆ ಟಿವಿ ಕಚೇರಿ ಮುಂದೆಯು ಮನವಿ ಮಾಡಿ ಹೋಗುತ್ತೇವೆ ಎಂದು ತಿಳಿಸಿದೆವು. ಆದರೆ ವ್ಯಕ್ತಿಯೊಬ್ಬರು ಬಂದು, ‘ಸುವರ್ಣ ಕಚೇರಿ ಮುಂದೆ ಬರುವುದು ಬೇಡ. ಬಿಟಿವಿ ಮುಂದೆ ಕೂಡಾ ಬರುವುದು ಬೇಡ ಎಂದು ಅವರು ಹೇಳುತ್ತಿದ್ದಾರೆ’ ಎಂದು ಹೇಳಿದರು. ನಾವು ಅವರಿಗೆ ಒಂದು ಮನವಿ ಪತ್ರ ಕೂಡಾ ಕೊಡಲು ಅವಕಾಶ ಇಲ್ಲವೆ ಎಂದು ಕೇಳಿದೆವು. ಅಷ್ಟರಲ್ಲಿ ಹೈಗ್ರೌಂಡ್ ಠಾಣೆಯ ಪೊಲೀಸರು ನಮ್ಮನ್ನು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ನಾವು ಕಳೆದ ಒಂದು ಗಂಟೆಯಿಂದ 15 ಜನರು ಹೈಗ್ರೌಂಡ್ ಠಾಣೆಯಲ್ಲಿ ಇದ್ದೇವೆ” ಎಂದು ಯುವರಾಜ್ ಮಾಹಿತಿ ನೀಡಿದ್ದಾರೆ.


ತಾವು ಯಾವ ದಾರಿಯಲ್ಲಿ ಸಾಗುತ್ತಿದ್ದೇವೆ ಎಂಬ ಬಗ್ಗೆ ಒಂದು ಆತ್ಮಾವಲೋಕನ ಮಾಡಿಕೊಳ್ಳುವಂತೆ ಸತ್ಯಾಗ್ರಹಿಗಳು ಕನ್ನಡದ ಮಾಧ್ಯಮಗಳಿಗೆ ವಿನಂತಿಸಲಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...