Homeಚಳವಳಿರೈತ ಹೋರಾಟ - ಒಕ್ಕೂಟ ಸರ್ಕಾರಕ್ಕೆ ಪ್ರಜಾಪ್ರಭುತ್ವದ ಪಾಠ ಮಾಡಿದ ಸೋನಿಯ ಗಾಂಧಿ

ರೈತ ಹೋರಾಟ – ಒಕ್ಕೂಟ ಸರ್ಕಾರಕ್ಕೆ ಪ್ರಜಾಪ್ರಭುತ್ವದ ಪಾಠ ಮಾಡಿದ ಸೋನಿಯ ಗಾಂಧಿ

ಸ್ವಾತಂತ್ರ್ಯ ಬಂದ ನಂತರ, ಅಧಿಕಾರಕ್ಕೆ ಬಂದ ಮೊದಲ ಸೊಕ್ಕಿನ ಸರ್ಕಾರ ಇದಾಗಿದೆ. ಅನ್ನ ನೀಡುವ ರೈತರ ಬಗ್ಗೆ ಈ ಸರ್ಕಾರಕ್ಕೆ ಕಾಳಜಿಯಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾನೂನುಗಳ ವಿರುದ್ದ ರೈತರು ನಡೆಸುತ್ತಿರುವ ಆಂದೋಲನ ಇಂದಿಗೆ 39 ನೇ ದಿನಕ್ಕೆ ಕಾಲಿಟ್ಟಿದೆ. ಹೋರಾಟಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು. ಸರ್ಕಾರಕ್ಕೆ ಪ್ರಜಾಪ್ರಭುತ್ವದ ಬಗ್ಗೆ ಪಾಠ ಮಾಡಿದ ಅವರು, ವ್ಯಾಪಕ ಪ್ರತಿಭಟನೆಗೆ ಕಾರಣವಾದ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿದರು.

“ಪ್ರತಿಭಟನೆಗಳ ಬಗ್ಗೆ ಸರ್ಕಾರ ತಳೆದ ಕಠಿಣ ಮನೋಭಾವದಿಂದಾಗಿ 50 ಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದು, ಆದರೂ ಮೋದಿ ಸರ್ಕಾರವನ್ನು ಅಥವಾ ಅದರ ಯಾವುದೇ ಮಂತ್ರಿಗಳನ್ನು ಕದಲಿಸಿಲ್ಲ. ಅವರ ಬಗ್ಗೆ ಅನುಕಂಪದ ಮಾತುಗಳನ್ನೂ ಹೇಳಿಲ್ಲ. ನಿಧನರಾದವರಿಗೆ ನನ್ನ ನಮನ ಸಲ್ಲಿಸುತ್ತೇನೆ. ಈ ದುಃಖವನ್ನು ತಡೆಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ಸಿಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಅಟಲ್ ಸುರಂಗದಿಂದ ಸೋನಿಯಾ ಗಾಂಧಿ ಹೆಸರು ನಾಪತ್ತೆ: ಪ್ರತಿಭಟನೆ ಎಚ್ಚರಿಕೆ

ಸರ್ಕಾರದ ನಿಲುವು ದುರಹಂಕಾರಕ್ಕೆ ಸಮಾನವಾಗಿದೆ. ರೈತರು ಸೇರಿದಂತೆ ಕಾರ್ಮಿಕರ ಹಕ್ಕುಗಳನ್ನು ಮತ್ತು ಹಿತಾಸಕ್ತಿಗಳನ್ನು ರಕ್ಷಿಸುವುದು ಪ್ರಜಾಪ್ರಭುತ್ವದ ನಿಜವಾದ ಅರ್ಥ ಎಂದು ಸೋನಿಯಾ ಗಾಂಧಿ ಹೇಳಿದರು.

“ಸ್ವಾತಂತ್ರ್ಯ ಬಂದ ನಂತರ, ಅಧಿಕಾರಕ್ಕೆ ಬಂದ ಮೊದಲ ಸೊಕ್ಕಿನ ಸರ್ಕಾರ ಇದಾಗಿದೆ. ಅನ್ನ ನೀಡುವ ರೈತರ ಬಗ್ಗೆ ಈ ಸರ್ಕಾರಕ್ಕೆ ಕಾಳಜಿಯಿಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

“ಸರ್ಕಾರವು ರೈತರನ್ನು ಸುಸ್ತಾಗುವಂತೆ ಮಾಡಿ, ಅವರನ್ನು ಓಡಿಸುವ ತಂತ್ರವನ್ನು ಮಾಡುತ್ತಿರುವುದು ಸ್ಪಷ್ಟವಾಗಿದೆ. ಆದರೆ ನಮ್ಮ ರೈತರು ಅದರ ಮುಂದೆ ಬಾಗುವುದಿಲ್ಲ. ಸರ್ಕಾರ ತನ್ನ ಅಹಂಕಾರವನ್ನು ಬಿಡಬೇಕು ಮತ್ತು ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸಿ, ಪ್ರತಿಭಟನೆಗಳನ್ನು ಕೊನೆಗೊಳಿಸಬೇಕು. ಪ್ರಜಾಪ್ರಭುತ್ವದ ನಿಜವಾದ ಅರ್ಥ ರೈತರು ಮತ್ತು ಕಾರ್ಮಿಕರ ಹಿತಾಸಕ್ತಿಗಳನ್ನು ಕಾಪಾಡುವುದಾಗಿದೆ. ಮೋದಿ ಸರ್ಕಾರ ಅದನ್ನು ಕಲಿಯಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಂಗನಾ v/s ಶಿವಸೇನೆ: ಸೋನಿಯಾ ಗಾಂಧಿ ಹೆಸರನ್ನೇಕೆ ಎಳೆದು ತರಲಾಯಿತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...