Homeಚಳವಳಿಕೊರೆಯುವ ಚಳಿಯಲ್ಲಿ ರೈತ ಹೋರಾಟಗಾರರು; ಕರುಣೆ ಇಲ್ಲದ ಸರ್ಕಾರ!

ಕೊರೆಯುವ ಚಳಿಯಲ್ಲಿ ರೈತ ಹೋರಾಟಗಾರರು; ಕರುಣೆ ಇಲ್ಲದ ಸರ್ಕಾರ!

ಸರ್ಕಾರದ ಕಣ್ಣುಪೊರೆ ಜಾಸ್ತಿಯಾಗಿದೆ, ಕಿವಿ ಕುರುಡಾಗಿದೆ, ಹೃದಯ ಇಲ್ಲವೆ ಇಲ್ಲ. ಕೊರೆಯುವ ಚಳಿಯಲ್ಲಿ ಅನ್ನದಾತರನ್ನು ಈ ರೀತಿಯಾಗಿ ನಡೆಸಿಕೊಳ್ಳುತ್ತಿರುವುದು ಯಾವುದೆ ನಾಗರೀಕ ಸರ್ಕಾರ ಮಾಡುವಂತದ್ದಲ್ಲ.

- Advertisement -
- Advertisement -

ದೆಹಲಿಯ ತಾಪಮಾನ ಇಂದು 4.1 ಸೆಲ್ಸಿಯಸ್ ಡಿಗ್ರಿ ತಲುಪಿದ್ದು, ಕೇಂದ್ರದ ಕೃಷಿ ಕಾನೂನಿನ ವಿರುದ್ದ ಹೋರಾಟ ಮಾಡುತ್ತಿರುವ ಅನ್ನದಾತರು ಕೊರೆಯುವ ಚಳಿಯಲ್ಲಿ ನಿರಂತರ 20 ನೇ ದಿನವನ್ನು ಕಳೆದಿದ್ದಾರೆ. ಇಂದಿನ ತಾಪಮಾನವು ಸಾಮಾನ್ಯಕ್ಕಿಂತ ಐದು ಡಿಗ್ರಿಗಳಷ್ಟು ಕಡಿಮೆಯಾಗಿದೆ ಎಂದು ಸಫ್ದರ್‌‌ಜಂಗ್ ವೀಕ್ಷಣಾಲಯ ಹೇಳಿದೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನನ್ನು ರದ್ದುಗೊಳಿಸಬೇಕು ಎಂದು ರೈತರು ಪಟ್ಟು ಹಿಡಿದಿದ್ದಾರೆ. ಕೇಂದ್ರ ಸಚಿವರೊಂದಿಗೆ ನಡೆದ ಆರು ಸುತ್ತಿನ ಮಾತುಕತೆ ವಿಫಲಗೊಂಡಿದೆ. ಪ್ರತಿಭಾರಿ ಮಾತುಕತೆಯಲ್ಲೂ ಕೇಂದ್ರವು ಒಂದೆ ರೀತಿಯ ಪ್ರಸ್ತಾಪದೊಂದಿಗೆ ಬರುತ್ತಿರುವುದಕ್ಕೆ ರೈತ ಹೋರಾಟಗಾರರು ಅಸಮಧಾನಗೊಂಡಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ದೆಹಲಿ-ಜೈಪುರ ಹೆದ್ದಾರಿಯಲ್ಲಿ ಪೊಲೀಸರೊಂದಿಗೆ ಘರ್ಷಣೆ- 20 ರೈತರ ಬಂಧನ 

ಆಂದೋಲನವು ನಿನ್ನೆಯಿಂದ ತೀವ್ರಗೊಂಡಿದ್ದು, ಹೋರಾಟ ನಿರತ ರೈತರು ಉಪವಾಸ ಸತ್ಯಾಗ್ರಹಕ್ಕೆ ಕರೆಕೊಟ್ಟಿದ್ದಾರೆ. ಅಲ್ಲದೆ ಆಂದೋಲನವನ್ನು ಸೇರಿಕೊಳ್ಳಲು ತಮಿಳುನಾಡು, ರಾಜಸ್ಥಾನ ಸೇರಿದಂತೆ ಇನ್ನೂ ಸಾವಿರಾರು ರೈತರು ದೆಹಲಿಗೆ ಹೊರಟಿದ್ದಾರೆ.

ದೇಶದಾದ್ಯಂತ ಆಂದೋಲನ ತೀವ್ರಗೊಳ್ಳುತ್ತಿದ್ದರೂ ಪ್ರಧಾನಿ ಮೋದಿ ಮಾತ್ರ ವಿವಾದಿತ ಕಾನೂನನ್ನು ಮತ್ತೆ ಮತ್ತೆ ಸಮರ್ಥಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಪ್ರತಿಭಟನಾ ನಿರತರನ್ನು ಅವಮಾನಿಸುವ ಹಾಗೂ ಅನುಮಾನಿಸುವ ಕಾರ್ಯ ಕೇಂದ್ರ ಸರ್ಕಾರದ ಪ್ರತಿನಿಧಿಗಳಿಂದ ಹಾಗೂ ಸರ್ಕಾರವನ್ನು ಬೆಂಬಲಿಸುವವರಿಂದ ನಡೆಯುತ್ತಲೇ ಇದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರು, “ಸರ್ಕಾರದ ಕಣ್ಣುಪೊರೆ ಜಾಸ್ತಿಯಾಗಿದೆ, ಕಿವಿ ಕುರುಡಾಗಿದೆ, ಹೃದಯ ಇಲ್ಲವೇ ಇಲ್ಲ. ಕೊರೆಯುವ ಚಳಿಯಲ್ಲಿ ಅನ್ನದಾತರನ್ನು ಈ ರೀತಿಯಾಗಿ ನಡೆಸಿಕೊಳ್ಳುತ್ತಿರುವುದು ಯಾವುದೆ ನಾಗರೀಕ ಸರ್ಕಾರ ಮಾಡುವಂತದ್ದಲ್ಲ. ಇದು ಪ್ರಪಂಚವೆ ತಲೆತಗ್ಗಿಸುವಂತಹ ನಡವಳಿಕೆ. ಈ ಹಂತದಲ್ಲಿ ರೈತರ ಸಾವು-ನೋವಾದರೆ ಇದಕ್ಕೆ ಮೋದಿ ಮತ್ತು ಅಮಿತ್‌ ಶಾನೇ ನೇರವಾದ ಕಾರಣ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿ 25,000 ಸೇನಾ ಪದಕಗಳನ್ನು ಹಿಂದಿರುಗಿಸಲು ಮುಂದಾದ ಮಾಜಿ ಸೈನಿಕರು!

ಕರ್ನಾಟಕ ಸರ್ಕಾರದ ಕೃಷಿ ಬೆಲೆ ಅಯೋಗದ ಮಾಜಿ ಅಧ್ಯಕ್ಷರಾದ ಪ್ರಕಾಶ್ ಕಮ್ಮರಡಿ ಅವರು ಮಾತನಾಡಿ,”ಒಂದು ಕಡೆ ತಮ್ಮ ಸರ್ಕಾರದ ಭಾಗವಾಗಿರುವ ಪಕ್ಷಗಳು ಈ ಕಾನೂನಿನ ವಿಷಯದಲ್ಲಿ ಎನ್‌ಡಿಎಯನ್ನು ಕೈಬಿಟ್ಟಿವೆ. ಇನ್ನೊಂದು ಕಡೆ ದೇಶದಾದ್ಯಂತ ರೈತರು ಬೀದಿಗಿಳಿದ್ದಾರೆ. ಇಷ್ಟೇ ಅಲ್ಲದೆ ಇವರದೇ ಮಾತೃ ಸಂಘಟನೆಯಾದ ಆರೆಸ್ಸೆಸ್ ಕೂಡಾ ಇದನ್ನು ವಿರೋಧಿಸುತ್ತಿದೆ. ರಾಜಕೀಯವಾಗಿ ದೊಡ್ಡ ಬೆಲೆ ತೆರಬೇಕಾದರು ಕೂಡಾ ಸರ್ಕಾರ ತಮ್ಮ ಹಠವನ್ನು ಬಿಡುತ್ತಿಲ್ಲವೆಂದರೆ, ಸರ್ಕಾರ ಆಳವಾದ ಹುನ್ನಾರದಲ್ಲಿ ತೊಡಗಿದೆ ಎನ್ನುವುದಲ್ಲಿ ಅನುಮಾನವೆ ಇಲ್ಲ” ಎಂದು ಹೇಳಿದರು.

“ಇಲ್ಲಿ ಹಣದ ಆಮಿಷಗಳು, ಸೇರಿದಂತೆ ಇದರ ಹಿಂದೆ ಅಡಗಿರುವಂತಹ ಶಕ್ತಿಗಳು ಬಹಳ ಪ್ರಭಲವಾಗಿದೆ. ಆದರೆ ಇವುಗಳೆಲ್ಲವು ಹೋರಾಟ ನಿರತ ರೈತರ ಮನೋಸ್ಥಿತಿಯನ್ನು ಇನ್ನೂ ಹರಿತ ಮಾಡುತ್ತಿದೆ. ಈ ಕೊರೆಯುವ ಚಳಿಯಲ್ಲೂ ಅವರು ಕೂತಿದ್ದಾರೆಂದರೆ ದೇಶದ ರೈತರು ಎಲ್ಲಕ್ಕೂ ಸಿದ್ದವಾಗಿಯೇ ಇದ್ದಾರೆ. ಇದು ನಮ್ಮ ದೇಶದ ಚರಿತ್ರೆಯಲ್ಲಿ ಒಂದು ನಿರ್ಣಾಯಕ ಹಂತವಾಗಿದೆ” ಎಂದು ತಿಳಿಸಿದರು.

ರೈತ-ದಲಿತ-ಕಾರ್ಮಿಕ-ಜನಪರ ಸಂಘಟನೆಗಳ ಐಕ್ಯ ಹೋರಾಟದ ಕೋರ್‌ ಕಮಿಟಿ ಸದಸ್ಯರಾದ ಸಿರಿಮನೆ ನಾಗರಾಜ್ ಅವರು ಮಾತನಾಡಿ, “ಮೈ ಮಾತ್ರವಲ್ಲ ಮೂಳೆಯನ್ನೇ ಕೊರೆಯುವ ಇಂಥ ಚಳಿಯಿಂದಾಗಿ ಈಗಾಗಲೇ 40 ಕ್ಕೂ ಹೆಚ್ಚು ಜನ ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಆದರೂ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ-ಕಾರ್ಮಿಕ-ಜನವಿರೋಧಿ ಕಾಯ್ದೆಗಳು ರದ್ದಾಗದೆ ವಾಪಸ್ ಹೋಗುವುದಿಲ್ಲ ಎಂದು ಪ್ರಾಣದ ಹಂಗು ತೊರೆದು ಹೋರಾಟ ನಡೆಸಿದ್ದಾರೆ. ಕೇಂದ್ರ ಸರ್ಕಾರವು ಹೋರಾಟಗಾರರನ್ನು ಸುಳ್ಳೇ ಮಾತುಕತೆಯ ಸುಳಿಯಲ್ಲಿ ಸುತ್ತಿಸುತ್ತ, ಸಮಯವನ್ನು ಮಾತ್ರವಲ್ಲ, ರೈತರನ್ನೂ ಕೊಲ್ಲುತ್ತಿದೆ” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇದು ತೀವ್ರ ಖಂಡನಾರ್ಹವಾಗಿದ್ದು. ಕೇಂದ್ರ ಸರ್ಕಾರ ಕೂಡಲೇ ರೈತರ-ಕಾರ್ಮಿಕರ ಹಕ್ಕೊತ್ತಾಯಗಳನ್ನು ಬೇಶರತ್ತಾಗಿ ಒಪ್ಪಿಕೊಂಡು, ಕಾಯ್ದೆಗಳನ್ನು ಹಿಂಪಡೆಯಬೇಕು. ಈ ಮೂಲಕ ಈ ಚಳವಳಿಗೆ ಅಂತ್ಯ ಹಾಡಿ, ಅಮಾಯಕ ಅನ್ನದಾತರ-ಶ್ರಮಜೀವಿಗಳ ಸಾಮೂಹಿಕ ಕಗ್ಗೊಲೆಯನ್ನು ನಿಲ್ಲಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ವಿಶ್ವದ ಅತ್ಯಂತ ಕಿರಿಯ ಪರಿಸರ ಹೋರಾಟಗಾರ್ತಿಯ ಬೆಂಬಲ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...