Homeಚಳವಳಿಕೊರೆಯುವ ಚಳಿಯಲ್ಲಿ ರೈತ ಹೋರಾಟಗಾರರು; ಕರುಣೆ ಇಲ್ಲದ ಸರ್ಕಾರ!

ಕೊರೆಯುವ ಚಳಿಯಲ್ಲಿ ರೈತ ಹೋರಾಟಗಾರರು; ಕರುಣೆ ಇಲ್ಲದ ಸರ್ಕಾರ!

ಸರ್ಕಾರದ ಕಣ್ಣುಪೊರೆ ಜಾಸ್ತಿಯಾಗಿದೆ, ಕಿವಿ ಕುರುಡಾಗಿದೆ, ಹೃದಯ ಇಲ್ಲವೆ ಇಲ್ಲ. ಕೊರೆಯುವ ಚಳಿಯಲ್ಲಿ ಅನ್ನದಾತರನ್ನು ಈ ರೀತಿಯಾಗಿ ನಡೆಸಿಕೊಳ್ಳುತ್ತಿರುವುದು ಯಾವುದೆ ನಾಗರೀಕ ಸರ್ಕಾರ ಮಾಡುವಂತದ್ದಲ್ಲ.

- Advertisement -
- Advertisement -

ದೆಹಲಿಯ ತಾಪಮಾನ ಇಂದು 4.1 ಸೆಲ್ಸಿಯಸ್ ಡಿಗ್ರಿ ತಲುಪಿದ್ದು, ಕೇಂದ್ರದ ಕೃಷಿ ಕಾನೂನಿನ ವಿರುದ್ದ ಹೋರಾಟ ಮಾಡುತ್ತಿರುವ ಅನ್ನದಾತರು ಕೊರೆಯುವ ಚಳಿಯಲ್ಲಿ ನಿರಂತರ 20 ನೇ ದಿನವನ್ನು ಕಳೆದಿದ್ದಾರೆ. ಇಂದಿನ ತಾಪಮಾನವು ಸಾಮಾನ್ಯಕ್ಕಿಂತ ಐದು ಡಿಗ್ರಿಗಳಷ್ಟು ಕಡಿಮೆಯಾಗಿದೆ ಎಂದು ಸಫ್ದರ್‌‌ಜಂಗ್ ವೀಕ್ಷಣಾಲಯ ಹೇಳಿದೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನನ್ನು ರದ್ದುಗೊಳಿಸಬೇಕು ಎಂದು ರೈತರು ಪಟ್ಟು ಹಿಡಿದಿದ್ದಾರೆ. ಕೇಂದ್ರ ಸಚಿವರೊಂದಿಗೆ ನಡೆದ ಆರು ಸುತ್ತಿನ ಮಾತುಕತೆ ವಿಫಲಗೊಂಡಿದೆ. ಪ್ರತಿಭಾರಿ ಮಾತುಕತೆಯಲ್ಲೂ ಕೇಂದ್ರವು ಒಂದೆ ರೀತಿಯ ಪ್ರಸ್ತಾಪದೊಂದಿಗೆ ಬರುತ್ತಿರುವುದಕ್ಕೆ ರೈತ ಹೋರಾಟಗಾರರು ಅಸಮಧಾನಗೊಂಡಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ದೆಹಲಿ-ಜೈಪುರ ಹೆದ್ದಾರಿಯಲ್ಲಿ ಪೊಲೀಸರೊಂದಿಗೆ ಘರ್ಷಣೆ- 20 ರೈತರ ಬಂಧನ 

ಆಂದೋಲನವು ನಿನ್ನೆಯಿಂದ ತೀವ್ರಗೊಂಡಿದ್ದು, ಹೋರಾಟ ನಿರತ ರೈತರು ಉಪವಾಸ ಸತ್ಯಾಗ್ರಹಕ್ಕೆ ಕರೆಕೊಟ್ಟಿದ್ದಾರೆ. ಅಲ್ಲದೆ ಆಂದೋಲನವನ್ನು ಸೇರಿಕೊಳ್ಳಲು ತಮಿಳುನಾಡು, ರಾಜಸ್ಥಾನ ಸೇರಿದಂತೆ ಇನ್ನೂ ಸಾವಿರಾರು ರೈತರು ದೆಹಲಿಗೆ ಹೊರಟಿದ್ದಾರೆ.

ದೇಶದಾದ್ಯಂತ ಆಂದೋಲನ ತೀವ್ರಗೊಳ್ಳುತ್ತಿದ್ದರೂ ಪ್ರಧಾನಿ ಮೋದಿ ಮಾತ್ರ ವಿವಾದಿತ ಕಾನೂನನ್ನು ಮತ್ತೆ ಮತ್ತೆ ಸಮರ್ಥಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಪ್ರತಿಭಟನಾ ನಿರತರನ್ನು ಅವಮಾನಿಸುವ ಹಾಗೂ ಅನುಮಾನಿಸುವ ಕಾರ್ಯ ಕೇಂದ್ರ ಸರ್ಕಾರದ ಪ್ರತಿನಿಧಿಗಳಿಂದ ಹಾಗೂ ಸರ್ಕಾರವನ್ನು ಬೆಂಬಲಿಸುವವರಿಂದ ನಡೆಯುತ್ತಲೇ ಇದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರು, “ಸರ್ಕಾರದ ಕಣ್ಣುಪೊರೆ ಜಾಸ್ತಿಯಾಗಿದೆ, ಕಿವಿ ಕುರುಡಾಗಿದೆ, ಹೃದಯ ಇಲ್ಲವೇ ಇಲ್ಲ. ಕೊರೆಯುವ ಚಳಿಯಲ್ಲಿ ಅನ್ನದಾತರನ್ನು ಈ ರೀತಿಯಾಗಿ ನಡೆಸಿಕೊಳ್ಳುತ್ತಿರುವುದು ಯಾವುದೆ ನಾಗರೀಕ ಸರ್ಕಾರ ಮಾಡುವಂತದ್ದಲ್ಲ. ಇದು ಪ್ರಪಂಚವೆ ತಲೆತಗ್ಗಿಸುವಂತಹ ನಡವಳಿಕೆ. ಈ ಹಂತದಲ್ಲಿ ರೈತರ ಸಾವು-ನೋವಾದರೆ ಇದಕ್ಕೆ ಮೋದಿ ಮತ್ತು ಅಮಿತ್‌ ಶಾನೇ ನೇರವಾದ ಕಾರಣ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿ 25,000 ಸೇನಾ ಪದಕಗಳನ್ನು ಹಿಂದಿರುಗಿಸಲು ಮುಂದಾದ ಮಾಜಿ ಸೈನಿಕರು!

ಕರ್ನಾಟಕ ಸರ್ಕಾರದ ಕೃಷಿ ಬೆಲೆ ಅಯೋಗದ ಮಾಜಿ ಅಧ್ಯಕ್ಷರಾದ ಪ್ರಕಾಶ್ ಕಮ್ಮರಡಿ ಅವರು ಮಾತನಾಡಿ,”ಒಂದು ಕಡೆ ತಮ್ಮ ಸರ್ಕಾರದ ಭಾಗವಾಗಿರುವ ಪಕ್ಷಗಳು ಈ ಕಾನೂನಿನ ವಿಷಯದಲ್ಲಿ ಎನ್‌ಡಿಎಯನ್ನು ಕೈಬಿಟ್ಟಿವೆ. ಇನ್ನೊಂದು ಕಡೆ ದೇಶದಾದ್ಯಂತ ರೈತರು ಬೀದಿಗಿಳಿದ್ದಾರೆ. ಇಷ್ಟೇ ಅಲ್ಲದೆ ಇವರದೇ ಮಾತೃ ಸಂಘಟನೆಯಾದ ಆರೆಸ್ಸೆಸ್ ಕೂಡಾ ಇದನ್ನು ವಿರೋಧಿಸುತ್ತಿದೆ. ರಾಜಕೀಯವಾಗಿ ದೊಡ್ಡ ಬೆಲೆ ತೆರಬೇಕಾದರು ಕೂಡಾ ಸರ್ಕಾರ ತಮ್ಮ ಹಠವನ್ನು ಬಿಡುತ್ತಿಲ್ಲವೆಂದರೆ, ಸರ್ಕಾರ ಆಳವಾದ ಹುನ್ನಾರದಲ್ಲಿ ತೊಡಗಿದೆ ಎನ್ನುವುದಲ್ಲಿ ಅನುಮಾನವೆ ಇಲ್ಲ” ಎಂದು ಹೇಳಿದರು.

“ಇಲ್ಲಿ ಹಣದ ಆಮಿಷಗಳು, ಸೇರಿದಂತೆ ಇದರ ಹಿಂದೆ ಅಡಗಿರುವಂತಹ ಶಕ್ತಿಗಳು ಬಹಳ ಪ್ರಭಲವಾಗಿದೆ. ಆದರೆ ಇವುಗಳೆಲ್ಲವು ಹೋರಾಟ ನಿರತ ರೈತರ ಮನೋಸ್ಥಿತಿಯನ್ನು ಇನ್ನೂ ಹರಿತ ಮಾಡುತ್ತಿದೆ. ಈ ಕೊರೆಯುವ ಚಳಿಯಲ್ಲೂ ಅವರು ಕೂತಿದ್ದಾರೆಂದರೆ ದೇಶದ ರೈತರು ಎಲ್ಲಕ್ಕೂ ಸಿದ್ದವಾಗಿಯೇ ಇದ್ದಾರೆ. ಇದು ನಮ್ಮ ದೇಶದ ಚರಿತ್ರೆಯಲ್ಲಿ ಒಂದು ನಿರ್ಣಾಯಕ ಹಂತವಾಗಿದೆ” ಎಂದು ತಿಳಿಸಿದರು.

ರೈತ-ದಲಿತ-ಕಾರ್ಮಿಕ-ಜನಪರ ಸಂಘಟನೆಗಳ ಐಕ್ಯ ಹೋರಾಟದ ಕೋರ್‌ ಕಮಿಟಿ ಸದಸ್ಯರಾದ ಸಿರಿಮನೆ ನಾಗರಾಜ್ ಅವರು ಮಾತನಾಡಿ, “ಮೈ ಮಾತ್ರವಲ್ಲ ಮೂಳೆಯನ್ನೇ ಕೊರೆಯುವ ಇಂಥ ಚಳಿಯಿಂದಾಗಿ ಈಗಾಗಲೇ 40 ಕ್ಕೂ ಹೆಚ್ಚು ಜನ ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಆದರೂ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ-ಕಾರ್ಮಿಕ-ಜನವಿರೋಧಿ ಕಾಯ್ದೆಗಳು ರದ್ದಾಗದೆ ವಾಪಸ್ ಹೋಗುವುದಿಲ್ಲ ಎಂದು ಪ್ರಾಣದ ಹಂಗು ತೊರೆದು ಹೋರಾಟ ನಡೆಸಿದ್ದಾರೆ. ಕೇಂದ್ರ ಸರ್ಕಾರವು ಹೋರಾಟಗಾರರನ್ನು ಸುಳ್ಳೇ ಮಾತುಕತೆಯ ಸುಳಿಯಲ್ಲಿ ಸುತ್ತಿಸುತ್ತ, ಸಮಯವನ್ನು ಮಾತ್ರವಲ್ಲ, ರೈತರನ್ನೂ ಕೊಲ್ಲುತ್ತಿದೆ” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇದು ತೀವ್ರ ಖಂಡನಾರ್ಹವಾಗಿದ್ದು. ಕೇಂದ್ರ ಸರ್ಕಾರ ಕೂಡಲೇ ರೈತರ-ಕಾರ್ಮಿಕರ ಹಕ್ಕೊತ್ತಾಯಗಳನ್ನು ಬೇಶರತ್ತಾಗಿ ಒಪ್ಪಿಕೊಂಡು, ಕಾಯ್ದೆಗಳನ್ನು ಹಿಂಪಡೆಯಬೇಕು. ಈ ಮೂಲಕ ಈ ಚಳವಳಿಗೆ ಅಂತ್ಯ ಹಾಡಿ, ಅಮಾಯಕ ಅನ್ನದಾತರ-ಶ್ರಮಜೀವಿಗಳ ಸಾಮೂಹಿಕ ಕಗ್ಗೊಲೆಯನ್ನು ನಿಲ್ಲಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ವಿಶ್ವದ ಅತ್ಯಂತ ಕಿರಿಯ ಪರಿಸರ ಹೋರಾಟಗಾರ್ತಿಯ ಬೆಂಬಲ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...