Homeಚಳವಳಿಕೊರೆಯುವ ಚಳಿಯಲ್ಲಿ ರೈತ ಹೋರಾಟಗಾರರು; ಕರುಣೆ ಇಲ್ಲದ ಸರ್ಕಾರ!

ಕೊರೆಯುವ ಚಳಿಯಲ್ಲಿ ರೈತ ಹೋರಾಟಗಾರರು; ಕರುಣೆ ಇಲ್ಲದ ಸರ್ಕಾರ!

ಸರ್ಕಾರದ ಕಣ್ಣುಪೊರೆ ಜಾಸ್ತಿಯಾಗಿದೆ, ಕಿವಿ ಕುರುಡಾಗಿದೆ, ಹೃದಯ ಇಲ್ಲವೆ ಇಲ್ಲ. ಕೊರೆಯುವ ಚಳಿಯಲ್ಲಿ ಅನ್ನದಾತರನ್ನು ಈ ರೀತಿಯಾಗಿ ನಡೆಸಿಕೊಳ್ಳುತ್ತಿರುವುದು ಯಾವುದೆ ನಾಗರೀಕ ಸರ್ಕಾರ ಮಾಡುವಂತದ್ದಲ್ಲ.

- Advertisement -
- Advertisement -

ದೆಹಲಿಯ ತಾಪಮಾನ ಇಂದು 4.1 ಸೆಲ್ಸಿಯಸ್ ಡಿಗ್ರಿ ತಲುಪಿದ್ದು, ಕೇಂದ್ರದ ಕೃಷಿ ಕಾನೂನಿನ ವಿರುದ್ದ ಹೋರಾಟ ಮಾಡುತ್ತಿರುವ ಅನ್ನದಾತರು ಕೊರೆಯುವ ಚಳಿಯಲ್ಲಿ ನಿರಂತರ 20 ನೇ ದಿನವನ್ನು ಕಳೆದಿದ್ದಾರೆ. ಇಂದಿನ ತಾಪಮಾನವು ಸಾಮಾನ್ಯಕ್ಕಿಂತ ಐದು ಡಿಗ್ರಿಗಳಷ್ಟು ಕಡಿಮೆಯಾಗಿದೆ ಎಂದು ಸಫ್ದರ್‌‌ಜಂಗ್ ವೀಕ್ಷಣಾಲಯ ಹೇಳಿದೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನನ್ನು ರದ್ದುಗೊಳಿಸಬೇಕು ಎಂದು ರೈತರು ಪಟ್ಟು ಹಿಡಿದಿದ್ದಾರೆ. ಕೇಂದ್ರ ಸಚಿವರೊಂದಿಗೆ ನಡೆದ ಆರು ಸುತ್ತಿನ ಮಾತುಕತೆ ವಿಫಲಗೊಂಡಿದೆ. ಪ್ರತಿಭಾರಿ ಮಾತುಕತೆಯಲ್ಲೂ ಕೇಂದ್ರವು ಒಂದೆ ರೀತಿಯ ಪ್ರಸ್ತಾಪದೊಂದಿಗೆ ಬರುತ್ತಿರುವುದಕ್ಕೆ ರೈತ ಹೋರಾಟಗಾರರು ಅಸಮಧಾನಗೊಂಡಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ದೆಹಲಿ-ಜೈಪುರ ಹೆದ್ದಾರಿಯಲ್ಲಿ ಪೊಲೀಸರೊಂದಿಗೆ ಘರ್ಷಣೆ- 20 ರೈತರ ಬಂಧನ 

ಆಂದೋಲನವು ನಿನ್ನೆಯಿಂದ ತೀವ್ರಗೊಂಡಿದ್ದು, ಹೋರಾಟ ನಿರತ ರೈತರು ಉಪವಾಸ ಸತ್ಯಾಗ್ರಹಕ್ಕೆ ಕರೆಕೊಟ್ಟಿದ್ದಾರೆ. ಅಲ್ಲದೆ ಆಂದೋಲನವನ್ನು ಸೇರಿಕೊಳ್ಳಲು ತಮಿಳುನಾಡು, ರಾಜಸ್ಥಾನ ಸೇರಿದಂತೆ ಇನ್ನೂ ಸಾವಿರಾರು ರೈತರು ದೆಹಲಿಗೆ ಹೊರಟಿದ್ದಾರೆ.

ದೇಶದಾದ್ಯಂತ ಆಂದೋಲನ ತೀವ್ರಗೊಳ್ಳುತ್ತಿದ್ದರೂ ಪ್ರಧಾನಿ ಮೋದಿ ಮಾತ್ರ ವಿವಾದಿತ ಕಾನೂನನ್ನು ಮತ್ತೆ ಮತ್ತೆ ಸಮರ್ಥಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಪ್ರತಿಭಟನಾ ನಿರತರನ್ನು ಅವಮಾನಿಸುವ ಹಾಗೂ ಅನುಮಾನಿಸುವ ಕಾರ್ಯ ಕೇಂದ್ರ ಸರ್ಕಾರದ ಪ್ರತಿನಿಧಿಗಳಿಂದ ಹಾಗೂ ಸರ್ಕಾರವನ್ನು ಬೆಂಬಲಿಸುವವರಿಂದ ನಡೆಯುತ್ತಲೇ ಇದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರು, “ಸರ್ಕಾರದ ಕಣ್ಣುಪೊರೆ ಜಾಸ್ತಿಯಾಗಿದೆ, ಕಿವಿ ಕುರುಡಾಗಿದೆ, ಹೃದಯ ಇಲ್ಲವೇ ಇಲ್ಲ. ಕೊರೆಯುವ ಚಳಿಯಲ್ಲಿ ಅನ್ನದಾತರನ್ನು ಈ ರೀತಿಯಾಗಿ ನಡೆಸಿಕೊಳ್ಳುತ್ತಿರುವುದು ಯಾವುದೆ ನಾಗರೀಕ ಸರ್ಕಾರ ಮಾಡುವಂತದ್ದಲ್ಲ. ಇದು ಪ್ರಪಂಚವೆ ತಲೆತಗ್ಗಿಸುವಂತಹ ನಡವಳಿಕೆ. ಈ ಹಂತದಲ್ಲಿ ರೈತರ ಸಾವು-ನೋವಾದರೆ ಇದಕ್ಕೆ ಮೋದಿ ಮತ್ತು ಅಮಿತ್‌ ಶಾನೇ ನೇರವಾದ ಕಾರಣ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿ 25,000 ಸೇನಾ ಪದಕಗಳನ್ನು ಹಿಂದಿರುಗಿಸಲು ಮುಂದಾದ ಮಾಜಿ ಸೈನಿಕರು!

ಕರ್ನಾಟಕ ಸರ್ಕಾರದ ಕೃಷಿ ಬೆಲೆ ಅಯೋಗದ ಮಾಜಿ ಅಧ್ಯಕ್ಷರಾದ ಪ್ರಕಾಶ್ ಕಮ್ಮರಡಿ ಅವರು ಮಾತನಾಡಿ,”ಒಂದು ಕಡೆ ತಮ್ಮ ಸರ್ಕಾರದ ಭಾಗವಾಗಿರುವ ಪಕ್ಷಗಳು ಈ ಕಾನೂನಿನ ವಿಷಯದಲ್ಲಿ ಎನ್‌ಡಿಎಯನ್ನು ಕೈಬಿಟ್ಟಿವೆ. ಇನ್ನೊಂದು ಕಡೆ ದೇಶದಾದ್ಯಂತ ರೈತರು ಬೀದಿಗಿಳಿದ್ದಾರೆ. ಇಷ್ಟೇ ಅಲ್ಲದೆ ಇವರದೇ ಮಾತೃ ಸಂಘಟನೆಯಾದ ಆರೆಸ್ಸೆಸ್ ಕೂಡಾ ಇದನ್ನು ವಿರೋಧಿಸುತ್ತಿದೆ. ರಾಜಕೀಯವಾಗಿ ದೊಡ್ಡ ಬೆಲೆ ತೆರಬೇಕಾದರು ಕೂಡಾ ಸರ್ಕಾರ ತಮ್ಮ ಹಠವನ್ನು ಬಿಡುತ್ತಿಲ್ಲವೆಂದರೆ, ಸರ್ಕಾರ ಆಳವಾದ ಹುನ್ನಾರದಲ್ಲಿ ತೊಡಗಿದೆ ಎನ್ನುವುದಲ್ಲಿ ಅನುಮಾನವೆ ಇಲ್ಲ” ಎಂದು ಹೇಳಿದರು.

“ಇಲ್ಲಿ ಹಣದ ಆಮಿಷಗಳು, ಸೇರಿದಂತೆ ಇದರ ಹಿಂದೆ ಅಡಗಿರುವಂತಹ ಶಕ್ತಿಗಳು ಬಹಳ ಪ್ರಭಲವಾಗಿದೆ. ಆದರೆ ಇವುಗಳೆಲ್ಲವು ಹೋರಾಟ ನಿರತ ರೈತರ ಮನೋಸ್ಥಿತಿಯನ್ನು ಇನ್ನೂ ಹರಿತ ಮಾಡುತ್ತಿದೆ. ಈ ಕೊರೆಯುವ ಚಳಿಯಲ್ಲೂ ಅವರು ಕೂತಿದ್ದಾರೆಂದರೆ ದೇಶದ ರೈತರು ಎಲ್ಲಕ್ಕೂ ಸಿದ್ದವಾಗಿಯೇ ಇದ್ದಾರೆ. ಇದು ನಮ್ಮ ದೇಶದ ಚರಿತ್ರೆಯಲ್ಲಿ ಒಂದು ನಿರ್ಣಾಯಕ ಹಂತವಾಗಿದೆ” ಎಂದು ತಿಳಿಸಿದರು.

ರೈತ-ದಲಿತ-ಕಾರ್ಮಿಕ-ಜನಪರ ಸಂಘಟನೆಗಳ ಐಕ್ಯ ಹೋರಾಟದ ಕೋರ್‌ ಕಮಿಟಿ ಸದಸ್ಯರಾದ ಸಿರಿಮನೆ ನಾಗರಾಜ್ ಅವರು ಮಾತನಾಡಿ, “ಮೈ ಮಾತ್ರವಲ್ಲ ಮೂಳೆಯನ್ನೇ ಕೊರೆಯುವ ಇಂಥ ಚಳಿಯಿಂದಾಗಿ ಈಗಾಗಲೇ 40 ಕ್ಕೂ ಹೆಚ್ಚು ಜನ ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಆದರೂ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ-ಕಾರ್ಮಿಕ-ಜನವಿರೋಧಿ ಕಾಯ್ದೆಗಳು ರದ್ದಾಗದೆ ವಾಪಸ್ ಹೋಗುವುದಿಲ್ಲ ಎಂದು ಪ್ರಾಣದ ಹಂಗು ತೊರೆದು ಹೋರಾಟ ನಡೆಸಿದ್ದಾರೆ. ಕೇಂದ್ರ ಸರ್ಕಾರವು ಹೋರಾಟಗಾರರನ್ನು ಸುಳ್ಳೇ ಮಾತುಕತೆಯ ಸುಳಿಯಲ್ಲಿ ಸುತ್ತಿಸುತ್ತ, ಸಮಯವನ್ನು ಮಾತ್ರವಲ್ಲ, ರೈತರನ್ನೂ ಕೊಲ್ಲುತ್ತಿದೆ” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇದು ತೀವ್ರ ಖಂಡನಾರ್ಹವಾಗಿದ್ದು. ಕೇಂದ್ರ ಸರ್ಕಾರ ಕೂಡಲೇ ರೈತರ-ಕಾರ್ಮಿಕರ ಹಕ್ಕೊತ್ತಾಯಗಳನ್ನು ಬೇಶರತ್ತಾಗಿ ಒಪ್ಪಿಕೊಂಡು, ಕಾಯ್ದೆಗಳನ್ನು ಹಿಂಪಡೆಯಬೇಕು. ಈ ಮೂಲಕ ಈ ಚಳವಳಿಗೆ ಅಂತ್ಯ ಹಾಡಿ, ಅಮಾಯಕ ಅನ್ನದಾತರ-ಶ್ರಮಜೀವಿಗಳ ಸಾಮೂಹಿಕ ಕಗ್ಗೊಲೆಯನ್ನು ನಿಲ್ಲಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ವಿಶ್ವದ ಅತ್ಯಂತ ಕಿರಿಯ ಪರಿಸರ ಹೋರಾಟಗಾರ್ತಿಯ ಬೆಂಬಲ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...