Homeಚಳವಳಿಕೊರೆಯುವ ಚಳಿಯಲ್ಲಿ ರೈತ ಹೋರಾಟಗಾರರು; ಕರುಣೆ ಇಲ್ಲದ ಸರ್ಕಾರ!

ಕೊರೆಯುವ ಚಳಿಯಲ್ಲಿ ರೈತ ಹೋರಾಟಗಾರರು; ಕರುಣೆ ಇಲ್ಲದ ಸರ್ಕಾರ!

ಸರ್ಕಾರದ ಕಣ್ಣುಪೊರೆ ಜಾಸ್ತಿಯಾಗಿದೆ, ಕಿವಿ ಕುರುಡಾಗಿದೆ, ಹೃದಯ ಇಲ್ಲವೆ ಇಲ್ಲ. ಕೊರೆಯುವ ಚಳಿಯಲ್ಲಿ ಅನ್ನದಾತರನ್ನು ಈ ರೀತಿಯಾಗಿ ನಡೆಸಿಕೊಳ್ಳುತ್ತಿರುವುದು ಯಾವುದೆ ನಾಗರೀಕ ಸರ್ಕಾರ ಮಾಡುವಂತದ್ದಲ್ಲ.

- Advertisement -
- Advertisement -

ದೆಹಲಿಯ ತಾಪಮಾನ ಇಂದು 4.1 ಸೆಲ್ಸಿಯಸ್ ಡಿಗ್ರಿ ತಲುಪಿದ್ದು, ಕೇಂದ್ರದ ಕೃಷಿ ಕಾನೂನಿನ ವಿರುದ್ದ ಹೋರಾಟ ಮಾಡುತ್ತಿರುವ ಅನ್ನದಾತರು ಕೊರೆಯುವ ಚಳಿಯಲ್ಲಿ ನಿರಂತರ 20 ನೇ ದಿನವನ್ನು ಕಳೆದಿದ್ದಾರೆ. ಇಂದಿನ ತಾಪಮಾನವು ಸಾಮಾನ್ಯಕ್ಕಿಂತ ಐದು ಡಿಗ್ರಿಗಳಷ್ಟು ಕಡಿಮೆಯಾಗಿದೆ ಎಂದು ಸಫ್ದರ್‌‌ಜಂಗ್ ವೀಕ್ಷಣಾಲಯ ಹೇಳಿದೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನನ್ನು ರದ್ದುಗೊಳಿಸಬೇಕು ಎಂದು ರೈತರು ಪಟ್ಟು ಹಿಡಿದಿದ್ದಾರೆ. ಕೇಂದ್ರ ಸಚಿವರೊಂದಿಗೆ ನಡೆದ ಆರು ಸುತ್ತಿನ ಮಾತುಕತೆ ವಿಫಲಗೊಂಡಿದೆ. ಪ್ರತಿಭಾರಿ ಮಾತುಕತೆಯಲ್ಲೂ ಕೇಂದ್ರವು ಒಂದೆ ರೀತಿಯ ಪ್ರಸ್ತಾಪದೊಂದಿಗೆ ಬರುತ್ತಿರುವುದಕ್ಕೆ ರೈತ ಹೋರಾಟಗಾರರು ಅಸಮಧಾನಗೊಂಡಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ದೆಹಲಿ-ಜೈಪುರ ಹೆದ್ದಾರಿಯಲ್ಲಿ ಪೊಲೀಸರೊಂದಿಗೆ ಘರ್ಷಣೆ- 20 ರೈತರ ಬಂಧನ 

ಆಂದೋಲನವು ನಿನ್ನೆಯಿಂದ ತೀವ್ರಗೊಂಡಿದ್ದು, ಹೋರಾಟ ನಿರತ ರೈತರು ಉಪವಾಸ ಸತ್ಯಾಗ್ರಹಕ್ಕೆ ಕರೆಕೊಟ್ಟಿದ್ದಾರೆ. ಅಲ್ಲದೆ ಆಂದೋಲನವನ್ನು ಸೇರಿಕೊಳ್ಳಲು ತಮಿಳುನಾಡು, ರಾಜಸ್ಥಾನ ಸೇರಿದಂತೆ ಇನ್ನೂ ಸಾವಿರಾರು ರೈತರು ದೆಹಲಿಗೆ ಹೊರಟಿದ್ದಾರೆ.

ದೇಶದಾದ್ಯಂತ ಆಂದೋಲನ ತೀವ್ರಗೊಳ್ಳುತ್ತಿದ್ದರೂ ಪ್ರಧಾನಿ ಮೋದಿ ಮಾತ್ರ ವಿವಾದಿತ ಕಾನೂನನ್ನು ಮತ್ತೆ ಮತ್ತೆ ಸಮರ್ಥಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಪ್ರತಿಭಟನಾ ನಿರತರನ್ನು ಅವಮಾನಿಸುವ ಹಾಗೂ ಅನುಮಾನಿಸುವ ಕಾರ್ಯ ಕೇಂದ್ರ ಸರ್ಕಾರದ ಪ್ರತಿನಿಧಿಗಳಿಂದ ಹಾಗೂ ಸರ್ಕಾರವನ್ನು ಬೆಂಬಲಿಸುವವರಿಂದ ನಡೆಯುತ್ತಲೇ ಇದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರು, “ಸರ್ಕಾರದ ಕಣ್ಣುಪೊರೆ ಜಾಸ್ತಿಯಾಗಿದೆ, ಕಿವಿ ಕುರುಡಾಗಿದೆ, ಹೃದಯ ಇಲ್ಲವೇ ಇಲ್ಲ. ಕೊರೆಯುವ ಚಳಿಯಲ್ಲಿ ಅನ್ನದಾತರನ್ನು ಈ ರೀತಿಯಾಗಿ ನಡೆಸಿಕೊಳ್ಳುತ್ತಿರುವುದು ಯಾವುದೆ ನಾಗರೀಕ ಸರ್ಕಾರ ಮಾಡುವಂತದ್ದಲ್ಲ. ಇದು ಪ್ರಪಂಚವೆ ತಲೆತಗ್ಗಿಸುವಂತಹ ನಡವಳಿಕೆ. ಈ ಹಂತದಲ್ಲಿ ರೈತರ ಸಾವು-ನೋವಾದರೆ ಇದಕ್ಕೆ ಮೋದಿ ಮತ್ತು ಅಮಿತ್‌ ಶಾನೇ ನೇರವಾದ ಕಾರಣ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿ 25,000 ಸೇನಾ ಪದಕಗಳನ್ನು ಹಿಂದಿರುಗಿಸಲು ಮುಂದಾದ ಮಾಜಿ ಸೈನಿಕರು!

ಕರ್ನಾಟಕ ಸರ್ಕಾರದ ಕೃಷಿ ಬೆಲೆ ಅಯೋಗದ ಮಾಜಿ ಅಧ್ಯಕ್ಷರಾದ ಪ್ರಕಾಶ್ ಕಮ್ಮರಡಿ ಅವರು ಮಾತನಾಡಿ,”ಒಂದು ಕಡೆ ತಮ್ಮ ಸರ್ಕಾರದ ಭಾಗವಾಗಿರುವ ಪಕ್ಷಗಳು ಈ ಕಾನೂನಿನ ವಿಷಯದಲ್ಲಿ ಎನ್‌ಡಿಎಯನ್ನು ಕೈಬಿಟ್ಟಿವೆ. ಇನ್ನೊಂದು ಕಡೆ ದೇಶದಾದ್ಯಂತ ರೈತರು ಬೀದಿಗಿಳಿದ್ದಾರೆ. ಇಷ್ಟೇ ಅಲ್ಲದೆ ಇವರದೇ ಮಾತೃ ಸಂಘಟನೆಯಾದ ಆರೆಸ್ಸೆಸ್ ಕೂಡಾ ಇದನ್ನು ವಿರೋಧಿಸುತ್ತಿದೆ. ರಾಜಕೀಯವಾಗಿ ದೊಡ್ಡ ಬೆಲೆ ತೆರಬೇಕಾದರು ಕೂಡಾ ಸರ್ಕಾರ ತಮ್ಮ ಹಠವನ್ನು ಬಿಡುತ್ತಿಲ್ಲವೆಂದರೆ, ಸರ್ಕಾರ ಆಳವಾದ ಹುನ್ನಾರದಲ್ಲಿ ತೊಡಗಿದೆ ಎನ್ನುವುದಲ್ಲಿ ಅನುಮಾನವೆ ಇಲ್ಲ” ಎಂದು ಹೇಳಿದರು.

“ಇಲ್ಲಿ ಹಣದ ಆಮಿಷಗಳು, ಸೇರಿದಂತೆ ಇದರ ಹಿಂದೆ ಅಡಗಿರುವಂತಹ ಶಕ್ತಿಗಳು ಬಹಳ ಪ್ರಭಲವಾಗಿದೆ. ಆದರೆ ಇವುಗಳೆಲ್ಲವು ಹೋರಾಟ ನಿರತ ರೈತರ ಮನೋಸ್ಥಿತಿಯನ್ನು ಇನ್ನೂ ಹರಿತ ಮಾಡುತ್ತಿದೆ. ಈ ಕೊರೆಯುವ ಚಳಿಯಲ್ಲೂ ಅವರು ಕೂತಿದ್ದಾರೆಂದರೆ ದೇಶದ ರೈತರು ಎಲ್ಲಕ್ಕೂ ಸಿದ್ದವಾಗಿಯೇ ಇದ್ದಾರೆ. ಇದು ನಮ್ಮ ದೇಶದ ಚರಿತ್ರೆಯಲ್ಲಿ ಒಂದು ನಿರ್ಣಾಯಕ ಹಂತವಾಗಿದೆ” ಎಂದು ತಿಳಿಸಿದರು.

ರೈತ-ದಲಿತ-ಕಾರ್ಮಿಕ-ಜನಪರ ಸಂಘಟನೆಗಳ ಐಕ್ಯ ಹೋರಾಟದ ಕೋರ್‌ ಕಮಿಟಿ ಸದಸ್ಯರಾದ ಸಿರಿಮನೆ ನಾಗರಾಜ್ ಅವರು ಮಾತನಾಡಿ, “ಮೈ ಮಾತ್ರವಲ್ಲ ಮೂಳೆಯನ್ನೇ ಕೊರೆಯುವ ಇಂಥ ಚಳಿಯಿಂದಾಗಿ ಈಗಾಗಲೇ 40 ಕ್ಕೂ ಹೆಚ್ಚು ಜನ ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಆದರೂ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ-ಕಾರ್ಮಿಕ-ಜನವಿರೋಧಿ ಕಾಯ್ದೆಗಳು ರದ್ದಾಗದೆ ವಾಪಸ್ ಹೋಗುವುದಿಲ್ಲ ಎಂದು ಪ್ರಾಣದ ಹಂಗು ತೊರೆದು ಹೋರಾಟ ನಡೆಸಿದ್ದಾರೆ. ಕೇಂದ್ರ ಸರ್ಕಾರವು ಹೋರಾಟಗಾರರನ್ನು ಸುಳ್ಳೇ ಮಾತುಕತೆಯ ಸುಳಿಯಲ್ಲಿ ಸುತ್ತಿಸುತ್ತ, ಸಮಯವನ್ನು ಮಾತ್ರವಲ್ಲ, ರೈತರನ್ನೂ ಕೊಲ್ಲುತ್ತಿದೆ” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇದು ತೀವ್ರ ಖಂಡನಾರ್ಹವಾಗಿದ್ದು. ಕೇಂದ್ರ ಸರ್ಕಾರ ಕೂಡಲೇ ರೈತರ-ಕಾರ್ಮಿಕರ ಹಕ್ಕೊತ್ತಾಯಗಳನ್ನು ಬೇಶರತ್ತಾಗಿ ಒಪ್ಪಿಕೊಂಡು, ಕಾಯ್ದೆಗಳನ್ನು ಹಿಂಪಡೆಯಬೇಕು. ಈ ಮೂಲಕ ಈ ಚಳವಳಿಗೆ ಅಂತ್ಯ ಹಾಡಿ, ಅಮಾಯಕ ಅನ್ನದಾತರ-ಶ್ರಮಜೀವಿಗಳ ಸಾಮೂಹಿಕ ಕಗ್ಗೊಲೆಯನ್ನು ನಿಲ್ಲಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ವಿಶ್ವದ ಅತ್ಯಂತ ಕಿರಿಯ ಪರಿಸರ ಹೋರಾಟಗಾರ್ತಿಯ ಬೆಂಬಲ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...