Homeಚಳವಳಿಕೊರೆಯುವ ಚಳಿಯಲ್ಲಿ ರೈತ ಹೋರಾಟಗಾರರು; ಕರುಣೆ ಇಲ್ಲದ ಸರ್ಕಾರ!

ಕೊರೆಯುವ ಚಳಿಯಲ್ಲಿ ರೈತ ಹೋರಾಟಗಾರರು; ಕರುಣೆ ಇಲ್ಲದ ಸರ್ಕಾರ!

ಸರ್ಕಾರದ ಕಣ್ಣುಪೊರೆ ಜಾಸ್ತಿಯಾಗಿದೆ, ಕಿವಿ ಕುರುಡಾಗಿದೆ, ಹೃದಯ ಇಲ್ಲವೆ ಇಲ್ಲ. ಕೊರೆಯುವ ಚಳಿಯಲ್ಲಿ ಅನ್ನದಾತರನ್ನು ಈ ರೀತಿಯಾಗಿ ನಡೆಸಿಕೊಳ್ಳುತ್ತಿರುವುದು ಯಾವುದೆ ನಾಗರೀಕ ಸರ್ಕಾರ ಮಾಡುವಂತದ್ದಲ್ಲ.

- Advertisement -
- Advertisement -

ದೆಹಲಿಯ ತಾಪಮಾನ ಇಂದು 4.1 ಸೆಲ್ಸಿಯಸ್ ಡಿಗ್ರಿ ತಲುಪಿದ್ದು, ಕೇಂದ್ರದ ಕೃಷಿ ಕಾನೂನಿನ ವಿರುದ್ದ ಹೋರಾಟ ಮಾಡುತ್ತಿರುವ ಅನ್ನದಾತರು ಕೊರೆಯುವ ಚಳಿಯಲ್ಲಿ ನಿರಂತರ 20 ನೇ ದಿನವನ್ನು ಕಳೆದಿದ್ದಾರೆ. ಇಂದಿನ ತಾಪಮಾನವು ಸಾಮಾನ್ಯಕ್ಕಿಂತ ಐದು ಡಿಗ್ರಿಗಳಷ್ಟು ಕಡಿಮೆಯಾಗಿದೆ ಎಂದು ಸಫ್ದರ್‌‌ಜಂಗ್ ವೀಕ್ಷಣಾಲಯ ಹೇಳಿದೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನನ್ನು ರದ್ದುಗೊಳಿಸಬೇಕು ಎಂದು ರೈತರು ಪಟ್ಟು ಹಿಡಿದಿದ್ದಾರೆ. ಕೇಂದ್ರ ಸಚಿವರೊಂದಿಗೆ ನಡೆದ ಆರು ಸುತ್ತಿನ ಮಾತುಕತೆ ವಿಫಲಗೊಂಡಿದೆ. ಪ್ರತಿಭಾರಿ ಮಾತುಕತೆಯಲ್ಲೂ ಕೇಂದ್ರವು ಒಂದೆ ರೀತಿಯ ಪ್ರಸ್ತಾಪದೊಂದಿಗೆ ಬರುತ್ತಿರುವುದಕ್ಕೆ ರೈತ ಹೋರಾಟಗಾರರು ಅಸಮಧಾನಗೊಂಡಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ದೆಹಲಿ-ಜೈಪುರ ಹೆದ್ದಾರಿಯಲ್ಲಿ ಪೊಲೀಸರೊಂದಿಗೆ ಘರ್ಷಣೆ- 20 ರೈತರ ಬಂಧನ 

ಆಂದೋಲನವು ನಿನ್ನೆಯಿಂದ ತೀವ್ರಗೊಂಡಿದ್ದು, ಹೋರಾಟ ನಿರತ ರೈತರು ಉಪವಾಸ ಸತ್ಯಾಗ್ರಹಕ್ಕೆ ಕರೆಕೊಟ್ಟಿದ್ದಾರೆ. ಅಲ್ಲದೆ ಆಂದೋಲನವನ್ನು ಸೇರಿಕೊಳ್ಳಲು ತಮಿಳುನಾಡು, ರಾಜಸ್ಥಾನ ಸೇರಿದಂತೆ ಇನ್ನೂ ಸಾವಿರಾರು ರೈತರು ದೆಹಲಿಗೆ ಹೊರಟಿದ್ದಾರೆ.

ದೇಶದಾದ್ಯಂತ ಆಂದೋಲನ ತೀವ್ರಗೊಳ್ಳುತ್ತಿದ್ದರೂ ಪ್ರಧಾನಿ ಮೋದಿ ಮಾತ್ರ ವಿವಾದಿತ ಕಾನೂನನ್ನು ಮತ್ತೆ ಮತ್ತೆ ಸಮರ್ಥಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಪ್ರತಿಭಟನಾ ನಿರತರನ್ನು ಅವಮಾನಿಸುವ ಹಾಗೂ ಅನುಮಾನಿಸುವ ಕಾರ್ಯ ಕೇಂದ್ರ ಸರ್ಕಾರದ ಪ್ರತಿನಿಧಿಗಳಿಂದ ಹಾಗೂ ಸರ್ಕಾರವನ್ನು ಬೆಂಬಲಿಸುವವರಿಂದ ನಡೆಯುತ್ತಲೇ ಇದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರು, “ಸರ್ಕಾರದ ಕಣ್ಣುಪೊರೆ ಜಾಸ್ತಿಯಾಗಿದೆ, ಕಿವಿ ಕುರುಡಾಗಿದೆ, ಹೃದಯ ಇಲ್ಲವೇ ಇಲ್ಲ. ಕೊರೆಯುವ ಚಳಿಯಲ್ಲಿ ಅನ್ನದಾತರನ್ನು ಈ ರೀತಿಯಾಗಿ ನಡೆಸಿಕೊಳ್ಳುತ್ತಿರುವುದು ಯಾವುದೆ ನಾಗರೀಕ ಸರ್ಕಾರ ಮಾಡುವಂತದ್ದಲ್ಲ. ಇದು ಪ್ರಪಂಚವೆ ತಲೆತಗ್ಗಿಸುವಂತಹ ನಡವಳಿಕೆ. ಈ ಹಂತದಲ್ಲಿ ರೈತರ ಸಾವು-ನೋವಾದರೆ ಇದಕ್ಕೆ ಮೋದಿ ಮತ್ತು ಅಮಿತ್‌ ಶಾನೇ ನೇರವಾದ ಕಾರಣ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿ 25,000 ಸೇನಾ ಪದಕಗಳನ್ನು ಹಿಂದಿರುಗಿಸಲು ಮುಂದಾದ ಮಾಜಿ ಸೈನಿಕರು!

ಕರ್ನಾಟಕ ಸರ್ಕಾರದ ಕೃಷಿ ಬೆಲೆ ಅಯೋಗದ ಮಾಜಿ ಅಧ್ಯಕ್ಷರಾದ ಪ್ರಕಾಶ್ ಕಮ್ಮರಡಿ ಅವರು ಮಾತನಾಡಿ,”ಒಂದು ಕಡೆ ತಮ್ಮ ಸರ್ಕಾರದ ಭಾಗವಾಗಿರುವ ಪಕ್ಷಗಳು ಈ ಕಾನೂನಿನ ವಿಷಯದಲ್ಲಿ ಎನ್‌ಡಿಎಯನ್ನು ಕೈಬಿಟ್ಟಿವೆ. ಇನ್ನೊಂದು ಕಡೆ ದೇಶದಾದ್ಯಂತ ರೈತರು ಬೀದಿಗಿಳಿದ್ದಾರೆ. ಇಷ್ಟೇ ಅಲ್ಲದೆ ಇವರದೇ ಮಾತೃ ಸಂಘಟನೆಯಾದ ಆರೆಸ್ಸೆಸ್ ಕೂಡಾ ಇದನ್ನು ವಿರೋಧಿಸುತ್ತಿದೆ. ರಾಜಕೀಯವಾಗಿ ದೊಡ್ಡ ಬೆಲೆ ತೆರಬೇಕಾದರು ಕೂಡಾ ಸರ್ಕಾರ ತಮ್ಮ ಹಠವನ್ನು ಬಿಡುತ್ತಿಲ್ಲವೆಂದರೆ, ಸರ್ಕಾರ ಆಳವಾದ ಹುನ್ನಾರದಲ್ಲಿ ತೊಡಗಿದೆ ಎನ್ನುವುದಲ್ಲಿ ಅನುಮಾನವೆ ಇಲ್ಲ” ಎಂದು ಹೇಳಿದರು.

“ಇಲ್ಲಿ ಹಣದ ಆಮಿಷಗಳು, ಸೇರಿದಂತೆ ಇದರ ಹಿಂದೆ ಅಡಗಿರುವಂತಹ ಶಕ್ತಿಗಳು ಬಹಳ ಪ್ರಭಲವಾಗಿದೆ. ಆದರೆ ಇವುಗಳೆಲ್ಲವು ಹೋರಾಟ ನಿರತ ರೈತರ ಮನೋಸ್ಥಿತಿಯನ್ನು ಇನ್ನೂ ಹರಿತ ಮಾಡುತ್ತಿದೆ. ಈ ಕೊರೆಯುವ ಚಳಿಯಲ್ಲೂ ಅವರು ಕೂತಿದ್ದಾರೆಂದರೆ ದೇಶದ ರೈತರು ಎಲ್ಲಕ್ಕೂ ಸಿದ್ದವಾಗಿಯೇ ಇದ್ದಾರೆ. ಇದು ನಮ್ಮ ದೇಶದ ಚರಿತ್ರೆಯಲ್ಲಿ ಒಂದು ನಿರ್ಣಾಯಕ ಹಂತವಾಗಿದೆ” ಎಂದು ತಿಳಿಸಿದರು.

ರೈತ-ದಲಿತ-ಕಾರ್ಮಿಕ-ಜನಪರ ಸಂಘಟನೆಗಳ ಐಕ್ಯ ಹೋರಾಟದ ಕೋರ್‌ ಕಮಿಟಿ ಸದಸ್ಯರಾದ ಸಿರಿಮನೆ ನಾಗರಾಜ್ ಅವರು ಮಾತನಾಡಿ, “ಮೈ ಮಾತ್ರವಲ್ಲ ಮೂಳೆಯನ್ನೇ ಕೊರೆಯುವ ಇಂಥ ಚಳಿಯಿಂದಾಗಿ ಈಗಾಗಲೇ 40 ಕ್ಕೂ ಹೆಚ್ಚು ಜನ ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಆದರೂ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ-ಕಾರ್ಮಿಕ-ಜನವಿರೋಧಿ ಕಾಯ್ದೆಗಳು ರದ್ದಾಗದೆ ವಾಪಸ್ ಹೋಗುವುದಿಲ್ಲ ಎಂದು ಪ್ರಾಣದ ಹಂಗು ತೊರೆದು ಹೋರಾಟ ನಡೆಸಿದ್ದಾರೆ. ಕೇಂದ್ರ ಸರ್ಕಾರವು ಹೋರಾಟಗಾರರನ್ನು ಸುಳ್ಳೇ ಮಾತುಕತೆಯ ಸುಳಿಯಲ್ಲಿ ಸುತ್ತಿಸುತ್ತ, ಸಮಯವನ್ನು ಮಾತ್ರವಲ್ಲ, ರೈತರನ್ನೂ ಕೊಲ್ಲುತ್ತಿದೆ” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇದು ತೀವ್ರ ಖಂಡನಾರ್ಹವಾಗಿದ್ದು. ಕೇಂದ್ರ ಸರ್ಕಾರ ಕೂಡಲೇ ರೈತರ-ಕಾರ್ಮಿಕರ ಹಕ್ಕೊತ್ತಾಯಗಳನ್ನು ಬೇಶರತ್ತಾಗಿ ಒಪ್ಪಿಕೊಂಡು, ಕಾಯ್ದೆಗಳನ್ನು ಹಿಂಪಡೆಯಬೇಕು. ಈ ಮೂಲಕ ಈ ಚಳವಳಿಗೆ ಅಂತ್ಯ ಹಾಡಿ, ಅಮಾಯಕ ಅನ್ನದಾತರ-ಶ್ರಮಜೀವಿಗಳ ಸಾಮೂಹಿಕ ಕಗ್ಗೊಲೆಯನ್ನು ನಿಲ್ಲಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ವಿಶ್ವದ ಅತ್ಯಂತ ಕಿರಿಯ ಪರಿಸರ ಹೋರಾಟಗಾರ್ತಿಯ ಬೆಂಬಲ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...