Homeಚಳವಳಿಕೊರೆಯುವ ಚಳಿಯಲ್ಲಿ ರೈತ ಹೋರಾಟಗಾರರು; ಕರುಣೆ ಇಲ್ಲದ ಸರ್ಕಾರ!

ಕೊರೆಯುವ ಚಳಿಯಲ್ಲಿ ರೈತ ಹೋರಾಟಗಾರರು; ಕರುಣೆ ಇಲ್ಲದ ಸರ್ಕಾರ!

ಸರ್ಕಾರದ ಕಣ್ಣುಪೊರೆ ಜಾಸ್ತಿಯಾಗಿದೆ, ಕಿವಿ ಕುರುಡಾಗಿದೆ, ಹೃದಯ ಇಲ್ಲವೆ ಇಲ್ಲ. ಕೊರೆಯುವ ಚಳಿಯಲ್ಲಿ ಅನ್ನದಾತರನ್ನು ಈ ರೀತಿಯಾಗಿ ನಡೆಸಿಕೊಳ್ಳುತ್ತಿರುವುದು ಯಾವುದೆ ನಾಗರೀಕ ಸರ್ಕಾರ ಮಾಡುವಂತದ್ದಲ್ಲ.

- Advertisement -
- Advertisement -

ದೆಹಲಿಯ ತಾಪಮಾನ ಇಂದು 4.1 ಸೆಲ್ಸಿಯಸ್ ಡಿಗ್ರಿ ತಲುಪಿದ್ದು, ಕೇಂದ್ರದ ಕೃಷಿ ಕಾನೂನಿನ ವಿರುದ್ದ ಹೋರಾಟ ಮಾಡುತ್ತಿರುವ ಅನ್ನದಾತರು ಕೊರೆಯುವ ಚಳಿಯಲ್ಲಿ ನಿರಂತರ 20 ನೇ ದಿನವನ್ನು ಕಳೆದಿದ್ದಾರೆ. ಇಂದಿನ ತಾಪಮಾನವು ಸಾಮಾನ್ಯಕ್ಕಿಂತ ಐದು ಡಿಗ್ರಿಗಳಷ್ಟು ಕಡಿಮೆಯಾಗಿದೆ ಎಂದು ಸಫ್ದರ್‌‌ಜಂಗ್ ವೀಕ್ಷಣಾಲಯ ಹೇಳಿದೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನನ್ನು ರದ್ದುಗೊಳಿಸಬೇಕು ಎಂದು ರೈತರು ಪಟ್ಟು ಹಿಡಿದಿದ್ದಾರೆ. ಕೇಂದ್ರ ಸಚಿವರೊಂದಿಗೆ ನಡೆದ ಆರು ಸುತ್ತಿನ ಮಾತುಕತೆ ವಿಫಲಗೊಂಡಿದೆ. ಪ್ರತಿಭಾರಿ ಮಾತುಕತೆಯಲ್ಲೂ ಕೇಂದ್ರವು ಒಂದೆ ರೀತಿಯ ಪ್ರಸ್ತಾಪದೊಂದಿಗೆ ಬರುತ್ತಿರುವುದಕ್ಕೆ ರೈತ ಹೋರಾಟಗಾರರು ಅಸಮಧಾನಗೊಂಡಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ದೆಹಲಿ-ಜೈಪುರ ಹೆದ್ದಾರಿಯಲ್ಲಿ ಪೊಲೀಸರೊಂದಿಗೆ ಘರ್ಷಣೆ- 20 ರೈತರ ಬಂಧನ 

ಆಂದೋಲನವು ನಿನ್ನೆಯಿಂದ ತೀವ್ರಗೊಂಡಿದ್ದು, ಹೋರಾಟ ನಿರತ ರೈತರು ಉಪವಾಸ ಸತ್ಯಾಗ್ರಹಕ್ಕೆ ಕರೆಕೊಟ್ಟಿದ್ದಾರೆ. ಅಲ್ಲದೆ ಆಂದೋಲನವನ್ನು ಸೇರಿಕೊಳ್ಳಲು ತಮಿಳುನಾಡು, ರಾಜಸ್ಥಾನ ಸೇರಿದಂತೆ ಇನ್ನೂ ಸಾವಿರಾರು ರೈತರು ದೆಹಲಿಗೆ ಹೊರಟಿದ್ದಾರೆ.

ದೇಶದಾದ್ಯಂತ ಆಂದೋಲನ ತೀವ್ರಗೊಳ್ಳುತ್ತಿದ್ದರೂ ಪ್ರಧಾನಿ ಮೋದಿ ಮಾತ್ರ ವಿವಾದಿತ ಕಾನೂನನ್ನು ಮತ್ತೆ ಮತ್ತೆ ಸಮರ್ಥಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಪ್ರತಿಭಟನಾ ನಿರತರನ್ನು ಅವಮಾನಿಸುವ ಹಾಗೂ ಅನುಮಾನಿಸುವ ಕಾರ್ಯ ಕೇಂದ್ರ ಸರ್ಕಾರದ ಪ್ರತಿನಿಧಿಗಳಿಂದ ಹಾಗೂ ಸರ್ಕಾರವನ್ನು ಬೆಂಬಲಿಸುವವರಿಂದ ನಡೆಯುತ್ತಲೇ ಇದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರು, “ಸರ್ಕಾರದ ಕಣ್ಣುಪೊರೆ ಜಾಸ್ತಿಯಾಗಿದೆ, ಕಿವಿ ಕುರುಡಾಗಿದೆ, ಹೃದಯ ಇಲ್ಲವೇ ಇಲ್ಲ. ಕೊರೆಯುವ ಚಳಿಯಲ್ಲಿ ಅನ್ನದಾತರನ್ನು ಈ ರೀತಿಯಾಗಿ ನಡೆಸಿಕೊಳ್ಳುತ್ತಿರುವುದು ಯಾವುದೆ ನಾಗರೀಕ ಸರ್ಕಾರ ಮಾಡುವಂತದ್ದಲ್ಲ. ಇದು ಪ್ರಪಂಚವೆ ತಲೆತಗ್ಗಿಸುವಂತಹ ನಡವಳಿಕೆ. ಈ ಹಂತದಲ್ಲಿ ರೈತರ ಸಾವು-ನೋವಾದರೆ ಇದಕ್ಕೆ ಮೋದಿ ಮತ್ತು ಅಮಿತ್‌ ಶಾನೇ ನೇರವಾದ ಕಾರಣ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿ 25,000 ಸೇನಾ ಪದಕಗಳನ್ನು ಹಿಂದಿರುಗಿಸಲು ಮುಂದಾದ ಮಾಜಿ ಸೈನಿಕರು!

ಕರ್ನಾಟಕ ಸರ್ಕಾರದ ಕೃಷಿ ಬೆಲೆ ಅಯೋಗದ ಮಾಜಿ ಅಧ್ಯಕ್ಷರಾದ ಪ್ರಕಾಶ್ ಕಮ್ಮರಡಿ ಅವರು ಮಾತನಾಡಿ,”ಒಂದು ಕಡೆ ತಮ್ಮ ಸರ್ಕಾರದ ಭಾಗವಾಗಿರುವ ಪಕ್ಷಗಳು ಈ ಕಾನೂನಿನ ವಿಷಯದಲ್ಲಿ ಎನ್‌ಡಿಎಯನ್ನು ಕೈಬಿಟ್ಟಿವೆ. ಇನ್ನೊಂದು ಕಡೆ ದೇಶದಾದ್ಯಂತ ರೈತರು ಬೀದಿಗಿಳಿದ್ದಾರೆ. ಇಷ್ಟೇ ಅಲ್ಲದೆ ಇವರದೇ ಮಾತೃ ಸಂಘಟನೆಯಾದ ಆರೆಸ್ಸೆಸ್ ಕೂಡಾ ಇದನ್ನು ವಿರೋಧಿಸುತ್ತಿದೆ. ರಾಜಕೀಯವಾಗಿ ದೊಡ್ಡ ಬೆಲೆ ತೆರಬೇಕಾದರು ಕೂಡಾ ಸರ್ಕಾರ ತಮ್ಮ ಹಠವನ್ನು ಬಿಡುತ್ತಿಲ್ಲವೆಂದರೆ, ಸರ್ಕಾರ ಆಳವಾದ ಹುನ್ನಾರದಲ್ಲಿ ತೊಡಗಿದೆ ಎನ್ನುವುದಲ್ಲಿ ಅನುಮಾನವೆ ಇಲ್ಲ” ಎಂದು ಹೇಳಿದರು.

“ಇಲ್ಲಿ ಹಣದ ಆಮಿಷಗಳು, ಸೇರಿದಂತೆ ಇದರ ಹಿಂದೆ ಅಡಗಿರುವಂತಹ ಶಕ್ತಿಗಳು ಬಹಳ ಪ್ರಭಲವಾಗಿದೆ. ಆದರೆ ಇವುಗಳೆಲ್ಲವು ಹೋರಾಟ ನಿರತ ರೈತರ ಮನೋಸ್ಥಿತಿಯನ್ನು ಇನ್ನೂ ಹರಿತ ಮಾಡುತ್ತಿದೆ. ಈ ಕೊರೆಯುವ ಚಳಿಯಲ್ಲೂ ಅವರು ಕೂತಿದ್ದಾರೆಂದರೆ ದೇಶದ ರೈತರು ಎಲ್ಲಕ್ಕೂ ಸಿದ್ದವಾಗಿಯೇ ಇದ್ದಾರೆ. ಇದು ನಮ್ಮ ದೇಶದ ಚರಿತ್ರೆಯಲ್ಲಿ ಒಂದು ನಿರ್ಣಾಯಕ ಹಂತವಾಗಿದೆ” ಎಂದು ತಿಳಿಸಿದರು.

ರೈತ-ದಲಿತ-ಕಾರ್ಮಿಕ-ಜನಪರ ಸಂಘಟನೆಗಳ ಐಕ್ಯ ಹೋರಾಟದ ಕೋರ್‌ ಕಮಿಟಿ ಸದಸ್ಯರಾದ ಸಿರಿಮನೆ ನಾಗರಾಜ್ ಅವರು ಮಾತನಾಡಿ, “ಮೈ ಮಾತ್ರವಲ್ಲ ಮೂಳೆಯನ್ನೇ ಕೊರೆಯುವ ಇಂಥ ಚಳಿಯಿಂದಾಗಿ ಈಗಾಗಲೇ 40 ಕ್ಕೂ ಹೆಚ್ಚು ಜನ ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಆದರೂ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ-ಕಾರ್ಮಿಕ-ಜನವಿರೋಧಿ ಕಾಯ್ದೆಗಳು ರದ್ದಾಗದೆ ವಾಪಸ್ ಹೋಗುವುದಿಲ್ಲ ಎಂದು ಪ್ರಾಣದ ಹಂಗು ತೊರೆದು ಹೋರಾಟ ನಡೆಸಿದ್ದಾರೆ. ಕೇಂದ್ರ ಸರ್ಕಾರವು ಹೋರಾಟಗಾರರನ್ನು ಸುಳ್ಳೇ ಮಾತುಕತೆಯ ಸುಳಿಯಲ್ಲಿ ಸುತ್ತಿಸುತ್ತ, ಸಮಯವನ್ನು ಮಾತ್ರವಲ್ಲ, ರೈತರನ್ನೂ ಕೊಲ್ಲುತ್ತಿದೆ” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇದು ತೀವ್ರ ಖಂಡನಾರ್ಹವಾಗಿದ್ದು. ಕೇಂದ್ರ ಸರ್ಕಾರ ಕೂಡಲೇ ರೈತರ-ಕಾರ್ಮಿಕರ ಹಕ್ಕೊತ್ತಾಯಗಳನ್ನು ಬೇಶರತ್ತಾಗಿ ಒಪ್ಪಿಕೊಂಡು, ಕಾಯ್ದೆಗಳನ್ನು ಹಿಂಪಡೆಯಬೇಕು. ಈ ಮೂಲಕ ಈ ಚಳವಳಿಗೆ ಅಂತ್ಯ ಹಾಡಿ, ಅಮಾಯಕ ಅನ್ನದಾತರ-ಶ್ರಮಜೀವಿಗಳ ಸಾಮೂಹಿಕ ಕಗ್ಗೊಲೆಯನ್ನು ನಿಲ್ಲಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ವಿಶ್ವದ ಅತ್ಯಂತ ಕಿರಿಯ ಪರಿಸರ ಹೋರಾಟಗಾರ್ತಿಯ ಬೆಂಬಲ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...