Homeಚಳವಳಿಕೊರೆಯುವ ಚಳಿಯಲ್ಲಿ ರೈತ ಹೋರಾಟಗಾರರು; ಕರುಣೆ ಇಲ್ಲದ ಸರ್ಕಾರ!

ಕೊರೆಯುವ ಚಳಿಯಲ್ಲಿ ರೈತ ಹೋರಾಟಗಾರರು; ಕರುಣೆ ಇಲ್ಲದ ಸರ್ಕಾರ!

ಸರ್ಕಾರದ ಕಣ್ಣುಪೊರೆ ಜಾಸ್ತಿಯಾಗಿದೆ, ಕಿವಿ ಕುರುಡಾಗಿದೆ, ಹೃದಯ ಇಲ್ಲವೆ ಇಲ್ಲ. ಕೊರೆಯುವ ಚಳಿಯಲ್ಲಿ ಅನ್ನದಾತರನ್ನು ಈ ರೀತಿಯಾಗಿ ನಡೆಸಿಕೊಳ್ಳುತ್ತಿರುವುದು ಯಾವುದೆ ನಾಗರೀಕ ಸರ್ಕಾರ ಮಾಡುವಂತದ್ದಲ್ಲ.

- Advertisement -
- Advertisement -

ದೆಹಲಿಯ ತಾಪಮಾನ ಇಂದು 4.1 ಸೆಲ್ಸಿಯಸ್ ಡಿಗ್ರಿ ತಲುಪಿದ್ದು, ಕೇಂದ್ರದ ಕೃಷಿ ಕಾನೂನಿನ ವಿರುದ್ದ ಹೋರಾಟ ಮಾಡುತ್ತಿರುವ ಅನ್ನದಾತರು ಕೊರೆಯುವ ಚಳಿಯಲ್ಲಿ ನಿರಂತರ 20 ನೇ ದಿನವನ್ನು ಕಳೆದಿದ್ದಾರೆ. ಇಂದಿನ ತಾಪಮಾನವು ಸಾಮಾನ್ಯಕ್ಕಿಂತ ಐದು ಡಿಗ್ರಿಗಳಷ್ಟು ಕಡಿಮೆಯಾಗಿದೆ ಎಂದು ಸಫ್ದರ್‌‌ಜಂಗ್ ವೀಕ್ಷಣಾಲಯ ಹೇಳಿದೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನನ್ನು ರದ್ದುಗೊಳಿಸಬೇಕು ಎಂದು ರೈತರು ಪಟ್ಟು ಹಿಡಿದಿದ್ದಾರೆ. ಕೇಂದ್ರ ಸಚಿವರೊಂದಿಗೆ ನಡೆದ ಆರು ಸುತ್ತಿನ ಮಾತುಕತೆ ವಿಫಲಗೊಂಡಿದೆ. ಪ್ರತಿಭಾರಿ ಮಾತುಕತೆಯಲ್ಲೂ ಕೇಂದ್ರವು ಒಂದೆ ರೀತಿಯ ಪ್ರಸ್ತಾಪದೊಂದಿಗೆ ಬರುತ್ತಿರುವುದಕ್ಕೆ ರೈತ ಹೋರಾಟಗಾರರು ಅಸಮಧಾನಗೊಂಡಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ದೆಹಲಿ-ಜೈಪುರ ಹೆದ್ದಾರಿಯಲ್ಲಿ ಪೊಲೀಸರೊಂದಿಗೆ ಘರ್ಷಣೆ- 20 ರೈತರ ಬಂಧನ 

ಆಂದೋಲನವು ನಿನ್ನೆಯಿಂದ ತೀವ್ರಗೊಂಡಿದ್ದು, ಹೋರಾಟ ನಿರತ ರೈತರು ಉಪವಾಸ ಸತ್ಯಾಗ್ರಹಕ್ಕೆ ಕರೆಕೊಟ್ಟಿದ್ದಾರೆ. ಅಲ್ಲದೆ ಆಂದೋಲನವನ್ನು ಸೇರಿಕೊಳ್ಳಲು ತಮಿಳುನಾಡು, ರಾಜಸ್ಥಾನ ಸೇರಿದಂತೆ ಇನ್ನೂ ಸಾವಿರಾರು ರೈತರು ದೆಹಲಿಗೆ ಹೊರಟಿದ್ದಾರೆ.

ದೇಶದಾದ್ಯಂತ ಆಂದೋಲನ ತೀವ್ರಗೊಳ್ಳುತ್ತಿದ್ದರೂ ಪ್ರಧಾನಿ ಮೋದಿ ಮಾತ್ರ ವಿವಾದಿತ ಕಾನೂನನ್ನು ಮತ್ತೆ ಮತ್ತೆ ಸಮರ್ಥಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಪ್ರತಿಭಟನಾ ನಿರತರನ್ನು ಅವಮಾನಿಸುವ ಹಾಗೂ ಅನುಮಾನಿಸುವ ಕಾರ್ಯ ಕೇಂದ್ರ ಸರ್ಕಾರದ ಪ್ರತಿನಿಧಿಗಳಿಂದ ಹಾಗೂ ಸರ್ಕಾರವನ್ನು ಬೆಂಬಲಿಸುವವರಿಂದ ನಡೆಯುತ್ತಲೇ ಇದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರು, “ಸರ್ಕಾರದ ಕಣ್ಣುಪೊರೆ ಜಾಸ್ತಿಯಾಗಿದೆ, ಕಿವಿ ಕುರುಡಾಗಿದೆ, ಹೃದಯ ಇಲ್ಲವೇ ಇಲ್ಲ. ಕೊರೆಯುವ ಚಳಿಯಲ್ಲಿ ಅನ್ನದಾತರನ್ನು ಈ ರೀತಿಯಾಗಿ ನಡೆಸಿಕೊಳ್ಳುತ್ತಿರುವುದು ಯಾವುದೆ ನಾಗರೀಕ ಸರ್ಕಾರ ಮಾಡುವಂತದ್ದಲ್ಲ. ಇದು ಪ್ರಪಂಚವೆ ತಲೆತಗ್ಗಿಸುವಂತಹ ನಡವಳಿಕೆ. ಈ ಹಂತದಲ್ಲಿ ರೈತರ ಸಾವು-ನೋವಾದರೆ ಇದಕ್ಕೆ ಮೋದಿ ಮತ್ತು ಅಮಿತ್‌ ಶಾನೇ ನೇರವಾದ ಕಾರಣ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿ 25,000 ಸೇನಾ ಪದಕಗಳನ್ನು ಹಿಂದಿರುಗಿಸಲು ಮುಂದಾದ ಮಾಜಿ ಸೈನಿಕರು!

ಕರ್ನಾಟಕ ಸರ್ಕಾರದ ಕೃಷಿ ಬೆಲೆ ಅಯೋಗದ ಮಾಜಿ ಅಧ್ಯಕ್ಷರಾದ ಪ್ರಕಾಶ್ ಕಮ್ಮರಡಿ ಅವರು ಮಾತನಾಡಿ,”ಒಂದು ಕಡೆ ತಮ್ಮ ಸರ್ಕಾರದ ಭಾಗವಾಗಿರುವ ಪಕ್ಷಗಳು ಈ ಕಾನೂನಿನ ವಿಷಯದಲ್ಲಿ ಎನ್‌ಡಿಎಯನ್ನು ಕೈಬಿಟ್ಟಿವೆ. ಇನ್ನೊಂದು ಕಡೆ ದೇಶದಾದ್ಯಂತ ರೈತರು ಬೀದಿಗಿಳಿದ್ದಾರೆ. ಇಷ್ಟೇ ಅಲ್ಲದೆ ಇವರದೇ ಮಾತೃ ಸಂಘಟನೆಯಾದ ಆರೆಸ್ಸೆಸ್ ಕೂಡಾ ಇದನ್ನು ವಿರೋಧಿಸುತ್ತಿದೆ. ರಾಜಕೀಯವಾಗಿ ದೊಡ್ಡ ಬೆಲೆ ತೆರಬೇಕಾದರು ಕೂಡಾ ಸರ್ಕಾರ ತಮ್ಮ ಹಠವನ್ನು ಬಿಡುತ್ತಿಲ್ಲವೆಂದರೆ, ಸರ್ಕಾರ ಆಳವಾದ ಹುನ್ನಾರದಲ್ಲಿ ತೊಡಗಿದೆ ಎನ್ನುವುದಲ್ಲಿ ಅನುಮಾನವೆ ಇಲ್ಲ” ಎಂದು ಹೇಳಿದರು.

“ಇಲ್ಲಿ ಹಣದ ಆಮಿಷಗಳು, ಸೇರಿದಂತೆ ಇದರ ಹಿಂದೆ ಅಡಗಿರುವಂತಹ ಶಕ್ತಿಗಳು ಬಹಳ ಪ್ರಭಲವಾಗಿದೆ. ಆದರೆ ಇವುಗಳೆಲ್ಲವು ಹೋರಾಟ ನಿರತ ರೈತರ ಮನೋಸ್ಥಿತಿಯನ್ನು ಇನ್ನೂ ಹರಿತ ಮಾಡುತ್ತಿದೆ. ಈ ಕೊರೆಯುವ ಚಳಿಯಲ್ಲೂ ಅವರು ಕೂತಿದ್ದಾರೆಂದರೆ ದೇಶದ ರೈತರು ಎಲ್ಲಕ್ಕೂ ಸಿದ್ದವಾಗಿಯೇ ಇದ್ದಾರೆ. ಇದು ನಮ್ಮ ದೇಶದ ಚರಿತ್ರೆಯಲ್ಲಿ ಒಂದು ನಿರ್ಣಾಯಕ ಹಂತವಾಗಿದೆ” ಎಂದು ತಿಳಿಸಿದರು.

ರೈತ-ದಲಿತ-ಕಾರ್ಮಿಕ-ಜನಪರ ಸಂಘಟನೆಗಳ ಐಕ್ಯ ಹೋರಾಟದ ಕೋರ್‌ ಕಮಿಟಿ ಸದಸ್ಯರಾದ ಸಿರಿಮನೆ ನಾಗರಾಜ್ ಅವರು ಮಾತನಾಡಿ, “ಮೈ ಮಾತ್ರವಲ್ಲ ಮೂಳೆಯನ್ನೇ ಕೊರೆಯುವ ಇಂಥ ಚಳಿಯಿಂದಾಗಿ ಈಗಾಗಲೇ 40 ಕ್ಕೂ ಹೆಚ್ಚು ಜನ ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಆದರೂ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ-ಕಾರ್ಮಿಕ-ಜನವಿರೋಧಿ ಕಾಯ್ದೆಗಳು ರದ್ದಾಗದೆ ವಾಪಸ್ ಹೋಗುವುದಿಲ್ಲ ಎಂದು ಪ್ರಾಣದ ಹಂಗು ತೊರೆದು ಹೋರಾಟ ನಡೆಸಿದ್ದಾರೆ. ಕೇಂದ್ರ ಸರ್ಕಾರವು ಹೋರಾಟಗಾರರನ್ನು ಸುಳ್ಳೇ ಮಾತುಕತೆಯ ಸುಳಿಯಲ್ಲಿ ಸುತ್ತಿಸುತ್ತ, ಸಮಯವನ್ನು ಮಾತ್ರವಲ್ಲ, ರೈತರನ್ನೂ ಕೊಲ್ಲುತ್ತಿದೆ” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇದು ತೀವ್ರ ಖಂಡನಾರ್ಹವಾಗಿದ್ದು. ಕೇಂದ್ರ ಸರ್ಕಾರ ಕೂಡಲೇ ರೈತರ-ಕಾರ್ಮಿಕರ ಹಕ್ಕೊತ್ತಾಯಗಳನ್ನು ಬೇಶರತ್ತಾಗಿ ಒಪ್ಪಿಕೊಂಡು, ಕಾಯ್ದೆಗಳನ್ನು ಹಿಂಪಡೆಯಬೇಕು. ಈ ಮೂಲಕ ಈ ಚಳವಳಿಗೆ ಅಂತ್ಯ ಹಾಡಿ, ಅಮಾಯಕ ಅನ್ನದಾತರ-ಶ್ರಮಜೀವಿಗಳ ಸಾಮೂಹಿಕ ಕಗ್ಗೊಲೆಯನ್ನು ನಿಲ್ಲಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ವಿಶ್ವದ ಅತ್ಯಂತ ಕಿರಿಯ ಪರಿಸರ ಹೋರಾಟಗಾರ್ತಿಯ ಬೆಂಬಲ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...