Homeಮುಖಪುಟಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ಈ ಹಿಂದೆ ಮದುವೆ ಆಮಂತ್ರಣ ಪತ್ರಗಳಲ್ಲಿ ಜಾತಿ, ಧರ್ಮಸೂಚಕ ಚಿತ್ರಗಳನ್ನು ಮುದ್ರಿಸುತ್ತಿದ್ದ ಜನರು ಈಗ ಭಗತ್‌ ಸಿಂಗ್, ಅಂಬೇಡ್ಕರ್‌, ಸಾವಿತ್ರಿ ಬಾಯಿ ಮುಂತಾದವರ ಚಿತ್ರಗಳಿಗೆ ಬೇಡಿಕೆಯಿಡುತ್ತಿದ್ದಾರೆ!

- Advertisement -
- Advertisement -

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ದ ದೇಶದಾದ್ಯಂತ ಹೋರಾಟಗಳು ತೀವ್ರಗೊಂಡಿದೆ. ದೆಹಲಿಯ ಗಡಿಗಳಲ್ಲಿ ನಡೆಯುತ್ತಿರು ಐತಿಹಾಸಿಕ ರೈತ ಹೋರಾಟ 83ನೇ ದಿನಕ್ಕೆ ಕಾಲಿಟ್ಟಿದೆ. ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ಹಲವಾರು ಜಿಲ್ಲೆಗಳಲ್ಲಿ ಕಿಸಾನ್ ಮಹಾಪಂಚಾಯತ್‌ಗಳು ಆರಂಭವಾಗಿ ಬಿಜೆಪಿಗೆ ತಲೆನೋವಾಗಿವೆ. ಉತ್ತರ ಭಾರತದಲ್ಲಿ ಕೃಷಿ ಕಾನೂನುಗಳ ವಿರುದ್ಧ ಹೋರಾಟದ ಕಾವು ಎಷ್ಟರ ಮಟ್ಟಿಗೆ ಇದೆ ಎಂದರೆ ಅಲ್ಲಿನ ಜನರು ತಮ್ಮ ಮದುವೆ ಆಮಂತ್ರಣ ಪತ್ರಗಳಲ್ಲಿ ಕೂಡಾ ಕೃಷಿ ವಿರೋಧಿ ಕಾನೂನನ್ನು ವಿರೋಧಿಸುವ ಘೋಷಣೆಗಳನ್ನು ಬರೆಸುತ್ತಿದ್ದಾರೆ!

Photo Courtesy: India.com

ಹರಿಯಾಣದ ಸ್ಥಳೀಯ ಪತ್ರಿಕೆಯೊಂದು ಈ ಬಗ್ಗೆ ವರದಿ ಮಾಡಿದೆ. ವರದಿಯಲ್ಲಿ ಮದುವೆ ಆಮಂತ್ರಣ ಪತ್ರಗಳನ್ನು ಮುದ್ರಿಸುವ ಮುದ್ರಕರ ಬಳಿಗೆ ಬರುವ ಗ್ರಾಹಕರು, ರೈತ ಹೋರಾಟದ ಘೋಷಣೆಗಳನ್ನು ಮುದ್ರಿಸಬೇಕು ಎಂದು ಕೇಳಿಕೊಳ್ಳುತ್ತಿದ್ದಾರೆ. ಈ ಹಿಂದೆ ಮದುವೆ ಆಮಂತ್ರಣ ಪತ್ರಗಳಲ್ಲಿ ಜಾತಿ ಸೂಚಕ, ಧರ್ಮಸೂಚಕ ಚಿನ್ನೆಗಳು ಅಥವಾ ಚಿತ್ರಗಳನ್ನು ಮಾತ್ರ ಮುದ್ರಿಸಲು ಹೇಳುತ್ತಿದ್ದ ಗ್ರಾಹಕರು ಇತ್ತೀಚೆಗೆ ಭಗತ್‌ ಸಿಂಗ್, ಅಂಬೇಡ್ಕರ್‌, ಸಾವಿತ್ರಿ ಬಾಯಿ ಮುಂತಾದ ಮಹಾಪುರುಷರ ಚಿತ್ರಗಳನ್ನು ಮುದ್ರಿಸಲು ಬೇಡಿಕೆಯಿಡುತ್ತಿದ್ದಾರೆ!

ಇದನ್ನೂ ಓದಿ: ರೈತ ಹೋರಾಟ 80ನೇ ದಿನಕ್ಕೆ: ಪ್ರೊ ಎಂ.ಡಿ ನಂಜುಂಡಸ್ವಾಮಿಯವರನ್ನು ನೆನೆದ ರೈತ ಒಕ್ಕೂಟ

”ಚಿತ್ರದಲ್ಲಿ ಕಾಣುವ ಮದುಮಗನ ಹೆಸರು ಜಗದೀಪ್ ಸಿಂಗ್ (30 ವರ್ಷ). ತಂದೆ ನಿವೃತ್ತ ಸೈನಿಕರು. ತನ್ನ ಮದುವೆಯ ದಿಬ್ಬಣ ಹೋಗುವಾಗ ಬರ್ನಾಲಾ ಎಂಬಲ್ಲಿ ಕಳೆದ 101 ದಿನಗಳಿಂದ ಚಳುವಳಿ ನಡೆಸುತ್ತಿರುವ ರೈತರು ಆತ‌ನ ಕಣ್ಣಿಗೆ ಬಿದ್ದರು. ತಕ್ಷಣ ದಿಬ್ಬಣ ನಿಲ್ಲಿಸಿದ ಮದುಮಗ ಜಗದೀಪ್ ದಿಬ್ಬಣದವರ ಸಮೇತ ರೈತರ ಜೊತೆ ಒಂದು ಗಂಟೆ ಕುಳಿತು ಅವರಿಗೆ ತನ್ನ ಬೆಂಬಲ ಘೋಷಿಸಿ, ಮದುವೆ ಹಾಲ್ ಕಡೆ ನಡೆದರು. ಹೋಗುವ ಮುನ್ನ ‘ಇದನ್ನು ಕೇಳಿ ಕಮಲ್ ಪ್ರೀತ್ (ಮದುಮಗಳು) ನನ್ನನ್ನು ಇನ್ನೂ ಹೆಚ್ಚು ಪ್ರೀತಿಸುತ್ತಾಳೆ’ ಎಂದು ಹೇಳಲು ಜಗದೀಪ್ ಮರೆಯಲಿಲ್ಲ” ಎಂದು ತಾನು ಕಂಡ ಘಟನೆಯ ಬಗ್ಗೆ ಪ್ರೊ. ಪುರುಷೋತ್ತಮ ಬಿಳಿಮಲೆಯವರು ತಮ್ಮ ಫೇಸ್‌ಬುಕ್‌ನಲ್ಲಿ ಬರೆದಿದ್ದರು.

ರಾಜಸ್ಥಾನ, ಪಂಜಾಬ್, ಹರಿಯಾಣದಲ್ಲಿ ದಂಪತಿಗಳು ರೈತರ ಚಳುವಳಿ ಘೋಷಣೆಗಳನ್ನು ಮುದ್ರಿಸಿ ಹಾಡುತ್ತಿದ್ದಾರೆ. ಹಲವು ನವ ದಂಪತಿಗಳು ತಮ್ಮ ಮದುವೆ ಊಟವನ್ನು ರೈತ ಹೋರಾಟಗಾರರಿಗೆ ಹಂಚಿಕೊಳ್ಳುತ್ತಿದ್ದಾರೆ. ಪಂಜಾಬಿ ಮದುವೆಗಳಲ್ಲಿ ಹಾಡು ಹಾಡುವ ನೋರಾ ಝೋರಾ ಗಿಡ್ಡಾ ಗುಂಪಿನ ಪ್ರಕಾರ, (ದೆಲ್ಲಿನೂ ಚಲಿಯೆ, ಜಾಕೆ ಮೋದಿನು ಘೆರಿಯೆ, ಹೇ ಸಮಾಲೋ) “ದೆಹಲಿಗೆ ಹೊರಡೋಣ, ಮೋದಿಯನ್ನು ಮುತ್ತಿಗೆ ಹಾಕೋಣಾ” ಎಂಬ ಹಾಡು ಜನಪ್ರಿಯವಾಗಿದೆ. ಜನರು ಮದುವೆಗಳಲ್ಲೂ ಈ ಹಾಡನ್ನೂ ಸಾಮೂಹಿಕವಾಗಿ ಹಾಡುತ್ತಿದ್ದಾರೆ.

ಕೇಂದ್ರ ಸರ್ಕಾರ ಇದುವರೆಗೂ ತಾನು ಜಾರಿಗೆ ತಂದಿರುವ ಕೃಷಿ ಕಾನೂನನ್ನು ಸಮರ್ಥಿಸುತ್ತಲೆ ಬಂದಿದೆ. ತೀರಾ ಇತ್ತೀಚೆಗೆ ಪ್ರಧಾನಿ ಮೋದಿ ಲೋಕಸಭೆಯಲ್ಲಿ ನಮ್ಮ ಸರ್ಕಾರ ರೈತರ ಪರವಾಗಿದೆ ಎಂದು ಹೇಳಿದ್ದಾರೆ. ಆದರೆ ಜನರು ವಿಭಿನ್ನವಾಗಿ ತಮ್ಮ ಪ್ರತಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಕಳೆದ ವರ್ಷದ ಸಿಎಎ ವಿರುದ್ದದ ಹೋರಾಟದಲ್ಲಿ ಕೇರಳ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ನವದಂಪತಿಗಳು “ಸಿಎಎ ಬೇಡ” ಎಂಬ ಘೋಷಣೆಗಳಿರುವ ಕಾರ್ಡ್‌ಗಳನ್ನು ಹಿಡಿದು ನಡೆಯುತ್ತಿರುವ, ಹೋರಾಟದಲ್ಲಿ ತಾವೂ ಭಾಗಿಯಾಗಿ ಬೆಂಬಲ ನೀಡುತ್ತಿದ್ದದ್ದು ವರದಿಯಾಗಿತ್ತು. ಅದರಂತೆ ಈ ವರ್ಷವು ಕೃಷಿ ಕಾನೂನನ್ನು ವಿರೋಧಿಸಿ ಇಂತಹದೆ ಘಟನೆಗಳು ವರದಿಯಾಗಿದೆ.

ಇದನ್ನೂ ಓದಿ: ಪಂಜಾಬ್ ಲೂಧಿಯಾನ ಮಹಾಪಂಚಾಯತ್‌ನಲ್ಲಿ ಲಕ್ಷಕ್ಕೂ ಅಧಿಕ ರೈತರು ಭಾಗಿ: ಚಳವಳಿ ತೀವ್ರಗೊಳಿಸಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...