Homeಮುಖಪುಟಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ಈ ಹಿಂದೆ ಮದುವೆ ಆಮಂತ್ರಣ ಪತ್ರಗಳಲ್ಲಿ ಜಾತಿ, ಧರ್ಮಸೂಚಕ ಚಿತ್ರಗಳನ್ನು ಮುದ್ರಿಸುತ್ತಿದ್ದ ಜನರು ಈಗ ಭಗತ್‌ ಸಿಂಗ್, ಅಂಬೇಡ್ಕರ್‌, ಸಾವಿತ್ರಿ ಬಾಯಿ ಮುಂತಾದವರ ಚಿತ್ರಗಳಿಗೆ ಬೇಡಿಕೆಯಿಡುತ್ತಿದ್ದಾರೆ!

- Advertisement -
- Advertisement -

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ದ ದೇಶದಾದ್ಯಂತ ಹೋರಾಟಗಳು ತೀವ್ರಗೊಂಡಿದೆ. ದೆಹಲಿಯ ಗಡಿಗಳಲ್ಲಿ ನಡೆಯುತ್ತಿರು ಐತಿಹಾಸಿಕ ರೈತ ಹೋರಾಟ 83ನೇ ದಿನಕ್ಕೆ ಕಾಲಿಟ್ಟಿದೆ. ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ಹಲವಾರು ಜಿಲ್ಲೆಗಳಲ್ಲಿ ಕಿಸಾನ್ ಮಹಾಪಂಚಾಯತ್‌ಗಳು ಆರಂಭವಾಗಿ ಬಿಜೆಪಿಗೆ ತಲೆನೋವಾಗಿವೆ. ಉತ್ತರ ಭಾರತದಲ್ಲಿ ಕೃಷಿ ಕಾನೂನುಗಳ ವಿರುದ್ಧ ಹೋರಾಟದ ಕಾವು ಎಷ್ಟರ ಮಟ್ಟಿಗೆ ಇದೆ ಎಂದರೆ ಅಲ್ಲಿನ ಜನರು ತಮ್ಮ ಮದುವೆ ಆಮಂತ್ರಣ ಪತ್ರಗಳಲ್ಲಿ ಕೂಡಾ ಕೃಷಿ ವಿರೋಧಿ ಕಾನೂನನ್ನು ವಿರೋಧಿಸುವ ಘೋಷಣೆಗಳನ್ನು ಬರೆಸುತ್ತಿದ್ದಾರೆ!

Photo Courtesy: India.com

ಹರಿಯಾಣದ ಸ್ಥಳೀಯ ಪತ್ರಿಕೆಯೊಂದು ಈ ಬಗ್ಗೆ ವರದಿ ಮಾಡಿದೆ. ವರದಿಯಲ್ಲಿ ಮದುವೆ ಆಮಂತ್ರಣ ಪತ್ರಗಳನ್ನು ಮುದ್ರಿಸುವ ಮುದ್ರಕರ ಬಳಿಗೆ ಬರುವ ಗ್ರಾಹಕರು, ರೈತ ಹೋರಾಟದ ಘೋಷಣೆಗಳನ್ನು ಮುದ್ರಿಸಬೇಕು ಎಂದು ಕೇಳಿಕೊಳ್ಳುತ್ತಿದ್ದಾರೆ. ಈ ಹಿಂದೆ ಮದುವೆ ಆಮಂತ್ರಣ ಪತ್ರಗಳಲ್ಲಿ ಜಾತಿ ಸೂಚಕ, ಧರ್ಮಸೂಚಕ ಚಿನ್ನೆಗಳು ಅಥವಾ ಚಿತ್ರಗಳನ್ನು ಮಾತ್ರ ಮುದ್ರಿಸಲು ಹೇಳುತ್ತಿದ್ದ ಗ್ರಾಹಕರು ಇತ್ತೀಚೆಗೆ ಭಗತ್‌ ಸಿಂಗ್, ಅಂಬೇಡ್ಕರ್‌, ಸಾವಿತ್ರಿ ಬಾಯಿ ಮುಂತಾದ ಮಹಾಪುರುಷರ ಚಿತ್ರಗಳನ್ನು ಮುದ್ರಿಸಲು ಬೇಡಿಕೆಯಿಡುತ್ತಿದ್ದಾರೆ!

ಇದನ್ನೂ ಓದಿ: ರೈತ ಹೋರಾಟ 80ನೇ ದಿನಕ್ಕೆ: ಪ್ರೊ ಎಂ.ಡಿ ನಂಜುಂಡಸ್ವಾಮಿಯವರನ್ನು ನೆನೆದ ರೈತ ಒಕ್ಕೂಟ

”ಚಿತ್ರದಲ್ಲಿ ಕಾಣುವ ಮದುಮಗನ ಹೆಸರು ಜಗದೀಪ್ ಸಿಂಗ್ (30 ವರ್ಷ). ತಂದೆ ನಿವೃತ್ತ ಸೈನಿಕರು. ತನ್ನ ಮದುವೆಯ ದಿಬ್ಬಣ ಹೋಗುವಾಗ ಬರ್ನಾಲಾ ಎಂಬಲ್ಲಿ ಕಳೆದ 101 ದಿನಗಳಿಂದ ಚಳುವಳಿ ನಡೆಸುತ್ತಿರುವ ರೈತರು ಆತ‌ನ ಕಣ್ಣಿಗೆ ಬಿದ್ದರು. ತಕ್ಷಣ ದಿಬ್ಬಣ ನಿಲ್ಲಿಸಿದ ಮದುಮಗ ಜಗದೀಪ್ ದಿಬ್ಬಣದವರ ಸಮೇತ ರೈತರ ಜೊತೆ ಒಂದು ಗಂಟೆ ಕುಳಿತು ಅವರಿಗೆ ತನ್ನ ಬೆಂಬಲ ಘೋಷಿಸಿ, ಮದುವೆ ಹಾಲ್ ಕಡೆ ನಡೆದರು. ಹೋಗುವ ಮುನ್ನ ‘ಇದನ್ನು ಕೇಳಿ ಕಮಲ್ ಪ್ರೀತ್ (ಮದುಮಗಳು) ನನ್ನನ್ನು ಇನ್ನೂ ಹೆಚ್ಚು ಪ್ರೀತಿಸುತ್ತಾಳೆ’ ಎಂದು ಹೇಳಲು ಜಗದೀಪ್ ಮರೆಯಲಿಲ್ಲ” ಎಂದು ತಾನು ಕಂಡ ಘಟನೆಯ ಬಗ್ಗೆ ಪ್ರೊ. ಪುರುಷೋತ್ತಮ ಬಿಳಿಮಲೆಯವರು ತಮ್ಮ ಫೇಸ್‌ಬುಕ್‌ನಲ್ಲಿ ಬರೆದಿದ್ದರು.

ರಾಜಸ್ಥಾನ, ಪಂಜಾಬ್, ಹರಿಯಾಣದಲ್ಲಿ ದಂಪತಿಗಳು ರೈತರ ಚಳುವಳಿ ಘೋಷಣೆಗಳನ್ನು ಮುದ್ರಿಸಿ ಹಾಡುತ್ತಿದ್ದಾರೆ. ಹಲವು ನವ ದಂಪತಿಗಳು ತಮ್ಮ ಮದುವೆ ಊಟವನ್ನು ರೈತ ಹೋರಾಟಗಾರರಿಗೆ ಹಂಚಿಕೊಳ್ಳುತ್ತಿದ್ದಾರೆ. ಪಂಜಾಬಿ ಮದುವೆಗಳಲ್ಲಿ ಹಾಡು ಹಾಡುವ ನೋರಾ ಝೋರಾ ಗಿಡ್ಡಾ ಗುಂಪಿನ ಪ್ರಕಾರ, (ದೆಲ್ಲಿನೂ ಚಲಿಯೆ, ಜಾಕೆ ಮೋದಿನು ಘೆರಿಯೆ, ಹೇ ಸಮಾಲೋ) “ದೆಹಲಿಗೆ ಹೊರಡೋಣ, ಮೋದಿಯನ್ನು ಮುತ್ತಿಗೆ ಹಾಕೋಣಾ” ಎಂಬ ಹಾಡು ಜನಪ್ರಿಯವಾಗಿದೆ. ಜನರು ಮದುವೆಗಳಲ್ಲೂ ಈ ಹಾಡನ್ನೂ ಸಾಮೂಹಿಕವಾಗಿ ಹಾಡುತ್ತಿದ್ದಾರೆ.

ಕೇಂದ್ರ ಸರ್ಕಾರ ಇದುವರೆಗೂ ತಾನು ಜಾರಿಗೆ ತಂದಿರುವ ಕೃಷಿ ಕಾನೂನನ್ನು ಸಮರ್ಥಿಸುತ್ತಲೆ ಬಂದಿದೆ. ತೀರಾ ಇತ್ತೀಚೆಗೆ ಪ್ರಧಾನಿ ಮೋದಿ ಲೋಕಸಭೆಯಲ್ಲಿ ನಮ್ಮ ಸರ್ಕಾರ ರೈತರ ಪರವಾಗಿದೆ ಎಂದು ಹೇಳಿದ್ದಾರೆ. ಆದರೆ ಜನರು ವಿಭಿನ್ನವಾಗಿ ತಮ್ಮ ಪ್ರತಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಕಳೆದ ವರ್ಷದ ಸಿಎಎ ವಿರುದ್ದದ ಹೋರಾಟದಲ್ಲಿ ಕೇರಳ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ನವದಂಪತಿಗಳು “ಸಿಎಎ ಬೇಡ” ಎಂಬ ಘೋಷಣೆಗಳಿರುವ ಕಾರ್ಡ್‌ಗಳನ್ನು ಹಿಡಿದು ನಡೆಯುತ್ತಿರುವ, ಹೋರಾಟದಲ್ಲಿ ತಾವೂ ಭಾಗಿಯಾಗಿ ಬೆಂಬಲ ನೀಡುತ್ತಿದ್ದದ್ದು ವರದಿಯಾಗಿತ್ತು. ಅದರಂತೆ ಈ ವರ್ಷವು ಕೃಷಿ ಕಾನೂನನ್ನು ವಿರೋಧಿಸಿ ಇಂತಹದೆ ಘಟನೆಗಳು ವರದಿಯಾಗಿದೆ.

ಇದನ್ನೂ ಓದಿ: ಪಂಜಾಬ್ ಲೂಧಿಯಾನ ಮಹಾಪಂಚಾಯತ್‌ನಲ್ಲಿ ಲಕ್ಷಕ್ಕೂ ಅಧಿಕ ರೈತರು ಭಾಗಿ: ಚಳವಳಿ ತೀವ್ರಗೊಳಿಸಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಉದ್ವಿಗ್ನತೆ: ಅಂತರರಾಷ್ಟ್ರೀಯ ಕಾನೂನು ಸತ್ತಿದೆ ಎಂದ ರಷ್ಯಾ, ಯುಎನ್ಎಸ್‌ಸಿ ಪಿ-5 ಶೃಂಗಸಭೆಗೆ ಒತ್ತಾಯ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಳ್ಳುತ್ತಿರುವ ನಡುವೆ, ಇರಾನ್ ಮೇಲೆ ಅಮೆರಿಕ-ಇಸ್ರೇಲಿ ದಾಳಿಯ ನಂತರ ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಅಂತರರಾಷ್ಟ್ರೀಯ ಕಾನೂನು ಪರಿಣಾಮಕಾರಿಯಾಗಿ ಸತ್ತಿದೆ ಎಂದು ರಷ್ಯಾ ಹೇಳಿದೆ ಮತ್ತು ಯುಎನ್ ಭದ್ರತಾ...

ಕೊಚ್ಚಿ ಬಂದರಿನಲ್ಲಿ ಇರಾನ್ ಯುದ್ಧನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನ : ಇಬ್ಬರು ‘ರಿಪಬ್ಲಿಕ್ ಟಿವಿ’ ಪತ್ರಕರ್ತರ ಬಂಧನ-ವರದಿ

ಕೇರಳದ ಕೊಚ್ಚಿ ಬಂದರಿನಲ್ಲಿ ಲಂಗರು ಹಾಕಿರುವ ಇರಾನಿನ ಯುದ್ಧ ನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನಿಸಿದ ಇಬ್ಬರು ರಿಪಬ್ಲಿಕ್ ಟಿವಿ ಪತ್ರಕರ್ತರು ಸೇರಿದಂತೆ ಮೂವರನ್ನು ಶನಿವಾರ (ಮಾ.7) ಬಂಧಿಸಲಾಗಿದೆ ಎಂದು thenewsminute.com ವರದಿ ಮಾಡಿದೆ. ಅಂತಾರಾಷ್ಟ್ರೀಯ...

ಬಿಹಾರ | ಅಧಿಕೃತವಾಗಿ ಜೆಡಿಯು ಸೇರಿದ ನಿತೀಶ್ ಕುಮಾರ್ ಮಗ ನಿಶಾಂತ್ ಕುಮಾರ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಗ ನಿಶಾಂತ್ ಕುಮಾರ್ ಅವರು ಭಾನುವಾರ (ಮಾ.8) ಔಪಚಾರಿಕವಾಗಿ ಜೆಡಿಯು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಅಧಿಕೃತವಾಗಿ ರಾಜಕೀಯಕ್ಕೆ ಪಾದಾರ್ಪಾಣೆ ಮಾಡಿದ್ದಾರೆ. ಸಿಎಂ ನಿತೀಶ್ ಕುಮಾರ್...

ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಹೆಚ್ಚಳ; 2025 ರ ವರದಿಯಲ್ಲಿ 3.6 ಲಕ್ಷ ದಾಟಿದ ಅತಿಸಾರ ಪ್ರಕರಣಗಳು

ಮುಂಬೈ: ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಸಂಖ್ಯೆ ಹೆಚ್ಚುತ್ತಿರುವುದು ಆರೋಗ್ಯ ಅಧಿಕಾರಿಗಳಲ್ಲಿ ಕಳವಳವನ್ನು ಮೂಡಿಸಿದೆ.  ಅಧಿಕೃತ ಅಂಕಿಅಂಶಗಳು ಪ್ರತಿ ವರ್ಷ ಸಾವಿರಾರು ಜನರು ಕಲುಷಿತ ನೀರು ಮತ್ತು ಕಳಪೆ ನೈರ್ಮಲ್ಯಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ...

ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆರೋಪ : ಬಂಗಾಳ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದ ಕೇಂದ್ರ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪಶ್ಚಿಮ ಬಂಗಾಳ ಭೇಟಿಗೆ ಸಂಬಂಧಿಸಿದಂತೆ ರಾಜ್ಯದ ಟಿಎಂಸಿ ಸರ್ಕಾರ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ನಡುವೆ ರಾಜಕೀಯ ಕಿತ್ತಾಟ ತೀವ್ರಗೊಂಡಂತೆ ಗೋಚರಿಸುತ್ತಿದೆ. ರಾಷ್ಟ್ರಪತಿ ಭೇಟಿಯ ವೇಳೆ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಒಂದು ವಾರದಲ್ಲಿ ಗಲ್ಫ್ ದೇಶಗಳಿಂದ 52,000 ಕ್ಕೂ ಹೆಚ್ಚು ಭಾರತೀಯರು ಮರಳಿದ್ದಾರೆ: ವಿದೇಶಾಂಗ ಸಚಿವಾಲಯ

ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿಯನ್ನು ಸರ್ಕಾರ ಮೇಲ್ವಿಚಾರಣೆ ಮಾಡುತ್ತಿರುವುದರಿಂದ ಮಾರ್ಚ್ 1 ರಿಂದ 7 ರವರೆಗೆ ಗಲ್ಫ್ ಪ್ರದೇಶದಿಂದ 52,000 ಕ್ಕೂ ಹೆಚ್ಚು ಭಾರತೀಯರು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

‘ನೀವು ಅಮೆರಿಕನ್ನರನ್ನು ಕೊಂದರೆ ನಾವು, ನಿಮ್ಮನ್ನು ಬೇಟೆಯಾಡುತ್ತೇವೆ’: ಅಮೆರಿಕ ಬೆದರಿಕೆ 

ವಾಷಿಂಗ್ಟನ್: "ನೀವು ಅಮೆರಿಕನ್ನರನ್ನು ಕೊಂದರೆ, ನಾವು ನಿಮ್ಮನ್ನು ಬೇಟೆಯಾಡುತ್ತೇವೆ" ಎಂದು ಯುದ್ಧ ಕಾರ್ಯದರ್ಶಿ ಪೀಟ್ ಹೆಗ್ಸೆತ್ ರೀಡ್ ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆ ಪೋಸ್ಟ್ ಹಾಕಿದ್ದಾರೆ.  ಅಮೆರಿಕ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಯಾವುದೇ ದೇಶ...

ಬಳ್ಳಾರಿ | ವಸತಿ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ದಾಳಿ : ಓರ್ವ ಸಾವು, 8 ಜನರಿಗೆ ಗಾಯ

ಬಳ್ಳಾರಿ ನಗರದ 'ಗುರುಕುಲ ವಸತಿ ಶಾಲೆ'ಯಲ್ಲಿ ಶನಿವಾರ (ಮಾ.7) ರಾತ್ರಿ ವಿದ್ಯಾರ್ಥಿಯೋರ್ವ ತನ್ನ ಸಹಪಾಠಿಗಳ ಮೇಲೆ ರಾಡ್, ಸ್ಕ್ರೂ ಡ್ರೈವರ್‌ನಿಂದ ದಾಳಿ ನಡೆಸಿದ್ದು, ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಎಂಟು ಜನರು ಗಾಯಗೊಂಡಿದ್ದಾರೆ...

ಗೋವುಗಳ ಕಳ್ಳಸಾಗಣೆ ಆರೋಪ: ಹಣ್ಣು-ತರಕಾರಿ ಸಾಗಿಸುತ್ತಿದ್ದ 28 ವರ್ಷದ ಮುಸ್ಲಿಂ ಚಾಲಕನಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಹಿಂದುತ್ವ ಗುಂಪು

ಭಿವಾಡಿ: ರಾಜಸ್ಥಾನದ ಭಿವಾಡಿ ಪ್ರದೇಶದಲ್ಲಿ ಮಾರ್ಚ್ 2 ರ ಮುಂಜಾನೆ 28 ವರ್ಷದ ಆಮಿರ್ ಎಂಬ ವ್ಯಕ್ತಿಯನ್ನು ಗೋರಕ್ಷಕರು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಅಕ್ರಮವಾಗಿ ಗೋವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆಂದು ಶಂಕಿಸಿ ಬಜರಂಗದಳದ ಸದಸ್ಯರು...