Homeಮುಖಪುಟಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ಈ ಹಿಂದೆ ಮದುವೆ ಆಮಂತ್ರಣ ಪತ್ರಗಳಲ್ಲಿ ಜಾತಿ, ಧರ್ಮಸೂಚಕ ಚಿತ್ರಗಳನ್ನು ಮುದ್ರಿಸುತ್ತಿದ್ದ ಜನರು ಈಗ ಭಗತ್‌ ಸಿಂಗ್, ಅಂಬೇಡ್ಕರ್‌, ಸಾವಿತ್ರಿ ಬಾಯಿ ಮುಂತಾದವರ ಚಿತ್ರಗಳಿಗೆ ಬೇಡಿಕೆಯಿಡುತ್ತಿದ್ದಾರೆ!

- Advertisement -
- Advertisement -

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ದ ದೇಶದಾದ್ಯಂತ ಹೋರಾಟಗಳು ತೀವ್ರಗೊಂಡಿದೆ. ದೆಹಲಿಯ ಗಡಿಗಳಲ್ಲಿ ನಡೆಯುತ್ತಿರು ಐತಿಹಾಸಿಕ ರೈತ ಹೋರಾಟ 83ನೇ ದಿನಕ್ಕೆ ಕಾಲಿಟ್ಟಿದೆ. ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ಹಲವಾರು ಜಿಲ್ಲೆಗಳಲ್ಲಿ ಕಿಸಾನ್ ಮಹಾಪಂಚಾಯತ್‌ಗಳು ಆರಂಭವಾಗಿ ಬಿಜೆಪಿಗೆ ತಲೆನೋವಾಗಿವೆ. ಉತ್ತರ ಭಾರತದಲ್ಲಿ ಕೃಷಿ ಕಾನೂನುಗಳ ವಿರುದ್ಧ ಹೋರಾಟದ ಕಾವು ಎಷ್ಟರ ಮಟ್ಟಿಗೆ ಇದೆ ಎಂದರೆ ಅಲ್ಲಿನ ಜನರು ತಮ್ಮ ಮದುವೆ ಆಮಂತ್ರಣ ಪತ್ರಗಳಲ್ಲಿ ಕೂಡಾ ಕೃಷಿ ವಿರೋಧಿ ಕಾನೂನನ್ನು ವಿರೋಧಿಸುವ ಘೋಷಣೆಗಳನ್ನು ಬರೆಸುತ್ತಿದ್ದಾರೆ!

Photo Courtesy: India.com

ಹರಿಯಾಣದ ಸ್ಥಳೀಯ ಪತ್ರಿಕೆಯೊಂದು ಈ ಬಗ್ಗೆ ವರದಿ ಮಾಡಿದೆ. ವರದಿಯಲ್ಲಿ ಮದುವೆ ಆಮಂತ್ರಣ ಪತ್ರಗಳನ್ನು ಮುದ್ರಿಸುವ ಮುದ್ರಕರ ಬಳಿಗೆ ಬರುವ ಗ್ರಾಹಕರು, ರೈತ ಹೋರಾಟದ ಘೋಷಣೆಗಳನ್ನು ಮುದ್ರಿಸಬೇಕು ಎಂದು ಕೇಳಿಕೊಳ್ಳುತ್ತಿದ್ದಾರೆ. ಈ ಹಿಂದೆ ಮದುವೆ ಆಮಂತ್ರಣ ಪತ್ರಗಳಲ್ಲಿ ಜಾತಿ ಸೂಚಕ, ಧರ್ಮಸೂಚಕ ಚಿನ್ನೆಗಳು ಅಥವಾ ಚಿತ್ರಗಳನ್ನು ಮಾತ್ರ ಮುದ್ರಿಸಲು ಹೇಳುತ್ತಿದ್ದ ಗ್ರಾಹಕರು ಇತ್ತೀಚೆಗೆ ಭಗತ್‌ ಸಿಂಗ್, ಅಂಬೇಡ್ಕರ್‌, ಸಾವಿತ್ರಿ ಬಾಯಿ ಮುಂತಾದ ಮಹಾಪುರುಷರ ಚಿತ್ರಗಳನ್ನು ಮುದ್ರಿಸಲು ಬೇಡಿಕೆಯಿಡುತ್ತಿದ್ದಾರೆ!

ಇದನ್ನೂ ಓದಿ: ರೈತ ಹೋರಾಟ 80ನೇ ದಿನಕ್ಕೆ: ಪ್ರೊ ಎಂ.ಡಿ ನಂಜುಂಡಸ್ವಾಮಿಯವರನ್ನು ನೆನೆದ ರೈತ ಒಕ್ಕೂಟ

”ಚಿತ್ರದಲ್ಲಿ ಕಾಣುವ ಮದುಮಗನ ಹೆಸರು ಜಗದೀಪ್ ಸಿಂಗ್ (30 ವರ್ಷ). ತಂದೆ ನಿವೃತ್ತ ಸೈನಿಕರು. ತನ್ನ ಮದುವೆಯ ದಿಬ್ಬಣ ಹೋಗುವಾಗ ಬರ್ನಾಲಾ ಎಂಬಲ್ಲಿ ಕಳೆದ 101 ದಿನಗಳಿಂದ ಚಳುವಳಿ ನಡೆಸುತ್ತಿರುವ ರೈತರು ಆತ‌ನ ಕಣ್ಣಿಗೆ ಬಿದ್ದರು. ತಕ್ಷಣ ದಿಬ್ಬಣ ನಿಲ್ಲಿಸಿದ ಮದುಮಗ ಜಗದೀಪ್ ದಿಬ್ಬಣದವರ ಸಮೇತ ರೈತರ ಜೊತೆ ಒಂದು ಗಂಟೆ ಕುಳಿತು ಅವರಿಗೆ ತನ್ನ ಬೆಂಬಲ ಘೋಷಿಸಿ, ಮದುವೆ ಹಾಲ್ ಕಡೆ ನಡೆದರು. ಹೋಗುವ ಮುನ್ನ ‘ಇದನ್ನು ಕೇಳಿ ಕಮಲ್ ಪ್ರೀತ್ (ಮದುಮಗಳು) ನನ್ನನ್ನು ಇನ್ನೂ ಹೆಚ್ಚು ಪ್ರೀತಿಸುತ್ತಾಳೆ’ ಎಂದು ಹೇಳಲು ಜಗದೀಪ್ ಮರೆಯಲಿಲ್ಲ” ಎಂದು ತಾನು ಕಂಡ ಘಟನೆಯ ಬಗ್ಗೆ ಪ್ರೊ. ಪುರುಷೋತ್ತಮ ಬಿಳಿಮಲೆಯವರು ತಮ್ಮ ಫೇಸ್‌ಬುಕ್‌ನಲ್ಲಿ ಬರೆದಿದ್ದರು.

ರಾಜಸ್ಥಾನ, ಪಂಜಾಬ್, ಹರಿಯಾಣದಲ್ಲಿ ದಂಪತಿಗಳು ರೈತರ ಚಳುವಳಿ ಘೋಷಣೆಗಳನ್ನು ಮುದ್ರಿಸಿ ಹಾಡುತ್ತಿದ್ದಾರೆ. ಹಲವು ನವ ದಂಪತಿಗಳು ತಮ್ಮ ಮದುವೆ ಊಟವನ್ನು ರೈತ ಹೋರಾಟಗಾರರಿಗೆ ಹಂಚಿಕೊಳ್ಳುತ್ತಿದ್ದಾರೆ. ಪಂಜಾಬಿ ಮದುವೆಗಳಲ್ಲಿ ಹಾಡು ಹಾಡುವ ನೋರಾ ಝೋರಾ ಗಿಡ್ಡಾ ಗುಂಪಿನ ಪ್ರಕಾರ, (ದೆಲ್ಲಿನೂ ಚಲಿಯೆ, ಜಾಕೆ ಮೋದಿನು ಘೆರಿಯೆ, ಹೇ ಸಮಾಲೋ) “ದೆಹಲಿಗೆ ಹೊರಡೋಣ, ಮೋದಿಯನ್ನು ಮುತ್ತಿಗೆ ಹಾಕೋಣಾ” ಎಂಬ ಹಾಡು ಜನಪ್ರಿಯವಾಗಿದೆ. ಜನರು ಮದುವೆಗಳಲ್ಲೂ ಈ ಹಾಡನ್ನೂ ಸಾಮೂಹಿಕವಾಗಿ ಹಾಡುತ್ತಿದ್ದಾರೆ.

ಕೇಂದ್ರ ಸರ್ಕಾರ ಇದುವರೆಗೂ ತಾನು ಜಾರಿಗೆ ತಂದಿರುವ ಕೃಷಿ ಕಾನೂನನ್ನು ಸಮರ್ಥಿಸುತ್ತಲೆ ಬಂದಿದೆ. ತೀರಾ ಇತ್ತೀಚೆಗೆ ಪ್ರಧಾನಿ ಮೋದಿ ಲೋಕಸಭೆಯಲ್ಲಿ ನಮ್ಮ ಸರ್ಕಾರ ರೈತರ ಪರವಾಗಿದೆ ಎಂದು ಹೇಳಿದ್ದಾರೆ. ಆದರೆ ಜನರು ವಿಭಿನ್ನವಾಗಿ ತಮ್ಮ ಪ್ರತಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಕಳೆದ ವರ್ಷದ ಸಿಎಎ ವಿರುದ್ದದ ಹೋರಾಟದಲ್ಲಿ ಕೇರಳ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ನವದಂಪತಿಗಳು “ಸಿಎಎ ಬೇಡ” ಎಂಬ ಘೋಷಣೆಗಳಿರುವ ಕಾರ್ಡ್‌ಗಳನ್ನು ಹಿಡಿದು ನಡೆಯುತ್ತಿರುವ, ಹೋರಾಟದಲ್ಲಿ ತಾವೂ ಭಾಗಿಯಾಗಿ ಬೆಂಬಲ ನೀಡುತ್ತಿದ್ದದ್ದು ವರದಿಯಾಗಿತ್ತು. ಅದರಂತೆ ಈ ವರ್ಷವು ಕೃಷಿ ಕಾನೂನನ್ನು ವಿರೋಧಿಸಿ ಇಂತಹದೆ ಘಟನೆಗಳು ವರದಿಯಾಗಿದೆ.

ಇದನ್ನೂ ಓದಿ: ಪಂಜಾಬ್ ಲೂಧಿಯಾನ ಮಹಾಪಂಚಾಯತ್‌ನಲ್ಲಿ ಲಕ್ಷಕ್ಕೂ ಅಧಿಕ ರೈತರು ಭಾಗಿ: ಚಳವಳಿ ತೀವ್ರಗೊಳಿಸಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮನೆ ವಿಳಾಸ ಬಹಿರಂಗ : ಹಿಂದುತ್ವ ಪೋರ್ಟಲ್‌ಗಳು, ಅಭಿಜಿತ್ ಅಯ್ಯರ್-ಮಿತ್ರ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಸಿಜೆಪಿಯ ಸೌರವ್ ದಾಸ್

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಕ್ತಾರ ಸೌರವ್ ದಾಸ್ ಅವರು ಹಿಂದುತ್ವ ಡಿಜಿಟಲ್ ಮಾಧ್ಯಮ ಪೋರ್ಟಲ್‌ಗಳು, ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳು ಮತ್ತು ಬಲಪಂಥೀಯ ರಾಜಕೀಯ ವಿಶ್ಲೇಷಕ ಅಭಿಜಿತ್ ಅಯ್ಯರ್-ಮಿತ್ರ ಅವರ ವಿರುದ್ಧ ದೆಹಲಿ...

ದಾಖಲೆಗಳಿದ್ದರೂ ಬಂಗಾಳಿ ಮಾತನಾಡುವ ಕಾರಣಕ್ಕೆ ಮಹಿಳೆಯನ್ನು ಬಾಂಗ್ಲಾದೇಶಕ್ಕೆ ಕಳುಹಿಸಿದ ಅಧಿಕಾರಿಗಳು?

ನವಿ ಮುಂಬೈನ 40 ವರ್ಷದ ಬಂಗಾಳಿ ಮಾತನಾಡುವ ಮಹಿಳೆಯೊಬ್ಬರನ್ನು ಅಕ್ರಮ ಬಾಂಗ್ಲಾದೇಶಿ ವಲಸಿಗರು ಎಂಬ ಶಂಕೆಯ ಮೇಲೆ ಬಂಧಿಸಿ, ಆಕೆ ಭಾರತದಲ್ಲೇ ಜನಿಸಿ ವಾಸಿಸುತ್ತಿದ್ದ ದಾಖಲೆಗಳನ್ನು ಕುಟುಂಬದವರು ಒದಗಿಸಿದರೂ, ಗಡಿಯಾಚೆಗೆ ಕಳುಹಿಸಲಾಗಿದೆ ಎಂದು...

ಬಾರ್ ಕೌನ್ಸಿಲ್ ಅಧ್ಯಕ್ಷರ ವಿರುದ್ಧ ₹150 ಕೋಟಿ ಅಕ್ರಮ ಆರೋಪ: ತಕ್ಷಣವೇ ರಾಜೀನಾಮೆ ನೀಡಲು ಒತ್ತಾಯ

ಭಾರತೀಯ ಬಾರ್ ಕೌನ್ಸಿಲ್ (BCI) ಉಪಾಧ್ಯಕ್ಷ ಮತ್ತು ಹಿರಿಯ ವಕೀಲ ವೈ.ಆರ್. ಸದಾಶಿವ ರೆಡ್ಡಿ ಅವರು ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಅವರ ರಾಜೀನಾಮೆಗೆ ಆಗ್ರಹಿಸಿ ಪತ್ರ ಬರೆದಿದ್ದಾರೆ. ತಮ್ಮ ಪತ್ರದಲ್ಲಿ...

ಶಿಕ್ಷಕರ ನೇಮಕಾತಿಯಲ್ಲಿ ಉರ್ದು ಮಾಧ್ಯಮಕ್ಕೆ ಅನ್ಯಾಯ : ಹೈಕೋರ್ಟ್‌ಗೆ ಅರ್ಜಿ

ಕರ್ನಾಟಕ ಸರ್ಕಾರದ 15 ಸಾವಿರ ಶಿಕ್ಷಕರ ನೇಮಕಾತಿ ಅಧಿಸೂಚನೆಯಲ್ಲಿ ಉರ್ದು ಮಾಧ್ಯಮ ಹಾಗೂ ಇತರ ಭಾಷಾ ಅಲ್ಪಸಂಖ್ಯಾತ ಶಿಕ್ಷಕರ ಹುದ್ದೆಗಳನ್ನು ಕೈಬಿಡಲಾಗಿದೆ ಎಂದು ಆರೋಪಿಸಿ ಹೈಕೋರ್ಟ್‌ನ ಧಾರವಾಡ ಪೀಠದ ಮುಂದೆ ಅರ್ಜಿ ಸಲ್ಲಿಕೆಯಾಗಿದೆ. ಉರ್ದು...

ಚುನಾವಣಾ ಆಯೋಗಕ್ಕೆ ನಕಲಿ ಆಕ್ಷೇಪಣೆ ಪತ್ರ ಸಲ್ಲಿಕೆ; ಉತ್ತರಾಖಂಡ್ ಹಾಲಿ ಕಾಂಗ್ರೆಸ್ ಶಾಸಕರ ಹೆಸರು ಡಿಲೀಟ್

ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದುಹಾಕಲು ಕೋರಿ ಸಲ್ಲಿಸಲಾದ ಆಕ್ಷೇಪಣೆಯನ್ನು (ಅರ್ಜಿ) ನಾನು ಸಲ್ಲಿಸಿಲ್ಲ ಎಂದು ವ್ಯಕ್ತಿಯೊಬ್ಬರು ನಿರಾಕರಿಸಿದ ನಂತರ, ಉತ್ತರಾಖಂಡ್ ಕಾಂಗ್ರೆಸ್ ಶಾಸಕ ಫುರ್ಕಾನ್ ಅಹಮದ್ ಅವರು ಮತದಾರರ ಪಟ್ಟಿಯ ವಿಶೇಷ ತೀವ್ರ...

RTI ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣ: ₹24 ಲಕ್ಷ ದೇವಸ್ಥಾನದ ಕಾಣಿಕೆ ಹಣ ಮನೆಗೆ ಕೊಂಡೊಯ್ದಿದ್ದ ನರೇಶ್ ಶೆಣೈ

RTI ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚಲನ ಮೂಡಿಸುವಂತಹ ಮಹತ್ವದ ದಾಖಲೆಯೊಂದು ಬಹಿರಂಗವಾಗಿದೆ. ಬಾಳಿಗಾ ಹತ್ಯೆ ನಡೆಯುವುದಕ್ಕೂ ಕೆಲವೇ ದಿನಗಳ ಮುನ್ನ, ಪ್ರಕರಣದ ಪ್ರಮುಖ ಆರೋಪಿ ನರೇಶ್...

ಸಿಜೆಪಿ ಪ್ರತಿಭಟನೆ: ಪೊಲೀಸ್ ದೌರ್ಜನ್ಯಗಳ ಆರೋಪದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಸುಪ್ರೀಂ ಆದೇಶ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿ ಪೊಲೀಸರು ನಡೆಸಿದ ಅತಿಯಾದ ಬಲಪ್ರಯೋಗ, ಹಿಂಸಾಚಾರ ಮತ್ತು ಇತರ ಗಂಭೀರ ದುರ್ನಡತೆಯ ಆರೋಪಗಳ ತನಿಖೆಗೆ ಉನ್ನತ...

ನಕಲಿ ಔಷಧ ದಂಧೆ: ತನಿಖೆಗೆ ಕಾನೂನು ತೊಡಕು, ಎಸ್‌ಐಟಿಗೆ ವಿಶೇಷಾಧಿಕಾರಕ್ಕೆ ಬೇಡಿಕೆ

ರಾಮನಗರ ಜಿಲ್ಲೆಯ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡೇರಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಬೆಳಕಿಗೆ ಬಂದಿರುವ ಸುಮಾರು 5 ಕೋಟಿ ರೂಪಾಯಿ ಮೌಲ್ಯದ ಬೃಹತ್ ನಕಲಿ ಔಷಧ ದಂಧೆಯ ತನಿಖೆಗೆ ಗಂಭೀರವಾದ ಕಾನೂನು ತೊಡಕು...

ಸಿಜೆಪಿ ಸ್ವಯಂ ಸೇವಕರ ಮೇಲೆ ದಾಳಿ | ರಾಜಸ್ಥಾನದ ಬಿಜೆಪಿ ಸರ್ಕಾರಕ್ಕೆ 3 ಬೇಡಿಕೆಗಳನ್ನು ಮುಂದಿಟ್ಟ ಅಭಿಜೀತ್ ದೀಪ್ಕೆ : ಈಡೇರಿಸಲು 48 ಗಂಟೆಗಳ ಗಡುವು

ಸರ್ಕಾರಿ ಶಾಲೆಯ ದುಃಸ್ಥಿತಿಯನ್ನು ಪರಿಶೀಲಿಸಲು ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಸಹ-ಸಂಘಟಕ ಆಶುತೋಷ್ ರಾಂಕಾ ಮತ್ತು ಇತರ ಸ್ವಯಂಸೇವಕರ ಮೇಲೆ ದಾಳಿ ನಡೆಸಿರುವುದನ್ನು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ತೀವ್ರವಾಗಿ ಖಂಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು...

ಸಾರ್ವಜನಿಕರ ಉಪಸ್ಥಿತಿಯಿಲ್ಲದ ಮುಚ್ಚಿದ ಸ್ಥಳದಲ್ಲಿ ಜಾತಿ ನಿಂದನೆ: ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ 

ಸಾರ್ವಜನಿಕ ಪ್ರವೇಶವಿಲ್ಲದ ಮತ್ತು ಸಾರ್ವಜನಿಕರ ಉಪಸ್ಥಿತಿಯಿಲ್ಲದ ನಾಲ್ಕು ಗೋಡೆಗಳ ನಡುವೆ ಅಥವಾ ಸುತ್ತುವರಿದ ಮುಚ್ಚಿದ ಜಾಗದಲ್ಲಿ ನಡೆದಿದೆ ಎನ್ನಲಾದ ಜಾತಿ ಆಧಾರಿತ ನಿಂದನೆ ಅಥವಾ ವಾಗ್ವಾದಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ...