Homeಮುಖಪುಟಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ಈ ಹಿಂದೆ ಮದುವೆ ಆಮಂತ್ರಣ ಪತ್ರಗಳಲ್ಲಿ ಜಾತಿ, ಧರ್ಮಸೂಚಕ ಚಿತ್ರಗಳನ್ನು ಮುದ್ರಿಸುತ್ತಿದ್ದ ಜನರು ಈಗ ಭಗತ್‌ ಸಿಂಗ್, ಅಂಬೇಡ್ಕರ್‌, ಸಾವಿತ್ರಿ ಬಾಯಿ ಮುಂತಾದವರ ಚಿತ್ರಗಳಿಗೆ ಬೇಡಿಕೆಯಿಡುತ್ತಿದ್ದಾರೆ!

- Advertisement -
- Advertisement -

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ದ ದೇಶದಾದ್ಯಂತ ಹೋರಾಟಗಳು ತೀವ್ರಗೊಂಡಿದೆ. ದೆಹಲಿಯ ಗಡಿಗಳಲ್ಲಿ ನಡೆಯುತ್ತಿರು ಐತಿಹಾಸಿಕ ರೈತ ಹೋರಾಟ 83ನೇ ದಿನಕ್ಕೆ ಕಾಲಿಟ್ಟಿದೆ. ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ಹಲವಾರು ಜಿಲ್ಲೆಗಳಲ್ಲಿ ಕಿಸಾನ್ ಮಹಾಪಂಚಾಯತ್‌ಗಳು ಆರಂಭವಾಗಿ ಬಿಜೆಪಿಗೆ ತಲೆನೋವಾಗಿವೆ. ಉತ್ತರ ಭಾರತದಲ್ಲಿ ಕೃಷಿ ಕಾನೂನುಗಳ ವಿರುದ್ಧ ಹೋರಾಟದ ಕಾವು ಎಷ್ಟರ ಮಟ್ಟಿಗೆ ಇದೆ ಎಂದರೆ ಅಲ್ಲಿನ ಜನರು ತಮ್ಮ ಮದುವೆ ಆಮಂತ್ರಣ ಪತ್ರಗಳಲ್ಲಿ ಕೂಡಾ ಕೃಷಿ ವಿರೋಧಿ ಕಾನೂನನ್ನು ವಿರೋಧಿಸುವ ಘೋಷಣೆಗಳನ್ನು ಬರೆಸುತ್ತಿದ್ದಾರೆ!

Photo Courtesy: India.com

ಹರಿಯಾಣದ ಸ್ಥಳೀಯ ಪತ್ರಿಕೆಯೊಂದು ಈ ಬಗ್ಗೆ ವರದಿ ಮಾಡಿದೆ. ವರದಿಯಲ್ಲಿ ಮದುವೆ ಆಮಂತ್ರಣ ಪತ್ರಗಳನ್ನು ಮುದ್ರಿಸುವ ಮುದ್ರಕರ ಬಳಿಗೆ ಬರುವ ಗ್ರಾಹಕರು, ರೈತ ಹೋರಾಟದ ಘೋಷಣೆಗಳನ್ನು ಮುದ್ರಿಸಬೇಕು ಎಂದು ಕೇಳಿಕೊಳ್ಳುತ್ತಿದ್ದಾರೆ. ಈ ಹಿಂದೆ ಮದುವೆ ಆಮಂತ್ರಣ ಪತ್ರಗಳಲ್ಲಿ ಜಾತಿ ಸೂಚಕ, ಧರ್ಮಸೂಚಕ ಚಿನ್ನೆಗಳು ಅಥವಾ ಚಿತ್ರಗಳನ್ನು ಮಾತ್ರ ಮುದ್ರಿಸಲು ಹೇಳುತ್ತಿದ್ದ ಗ್ರಾಹಕರು ಇತ್ತೀಚೆಗೆ ಭಗತ್‌ ಸಿಂಗ್, ಅಂಬೇಡ್ಕರ್‌, ಸಾವಿತ್ರಿ ಬಾಯಿ ಮುಂತಾದ ಮಹಾಪುರುಷರ ಚಿತ್ರಗಳನ್ನು ಮುದ್ರಿಸಲು ಬೇಡಿಕೆಯಿಡುತ್ತಿದ್ದಾರೆ!

ಇದನ್ನೂ ಓದಿ: ರೈತ ಹೋರಾಟ 80ನೇ ದಿನಕ್ಕೆ: ಪ್ರೊ ಎಂ.ಡಿ ನಂಜುಂಡಸ್ವಾಮಿಯವರನ್ನು ನೆನೆದ ರೈತ ಒಕ್ಕೂಟ

”ಚಿತ್ರದಲ್ಲಿ ಕಾಣುವ ಮದುಮಗನ ಹೆಸರು ಜಗದೀಪ್ ಸಿಂಗ್ (30 ವರ್ಷ). ತಂದೆ ನಿವೃತ್ತ ಸೈನಿಕರು. ತನ್ನ ಮದುವೆಯ ದಿಬ್ಬಣ ಹೋಗುವಾಗ ಬರ್ನಾಲಾ ಎಂಬಲ್ಲಿ ಕಳೆದ 101 ದಿನಗಳಿಂದ ಚಳುವಳಿ ನಡೆಸುತ್ತಿರುವ ರೈತರು ಆತ‌ನ ಕಣ್ಣಿಗೆ ಬಿದ್ದರು. ತಕ್ಷಣ ದಿಬ್ಬಣ ನಿಲ್ಲಿಸಿದ ಮದುಮಗ ಜಗದೀಪ್ ದಿಬ್ಬಣದವರ ಸಮೇತ ರೈತರ ಜೊತೆ ಒಂದು ಗಂಟೆ ಕುಳಿತು ಅವರಿಗೆ ತನ್ನ ಬೆಂಬಲ ಘೋಷಿಸಿ, ಮದುವೆ ಹಾಲ್ ಕಡೆ ನಡೆದರು. ಹೋಗುವ ಮುನ್ನ ‘ಇದನ್ನು ಕೇಳಿ ಕಮಲ್ ಪ್ರೀತ್ (ಮದುಮಗಳು) ನನ್ನನ್ನು ಇನ್ನೂ ಹೆಚ್ಚು ಪ್ರೀತಿಸುತ್ತಾಳೆ’ ಎಂದು ಹೇಳಲು ಜಗದೀಪ್ ಮರೆಯಲಿಲ್ಲ” ಎಂದು ತಾನು ಕಂಡ ಘಟನೆಯ ಬಗ್ಗೆ ಪ್ರೊ. ಪುರುಷೋತ್ತಮ ಬಿಳಿಮಲೆಯವರು ತಮ್ಮ ಫೇಸ್‌ಬುಕ್‌ನಲ್ಲಿ ಬರೆದಿದ್ದರು.

ರಾಜಸ್ಥಾನ, ಪಂಜಾಬ್, ಹರಿಯಾಣದಲ್ಲಿ ದಂಪತಿಗಳು ರೈತರ ಚಳುವಳಿ ಘೋಷಣೆಗಳನ್ನು ಮುದ್ರಿಸಿ ಹಾಡುತ್ತಿದ್ದಾರೆ. ಹಲವು ನವ ದಂಪತಿಗಳು ತಮ್ಮ ಮದುವೆ ಊಟವನ್ನು ರೈತ ಹೋರಾಟಗಾರರಿಗೆ ಹಂಚಿಕೊಳ್ಳುತ್ತಿದ್ದಾರೆ. ಪಂಜಾಬಿ ಮದುವೆಗಳಲ್ಲಿ ಹಾಡು ಹಾಡುವ ನೋರಾ ಝೋರಾ ಗಿಡ್ಡಾ ಗುಂಪಿನ ಪ್ರಕಾರ, (ದೆಲ್ಲಿನೂ ಚಲಿಯೆ, ಜಾಕೆ ಮೋದಿನು ಘೆರಿಯೆ, ಹೇ ಸಮಾಲೋ) “ದೆಹಲಿಗೆ ಹೊರಡೋಣ, ಮೋದಿಯನ್ನು ಮುತ್ತಿಗೆ ಹಾಕೋಣಾ” ಎಂಬ ಹಾಡು ಜನಪ್ರಿಯವಾಗಿದೆ. ಜನರು ಮದುವೆಗಳಲ್ಲೂ ಈ ಹಾಡನ್ನೂ ಸಾಮೂಹಿಕವಾಗಿ ಹಾಡುತ್ತಿದ್ದಾರೆ.

ಕೇಂದ್ರ ಸರ್ಕಾರ ಇದುವರೆಗೂ ತಾನು ಜಾರಿಗೆ ತಂದಿರುವ ಕೃಷಿ ಕಾನೂನನ್ನು ಸಮರ್ಥಿಸುತ್ತಲೆ ಬಂದಿದೆ. ತೀರಾ ಇತ್ತೀಚೆಗೆ ಪ್ರಧಾನಿ ಮೋದಿ ಲೋಕಸಭೆಯಲ್ಲಿ ನಮ್ಮ ಸರ್ಕಾರ ರೈತರ ಪರವಾಗಿದೆ ಎಂದು ಹೇಳಿದ್ದಾರೆ. ಆದರೆ ಜನರು ವಿಭಿನ್ನವಾಗಿ ತಮ್ಮ ಪ್ರತಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಕಳೆದ ವರ್ಷದ ಸಿಎಎ ವಿರುದ್ದದ ಹೋರಾಟದಲ್ಲಿ ಕೇರಳ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ನವದಂಪತಿಗಳು “ಸಿಎಎ ಬೇಡ” ಎಂಬ ಘೋಷಣೆಗಳಿರುವ ಕಾರ್ಡ್‌ಗಳನ್ನು ಹಿಡಿದು ನಡೆಯುತ್ತಿರುವ, ಹೋರಾಟದಲ್ಲಿ ತಾವೂ ಭಾಗಿಯಾಗಿ ಬೆಂಬಲ ನೀಡುತ್ತಿದ್ದದ್ದು ವರದಿಯಾಗಿತ್ತು. ಅದರಂತೆ ಈ ವರ್ಷವು ಕೃಷಿ ಕಾನೂನನ್ನು ವಿರೋಧಿಸಿ ಇಂತಹದೆ ಘಟನೆಗಳು ವರದಿಯಾಗಿದೆ.

ಇದನ್ನೂ ಓದಿ: ಪಂಜಾಬ್ ಲೂಧಿಯಾನ ಮಹಾಪಂಚಾಯತ್‌ನಲ್ಲಿ ಲಕ್ಷಕ್ಕೂ ಅಧಿಕ ರೈತರು ಭಾಗಿ: ಚಳವಳಿ ತೀವ್ರಗೊಳಿಸಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...