Homeಮುಖಪುಟಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ಈ ಹಿಂದೆ ಮದುವೆ ಆಮಂತ್ರಣ ಪತ್ರಗಳಲ್ಲಿ ಜಾತಿ, ಧರ್ಮಸೂಚಕ ಚಿತ್ರಗಳನ್ನು ಮುದ್ರಿಸುತ್ತಿದ್ದ ಜನರು ಈಗ ಭಗತ್‌ ಸಿಂಗ್, ಅಂಬೇಡ್ಕರ್‌, ಸಾವಿತ್ರಿ ಬಾಯಿ ಮುಂತಾದವರ ಚಿತ್ರಗಳಿಗೆ ಬೇಡಿಕೆಯಿಡುತ್ತಿದ್ದಾರೆ!

- Advertisement -
- Advertisement -

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ದ ದೇಶದಾದ್ಯಂತ ಹೋರಾಟಗಳು ತೀವ್ರಗೊಂಡಿದೆ. ದೆಹಲಿಯ ಗಡಿಗಳಲ್ಲಿ ನಡೆಯುತ್ತಿರು ಐತಿಹಾಸಿಕ ರೈತ ಹೋರಾಟ 83ನೇ ದಿನಕ್ಕೆ ಕಾಲಿಟ್ಟಿದೆ. ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ಹಲವಾರು ಜಿಲ್ಲೆಗಳಲ್ಲಿ ಕಿಸಾನ್ ಮಹಾಪಂಚಾಯತ್‌ಗಳು ಆರಂಭವಾಗಿ ಬಿಜೆಪಿಗೆ ತಲೆನೋವಾಗಿವೆ. ಉತ್ತರ ಭಾರತದಲ್ಲಿ ಕೃಷಿ ಕಾನೂನುಗಳ ವಿರುದ್ಧ ಹೋರಾಟದ ಕಾವು ಎಷ್ಟರ ಮಟ್ಟಿಗೆ ಇದೆ ಎಂದರೆ ಅಲ್ಲಿನ ಜನರು ತಮ್ಮ ಮದುವೆ ಆಮಂತ್ರಣ ಪತ್ರಗಳಲ್ಲಿ ಕೂಡಾ ಕೃಷಿ ವಿರೋಧಿ ಕಾನೂನನ್ನು ವಿರೋಧಿಸುವ ಘೋಷಣೆಗಳನ್ನು ಬರೆಸುತ್ತಿದ್ದಾರೆ!

Photo Courtesy: India.com

ಹರಿಯಾಣದ ಸ್ಥಳೀಯ ಪತ್ರಿಕೆಯೊಂದು ಈ ಬಗ್ಗೆ ವರದಿ ಮಾಡಿದೆ. ವರದಿಯಲ್ಲಿ ಮದುವೆ ಆಮಂತ್ರಣ ಪತ್ರಗಳನ್ನು ಮುದ್ರಿಸುವ ಮುದ್ರಕರ ಬಳಿಗೆ ಬರುವ ಗ್ರಾಹಕರು, ರೈತ ಹೋರಾಟದ ಘೋಷಣೆಗಳನ್ನು ಮುದ್ರಿಸಬೇಕು ಎಂದು ಕೇಳಿಕೊಳ್ಳುತ್ತಿದ್ದಾರೆ. ಈ ಹಿಂದೆ ಮದುವೆ ಆಮಂತ್ರಣ ಪತ್ರಗಳಲ್ಲಿ ಜಾತಿ ಸೂಚಕ, ಧರ್ಮಸೂಚಕ ಚಿನ್ನೆಗಳು ಅಥವಾ ಚಿತ್ರಗಳನ್ನು ಮಾತ್ರ ಮುದ್ರಿಸಲು ಹೇಳುತ್ತಿದ್ದ ಗ್ರಾಹಕರು ಇತ್ತೀಚೆಗೆ ಭಗತ್‌ ಸಿಂಗ್, ಅಂಬೇಡ್ಕರ್‌, ಸಾವಿತ್ರಿ ಬಾಯಿ ಮುಂತಾದ ಮಹಾಪುರುಷರ ಚಿತ್ರಗಳನ್ನು ಮುದ್ರಿಸಲು ಬೇಡಿಕೆಯಿಡುತ್ತಿದ್ದಾರೆ!

ಇದನ್ನೂ ಓದಿ: ರೈತ ಹೋರಾಟ 80ನೇ ದಿನಕ್ಕೆ: ಪ್ರೊ ಎಂ.ಡಿ ನಂಜುಂಡಸ್ವಾಮಿಯವರನ್ನು ನೆನೆದ ರೈತ ಒಕ್ಕೂಟ

”ಚಿತ್ರದಲ್ಲಿ ಕಾಣುವ ಮದುಮಗನ ಹೆಸರು ಜಗದೀಪ್ ಸಿಂಗ್ (30 ವರ್ಷ). ತಂದೆ ನಿವೃತ್ತ ಸೈನಿಕರು. ತನ್ನ ಮದುವೆಯ ದಿಬ್ಬಣ ಹೋಗುವಾಗ ಬರ್ನಾಲಾ ಎಂಬಲ್ಲಿ ಕಳೆದ 101 ದಿನಗಳಿಂದ ಚಳುವಳಿ ನಡೆಸುತ್ತಿರುವ ರೈತರು ಆತ‌ನ ಕಣ್ಣಿಗೆ ಬಿದ್ದರು. ತಕ್ಷಣ ದಿಬ್ಬಣ ನಿಲ್ಲಿಸಿದ ಮದುಮಗ ಜಗದೀಪ್ ದಿಬ್ಬಣದವರ ಸಮೇತ ರೈತರ ಜೊತೆ ಒಂದು ಗಂಟೆ ಕುಳಿತು ಅವರಿಗೆ ತನ್ನ ಬೆಂಬಲ ಘೋಷಿಸಿ, ಮದುವೆ ಹಾಲ್ ಕಡೆ ನಡೆದರು. ಹೋಗುವ ಮುನ್ನ ‘ಇದನ್ನು ಕೇಳಿ ಕಮಲ್ ಪ್ರೀತ್ (ಮದುಮಗಳು) ನನ್ನನ್ನು ಇನ್ನೂ ಹೆಚ್ಚು ಪ್ರೀತಿಸುತ್ತಾಳೆ’ ಎಂದು ಹೇಳಲು ಜಗದೀಪ್ ಮರೆಯಲಿಲ್ಲ” ಎಂದು ತಾನು ಕಂಡ ಘಟನೆಯ ಬಗ್ಗೆ ಪ್ರೊ. ಪುರುಷೋತ್ತಮ ಬಿಳಿಮಲೆಯವರು ತಮ್ಮ ಫೇಸ್‌ಬುಕ್‌ನಲ್ಲಿ ಬರೆದಿದ್ದರು.

ರಾಜಸ್ಥಾನ, ಪಂಜಾಬ್, ಹರಿಯಾಣದಲ್ಲಿ ದಂಪತಿಗಳು ರೈತರ ಚಳುವಳಿ ಘೋಷಣೆಗಳನ್ನು ಮುದ್ರಿಸಿ ಹಾಡುತ್ತಿದ್ದಾರೆ. ಹಲವು ನವ ದಂಪತಿಗಳು ತಮ್ಮ ಮದುವೆ ಊಟವನ್ನು ರೈತ ಹೋರಾಟಗಾರರಿಗೆ ಹಂಚಿಕೊಳ್ಳುತ್ತಿದ್ದಾರೆ. ಪಂಜಾಬಿ ಮದುವೆಗಳಲ್ಲಿ ಹಾಡು ಹಾಡುವ ನೋರಾ ಝೋರಾ ಗಿಡ್ಡಾ ಗುಂಪಿನ ಪ್ರಕಾರ, (ದೆಲ್ಲಿನೂ ಚಲಿಯೆ, ಜಾಕೆ ಮೋದಿನು ಘೆರಿಯೆ, ಹೇ ಸಮಾಲೋ) “ದೆಹಲಿಗೆ ಹೊರಡೋಣ, ಮೋದಿಯನ್ನು ಮುತ್ತಿಗೆ ಹಾಕೋಣಾ” ಎಂಬ ಹಾಡು ಜನಪ್ರಿಯವಾಗಿದೆ. ಜನರು ಮದುವೆಗಳಲ್ಲೂ ಈ ಹಾಡನ್ನೂ ಸಾಮೂಹಿಕವಾಗಿ ಹಾಡುತ್ತಿದ್ದಾರೆ.

ಕೇಂದ್ರ ಸರ್ಕಾರ ಇದುವರೆಗೂ ತಾನು ಜಾರಿಗೆ ತಂದಿರುವ ಕೃಷಿ ಕಾನೂನನ್ನು ಸಮರ್ಥಿಸುತ್ತಲೆ ಬಂದಿದೆ. ತೀರಾ ಇತ್ತೀಚೆಗೆ ಪ್ರಧಾನಿ ಮೋದಿ ಲೋಕಸಭೆಯಲ್ಲಿ ನಮ್ಮ ಸರ್ಕಾರ ರೈತರ ಪರವಾಗಿದೆ ಎಂದು ಹೇಳಿದ್ದಾರೆ. ಆದರೆ ಜನರು ವಿಭಿನ್ನವಾಗಿ ತಮ್ಮ ಪ್ರತಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಕಳೆದ ವರ್ಷದ ಸಿಎಎ ವಿರುದ್ದದ ಹೋರಾಟದಲ್ಲಿ ಕೇರಳ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ನವದಂಪತಿಗಳು “ಸಿಎಎ ಬೇಡ” ಎಂಬ ಘೋಷಣೆಗಳಿರುವ ಕಾರ್ಡ್‌ಗಳನ್ನು ಹಿಡಿದು ನಡೆಯುತ್ತಿರುವ, ಹೋರಾಟದಲ್ಲಿ ತಾವೂ ಭಾಗಿಯಾಗಿ ಬೆಂಬಲ ನೀಡುತ್ತಿದ್ದದ್ದು ವರದಿಯಾಗಿತ್ತು. ಅದರಂತೆ ಈ ವರ್ಷವು ಕೃಷಿ ಕಾನೂನನ್ನು ವಿರೋಧಿಸಿ ಇಂತಹದೆ ಘಟನೆಗಳು ವರದಿಯಾಗಿದೆ.

ಇದನ್ನೂ ಓದಿ: ಪಂಜಾಬ್ ಲೂಧಿಯಾನ ಮಹಾಪಂಚಾಯತ್‌ನಲ್ಲಿ ಲಕ್ಷಕ್ಕೂ ಅಧಿಕ ರೈತರು ಭಾಗಿ: ಚಳವಳಿ ತೀವ್ರಗೊಳಿಸಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತ ಚುನಾವಣಾ ವ್ಯವಸ್ಥೆಯನ್ನು ಹೊಗಳಿದ ಟ್ರಂಪ್: ಜ್ಞಾನೇಶ್ ಕುಮಾರ್ ಜೊತೆಗೆ EVMಅನ್ನು ತೆಗೆದುಕೊಂಡು ಹೊಗಿ ಎಂದು ಕಾಲೆಳೆದ ಕಾಂಗ್ರೆಸ್

ಭಾರತದ ಚುನಾವಣಾ ವ್ಯವಸ್ಥೆ ಹಾಗೂ ಮತದಾರರ ಫೋಟೋ ಗುರುತಿನ ಚೀಟಿ (Voter ID) ಕಡ್ಡಾಯ ನಿಯಮವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಆದರೆ, ಟ್ರಂಪ್ ಅವರ ಈ ಹೇಳಿಕೆಯನ್ನು ಇಟ್ಟುಕೊಂಡು...

ಬಿಜೆಪಿ ವಿರುದ್ಧ ಹೋರಾಟಕ್ಕೆ ಕರೆ ನೀಡಿದ ತ್ರಿಪುರ ಮಾಜಿ ಸಿಎಂ ಮಾಣಿಕ್ ಸರ್ಕಾರ್ ವಿರುದ್ಧ ಪ್ರಕರಣ ದಾಖಲು: ಬಿಜೆಪಿಯ ಕೀಳು ಮಟ್ಟದ ರಾಜಕೀಯ ಎಂದ ಸಿಪಿಐ(ಎಂ)

ತ್ರಿಪುರದ ಮಾಜಿ ಮುಖ್ಯಮಂತ್ರಿ ಹಾಗೂ ಸಿಪಿಐ(ಎಂ) ಪಾಲಿಟ್‌ಬ್ಯೂರೋ ಹಿರಿಯ ಸದಸ್ಯ ಮಾಣಿಕ್ ಸರ್ಕಾರ್ ಅವರು ಇತ್ತೀಚೆಗೆ ಸಾರ್ವಜನಿಕ ರ್ಯಾಲಿಯೊಂದರಲ್ಲಿ ನೀಡಿದ್ದ ಹೇಳಿಕೆಯನ್ನು ಆಧರಿಸಿ, ಅವರ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಸರಣಿ...

ಮುಹಮ್ಮದ್ ದೀಪಕ್‌ಗೆ 2026 ನೇ ಸಾಲಿನ ‘ರೆಹಮತ್-ಎ-ಆಲಂ ಶಾಂತಿ ಪ್ರಶಸ್ತಿ’

ಆಲ್ ಇಂಡಿಯಾ ಬಾಜ್ಮ್-ಎ-ರೆಹಮತ್-ಎ-ಆಲಂ ಸಂಘಟನೆಯು, ಮುಹಮ್ಮದ್ ದೀಪಕ್ ಎಂದೇ ಜನಪ್ರಿಯರಾಗಿರುವ ದೀಪಕ್ ಕುಮಾರ್ ಅವರಿಗೆ 2026 ರ ರೆಹಮತ್-ಎ-ಆಲಂ ಶಾಂತಿ ಪ್ರಶಸ್ತಿಯನ್ನು ಘೋಷಿಸಿದೆ. ಪ್ರವಾದಿ ಮುಹಮ್ಮದ್ ಅವರ ಜನ್ಮ ದಿನಾಚರಣೆಯಾದ ಮಿಲಾದ್-ಉನ್-ನಬಿಯನ್ನು ಗುರುತಿಸಲು ಆಯೋಜಿಸಲಾದ...

ಸ್ವಾತಂತ್ರ್ಯ ದಿನಾಚರಣೆಯಲ್ಲಿ ದಲಿತರಿಗೆ ಅವಮಾನ; ಬಲವಂತವಾಗಿ ನೆಲದ ಮೇಲೆ ಕೂರಿಸಿದ ಐವರ ವಿರುದ್ಧ ಪ್ರಕರಣ ದಾಖಲು

ರಾಜಸ್ಥಾನದ ಭಿಲ್ವಾರಾ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ದಲಿತ ಸಮುದಾಯದ ಇಬ್ಬರಿಗೆ ಜಾತಿ ನಿಂದನೆ ಮಾಡಿದ್ದು, ಅವರು ಕುಳಿತಿದ್ದ ಕುರ್ಚಿಗಳನ್ನು ಖಾಲಿ ಮಾಡಿಸಿ ನೆಲದ ಮೇಲೆ ಕೂರಿಸಿದ್ದಾರೆ. ಈ ಬಗ್ಗೆ...

ಬಿಹಾರ NEET ಪ್ರತಿಭಟನೆ: ವಿದ್ಯಾರ್ಥಿಗಳ ವಿರುದ್ಧ AK-47 ಬಳಸಿದ್ದನ್ನು ಸುಪ್ರೀಂನಲ್ಲಿ ಒಪ್ಪಿಕೊಂಡ ಬಿಹಾರ ಸರ್ಕಾರ

ಬಿಹಾರದಲ್ಲಿ ನಡೆದ NEET-UG ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು AK-47 ರೈಫಲ್‌ನಿಂದ ಗಾಳಿಯಲ್ಲಿ ನಾಲ್ಕು ಸುತ್ತು ಗುಂಡು ಹಾರಿಸಿರುವುದಾಗಿ ಬಿಹಾರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ...

ಕರಿಯಪ್ಪ ಗುಡಿಮನಿ ಸೇರಿದಂತೆ ಮೂವರು ಹೋರಾಟಗಾರರಿಗೆ ಹಂಪಿ ವಿವಿ ಸನ್ಮಾನ

ಹಂಪಿ ಕನ್ನಡ ವಿಶ್ವವಿದ್ಯಾಲಯ ಆಗಸ್ಟ್‌ 15 ರಂದು ಹಿರಿಯ ದಲಿತ ಹೋರಾಟಗಾರರಾದ ಕರಿಯಪ್ಪ ಗುಡಿಮನೆ, ದೇಸಾಯಿ ಗುಂಡೂರಾವ್‌, ಹೆಚ್.‌ ಪಿ. ಶಿಕಾರಿ ಮತ್ತು ಶೇಖಪ್ಪರನ್ನು ಸಾಮಾಜಿಕ ಹೋರಾಟಕ್ಕೆ ತಮ್ಮ ಜೀವನವನ್ನು ಸವೆಸಿದ ಹಿನ್ನೆಲೆಯಲ್ಲಿ...

ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಅನ್ಯಾಯ ತಡೆಯಲು ಸರ್ಕಾರ ಮಧ್ಯಪ್ರವೇಶಿಸಬೇಕು; ಮುಖ್ಯಮಂತ್ರಿಗಳಿಗೆ ನಾಗರಿಕ ಸಂಘಟನೆಗಳ ಮನವಿ

"ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಅರ್ಹ ಮತದಾರರಿಗೆ ಅನ್ಯಾಯವಾಗುತ್ತಿದ್ದು, ಈ ಕುರಿತು ತುರ್ತು ಕ್ರಮ ಕೈಗೊಳ್ಳಬೇಕು" ಎಂದು ನಾಗರಿಕ ಸಂಘಟನೆಗಳು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ...

SIR: ಕೊಪ್ಪಳದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ‘ಛತ್ರಪ್ಪ’ ಅವರ ಹೆಸರನ್ನೆ ಕೈಬಿಟ್ಟ ಚುನಾವಣಾ ಆಯೋಗ

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳು ದಿಢೀರ್ ನಾಪತ್ತೆಯಾಗುತ್ತಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ 50ಕ್ಕೂ ಹೆಚ್ಚು ವರ್ಷಗಳಿಂದ ಗಂಗಾವತಿಯಲ್ಲಿ ಸಮಾಜಮುಖಿ ಕಾರ್ಯಗಳ ಮೂಲಕ ಚಿರಪರಿಚಿತರಾಗಿರುವ, ಗಂಗಾವತಿ ಬಸವ ಕೇಂದ್ರದ...

ಮಹಾರಾಷ್ಟ್ರದ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ವಿಚಿತ್ರ ವರ್ತನೆ, ಗೆಜ್ಜೆ ಸದ್ದು: ದೆವ್ವದ ಕಾಟವೆಂದು ಹಾಸ್ಟೆಲ್ ತೊರೆದ 600 ಬುಡಕಟ್ಟು ವಿದ್ಯಾರ್ಥಿಗಳು

ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ದೂರದ ಮೆಲ್ಘಾಟ್ ಬುಡಕಟ್ಟು ಪ್ರದೇಶದಲ್ಲಿ ಮೂಢನಂಬಿಕೆ ಮತ್ತು ಮಾನಸಿಕ ಭಯದ ವಾತಾವರಣವು ಗಂಭೀರ ಶೈಕ್ಷಣಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ. ಚಿಕಲ್ದಾರಾ ತಾಲ್ಲೂಕಿನ ಡೋಮಾ ಗ್ರಾಮದಲ್ಲಿರುವ ಸರ್ಕಾರಿ ಬುಡಕಟ್ಟು ವಸತಿ ಶಾಲೆಯ...

ಉತ್ತರ ಪ್ರದೇಶ| ಕನ್ವಾರಿ ಯಾತ್ರಿಕರ ಹಲ್ಲೆಯಿಂದ ಮುಸ್ಲಿಂ ಯುವಕ ಸಾವು; ಐವರ ಬಂಧನ

ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಕನ್ವಾರಿ ಯಾತ್ರಿಕರ ಗುಂಪಿನಿಂದ ಹಲ್ಲೆಗೊಳಗಾದ ಮುಸ್ಲಿಂ ಯುವಕ ಸಾವನ್ನಪ್ಪಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಕನ್ವಾರಿಗಳನ್ನು ಬಂಧಿಸಲಾಗಿದೆ. ಬ್ರಿಜ್‌ಘಾಟ್ ಟೋಲ್ ಪ್ಲಾಜಾ ಬಳಿ ನಡೆದ ರಸ್ತೆ ಅಪಘಾತದ ನಂತರ ಮೊರಾದಾಬಾದ್...