Homeಮುಖಪುಟಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ಈ ಹಿಂದೆ ಮದುವೆ ಆಮಂತ್ರಣ ಪತ್ರಗಳಲ್ಲಿ ಜಾತಿ, ಧರ್ಮಸೂಚಕ ಚಿತ್ರಗಳನ್ನು ಮುದ್ರಿಸುತ್ತಿದ್ದ ಜನರು ಈಗ ಭಗತ್‌ ಸಿಂಗ್, ಅಂಬೇಡ್ಕರ್‌, ಸಾವಿತ್ರಿ ಬಾಯಿ ಮುಂತಾದವರ ಚಿತ್ರಗಳಿಗೆ ಬೇಡಿಕೆಯಿಡುತ್ತಿದ್ದಾರೆ!

- Advertisement -
- Advertisement -

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ದ ದೇಶದಾದ್ಯಂತ ಹೋರಾಟಗಳು ತೀವ್ರಗೊಂಡಿದೆ. ದೆಹಲಿಯ ಗಡಿಗಳಲ್ಲಿ ನಡೆಯುತ್ತಿರು ಐತಿಹಾಸಿಕ ರೈತ ಹೋರಾಟ 83ನೇ ದಿನಕ್ಕೆ ಕಾಲಿಟ್ಟಿದೆ. ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ಹಲವಾರು ಜಿಲ್ಲೆಗಳಲ್ಲಿ ಕಿಸಾನ್ ಮಹಾಪಂಚಾಯತ್‌ಗಳು ಆರಂಭವಾಗಿ ಬಿಜೆಪಿಗೆ ತಲೆನೋವಾಗಿವೆ. ಉತ್ತರ ಭಾರತದಲ್ಲಿ ಕೃಷಿ ಕಾನೂನುಗಳ ವಿರುದ್ಧ ಹೋರಾಟದ ಕಾವು ಎಷ್ಟರ ಮಟ್ಟಿಗೆ ಇದೆ ಎಂದರೆ ಅಲ್ಲಿನ ಜನರು ತಮ್ಮ ಮದುವೆ ಆಮಂತ್ರಣ ಪತ್ರಗಳಲ್ಲಿ ಕೂಡಾ ಕೃಷಿ ವಿರೋಧಿ ಕಾನೂನನ್ನು ವಿರೋಧಿಸುವ ಘೋಷಣೆಗಳನ್ನು ಬರೆಸುತ್ತಿದ್ದಾರೆ!

Photo Courtesy: India.com

ಹರಿಯಾಣದ ಸ್ಥಳೀಯ ಪತ್ರಿಕೆಯೊಂದು ಈ ಬಗ್ಗೆ ವರದಿ ಮಾಡಿದೆ. ವರದಿಯಲ್ಲಿ ಮದುವೆ ಆಮಂತ್ರಣ ಪತ್ರಗಳನ್ನು ಮುದ್ರಿಸುವ ಮುದ್ರಕರ ಬಳಿಗೆ ಬರುವ ಗ್ರಾಹಕರು, ರೈತ ಹೋರಾಟದ ಘೋಷಣೆಗಳನ್ನು ಮುದ್ರಿಸಬೇಕು ಎಂದು ಕೇಳಿಕೊಳ್ಳುತ್ತಿದ್ದಾರೆ. ಈ ಹಿಂದೆ ಮದುವೆ ಆಮಂತ್ರಣ ಪತ್ರಗಳಲ್ಲಿ ಜಾತಿ ಸೂಚಕ, ಧರ್ಮಸೂಚಕ ಚಿನ್ನೆಗಳು ಅಥವಾ ಚಿತ್ರಗಳನ್ನು ಮಾತ್ರ ಮುದ್ರಿಸಲು ಹೇಳುತ್ತಿದ್ದ ಗ್ರಾಹಕರು ಇತ್ತೀಚೆಗೆ ಭಗತ್‌ ಸಿಂಗ್, ಅಂಬೇಡ್ಕರ್‌, ಸಾವಿತ್ರಿ ಬಾಯಿ ಮುಂತಾದ ಮಹಾಪುರುಷರ ಚಿತ್ರಗಳನ್ನು ಮುದ್ರಿಸಲು ಬೇಡಿಕೆಯಿಡುತ್ತಿದ್ದಾರೆ!

ಇದನ್ನೂ ಓದಿ: ರೈತ ಹೋರಾಟ 80ನೇ ದಿನಕ್ಕೆ: ಪ್ರೊ ಎಂ.ಡಿ ನಂಜುಂಡಸ್ವಾಮಿಯವರನ್ನು ನೆನೆದ ರೈತ ಒಕ್ಕೂಟ

”ಚಿತ್ರದಲ್ಲಿ ಕಾಣುವ ಮದುಮಗನ ಹೆಸರು ಜಗದೀಪ್ ಸಿಂಗ್ (30 ವರ್ಷ). ತಂದೆ ನಿವೃತ್ತ ಸೈನಿಕರು. ತನ್ನ ಮದುವೆಯ ದಿಬ್ಬಣ ಹೋಗುವಾಗ ಬರ್ನಾಲಾ ಎಂಬಲ್ಲಿ ಕಳೆದ 101 ದಿನಗಳಿಂದ ಚಳುವಳಿ ನಡೆಸುತ್ತಿರುವ ರೈತರು ಆತ‌ನ ಕಣ್ಣಿಗೆ ಬಿದ್ದರು. ತಕ್ಷಣ ದಿಬ್ಬಣ ನಿಲ್ಲಿಸಿದ ಮದುಮಗ ಜಗದೀಪ್ ದಿಬ್ಬಣದವರ ಸಮೇತ ರೈತರ ಜೊತೆ ಒಂದು ಗಂಟೆ ಕುಳಿತು ಅವರಿಗೆ ತನ್ನ ಬೆಂಬಲ ಘೋಷಿಸಿ, ಮದುವೆ ಹಾಲ್ ಕಡೆ ನಡೆದರು. ಹೋಗುವ ಮುನ್ನ ‘ಇದನ್ನು ಕೇಳಿ ಕಮಲ್ ಪ್ರೀತ್ (ಮದುಮಗಳು) ನನ್ನನ್ನು ಇನ್ನೂ ಹೆಚ್ಚು ಪ್ರೀತಿಸುತ್ತಾಳೆ’ ಎಂದು ಹೇಳಲು ಜಗದೀಪ್ ಮರೆಯಲಿಲ್ಲ” ಎಂದು ತಾನು ಕಂಡ ಘಟನೆಯ ಬಗ್ಗೆ ಪ್ರೊ. ಪುರುಷೋತ್ತಮ ಬಿಳಿಮಲೆಯವರು ತಮ್ಮ ಫೇಸ್‌ಬುಕ್‌ನಲ್ಲಿ ಬರೆದಿದ್ದರು.

ರಾಜಸ್ಥಾನ, ಪಂಜಾಬ್, ಹರಿಯಾಣದಲ್ಲಿ ದಂಪತಿಗಳು ರೈತರ ಚಳುವಳಿ ಘೋಷಣೆಗಳನ್ನು ಮುದ್ರಿಸಿ ಹಾಡುತ್ತಿದ್ದಾರೆ. ಹಲವು ನವ ದಂಪತಿಗಳು ತಮ್ಮ ಮದುವೆ ಊಟವನ್ನು ರೈತ ಹೋರಾಟಗಾರರಿಗೆ ಹಂಚಿಕೊಳ್ಳುತ್ತಿದ್ದಾರೆ. ಪಂಜಾಬಿ ಮದುವೆಗಳಲ್ಲಿ ಹಾಡು ಹಾಡುವ ನೋರಾ ಝೋರಾ ಗಿಡ್ಡಾ ಗುಂಪಿನ ಪ್ರಕಾರ, (ದೆಲ್ಲಿನೂ ಚಲಿಯೆ, ಜಾಕೆ ಮೋದಿನು ಘೆರಿಯೆ, ಹೇ ಸಮಾಲೋ) “ದೆಹಲಿಗೆ ಹೊರಡೋಣ, ಮೋದಿಯನ್ನು ಮುತ್ತಿಗೆ ಹಾಕೋಣಾ” ಎಂಬ ಹಾಡು ಜನಪ್ರಿಯವಾಗಿದೆ. ಜನರು ಮದುವೆಗಳಲ್ಲೂ ಈ ಹಾಡನ್ನೂ ಸಾಮೂಹಿಕವಾಗಿ ಹಾಡುತ್ತಿದ್ದಾರೆ.

ಕೇಂದ್ರ ಸರ್ಕಾರ ಇದುವರೆಗೂ ತಾನು ಜಾರಿಗೆ ತಂದಿರುವ ಕೃಷಿ ಕಾನೂನನ್ನು ಸಮರ್ಥಿಸುತ್ತಲೆ ಬಂದಿದೆ. ತೀರಾ ಇತ್ತೀಚೆಗೆ ಪ್ರಧಾನಿ ಮೋದಿ ಲೋಕಸಭೆಯಲ್ಲಿ ನಮ್ಮ ಸರ್ಕಾರ ರೈತರ ಪರವಾಗಿದೆ ಎಂದು ಹೇಳಿದ್ದಾರೆ. ಆದರೆ ಜನರು ವಿಭಿನ್ನವಾಗಿ ತಮ್ಮ ಪ್ರತಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಕಳೆದ ವರ್ಷದ ಸಿಎಎ ವಿರುದ್ದದ ಹೋರಾಟದಲ್ಲಿ ಕೇರಳ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ನವದಂಪತಿಗಳು “ಸಿಎಎ ಬೇಡ” ಎಂಬ ಘೋಷಣೆಗಳಿರುವ ಕಾರ್ಡ್‌ಗಳನ್ನು ಹಿಡಿದು ನಡೆಯುತ್ತಿರುವ, ಹೋರಾಟದಲ್ಲಿ ತಾವೂ ಭಾಗಿಯಾಗಿ ಬೆಂಬಲ ನೀಡುತ್ತಿದ್ದದ್ದು ವರದಿಯಾಗಿತ್ತು. ಅದರಂತೆ ಈ ವರ್ಷವು ಕೃಷಿ ಕಾನೂನನ್ನು ವಿರೋಧಿಸಿ ಇಂತಹದೆ ಘಟನೆಗಳು ವರದಿಯಾಗಿದೆ.

ಇದನ್ನೂ ಓದಿ: ಪಂಜಾಬ್ ಲೂಧಿಯಾನ ಮಹಾಪಂಚಾಯತ್‌ನಲ್ಲಿ ಲಕ್ಷಕ್ಕೂ ಅಧಿಕ ರೈತರು ಭಾಗಿ: ಚಳವಳಿ ತೀವ್ರಗೊಳಿಸಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...