Homeಮುಖಪುಟಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ಈ ಹಿಂದೆ ಮದುವೆ ಆಮಂತ್ರಣ ಪತ್ರಗಳಲ್ಲಿ ಜಾತಿ, ಧರ್ಮಸೂಚಕ ಚಿತ್ರಗಳನ್ನು ಮುದ್ರಿಸುತ್ತಿದ್ದ ಜನರು ಈಗ ಭಗತ್‌ ಸಿಂಗ್, ಅಂಬೇಡ್ಕರ್‌, ಸಾವಿತ್ರಿ ಬಾಯಿ ಮುಂತಾದವರ ಚಿತ್ರಗಳಿಗೆ ಬೇಡಿಕೆಯಿಡುತ್ತಿದ್ದಾರೆ!

- Advertisement -
- Advertisement -

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ದ ದೇಶದಾದ್ಯಂತ ಹೋರಾಟಗಳು ತೀವ್ರಗೊಂಡಿದೆ. ದೆಹಲಿಯ ಗಡಿಗಳಲ್ಲಿ ನಡೆಯುತ್ತಿರು ಐತಿಹಾಸಿಕ ರೈತ ಹೋರಾಟ 83ನೇ ದಿನಕ್ಕೆ ಕಾಲಿಟ್ಟಿದೆ. ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ಹಲವಾರು ಜಿಲ್ಲೆಗಳಲ್ಲಿ ಕಿಸಾನ್ ಮಹಾಪಂಚಾಯತ್‌ಗಳು ಆರಂಭವಾಗಿ ಬಿಜೆಪಿಗೆ ತಲೆನೋವಾಗಿವೆ. ಉತ್ತರ ಭಾರತದಲ್ಲಿ ಕೃಷಿ ಕಾನೂನುಗಳ ವಿರುದ್ಧ ಹೋರಾಟದ ಕಾವು ಎಷ್ಟರ ಮಟ್ಟಿಗೆ ಇದೆ ಎಂದರೆ ಅಲ್ಲಿನ ಜನರು ತಮ್ಮ ಮದುವೆ ಆಮಂತ್ರಣ ಪತ್ರಗಳಲ್ಲಿ ಕೂಡಾ ಕೃಷಿ ವಿರೋಧಿ ಕಾನೂನನ್ನು ವಿರೋಧಿಸುವ ಘೋಷಣೆಗಳನ್ನು ಬರೆಸುತ್ತಿದ್ದಾರೆ!

Photo Courtesy: India.com

ಹರಿಯಾಣದ ಸ್ಥಳೀಯ ಪತ್ರಿಕೆಯೊಂದು ಈ ಬಗ್ಗೆ ವರದಿ ಮಾಡಿದೆ. ವರದಿಯಲ್ಲಿ ಮದುವೆ ಆಮಂತ್ರಣ ಪತ್ರಗಳನ್ನು ಮುದ್ರಿಸುವ ಮುದ್ರಕರ ಬಳಿಗೆ ಬರುವ ಗ್ರಾಹಕರು, ರೈತ ಹೋರಾಟದ ಘೋಷಣೆಗಳನ್ನು ಮುದ್ರಿಸಬೇಕು ಎಂದು ಕೇಳಿಕೊಳ್ಳುತ್ತಿದ್ದಾರೆ. ಈ ಹಿಂದೆ ಮದುವೆ ಆಮಂತ್ರಣ ಪತ್ರಗಳಲ್ಲಿ ಜಾತಿ ಸೂಚಕ, ಧರ್ಮಸೂಚಕ ಚಿನ್ನೆಗಳು ಅಥವಾ ಚಿತ್ರಗಳನ್ನು ಮಾತ್ರ ಮುದ್ರಿಸಲು ಹೇಳುತ್ತಿದ್ದ ಗ್ರಾಹಕರು ಇತ್ತೀಚೆಗೆ ಭಗತ್‌ ಸಿಂಗ್, ಅಂಬೇಡ್ಕರ್‌, ಸಾವಿತ್ರಿ ಬಾಯಿ ಮುಂತಾದ ಮಹಾಪುರುಷರ ಚಿತ್ರಗಳನ್ನು ಮುದ್ರಿಸಲು ಬೇಡಿಕೆಯಿಡುತ್ತಿದ್ದಾರೆ!

ಇದನ್ನೂ ಓದಿ: ರೈತ ಹೋರಾಟ 80ನೇ ದಿನಕ್ಕೆ: ಪ್ರೊ ಎಂ.ಡಿ ನಂಜುಂಡಸ್ವಾಮಿಯವರನ್ನು ನೆನೆದ ರೈತ ಒಕ್ಕೂಟ

”ಚಿತ್ರದಲ್ಲಿ ಕಾಣುವ ಮದುಮಗನ ಹೆಸರು ಜಗದೀಪ್ ಸಿಂಗ್ (30 ವರ್ಷ). ತಂದೆ ನಿವೃತ್ತ ಸೈನಿಕರು. ತನ್ನ ಮದುವೆಯ ದಿಬ್ಬಣ ಹೋಗುವಾಗ ಬರ್ನಾಲಾ ಎಂಬಲ್ಲಿ ಕಳೆದ 101 ದಿನಗಳಿಂದ ಚಳುವಳಿ ನಡೆಸುತ್ತಿರುವ ರೈತರು ಆತ‌ನ ಕಣ್ಣಿಗೆ ಬಿದ್ದರು. ತಕ್ಷಣ ದಿಬ್ಬಣ ನಿಲ್ಲಿಸಿದ ಮದುಮಗ ಜಗದೀಪ್ ದಿಬ್ಬಣದವರ ಸಮೇತ ರೈತರ ಜೊತೆ ಒಂದು ಗಂಟೆ ಕುಳಿತು ಅವರಿಗೆ ತನ್ನ ಬೆಂಬಲ ಘೋಷಿಸಿ, ಮದುವೆ ಹಾಲ್ ಕಡೆ ನಡೆದರು. ಹೋಗುವ ಮುನ್ನ ‘ಇದನ್ನು ಕೇಳಿ ಕಮಲ್ ಪ್ರೀತ್ (ಮದುಮಗಳು) ನನ್ನನ್ನು ಇನ್ನೂ ಹೆಚ್ಚು ಪ್ರೀತಿಸುತ್ತಾಳೆ’ ಎಂದು ಹೇಳಲು ಜಗದೀಪ್ ಮರೆಯಲಿಲ್ಲ” ಎಂದು ತಾನು ಕಂಡ ಘಟನೆಯ ಬಗ್ಗೆ ಪ್ರೊ. ಪುರುಷೋತ್ತಮ ಬಿಳಿಮಲೆಯವರು ತಮ್ಮ ಫೇಸ್‌ಬುಕ್‌ನಲ್ಲಿ ಬರೆದಿದ್ದರು.

ರಾಜಸ್ಥಾನ, ಪಂಜಾಬ್, ಹರಿಯಾಣದಲ್ಲಿ ದಂಪತಿಗಳು ರೈತರ ಚಳುವಳಿ ಘೋಷಣೆಗಳನ್ನು ಮುದ್ರಿಸಿ ಹಾಡುತ್ತಿದ್ದಾರೆ. ಹಲವು ನವ ದಂಪತಿಗಳು ತಮ್ಮ ಮದುವೆ ಊಟವನ್ನು ರೈತ ಹೋರಾಟಗಾರರಿಗೆ ಹಂಚಿಕೊಳ್ಳುತ್ತಿದ್ದಾರೆ. ಪಂಜಾಬಿ ಮದುವೆಗಳಲ್ಲಿ ಹಾಡು ಹಾಡುವ ನೋರಾ ಝೋರಾ ಗಿಡ್ಡಾ ಗುಂಪಿನ ಪ್ರಕಾರ, (ದೆಲ್ಲಿನೂ ಚಲಿಯೆ, ಜಾಕೆ ಮೋದಿನು ಘೆರಿಯೆ, ಹೇ ಸಮಾಲೋ) “ದೆಹಲಿಗೆ ಹೊರಡೋಣ, ಮೋದಿಯನ್ನು ಮುತ್ತಿಗೆ ಹಾಕೋಣಾ” ಎಂಬ ಹಾಡು ಜನಪ್ರಿಯವಾಗಿದೆ. ಜನರು ಮದುವೆಗಳಲ್ಲೂ ಈ ಹಾಡನ್ನೂ ಸಾಮೂಹಿಕವಾಗಿ ಹಾಡುತ್ತಿದ್ದಾರೆ.

ಕೇಂದ್ರ ಸರ್ಕಾರ ಇದುವರೆಗೂ ತಾನು ಜಾರಿಗೆ ತಂದಿರುವ ಕೃಷಿ ಕಾನೂನನ್ನು ಸಮರ್ಥಿಸುತ್ತಲೆ ಬಂದಿದೆ. ತೀರಾ ಇತ್ತೀಚೆಗೆ ಪ್ರಧಾನಿ ಮೋದಿ ಲೋಕಸಭೆಯಲ್ಲಿ ನಮ್ಮ ಸರ್ಕಾರ ರೈತರ ಪರವಾಗಿದೆ ಎಂದು ಹೇಳಿದ್ದಾರೆ. ಆದರೆ ಜನರು ವಿಭಿನ್ನವಾಗಿ ತಮ್ಮ ಪ್ರತಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಕಳೆದ ವರ್ಷದ ಸಿಎಎ ವಿರುದ್ದದ ಹೋರಾಟದಲ್ಲಿ ಕೇರಳ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ನವದಂಪತಿಗಳು “ಸಿಎಎ ಬೇಡ” ಎಂಬ ಘೋಷಣೆಗಳಿರುವ ಕಾರ್ಡ್‌ಗಳನ್ನು ಹಿಡಿದು ನಡೆಯುತ್ತಿರುವ, ಹೋರಾಟದಲ್ಲಿ ತಾವೂ ಭಾಗಿಯಾಗಿ ಬೆಂಬಲ ನೀಡುತ್ತಿದ್ದದ್ದು ವರದಿಯಾಗಿತ್ತು. ಅದರಂತೆ ಈ ವರ್ಷವು ಕೃಷಿ ಕಾನೂನನ್ನು ವಿರೋಧಿಸಿ ಇಂತಹದೆ ಘಟನೆಗಳು ವರದಿಯಾಗಿದೆ.

ಇದನ್ನೂ ಓದಿ: ಪಂಜಾಬ್ ಲೂಧಿಯಾನ ಮಹಾಪಂಚಾಯತ್‌ನಲ್ಲಿ ಲಕ್ಷಕ್ಕೂ ಅಧಿಕ ರೈತರು ಭಾಗಿ: ಚಳವಳಿ ತೀವ್ರಗೊಳಿಸಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೇರಿಕಾದಲ್ಲಿ ಅದಾನಿ ಮತ್ತು ಆಪ್ತರ ಮೇಲಿನ ಕ್ರಿಮಿನಲ್ ಕೇಸ್ ರದ್ದು: ‘ರಾಜಿ ಮಾಡಿಕೊಂಡ ಪ್ರಧಾನಿ ಭಾರತದ ಹಿತಾಸಕ್ತಿ ಮಾರಾಟ ಮಾಡಿದ್ದಾರೆ’ ಎಂದ ರಾಹುಲ್ ಗಾಂಧಿ 

ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ವಿರುದ್ಧದ ಪ್ರಮುಖ ಕ್ರಿಮಿನಲ್ ಆರೋಪಗಳನ್ನು ಅಮೆರಿಕದ ಫೆಡರಲ್ ನ್ಯಾಯಾಧೀಶರು ಶಾಶ್ವತವಾಗಿ ವಜಾಗೊಳಿಸಿದ ಬೆನ್ನಲ್ಲೇ, ವಿಪಕ್ಷ ನಾಯಕ ರಾಹುಲ್...

ಕರ್ನಾಟಕ SIR | ‘ಲಾಜಿಕಲ್ ಡಿಸ್ಕ್ರಿಪೆನ್ಸಿ’ ಬಗ್ಗೆ ತುಟಿ ಬಿಚ್ಚದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಆಗಸ್ಟ್ 7ರಂದು ಚುನಾವಣಾ ಆಯೋಗ ಹೊರಡಿಸಿದ ಪ್ರಕಟಣೆಯ ಪ್ರಕಾರ, ಗಣತಿ ನಮೂನೆ ಅಥವಾ ಎನ್ಯುಮರೇಶನ್ ಫಾರಂ ಸಲ್ಲಿಕೆ ದಿನಾಂಕ ಆಗಸ್ಟ್...

‘ಆಹಾರ ಸುರಕ್ಷತೆ – ಔಷಧ ಆಡಳಿತ ಇಲಾಖೆ’ಯಿಂದ ಹೋಟೆಲ್‌ಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿ; ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಹೋಟೆಲ್‌ಗಳು, ಡಾಬಾಗಳು ಹಾಗೂ ಆಹಾರ ಸೇವಾ ಸಂಸ್ಥೆಗಳು ಪಾಲಿಸಬೇಕಾದ 'ಆಹಾರ ಸುರಕ್ಷತಾ ಮತ್ತು ನೈರ್ಮಲ್ಯ ನಿಯಮಗಳ'ನ್ನು 'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧ ಆಡಳಿತ ಇಲಾಖೆ' ಆಯುಕ್ತರು ಪ್ರಕಟಿಸಿದ್ದಾರೆ. ಕಳೆದ ಮೂರ್ನಾಲ್ಕು...

ಕರ್ನಾಟಕದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟ 1 ವರ್ಷ ನಿಷೇಧ: ರಾಜ್ಯ ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ಸಾರ್ವಜನಿಕ ಆರೋಗ್ಯ ಮತ್ತು ಸಮಾಜದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಹಾಗೂ ನಿಕೋಟಿನ್ ಅಂಶ ಹೊಂದಿರುವ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ಇತರ ಅಪಾಯಕಾರಿ ಉತ್ಪನ್ನಗಳ ಮೇಲೆ ಸಂಪೂರ್ಣ...

ಲೋಕಸಭೆ ಬಲ 543 ರಲ್ಲೇ ಶಾಶ್ವತವಾಗಿ ಮುಂದುವರಿಸಲು ಕೇಂದ್ರಕ್ಕೆ ಆಗ್ರಹ: ತಮಿಳುನಾಡು ವಿಧಾನಸಭೆಯಲ್ಲಿ ಸಿಎಂ ಸಿ. ಜೋಸೆಫ್ ವಿಜಯ್ ನಿರ್ಣಯ ಮಂಡನೆ

ಚೆನ್ನೈ: ಕೇಂದ್ರ ಸರ್ಕಾರವು ಲೋಕಸಭೆಯ ಒಟ್ಟು ಸ್ಥಾನಗಳ ಬಲವನ್ನು ಪ್ರಸ್ತುತ ಇರುವ 543 ರಲ್ಲೇ ಶಾಶ್ವತವಾಗಿ ಕಾಯ್ದುಕೊಳ್ಳಬೇಕು ಮತ್ತು ರಾಜ್ಯಗಳ ನಡುವಿನ ಪ್ರಾತಿನಿಧ್ಯದ ಅನುಪಾತವನ್ನು ಬದಲಾಯಿಸಬಾರದು ಎಂದು ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರಿ ಸಿ....

ಯುಪಿಯಲ್ಲಿ ಅಮಾನವೀಯ ಘಟನೆ: ಮೊಬೈಲ್ ಕದ್ದ ಆರೋಪ ಹೊರಿಸಿ ಒಬಿಸಿ ಯುವಕನ ತಲೆ ಬೋಳಿಸಿ ಮೆರವಣಿಗೆ; ಮೇಲ್ಜಾತಿಯ ತಂದೆ-ಮಗನ ಬಂಧನ

ಉನ್ನಾವೋ: ಉತ್ತರ ಪ್ರದೇಶದಲ್ಲಿ ಇದುವರೆಗೆ ದಲಿತ ಸಮುದಾಯಗಳ ಮೇಲೆ ವ್ಯಾಪಕವಾಗಿ ನಡೆಯುತ್ತಿದ್ದ ಜಾತಿ ಆಧಾರಿತ ದೌರ್ಜನ್ಯ ಮತ್ತು ಸಾರ್ವಜನಿಕ ಅವಮಾನದಂತಹ ಅಮಾನವೀಯ ಕೃತ್ಯಗಳು, ಈಗ ಇತರ ಹಿಂದುಳಿದ ವರ್ಗಗಳ (ಒಬಿಸಿ) ಜನರ ಮೇಲೆಯೂ...

SIR 3ನೇ ಹಂತ: 12 ರಾಜ್ಯಗಳು-ಕೇಂದ್ರಾಡಳಿತ ಪ್ರದೇಶಗಳ 1.58 ಕೋಟಿ ಮತದಾರರ ಹೆಸರು ಕರಡು ಪಟ್ಟಿಯಿಂದ ಡಿಲೀಟ್

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಮೂರನೇ ಹಂತದಲ್ಲಿ ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಿಂದ ಸುಮಾರು 1.58 ಕೋಟಿ ಹೆಸರುಗಳನ್ನು ಅಳಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ 3ನೇ ಹಂತದ ವ್ಯಾಪ್ತಿಗೆ ಒಳಪಡುವ 16 ರಾಜ್ಯಗಳಲ್ಲಿ...

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...