Homeಮುಖಪುಟಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ಈ ಹಿಂದೆ ಮದುವೆ ಆಮಂತ್ರಣ ಪತ್ರಗಳಲ್ಲಿ ಜಾತಿ, ಧರ್ಮಸೂಚಕ ಚಿತ್ರಗಳನ್ನು ಮುದ್ರಿಸುತ್ತಿದ್ದ ಜನರು ಈಗ ಭಗತ್‌ ಸಿಂಗ್, ಅಂಬೇಡ್ಕರ್‌, ಸಾವಿತ್ರಿ ಬಾಯಿ ಮುಂತಾದವರ ಚಿತ್ರಗಳಿಗೆ ಬೇಡಿಕೆಯಿಡುತ್ತಿದ್ದಾರೆ!

- Advertisement -
- Advertisement -

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ದ ದೇಶದಾದ್ಯಂತ ಹೋರಾಟಗಳು ತೀವ್ರಗೊಂಡಿದೆ. ದೆಹಲಿಯ ಗಡಿಗಳಲ್ಲಿ ನಡೆಯುತ್ತಿರು ಐತಿಹಾಸಿಕ ರೈತ ಹೋರಾಟ 83ನೇ ದಿನಕ್ಕೆ ಕಾಲಿಟ್ಟಿದೆ. ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ಹಲವಾರು ಜಿಲ್ಲೆಗಳಲ್ಲಿ ಕಿಸಾನ್ ಮಹಾಪಂಚಾಯತ್‌ಗಳು ಆರಂಭವಾಗಿ ಬಿಜೆಪಿಗೆ ತಲೆನೋವಾಗಿವೆ. ಉತ್ತರ ಭಾರತದಲ್ಲಿ ಕೃಷಿ ಕಾನೂನುಗಳ ವಿರುದ್ಧ ಹೋರಾಟದ ಕಾವು ಎಷ್ಟರ ಮಟ್ಟಿಗೆ ಇದೆ ಎಂದರೆ ಅಲ್ಲಿನ ಜನರು ತಮ್ಮ ಮದುವೆ ಆಮಂತ್ರಣ ಪತ್ರಗಳಲ್ಲಿ ಕೂಡಾ ಕೃಷಿ ವಿರೋಧಿ ಕಾನೂನನ್ನು ವಿರೋಧಿಸುವ ಘೋಷಣೆಗಳನ್ನು ಬರೆಸುತ್ತಿದ್ದಾರೆ!

Photo Courtesy: India.com

ಹರಿಯಾಣದ ಸ್ಥಳೀಯ ಪತ್ರಿಕೆಯೊಂದು ಈ ಬಗ್ಗೆ ವರದಿ ಮಾಡಿದೆ. ವರದಿಯಲ್ಲಿ ಮದುವೆ ಆಮಂತ್ರಣ ಪತ್ರಗಳನ್ನು ಮುದ್ರಿಸುವ ಮುದ್ರಕರ ಬಳಿಗೆ ಬರುವ ಗ್ರಾಹಕರು, ರೈತ ಹೋರಾಟದ ಘೋಷಣೆಗಳನ್ನು ಮುದ್ರಿಸಬೇಕು ಎಂದು ಕೇಳಿಕೊಳ್ಳುತ್ತಿದ್ದಾರೆ. ಈ ಹಿಂದೆ ಮದುವೆ ಆಮಂತ್ರಣ ಪತ್ರಗಳಲ್ಲಿ ಜಾತಿ ಸೂಚಕ, ಧರ್ಮಸೂಚಕ ಚಿನ್ನೆಗಳು ಅಥವಾ ಚಿತ್ರಗಳನ್ನು ಮಾತ್ರ ಮುದ್ರಿಸಲು ಹೇಳುತ್ತಿದ್ದ ಗ್ರಾಹಕರು ಇತ್ತೀಚೆಗೆ ಭಗತ್‌ ಸಿಂಗ್, ಅಂಬೇಡ್ಕರ್‌, ಸಾವಿತ್ರಿ ಬಾಯಿ ಮುಂತಾದ ಮಹಾಪುರುಷರ ಚಿತ್ರಗಳನ್ನು ಮುದ್ರಿಸಲು ಬೇಡಿಕೆಯಿಡುತ್ತಿದ್ದಾರೆ!

ಇದನ್ನೂ ಓದಿ: ರೈತ ಹೋರಾಟ 80ನೇ ದಿನಕ್ಕೆ: ಪ್ರೊ ಎಂ.ಡಿ ನಂಜುಂಡಸ್ವಾಮಿಯವರನ್ನು ನೆನೆದ ರೈತ ಒಕ್ಕೂಟ

”ಚಿತ್ರದಲ್ಲಿ ಕಾಣುವ ಮದುಮಗನ ಹೆಸರು ಜಗದೀಪ್ ಸಿಂಗ್ (30 ವರ್ಷ). ತಂದೆ ನಿವೃತ್ತ ಸೈನಿಕರು. ತನ್ನ ಮದುವೆಯ ದಿಬ್ಬಣ ಹೋಗುವಾಗ ಬರ್ನಾಲಾ ಎಂಬಲ್ಲಿ ಕಳೆದ 101 ದಿನಗಳಿಂದ ಚಳುವಳಿ ನಡೆಸುತ್ತಿರುವ ರೈತರು ಆತ‌ನ ಕಣ್ಣಿಗೆ ಬಿದ್ದರು. ತಕ್ಷಣ ದಿಬ್ಬಣ ನಿಲ್ಲಿಸಿದ ಮದುಮಗ ಜಗದೀಪ್ ದಿಬ್ಬಣದವರ ಸಮೇತ ರೈತರ ಜೊತೆ ಒಂದು ಗಂಟೆ ಕುಳಿತು ಅವರಿಗೆ ತನ್ನ ಬೆಂಬಲ ಘೋಷಿಸಿ, ಮದುವೆ ಹಾಲ್ ಕಡೆ ನಡೆದರು. ಹೋಗುವ ಮುನ್ನ ‘ಇದನ್ನು ಕೇಳಿ ಕಮಲ್ ಪ್ರೀತ್ (ಮದುಮಗಳು) ನನ್ನನ್ನು ಇನ್ನೂ ಹೆಚ್ಚು ಪ್ರೀತಿಸುತ್ತಾಳೆ’ ಎಂದು ಹೇಳಲು ಜಗದೀಪ್ ಮರೆಯಲಿಲ್ಲ” ಎಂದು ತಾನು ಕಂಡ ಘಟನೆಯ ಬಗ್ಗೆ ಪ್ರೊ. ಪುರುಷೋತ್ತಮ ಬಿಳಿಮಲೆಯವರು ತಮ್ಮ ಫೇಸ್‌ಬುಕ್‌ನಲ್ಲಿ ಬರೆದಿದ್ದರು.

ರಾಜಸ್ಥಾನ, ಪಂಜಾಬ್, ಹರಿಯಾಣದಲ್ಲಿ ದಂಪತಿಗಳು ರೈತರ ಚಳುವಳಿ ಘೋಷಣೆಗಳನ್ನು ಮುದ್ರಿಸಿ ಹಾಡುತ್ತಿದ್ದಾರೆ. ಹಲವು ನವ ದಂಪತಿಗಳು ತಮ್ಮ ಮದುವೆ ಊಟವನ್ನು ರೈತ ಹೋರಾಟಗಾರರಿಗೆ ಹಂಚಿಕೊಳ್ಳುತ್ತಿದ್ದಾರೆ. ಪಂಜಾಬಿ ಮದುವೆಗಳಲ್ಲಿ ಹಾಡು ಹಾಡುವ ನೋರಾ ಝೋರಾ ಗಿಡ್ಡಾ ಗುಂಪಿನ ಪ್ರಕಾರ, (ದೆಲ್ಲಿನೂ ಚಲಿಯೆ, ಜಾಕೆ ಮೋದಿನು ಘೆರಿಯೆ, ಹೇ ಸಮಾಲೋ) “ದೆಹಲಿಗೆ ಹೊರಡೋಣ, ಮೋದಿಯನ್ನು ಮುತ್ತಿಗೆ ಹಾಕೋಣಾ” ಎಂಬ ಹಾಡು ಜನಪ್ರಿಯವಾಗಿದೆ. ಜನರು ಮದುವೆಗಳಲ್ಲೂ ಈ ಹಾಡನ್ನೂ ಸಾಮೂಹಿಕವಾಗಿ ಹಾಡುತ್ತಿದ್ದಾರೆ.

ಕೇಂದ್ರ ಸರ್ಕಾರ ಇದುವರೆಗೂ ತಾನು ಜಾರಿಗೆ ತಂದಿರುವ ಕೃಷಿ ಕಾನೂನನ್ನು ಸಮರ್ಥಿಸುತ್ತಲೆ ಬಂದಿದೆ. ತೀರಾ ಇತ್ತೀಚೆಗೆ ಪ್ರಧಾನಿ ಮೋದಿ ಲೋಕಸಭೆಯಲ್ಲಿ ನಮ್ಮ ಸರ್ಕಾರ ರೈತರ ಪರವಾಗಿದೆ ಎಂದು ಹೇಳಿದ್ದಾರೆ. ಆದರೆ ಜನರು ವಿಭಿನ್ನವಾಗಿ ತಮ್ಮ ಪ್ರತಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಕಳೆದ ವರ್ಷದ ಸಿಎಎ ವಿರುದ್ದದ ಹೋರಾಟದಲ್ಲಿ ಕೇರಳ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ನವದಂಪತಿಗಳು “ಸಿಎಎ ಬೇಡ” ಎಂಬ ಘೋಷಣೆಗಳಿರುವ ಕಾರ್ಡ್‌ಗಳನ್ನು ಹಿಡಿದು ನಡೆಯುತ್ತಿರುವ, ಹೋರಾಟದಲ್ಲಿ ತಾವೂ ಭಾಗಿಯಾಗಿ ಬೆಂಬಲ ನೀಡುತ್ತಿದ್ದದ್ದು ವರದಿಯಾಗಿತ್ತು. ಅದರಂತೆ ಈ ವರ್ಷವು ಕೃಷಿ ಕಾನೂನನ್ನು ವಿರೋಧಿಸಿ ಇಂತಹದೆ ಘಟನೆಗಳು ವರದಿಯಾಗಿದೆ.

ಇದನ್ನೂ ಓದಿ: ಪಂಜಾಬ್ ಲೂಧಿಯಾನ ಮಹಾಪಂಚಾಯತ್‌ನಲ್ಲಿ ಲಕ್ಷಕ್ಕೂ ಅಧಿಕ ರೈತರು ಭಾಗಿ: ಚಳವಳಿ ತೀವ್ರಗೊಳಿಸಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...