Homeಮುಖಪುಟಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ಈ ಹಿಂದೆ ಮದುವೆ ಆಮಂತ್ರಣ ಪತ್ರಗಳಲ್ಲಿ ಜಾತಿ, ಧರ್ಮಸೂಚಕ ಚಿತ್ರಗಳನ್ನು ಮುದ್ರಿಸುತ್ತಿದ್ದ ಜನರು ಈಗ ಭಗತ್‌ ಸಿಂಗ್, ಅಂಬೇಡ್ಕರ್‌, ಸಾವಿತ್ರಿ ಬಾಯಿ ಮುಂತಾದವರ ಚಿತ್ರಗಳಿಗೆ ಬೇಡಿಕೆಯಿಡುತ್ತಿದ್ದಾರೆ!

- Advertisement -
- Advertisement -

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ದ ದೇಶದಾದ್ಯಂತ ಹೋರಾಟಗಳು ತೀವ್ರಗೊಂಡಿದೆ. ದೆಹಲಿಯ ಗಡಿಗಳಲ್ಲಿ ನಡೆಯುತ್ತಿರು ಐತಿಹಾಸಿಕ ರೈತ ಹೋರಾಟ 83ನೇ ದಿನಕ್ಕೆ ಕಾಲಿಟ್ಟಿದೆ. ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ಹಲವಾರು ಜಿಲ್ಲೆಗಳಲ್ಲಿ ಕಿಸಾನ್ ಮಹಾಪಂಚಾಯತ್‌ಗಳು ಆರಂಭವಾಗಿ ಬಿಜೆಪಿಗೆ ತಲೆನೋವಾಗಿವೆ. ಉತ್ತರ ಭಾರತದಲ್ಲಿ ಕೃಷಿ ಕಾನೂನುಗಳ ವಿರುದ್ಧ ಹೋರಾಟದ ಕಾವು ಎಷ್ಟರ ಮಟ್ಟಿಗೆ ಇದೆ ಎಂದರೆ ಅಲ್ಲಿನ ಜನರು ತಮ್ಮ ಮದುವೆ ಆಮಂತ್ರಣ ಪತ್ರಗಳಲ್ಲಿ ಕೂಡಾ ಕೃಷಿ ವಿರೋಧಿ ಕಾನೂನನ್ನು ವಿರೋಧಿಸುವ ಘೋಷಣೆಗಳನ್ನು ಬರೆಸುತ್ತಿದ್ದಾರೆ!

Photo Courtesy: India.com

ಹರಿಯಾಣದ ಸ್ಥಳೀಯ ಪತ್ರಿಕೆಯೊಂದು ಈ ಬಗ್ಗೆ ವರದಿ ಮಾಡಿದೆ. ವರದಿಯಲ್ಲಿ ಮದುವೆ ಆಮಂತ್ರಣ ಪತ್ರಗಳನ್ನು ಮುದ್ರಿಸುವ ಮುದ್ರಕರ ಬಳಿಗೆ ಬರುವ ಗ್ರಾಹಕರು, ರೈತ ಹೋರಾಟದ ಘೋಷಣೆಗಳನ್ನು ಮುದ್ರಿಸಬೇಕು ಎಂದು ಕೇಳಿಕೊಳ್ಳುತ್ತಿದ್ದಾರೆ. ಈ ಹಿಂದೆ ಮದುವೆ ಆಮಂತ್ರಣ ಪತ್ರಗಳಲ್ಲಿ ಜಾತಿ ಸೂಚಕ, ಧರ್ಮಸೂಚಕ ಚಿನ್ನೆಗಳು ಅಥವಾ ಚಿತ್ರಗಳನ್ನು ಮಾತ್ರ ಮುದ್ರಿಸಲು ಹೇಳುತ್ತಿದ್ದ ಗ್ರಾಹಕರು ಇತ್ತೀಚೆಗೆ ಭಗತ್‌ ಸಿಂಗ್, ಅಂಬೇಡ್ಕರ್‌, ಸಾವಿತ್ರಿ ಬಾಯಿ ಮುಂತಾದ ಮಹಾಪುರುಷರ ಚಿತ್ರಗಳನ್ನು ಮುದ್ರಿಸಲು ಬೇಡಿಕೆಯಿಡುತ್ತಿದ್ದಾರೆ!

ಇದನ್ನೂ ಓದಿ: ರೈತ ಹೋರಾಟ 80ನೇ ದಿನಕ್ಕೆ: ಪ್ರೊ ಎಂ.ಡಿ ನಂಜುಂಡಸ್ವಾಮಿಯವರನ್ನು ನೆನೆದ ರೈತ ಒಕ್ಕೂಟ

”ಚಿತ್ರದಲ್ಲಿ ಕಾಣುವ ಮದುಮಗನ ಹೆಸರು ಜಗದೀಪ್ ಸಿಂಗ್ (30 ವರ್ಷ). ತಂದೆ ನಿವೃತ್ತ ಸೈನಿಕರು. ತನ್ನ ಮದುವೆಯ ದಿಬ್ಬಣ ಹೋಗುವಾಗ ಬರ್ನಾಲಾ ಎಂಬಲ್ಲಿ ಕಳೆದ 101 ದಿನಗಳಿಂದ ಚಳುವಳಿ ನಡೆಸುತ್ತಿರುವ ರೈತರು ಆತ‌ನ ಕಣ್ಣಿಗೆ ಬಿದ್ದರು. ತಕ್ಷಣ ದಿಬ್ಬಣ ನಿಲ್ಲಿಸಿದ ಮದುಮಗ ಜಗದೀಪ್ ದಿಬ್ಬಣದವರ ಸಮೇತ ರೈತರ ಜೊತೆ ಒಂದು ಗಂಟೆ ಕುಳಿತು ಅವರಿಗೆ ತನ್ನ ಬೆಂಬಲ ಘೋಷಿಸಿ, ಮದುವೆ ಹಾಲ್ ಕಡೆ ನಡೆದರು. ಹೋಗುವ ಮುನ್ನ ‘ಇದನ್ನು ಕೇಳಿ ಕಮಲ್ ಪ್ರೀತ್ (ಮದುಮಗಳು) ನನ್ನನ್ನು ಇನ್ನೂ ಹೆಚ್ಚು ಪ್ರೀತಿಸುತ್ತಾಳೆ’ ಎಂದು ಹೇಳಲು ಜಗದೀಪ್ ಮರೆಯಲಿಲ್ಲ” ಎಂದು ತಾನು ಕಂಡ ಘಟನೆಯ ಬಗ್ಗೆ ಪ್ರೊ. ಪುರುಷೋತ್ತಮ ಬಿಳಿಮಲೆಯವರು ತಮ್ಮ ಫೇಸ್‌ಬುಕ್‌ನಲ್ಲಿ ಬರೆದಿದ್ದರು.

ರಾಜಸ್ಥಾನ, ಪಂಜಾಬ್, ಹರಿಯಾಣದಲ್ಲಿ ದಂಪತಿಗಳು ರೈತರ ಚಳುವಳಿ ಘೋಷಣೆಗಳನ್ನು ಮುದ್ರಿಸಿ ಹಾಡುತ್ತಿದ್ದಾರೆ. ಹಲವು ನವ ದಂಪತಿಗಳು ತಮ್ಮ ಮದುವೆ ಊಟವನ್ನು ರೈತ ಹೋರಾಟಗಾರರಿಗೆ ಹಂಚಿಕೊಳ್ಳುತ್ತಿದ್ದಾರೆ. ಪಂಜಾಬಿ ಮದುವೆಗಳಲ್ಲಿ ಹಾಡು ಹಾಡುವ ನೋರಾ ಝೋರಾ ಗಿಡ್ಡಾ ಗುಂಪಿನ ಪ್ರಕಾರ, (ದೆಲ್ಲಿನೂ ಚಲಿಯೆ, ಜಾಕೆ ಮೋದಿನು ಘೆರಿಯೆ, ಹೇ ಸಮಾಲೋ) “ದೆಹಲಿಗೆ ಹೊರಡೋಣ, ಮೋದಿಯನ್ನು ಮುತ್ತಿಗೆ ಹಾಕೋಣಾ” ಎಂಬ ಹಾಡು ಜನಪ್ರಿಯವಾಗಿದೆ. ಜನರು ಮದುವೆಗಳಲ್ಲೂ ಈ ಹಾಡನ್ನೂ ಸಾಮೂಹಿಕವಾಗಿ ಹಾಡುತ್ತಿದ್ದಾರೆ.

ಕೇಂದ್ರ ಸರ್ಕಾರ ಇದುವರೆಗೂ ತಾನು ಜಾರಿಗೆ ತಂದಿರುವ ಕೃಷಿ ಕಾನೂನನ್ನು ಸಮರ್ಥಿಸುತ್ತಲೆ ಬಂದಿದೆ. ತೀರಾ ಇತ್ತೀಚೆಗೆ ಪ್ರಧಾನಿ ಮೋದಿ ಲೋಕಸಭೆಯಲ್ಲಿ ನಮ್ಮ ಸರ್ಕಾರ ರೈತರ ಪರವಾಗಿದೆ ಎಂದು ಹೇಳಿದ್ದಾರೆ. ಆದರೆ ಜನರು ವಿಭಿನ್ನವಾಗಿ ತಮ್ಮ ಪ್ರತಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಕಳೆದ ವರ್ಷದ ಸಿಎಎ ವಿರುದ್ದದ ಹೋರಾಟದಲ್ಲಿ ಕೇರಳ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ನವದಂಪತಿಗಳು “ಸಿಎಎ ಬೇಡ” ಎಂಬ ಘೋಷಣೆಗಳಿರುವ ಕಾರ್ಡ್‌ಗಳನ್ನು ಹಿಡಿದು ನಡೆಯುತ್ತಿರುವ, ಹೋರಾಟದಲ್ಲಿ ತಾವೂ ಭಾಗಿಯಾಗಿ ಬೆಂಬಲ ನೀಡುತ್ತಿದ್ದದ್ದು ವರದಿಯಾಗಿತ್ತು. ಅದರಂತೆ ಈ ವರ್ಷವು ಕೃಷಿ ಕಾನೂನನ್ನು ವಿರೋಧಿಸಿ ಇಂತಹದೆ ಘಟನೆಗಳು ವರದಿಯಾಗಿದೆ.

ಇದನ್ನೂ ಓದಿ: ಪಂಜಾಬ್ ಲೂಧಿಯಾನ ಮಹಾಪಂಚಾಯತ್‌ನಲ್ಲಿ ಲಕ್ಷಕ್ಕೂ ಅಧಿಕ ರೈತರು ಭಾಗಿ: ಚಳವಳಿ ತೀವ್ರಗೊಳಿಸಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ಲಾಮಾಬಾದ್‌ ಶಾಂತಿ ಮಾತುಕತೆ | ಅಮೆರಿಕ–ಇಸ್ರೇಲ್ ಹತ್ಯೆಗೈದ ಮಕ್ಕಳ ರಕ್ತಸಿಕ್ತ ಬ್ಯಾಗ್‌, ಶೂ ಹೊತ್ತು ತಂದ ಇರಾನ್

ಶಾಂತಿ ಮಾತುಕತೆಯಲ್ಲಿ ಭಾಗವಹಿಸಲು ಪಾಕಿಸ್ತಾನದ ಇಸ್ಲಾಮಾಬಾದ್‌ಗೆ ಆಗಮಿಸುವಾಗ, ಅಮೆರಿಕ-ಇಸ್ರೇಲ್‌ನ ಬಾಂಬ್‌ ದಾಳಿ ನಡೆಸಿ ಹತ್ಯೆಗೈದ ಮಕ್ಕಳ ಫೋಟೋ, ರಕ್ತಸಿಕ್ತ ಬ್ಯಾಗ್ ಮತ್ತು ಶೂಗಳನ್ನು ವಿಮಾನದಲ್ಲಿ ಹೊತ್ತು ತರುವ ಮೂಲಕ ಇರಾನ್‌ ಜಗತ್ತಿನ ಗಮನಸೆಳೆದಿದೆ. ಸಾಮಾಜಿಕ ಜಾಲತಾಣ...

ಮಣಿಪುರ: ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳೊಂದಿಗೆ ಇಬ್ಬರನ್ನು ಬಂಧಿಸಿದ ಭದ್ರತಾ ಪಡೆ

ಇಂಫಾಲ: ಮಣಿಪುರದ ಚುರಚಂದಪುರ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳಿಂದ ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳನ್ನು(ಪಾಪಿ ಸೀಡ್ಸ್) ವಶಪಡಿಸಿಕೊಂಡ ನಂತರ ಭದ್ರತಾ ಪಡೆಗಳು ಅವರನ್ನು ಬಂಧಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಚುರಾಚಂದ್‌ಪುರ ಪೊಲೀಸ್ ಠಾಣೆ...

ಚಿತ್ರದುರ್ಗ: ಪ್ರೌಢಶಾಲಾ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ನಾಯಕನಹಟ್ಟಿ (ಚಿತ್ರದುರ್ಗ ಜಿಲ್ಲೆ): ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಆಕೆಯ ಗರ್ಭಪಾತ ಮಾಡಿದ ಆರೋಪದ ಮೇಲೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೀಡಿದ ದೂರು ಆಧರಿಸಿ...

ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ : ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕೋರಿದ್ದ ಮಹಿಳೆಯ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಿರುವ ಮಹಿಳೆಯೊಬ್ಬರು ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ (ಏ.10) ತಿರಸ್ಕರಿಸಿದೆ ಎಂದು ಕಾನೂನು...

ಇಸ್ಲಾಮಾಬಾದ್‌ನಲ್ಲಿ ಅಮೆರಿಕ–ಇರಾನ್ ಶಾಂತಿ ಮಾತುಕತೆ; ಪಾಕಿಸ್ತಾನ ಮಧ್ಯಸ್ಥಿಕೆ

ಹಲವು ರೀತಿಯ ಪ್ರತಿಷ್ಠೆ ಪ್ರದರ್ಶನ, ಭಿನ್ನಾಭಿಪ್ರಾಯಗಳ ನಡುವೆ ಅಮೆರಿಕ-ಇರಾನ್ ಶಾಂತಿ ಮಾತುಕತೆ ಶನಿವಾರ (ಏ.11) ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಪ್ರಾರಂಭಗೊಳ್ಳಲಿದೆ. ಪಾಕಿಸ್ತಾನದ ಪಾಲಿಗೆ ಇದು ಅತ್ಯಂತ ಪ್ರತಿಷ್ಠೆಯ ವಿಷಯವಾಗಿ ಮಾರ್ಪಟ್ಟಿದೆ. ಅಮೆರಿಕದ ಪರವಾಗಿ ಉಪಾಧ್ಯಕ್ಷ ಜೆ.ಡಿ....

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...