Homeಮುಖಪುಟಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ಈ ಹಿಂದೆ ಮದುವೆ ಆಮಂತ್ರಣ ಪತ್ರಗಳಲ್ಲಿ ಜಾತಿ, ಧರ್ಮಸೂಚಕ ಚಿತ್ರಗಳನ್ನು ಮುದ್ರಿಸುತ್ತಿದ್ದ ಜನರು ಈಗ ಭಗತ್‌ ಸಿಂಗ್, ಅಂಬೇಡ್ಕರ್‌, ಸಾವಿತ್ರಿ ಬಾಯಿ ಮುಂತಾದವರ ಚಿತ್ರಗಳಿಗೆ ಬೇಡಿಕೆಯಿಡುತ್ತಿದ್ದಾರೆ!

- Advertisement -
- Advertisement -

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ದ ದೇಶದಾದ್ಯಂತ ಹೋರಾಟಗಳು ತೀವ್ರಗೊಂಡಿದೆ. ದೆಹಲಿಯ ಗಡಿಗಳಲ್ಲಿ ನಡೆಯುತ್ತಿರು ಐತಿಹಾಸಿಕ ರೈತ ಹೋರಾಟ 83ನೇ ದಿನಕ್ಕೆ ಕಾಲಿಟ್ಟಿದೆ. ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ಹಲವಾರು ಜಿಲ್ಲೆಗಳಲ್ಲಿ ಕಿಸಾನ್ ಮಹಾಪಂಚಾಯತ್‌ಗಳು ಆರಂಭವಾಗಿ ಬಿಜೆಪಿಗೆ ತಲೆನೋವಾಗಿವೆ. ಉತ್ತರ ಭಾರತದಲ್ಲಿ ಕೃಷಿ ಕಾನೂನುಗಳ ವಿರುದ್ಧ ಹೋರಾಟದ ಕಾವು ಎಷ್ಟರ ಮಟ್ಟಿಗೆ ಇದೆ ಎಂದರೆ ಅಲ್ಲಿನ ಜನರು ತಮ್ಮ ಮದುವೆ ಆಮಂತ್ರಣ ಪತ್ರಗಳಲ್ಲಿ ಕೂಡಾ ಕೃಷಿ ವಿರೋಧಿ ಕಾನೂನನ್ನು ವಿರೋಧಿಸುವ ಘೋಷಣೆಗಳನ್ನು ಬರೆಸುತ್ತಿದ್ದಾರೆ!

Photo Courtesy: India.com

ಹರಿಯಾಣದ ಸ್ಥಳೀಯ ಪತ್ರಿಕೆಯೊಂದು ಈ ಬಗ್ಗೆ ವರದಿ ಮಾಡಿದೆ. ವರದಿಯಲ್ಲಿ ಮದುವೆ ಆಮಂತ್ರಣ ಪತ್ರಗಳನ್ನು ಮುದ್ರಿಸುವ ಮುದ್ರಕರ ಬಳಿಗೆ ಬರುವ ಗ್ರಾಹಕರು, ರೈತ ಹೋರಾಟದ ಘೋಷಣೆಗಳನ್ನು ಮುದ್ರಿಸಬೇಕು ಎಂದು ಕೇಳಿಕೊಳ್ಳುತ್ತಿದ್ದಾರೆ. ಈ ಹಿಂದೆ ಮದುವೆ ಆಮಂತ್ರಣ ಪತ್ರಗಳಲ್ಲಿ ಜಾತಿ ಸೂಚಕ, ಧರ್ಮಸೂಚಕ ಚಿನ್ನೆಗಳು ಅಥವಾ ಚಿತ್ರಗಳನ್ನು ಮಾತ್ರ ಮುದ್ರಿಸಲು ಹೇಳುತ್ತಿದ್ದ ಗ್ರಾಹಕರು ಇತ್ತೀಚೆಗೆ ಭಗತ್‌ ಸಿಂಗ್, ಅಂಬೇಡ್ಕರ್‌, ಸಾವಿತ್ರಿ ಬಾಯಿ ಮುಂತಾದ ಮಹಾಪುರುಷರ ಚಿತ್ರಗಳನ್ನು ಮುದ್ರಿಸಲು ಬೇಡಿಕೆಯಿಡುತ್ತಿದ್ದಾರೆ!

ಇದನ್ನೂ ಓದಿ: ರೈತ ಹೋರಾಟ 80ನೇ ದಿನಕ್ಕೆ: ಪ್ರೊ ಎಂ.ಡಿ ನಂಜುಂಡಸ್ವಾಮಿಯವರನ್ನು ನೆನೆದ ರೈತ ಒಕ್ಕೂಟ

”ಚಿತ್ರದಲ್ಲಿ ಕಾಣುವ ಮದುಮಗನ ಹೆಸರು ಜಗದೀಪ್ ಸಿಂಗ್ (30 ವರ್ಷ). ತಂದೆ ನಿವೃತ್ತ ಸೈನಿಕರು. ತನ್ನ ಮದುವೆಯ ದಿಬ್ಬಣ ಹೋಗುವಾಗ ಬರ್ನಾಲಾ ಎಂಬಲ್ಲಿ ಕಳೆದ 101 ದಿನಗಳಿಂದ ಚಳುವಳಿ ನಡೆಸುತ್ತಿರುವ ರೈತರು ಆತ‌ನ ಕಣ್ಣಿಗೆ ಬಿದ್ದರು. ತಕ್ಷಣ ದಿಬ್ಬಣ ನಿಲ್ಲಿಸಿದ ಮದುಮಗ ಜಗದೀಪ್ ದಿಬ್ಬಣದವರ ಸಮೇತ ರೈತರ ಜೊತೆ ಒಂದು ಗಂಟೆ ಕುಳಿತು ಅವರಿಗೆ ತನ್ನ ಬೆಂಬಲ ಘೋಷಿಸಿ, ಮದುವೆ ಹಾಲ್ ಕಡೆ ನಡೆದರು. ಹೋಗುವ ಮುನ್ನ ‘ಇದನ್ನು ಕೇಳಿ ಕಮಲ್ ಪ್ರೀತ್ (ಮದುಮಗಳು) ನನ್ನನ್ನು ಇನ್ನೂ ಹೆಚ್ಚು ಪ್ರೀತಿಸುತ್ತಾಳೆ’ ಎಂದು ಹೇಳಲು ಜಗದೀಪ್ ಮರೆಯಲಿಲ್ಲ” ಎಂದು ತಾನು ಕಂಡ ಘಟನೆಯ ಬಗ್ಗೆ ಪ್ರೊ. ಪುರುಷೋತ್ತಮ ಬಿಳಿಮಲೆಯವರು ತಮ್ಮ ಫೇಸ್‌ಬುಕ್‌ನಲ್ಲಿ ಬರೆದಿದ್ದರು.

ರಾಜಸ್ಥಾನ, ಪಂಜಾಬ್, ಹರಿಯಾಣದಲ್ಲಿ ದಂಪತಿಗಳು ರೈತರ ಚಳುವಳಿ ಘೋಷಣೆಗಳನ್ನು ಮುದ್ರಿಸಿ ಹಾಡುತ್ತಿದ್ದಾರೆ. ಹಲವು ನವ ದಂಪತಿಗಳು ತಮ್ಮ ಮದುವೆ ಊಟವನ್ನು ರೈತ ಹೋರಾಟಗಾರರಿಗೆ ಹಂಚಿಕೊಳ್ಳುತ್ತಿದ್ದಾರೆ. ಪಂಜಾಬಿ ಮದುವೆಗಳಲ್ಲಿ ಹಾಡು ಹಾಡುವ ನೋರಾ ಝೋರಾ ಗಿಡ್ಡಾ ಗುಂಪಿನ ಪ್ರಕಾರ, (ದೆಲ್ಲಿನೂ ಚಲಿಯೆ, ಜಾಕೆ ಮೋದಿನು ಘೆರಿಯೆ, ಹೇ ಸಮಾಲೋ) “ದೆಹಲಿಗೆ ಹೊರಡೋಣ, ಮೋದಿಯನ್ನು ಮುತ್ತಿಗೆ ಹಾಕೋಣಾ” ಎಂಬ ಹಾಡು ಜನಪ್ರಿಯವಾಗಿದೆ. ಜನರು ಮದುವೆಗಳಲ್ಲೂ ಈ ಹಾಡನ್ನೂ ಸಾಮೂಹಿಕವಾಗಿ ಹಾಡುತ್ತಿದ್ದಾರೆ.

ಕೇಂದ್ರ ಸರ್ಕಾರ ಇದುವರೆಗೂ ತಾನು ಜಾರಿಗೆ ತಂದಿರುವ ಕೃಷಿ ಕಾನೂನನ್ನು ಸಮರ್ಥಿಸುತ್ತಲೆ ಬಂದಿದೆ. ತೀರಾ ಇತ್ತೀಚೆಗೆ ಪ್ರಧಾನಿ ಮೋದಿ ಲೋಕಸಭೆಯಲ್ಲಿ ನಮ್ಮ ಸರ್ಕಾರ ರೈತರ ಪರವಾಗಿದೆ ಎಂದು ಹೇಳಿದ್ದಾರೆ. ಆದರೆ ಜನರು ವಿಭಿನ್ನವಾಗಿ ತಮ್ಮ ಪ್ರತಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಕಳೆದ ವರ್ಷದ ಸಿಎಎ ವಿರುದ್ದದ ಹೋರಾಟದಲ್ಲಿ ಕೇರಳ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ನವದಂಪತಿಗಳು “ಸಿಎಎ ಬೇಡ” ಎಂಬ ಘೋಷಣೆಗಳಿರುವ ಕಾರ್ಡ್‌ಗಳನ್ನು ಹಿಡಿದು ನಡೆಯುತ್ತಿರುವ, ಹೋರಾಟದಲ್ಲಿ ತಾವೂ ಭಾಗಿಯಾಗಿ ಬೆಂಬಲ ನೀಡುತ್ತಿದ್ದದ್ದು ವರದಿಯಾಗಿತ್ತು. ಅದರಂತೆ ಈ ವರ್ಷವು ಕೃಷಿ ಕಾನೂನನ್ನು ವಿರೋಧಿಸಿ ಇಂತಹದೆ ಘಟನೆಗಳು ವರದಿಯಾಗಿದೆ.

ಇದನ್ನೂ ಓದಿ: ಪಂಜಾಬ್ ಲೂಧಿಯಾನ ಮಹಾಪಂಚಾಯತ್‌ನಲ್ಲಿ ಲಕ್ಷಕ್ಕೂ ಅಧಿಕ ರೈತರು ಭಾಗಿ: ಚಳವಳಿ ತೀವ್ರಗೊಳಿಸಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...