Homeಮುಖಪುಟಕಾರ್ಟೂನಿಸ್ಟ್‌ಗಳ ಕಣ್ಣಲ್ಲಿ ರೈತ ಹೋರಾಟ: ವೈರಲ್ ಆದ ಹೋರಾಟದ ಚಿತ್ರಗಳು

ಕಾರ್ಟೂನಿಸ್ಟ್‌ಗಳ ಕಣ್ಣಲ್ಲಿ ರೈತ ಹೋರಾಟ: ವೈರಲ್ ಆದ ಹೋರಾಟದ ಚಿತ್ರಗಳು

ಈ ರೀತಿಯ ಪರಿಣಾಮಕಾರಿ ರೈತ ಹೋರಾಟದ ಚಿತ್ರಗಳು ನಿಮ್ಮ ಗಮನಕ್ಕೆ ಬಂದಿದ್ದರೆ ಅದನ್ನು ಕಮೆಂಟ್ ಮಾಡಿ.

- Advertisement -
- Advertisement -

ದೆಹಲಿಯಲ್ಲಿ ಅನ್ನದಾತ ರೈತರು ನಡೆಸುತ್ತಿರುವ ಧಿರೋಧಾತ್ತ ಹೋರಾಟ ಸತತ 12 ನೇ ದಿನಕ್ಕೆ ಕಾಲಿಟ್ಟಿದೆ. ವಿವಾದಾತ್ಮಕ ಕೃಷಿ ಕಾಯ್ದೆಗಳು ರೈತರನ್ನು ಬೀದಿಗೆ ತಳ್ಳಲ್ಲಿದ್ದು ಅವುಗಳನ್ನು ಸರ್ಕಾರ ಹಿಂಪಡೆಯದಿದ್ದರೆ ಹೋರಾಟ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ರೈತರು ಪಣ ತೊಟ್ಟಿದ್ದಾರೆ. ಇನ್ನೊಂದೆಡೆ ಸರ್ಕಾರ ಕಾಯ್ದೆಗಳಲ್ಲಿ ಬದಲಾವಣೆ ತರುತ್ತೇವೆಯೇ ಹೊರತು ಹಿಂಪಡೆಯುವುದಿಲ್ಲ ಎಂದು ಹಠ ಹಿಡಿದಿದೆ ಮಾತ್ರವಲ್ಲ ರೈತರ ಮೇಲೆ ತೀವ್ರ ಹಲ್ಲೆ ನಡೆಸಿ ಹೋರಾಟ ದಮನಗೊಳಿಸಲು ಮುಂದಾಗಿದೆ.

ರೈತರು ನಡೆಸುತ್ತಿರುವ ಹೋರಾಟಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ದೆಹಲಿಯಲ್ಲಿ ಹೋರಾಟನಿರತ ರೈತರನ್ನು ಬೆಂಬಲಿಸಿ ದೇಶ ವಿದೇಶಗಳಲ್ಲಿ ಸಾವಿರಾರು ಪ್ರತಿಭಟನೆಗಳು ದಾಖಲಾಗಿವೆ. ಸಾಮಾಜಿಕ ಜಾಲತಾಣದಲ್ಲಿ ನಿತ್ಯ ನಿರಂತರ ಬೆಂಬಲ ಹರಿದು ಬರುತ್ತಿದೆ. ಎಲೆಕ್ಟ್ರಾನಿಕ್ ಮಾಧ್ಯಮಗಳು ಸರ್ಕಾರದ ಪರ ಇದ್ದಾವೆ ಎಂಬ ಆರೋಪ ದಟ್ಟವಾಗಿ ಕೇಳಿಬಂದಿದೆ. ಆದರೆ ಮುದ್ರಣ ಮಾಧ್ಯಮಗಳು ರೈತರ ಹೋರಾಟವನ್ನು ಜನರಿಗೆ ಮುಟ್ಟಿಸಿವೆ. ಕಾರ್ಟೂನಿಸ್ಟ್‌ಗಳ ರೈತರ ಸಂಕಷ್ಟಗಳನ್ನು ಚಿತ್ರರೂಪದಲ್ಲಿ ವ್ಯಕ್ತಪಡಿಸಿದ್ದಾರೆ. ಕೆಲವು ಫೋಟೊ ಜರ್ನಲಿಸ್ಟ್‌ಗಳು ಹೋರಾಟದ ಕಿಚ್ಚಿನ ಫೋಟೊಗಳನ್ನು ಸೆರೆಹಿಡಿದಿದ್ದಾರೆ. ವೈರಲ್ ಆದ ಚಿತ್ರಗಳು, ಟ್ವೀಟ್‌ಗಳು ಇಲ್ಲಿವೆ ನೋಡಿ.

ಗಂಧಾಮದನ್ ಎಂಬುವವರು ಬಿಡಿಸಿರುವ ಚಿತ್ರ ಹೇಗೆ ಮೋದಿ ಸರ್ಕಾರ ರೈತರನ್ನು ಒದೆಯುತ್ತಿದೆ ಮತ್ತು ಆ ಮೂಲಕ ತಾನೂ ಪ್ರಪಾತಕ್ಕೆ ಬೀಳಲಿದೆ ಎಂಬುದನ್ನು ಪರಿಣಾಮಕಾರಿಯಾಗಿ ತಿಳಿಸುತ್ತದೆ. ಇದು ನಿನ್ನೆ ಮತ್ತು ಇಂದು ಲಕ್ಷಾಂತರ ಸಂಖ್ಯೆಯಲ್ಲಿ ಷೇರ್ ಆಗಿದೆ.

ಮಿರ್ ಸುಹೈಲ್ ಎಂಬುವವರು ಹೇಗೆ ಭಾರತೀಯ ಮಾಧ್ಯಮಗಳು ಹೋರಾಟನಿರತ ರೈತರನ್ನು ಭಯೋತ್ಪಾದಕರಂತೆ ಬಿಂಬಿಸುತ್ತಿವೆ ಎಂದು ಈ ಚಿತ್ರದ ಮೂಲಕ ತಿಳಿಸಿಕೊಟ್ಟಿದ್ದಾರೆ. ಕೆಲ ಬಿಜೆಪಿ ನಾಯಕರು ರೈತರನ್ನು ಖಲಿಸ್ತಾನಿಗಳು, ಭಯೋತ್ಪಾದಕರು ಎಂದು ಕರೆದಿದ್ದನ್ನೇ ಈ ಮಾಧ್ಯಮಗಳು ಹೇಗೆ ದಿನವಿಡೀ ತೋರಿಸಿ ರೈತರಿಗೆ ದ್ರೋಹ ಬಗೆದರು ಎಂಬುದಕ್ಕೆ ಈ ಚಿತ್ರಕ್ಕಿಂತ ಮತ್ತೊಂದು ಉದಾಹರಣೆ ಬೇಕಿಲ್ಲ. ವಾಸ್ತವದಲ್ಲಿ ಹೆಗಲ ಮೇಲೆ ನೇಗಿಲ ಹೊತ್ತ ರೈತರನ್ನು ಮಾಧ್ಯಮಗಳು ಹೆಗಲಮೇಲೆ ಬಂದೂಕು ಹೊತ್ತಿರುವಂತೆ ಚಿತ್ರಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ದೇಶ-ವಿದೇಶಗಳಲ್ಲಿ ಹೆಸರು ಗಳಿಸಿರುವ ಕರ್ನಾಟಕದ ಖ್ಯಾತ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯ ಮನ ಮಿಡಿಯುವ ಹತ್ತಾರು ಕಾರ್ಟೂನ್‌ಗಳನ್ನು ರಚಿಸಿದ್ದಾರೆ. ಅದರಲ್ಲಿ ಚಳಿಯಲ್ಲಿ ನಡುಗುತ್ತಾ ಹೋರಾಟದಲ್ಲಿ ತೊಡಗಿರುವ ರೈತರ ಬಗೆ ಇಡೀ ಭಾರತ ಹೇಗೆ ಕಾಳಜಿವಹಿಸುತ್ತದೆ ಎಂದು ಬಿಂಬಿಸುವ ಚಿತ್ರವನ್ನು ಸಾವಿರಾರು ಜನ ಹಂಚಿಕೊಂಡಿದ್ದಾರೆ.

ಹೋರಾಟನಿರತ ರೈತರ ಮೇಲೆ ಪೊಲೀಸರು ಕ್ರೂರವಾಗಿ ಥಳಿಸಿ, ಜಲಫಿರಂಗಿ, ಅಶ್ರವಾಯು ಸಿಡಿಸಿದರೂ ರೈತರ ಹೃದಯ ಮಾತ್ರ ವಿಶಾಲವಾದುದು. ರೈತರು ಪೊಲೀಸರಿಗೂ ಅನ್ನ-ನೀರು ನೀಡಿ ಮಾನವೀಯತೆ ಮೆರದಿದ್ದಾರೆ ಎಂದು ತಿಳಿಸುವ ಸತೀಶ್ ಆಚಾರ್ಯರವರ ಚಿತ್ರ ಇದು.

ಕನ್ನಡದ ಪ್ರತಿಭಾವಂತ ವ್ಯಂಗ್ಯಚಿತ್ರಕಾರ ಪಿ ಮಹಮ್ಮದ್‌ರವರು ರೈತರ ಮೇಲೆ ದಾಳಿ ನಡೆಯುತ್ತಿದ್ದಾಗ ಮೋದಿ ಏನು ಮಾಡುತ್ತಿದ್ದರು ಎಂದು ಚಿತ್ರಿಸಿದ್ದಾರೆ.

ಮುಸ್ಲಿಂ ರೈತರು ನಮಾಜ್ ಮಾಡುವಾಗ ಸಿಖ್ ಯುವಕರು ಗೋಡೆಯಾಗಿ ಅವರಿಗೆ ರಕ್ಷಣೆ ನೀಡಿದ್ದು.

ಗಾಯಗೊಂಡ ಸಿಂಹದ ರೀತಿ ರೈತರನ್ನು ಚಿತ್ರಸಿರುವುದು..

ದಿ ಹಿಂದೂ ಪತ್ರಿಕೆಗಾಗಿ ಸುರೇಂದ್ರರವರು ರಚಿಸಿದ ಈ ಚಿತ್ರ ಸರ್ಕಾರದ ಕಾರ್ಯವೈಖರಿಯನ್ನು ಸಮಗ್ರವಾಗಿ ವಿಶ್ಲೇಷಿಸುತ್ತದೆ.

ಈ ರೀತಿಯ ಪರಿಣಾಮಕಾರಿ ರೈತ ಹೋರಾಟದ ಚಿತ್ರಗಳು ನಿಮ್ಮ ಗಮನಕ್ಕೆ ಬಂದಿದ್ದರೆ ಅದನ್ನು ಕಮೆಂಟ್ ಮಾಡಿ.


ಇದನ್ನೂ ಓದಿ; ರೈತರ ಹೋರಾಟವನ್ನು ಬೆಂಬಲಿಸಿದ ನಟಿ ಪ್ರಿಯಾಂಕಾ ಚೋಪ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...