Homeಮುಖಪುಟಕಾರ್ಟೂನಿಸ್ಟ್‌ಗಳ ಕಣ್ಣಲ್ಲಿ ರೈತ ಹೋರಾಟ: ವೈರಲ್ ಆದ ಹೋರಾಟದ ಚಿತ್ರಗಳು

ಕಾರ್ಟೂನಿಸ್ಟ್‌ಗಳ ಕಣ್ಣಲ್ಲಿ ರೈತ ಹೋರಾಟ: ವೈರಲ್ ಆದ ಹೋರಾಟದ ಚಿತ್ರಗಳು

ಈ ರೀತಿಯ ಪರಿಣಾಮಕಾರಿ ರೈತ ಹೋರಾಟದ ಚಿತ್ರಗಳು ನಿಮ್ಮ ಗಮನಕ್ಕೆ ಬಂದಿದ್ದರೆ ಅದನ್ನು ಕಮೆಂಟ್ ಮಾಡಿ.

- Advertisement -
- Advertisement -

ದೆಹಲಿಯಲ್ಲಿ ಅನ್ನದಾತ ರೈತರು ನಡೆಸುತ್ತಿರುವ ಧಿರೋಧಾತ್ತ ಹೋರಾಟ ಸತತ 12 ನೇ ದಿನಕ್ಕೆ ಕಾಲಿಟ್ಟಿದೆ. ವಿವಾದಾತ್ಮಕ ಕೃಷಿ ಕಾಯ್ದೆಗಳು ರೈತರನ್ನು ಬೀದಿಗೆ ತಳ್ಳಲ್ಲಿದ್ದು ಅವುಗಳನ್ನು ಸರ್ಕಾರ ಹಿಂಪಡೆಯದಿದ್ದರೆ ಹೋರಾಟ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ರೈತರು ಪಣ ತೊಟ್ಟಿದ್ದಾರೆ. ಇನ್ನೊಂದೆಡೆ ಸರ್ಕಾರ ಕಾಯ್ದೆಗಳಲ್ಲಿ ಬದಲಾವಣೆ ತರುತ್ತೇವೆಯೇ ಹೊರತು ಹಿಂಪಡೆಯುವುದಿಲ್ಲ ಎಂದು ಹಠ ಹಿಡಿದಿದೆ ಮಾತ್ರವಲ್ಲ ರೈತರ ಮೇಲೆ ತೀವ್ರ ಹಲ್ಲೆ ನಡೆಸಿ ಹೋರಾಟ ದಮನಗೊಳಿಸಲು ಮುಂದಾಗಿದೆ.

ರೈತರು ನಡೆಸುತ್ತಿರುವ ಹೋರಾಟಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ದೆಹಲಿಯಲ್ಲಿ ಹೋರಾಟನಿರತ ರೈತರನ್ನು ಬೆಂಬಲಿಸಿ ದೇಶ ವಿದೇಶಗಳಲ್ಲಿ ಸಾವಿರಾರು ಪ್ರತಿಭಟನೆಗಳು ದಾಖಲಾಗಿವೆ. ಸಾಮಾಜಿಕ ಜಾಲತಾಣದಲ್ಲಿ ನಿತ್ಯ ನಿರಂತರ ಬೆಂಬಲ ಹರಿದು ಬರುತ್ತಿದೆ. ಎಲೆಕ್ಟ್ರಾನಿಕ್ ಮಾಧ್ಯಮಗಳು ಸರ್ಕಾರದ ಪರ ಇದ್ದಾವೆ ಎಂಬ ಆರೋಪ ದಟ್ಟವಾಗಿ ಕೇಳಿಬಂದಿದೆ. ಆದರೆ ಮುದ್ರಣ ಮಾಧ್ಯಮಗಳು ರೈತರ ಹೋರಾಟವನ್ನು ಜನರಿಗೆ ಮುಟ್ಟಿಸಿವೆ. ಕಾರ್ಟೂನಿಸ್ಟ್‌ಗಳ ರೈತರ ಸಂಕಷ್ಟಗಳನ್ನು ಚಿತ್ರರೂಪದಲ್ಲಿ ವ್ಯಕ್ತಪಡಿಸಿದ್ದಾರೆ. ಕೆಲವು ಫೋಟೊ ಜರ್ನಲಿಸ್ಟ್‌ಗಳು ಹೋರಾಟದ ಕಿಚ್ಚಿನ ಫೋಟೊಗಳನ್ನು ಸೆರೆಹಿಡಿದಿದ್ದಾರೆ. ವೈರಲ್ ಆದ ಚಿತ್ರಗಳು, ಟ್ವೀಟ್‌ಗಳು ಇಲ್ಲಿವೆ ನೋಡಿ.

ಗಂಧಾಮದನ್ ಎಂಬುವವರು ಬಿಡಿಸಿರುವ ಚಿತ್ರ ಹೇಗೆ ಮೋದಿ ಸರ್ಕಾರ ರೈತರನ್ನು ಒದೆಯುತ್ತಿದೆ ಮತ್ತು ಆ ಮೂಲಕ ತಾನೂ ಪ್ರಪಾತಕ್ಕೆ ಬೀಳಲಿದೆ ಎಂಬುದನ್ನು ಪರಿಣಾಮಕಾರಿಯಾಗಿ ತಿಳಿಸುತ್ತದೆ. ಇದು ನಿನ್ನೆ ಮತ್ತು ಇಂದು ಲಕ್ಷಾಂತರ ಸಂಖ್ಯೆಯಲ್ಲಿ ಷೇರ್ ಆಗಿದೆ.

ಮಿರ್ ಸುಹೈಲ್ ಎಂಬುವವರು ಹೇಗೆ ಭಾರತೀಯ ಮಾಧ್ಯಮಗಳು ಹೋರಾಟನಿರತ ರೈತರನ್ನು ಭಯೋತ್ಪಾದಕರಂತೆ ಬಿಂಬಿಸುತ್ತಿವೆ ಎಂದು ಈ ಚಿತ್ರದ ಮೂಲಕ ತಿಳಿಸಿಕೊಟ್ಟಿದ್ದಾರೆ. ಕೆಲ ಬಿಜೆಪಿ ನಾಯಕರು ರೈತರನ್ನು ಖಲಿಸ್ತಾನಿಗಳು, ಭಯೋತ್ಪಾದಕರು ಎಂದು ಕರೆದಿದ್ದನ್ನೇ ಈ ಮಾಧ್ಯಮಗಳು ಹೇಗೆ ದಿನವಿಡೀ ತೋರಿಸಿ ರೈತರಿಗೆ ದ್ರೋಹ ಬಗೆದರು ಎಂಬುದಕ್ಕೆ ಈ ಚಿತ್ರಕ್ಕಿಂತ ಮತ್ತೊಂದು ಉದಾಹರಣೆ ಬೇಕಿಲ್ಲ. ವಾಸ್ತವದಲ್ಲಿ ಹೆಗಲ ಮೇಲೆ ನೇಗಿಲ ಹೊತ್ತ ರೈತರನ್ನು ಮಾಧ್ಯಮಗಳು ಹೆಗಲಮೇಲೆ ಬಂದೂಕು ಹೊತ್ತಿರುವಂತೆ ಚಿತ್ರಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ದೇಶ-ವಿದೇಶಗಳಲ್ಲಿ ಹೆಸರು ಗಳಿಸಿರುವ ಕರ್ನಾಟಕದ ಖ್ಯಾತ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯ ಮನ ಮಿಡಿಯುವ ಹತ್ತಾರು ಕಾರ್ಟೂನ್‌ಗಳನ್ನು ರಚಿಸಿದ್ದಾರೆ. ಅದರಲ್ಲಿ ಚಳಿಯಲ್ಲಿ ನಡುಗುತ್ತಾ ಹೋರಾಟದಲ್ಲಿ ತೊಡಗಿರುವ ರೈತರ ಬಗೆ ಇಡೀ ಭಾರತ ಹೇಗೆ ಕಾಳಜಿವಹಿಸುತ್ತದೆ ಎಂದು ಬಿಂಬಿಸುವ ಚಿತ್ರವನ್ನು ಸಾವಿರಾರು ಜನ ಹಂಚಿಕೊಂಡಿದ್ದಾರೆ.

ಹೋರಾಟನಿರತ ರೈತರ ಮೇಲೆ ಪೊಲೀಸರು ಕ್ರೂರವಾಗಿ ಥಳಿಸಿ, ಜಲಫಿರಂಗಿ, ಅಶ್ರವಾಯು ಸಿಡಿಸಿದರೂ ರೈತರ ಹೃದಯ ಮಾತ್ರ ವಿಶಾಲವಾದುದು. ರೈತರು ಪೊಲೀಸರಿಗೂ ಅನ್ನ-ನೀರು ನೀಡಿ ಮಾನವೀಯತೆ ಮೆರದಿದ್ದಾರೆ ಎಂದು ತಿಳಿಸುವ ಸತೀಶ್ ಆಚಾರ್ಯರವರ ಚಿತ್ರ ಇದು.

ಕನ್ನಡದ ಪ್ರತಿಭಾವಂತ ವ್ಯಂಗ್ಯಚಿತ್ರಕಾರ ಪಿ ಮಹಮ್ಮದ್‌ರವರು ರೈತರ ಮೇಲೆ ದಾಳಿ ನಡೆಯುತ್ತಿದ್ದಾಗ ಮೋದಿ ಏನು ಮಾಡುತ್ತಿದ್ದರು ಎಂದು ಚಿತ್ರಿಸಿದ್ದಾರೆ.

ಮುಸ್ಲಿಂ ರೈತರು ನಮಾಜ್ ಮಾಡುವಾಗ ಸಿಖ್ ಯುವಕರು ಗೋಡೆಯಾಗಿ ಅವರಿಗೆ ರಕ್ಷಣೆ ನೀಡಿದ್ದು.

ಗಾಯಗೊಂಡ ಸಿಂಹದ ರೀತಿ ರೈತರನ್ನು ಚಿತ್ರಸಿರುವುದು..

ದಿ ಹಿಂದೂ ಪತ್ರಿಕೆಗಾಗಿ ಸುರೇಂದ್ರರವರು ರಚಿಸಿದ ಈ ಚಿತ್ರ ಸರ್ಕಾರದ ಕಾರ್ಯವೈಖರಿಯನ್ನು ಸಮಗ್ರವಾಗಿ ವಿಶ್ಲೇಷಿಸುತ್ತದೆ.

ಈ ರೀತಿಯ ಪರಿಣಾಮಕಾರಿ ರೈತ ಹೋರಾಟದ ಚಿತ್ರಗಳು ನಿಮ್ಮ ಗಮನಕ್ಕೆ ಬಂದಿದ್ದರೆ ಅದನ್ನು ಕಮೆಂಟ್ ಮಾಡಿ.


ಇದನ್ನೂ ಓದಿ; ರೈತರ ಹೋರಾಟವನ್ನು ಬೆಂಬಲಿಸಿದ ನಟಿ ಪ್ರಿಯಾಂಕಾ ಚೋಪ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...