Homeಮುಖಪುಟಕಾರ್ಟೂನಿಸ್ಟ್‌ಗಳ ಕಣ್ಣಲ್ಲಿ ರೈತ ಹೋರಾಟ: ವೈರಲ್ ಆದ ಹೋರಾಟದ ಚಿತ್ರಗಳು

ಕಾರ್ಟೂನಿಸ್ಟ್‌ಗಳ ಕಣ್ಣಲ್ಲಿ ರೈತ ಹೋರಾಟ: ವೈರಲ್ ಆದ ಹೋರಾಟದ ಚಿತ್ರಗಳು

ಈ ರೀತಿಯ ಪರಿಣಾಮಕಾರಿ ರೈತ ಹೋರಾಟದ ಚಿತ್ರಗಳು ನಿಮ್ಮ ಗಮನಕ್ಕೆ ಬಂದಿದ್ದರೆ ಅದನ್ನು ಕಮೆಂಟ್ ಮಾಡಿ.

- Advertisement -
- Advertisement -

ದೆಹಲಿಯಲ್ಲಿ ಅನ್ನದಾತ ರೈತರು ನಡೆಸುತ್ತಿರುವ ಧಿರೋಧಾತ್ತ ಹೋರಾಟ ಸತತ 12 ನೇ ದಿನಕ್ಕೆ ಕಾಲಿಟ್ಟಿದೆ. ವಿವಾದಾತ್ಮಕ ಕೃಷಿ ಕಾಯ್ದೆಗಳು ರೈತರನ್ನು ಬೀದಿಗೆ ತಳ್ಳಲ್ಲಿದ್ದು ಅವುಗಳನ್ನು ಸರ್ಕಾರ ಹಿಂಪಡೆಯದಿದ್ದರೆ ಹೋರಾಟ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ರೈತರು ಪಣ ತೊಟ್ಟಿದ್ದಾರೆ. ಇನ್ನೊಂದೆಡೆ ಸರ್ಕಾರ ಕಾಯ್ದೆಗಳಲ್ಲಿ ಬದಲಾವಣೆ ತರುತ್ತೇವೆಯೇ ಹೊರತು ಹಿಂಪಡೆಯುವುದಿಲ್ಲ ಎಂದು ಹಠ ಹಿಡಿದಿದೆ ಮಾತ್ರವಲ್ಲ ರೈತರ ಮೇಲೆ ತೀವ್ರ ಹಲ್ಲೆ ನಡೆಸಿ ಹೋರಾಟ ದಮನಗೊಳಿಸಲು ಮುಂದಾಗಿದೆ.

ರೈತರು ನಡೆಸುತ್ತಿರುವ ಹೋರಾಟಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ದೆಹಲಿಯಲ್ಲಿ ಹೋರಾಟನಿರತ ರೈತರನ್ನು ಬೆಂಬಲಿಸಿ ದೇಶ ವಿದೇಶಗಳಲ್ಲಿ ಸಾವಿರಾರು ಪ್ರತಿಭಟನೆಗಳು ದಾಖಲಾಗಿವೆ. ಸಾಮಾಜಿಕ ಜಾಲತಾಣದಲ್ಲಿ ನಿತ್ಯ ನಿರಂತರ ಬೆಂಬಲ ಹರಿದು ಬರುತ್ತಿದೆ. ಎಲೆಕ್ಟ್ರಾನಿಕ್ ಮಾಧ್ಯಮಗಳು ಸರ್ಕಾರದ ಪರ ಇದ್ದಾವೆ ಎಂಬ ಆರೋಪ ದಟ್ಟವಾಗಿ ಕೇಳಿಬಂದಿದೆ. ಆದರೆ ಮುದ್ರಣ ಮಾಧ್ಯಮಗಳು ರೈತರ ಹೋರಾಟವನ್ನು ಜನರಿಗೆ ಮುಟ್ಟಿಸಿವೆ. ಕಾರ್ಟೂನಿಸ್ಟ್‌ಗಳ ರೈತರ ಸಂಕಷ್ಟಗಳನ್ನು ಚಿತ್ರರೂಪದಲ್ಲಿ ವ್ಯಕ್ತಪಡಿಸಿದ್ದಾರೆ. ಕೆಲವು ಫೋಟೊ ಜರ್ನಲಿಸ್ಟ್‌ಗಳು ಹೋರಾಟದ ಕಿಚ್ಚಿನ ಫೋಟೊಗಳನ್ನು ಸೆರೆಹಿಡಿದಿದ್ದಾರೆ. ವೈರಲ್ ಆದ ಚಿತ್ರಗಳು, ಟ್ವೀಟ್‌ಗಳು ಇಲ್ಲಿವೆ ನೋಡಿ.

ಗಂಧಾಮದನ್ ಎಂಬುವವರು ಬಿಡಿಸಿರುವ ಚಿತ್ರ ಹೇಗೆ ಮೋದಿ ಸರ್ಕಾರ ರೈತರನ್ನು ಒದೆಯುತ್ತಿದೆ ಮತ್ತು ಆ ಮೂಲಕ ತಾನೂ ಪ್ರಪಾತಕ್ಕೆ ಬೀಳಲಿದೆ ಎಂಬುದನ್ನು ಪರಿಣಾಮಕಾರಿಯಾಗಿ ತಿಳಿಸುತ್ತದೆ. ಇದು ನಿನ್ನೆ ಮತ್ತು ಇಂದು ಲಕ್ಷಾಂತರ ಸಂಖ್ಯೆಯಲ್ಲಿ ಷೇರ್ ಆಗಿದೆ.

ಮಿರ್ ಸುಹೈಲ್ ಎಂಬುವವರು ಹೇಗೆ ಭಾರತೀಯ ಮಾಧ್ಯಮಗಳು ಹೋರಾಟನಿರತ ರೈತರನ್ನು ಭಯೋತ್ಪಾದಕರಂತೆ ಬಿಂಬಿಸುತ್ತಿವೆ ಎಂದು ಈ ಚಿತ್ರದ ಮೂಲಕ ತಿಳಿಸಿಕೊಟ್ಟಿದ್ದಾರೆ. ಕೆಲ ಬಿಜೆಪಿ ನಾಯಕರು ರೈತರನ್ನು ಖಲಿಸ್ತಾನಿಗಳು, ಭಯೋತ್ಪಾದಕರು ಎಂದು ಕರೆದಿದ್ದನ್ನೇ ಈ ಮಾಧ್ಯಮಗಳು ಹೇಗೆ ದಿನವಿಡೀ ತೋರಿಸಿ ರೈತರಿಗೆ ದ್ರೋಹ ಬಗೆದರು ಎಂಬುದಕ್ಕೆ ಈ ಚಿತ್ರಕ್ಕಿಂತ ಮತ್ತೊಂದು ಉದಾಹರಣೆ ಬೇಕಿಲ್ಲ. ವಾಸ್ತವದಲ್ಲಿ ಹೆಗಲ ಮೇಲೆ ನೇಗಿಲ ಹೊತ್ತ ರೈತರನ್ನು ಮಾಧ್ಯಮಗಳು ಹೆಗಲಮೇಲೆ ಬಂದೂಕು ಹೊತ್ತಿರುವಂತೆ ಚಿತ್ರಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ದೇಶ-ವಿದೇಶಗಳಲ್ಲಿ ಹೆಸರು ಗಳಿಸಿರುವ ಕರ್ನಾಟಕದ ಖ್ಯಾತ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯ ಮನ ಮಿಡಿಯುವ ಹತ್ತಾರು ಕಾರ್ಟೂನ್‌ಗಳನ್ನು ರಚಿಸಿದ್ದಾರೆ. ಅದರಲ್ಲಿ ಚಳಿಯಲ್ಲಿ ನಡುಗುತ್ತಾ ಹೋರಾಟದಲ್ಲಿ ತೊಡಗಿರುವ ರೈತರ ಬಗೆ ಇಡೀ ಭಾರತ ಹೇಗೆ ಕಾಳಜಿವಹಿಸುತ್ತದೆ ಎಂದು ಬಿಂಬಿಸುವ ಚಿತ್ರವನ್ನು ಸಾವಿರಾರು ಜನ ಹಂಚಿಕೊಂಡಿದ್ದಾರೆ.

ಹೋರಾಟನಿರತ ರೈತರ ಮೇಲೆ ಪೊಲೀಸರು ಕ್ರೂರವಾಗಿ ಥಳಿಸಿ, ಜಲಫಿರಂಗಿ, ಅಶ್ರವಾಯು ಸಿಡಿಸಿದರೂ ರೈತರ ಹೃದಯ ಮಾತ್ರ ವಿಶಾಲವಾದುದು. ರೈತರು ಪೊಲೀಸರಿಗೂ ಅನ್ನ-ನೀರು ನೀಡಿ ಮಾನವೀಯತೆ ಮೆರದಿದ್ದಾರೆ ಎಂದು ತಿಳಿಸುವ ಸತೀಶ್ ಆಚಾರ್ಯರವರ ಚಿತ್ರ ಇದು.

ಕನ್ನಡದ ಪ್ರತಿಭಾವಂತ ವ್ಯಂಗ್ಯಚಿತ್ರಕಾರ ಪಿ ಮಹಮ್ಮದ್‌ರವರು ರೈತರ ಮೇಲೆ ದಾಳಿ ನಡೆಯುತ್ತಿದ್ದಾಗ ಮೋದಿ ಏನು ಮಾಡುತ್ತಿದ್ದರು ಎಂದು ಚಿತ್ರಿಸಿದ್ದಾರೆ.

ಮುಸ್ಲಿಂ ರೈತರು ನಮಾಜ್ ಮಾಡುವಾಗ ಸಿಖ್ ಯುವಕರು ಗೋಡೆಯಾಗಿ ಅವರಿಗೆ ರಕ್ಷಣೆ ನೀಡಿದ್ದು.

ಗಾಯಗೊಂಡ ಸಿಂಹದ ರೀತಿ ರೈತರನ್ನು ಚಿತ್ರಸಿರುವುದು..

ದಿ ಹಿಂದೂ ಪತ್ರಿಕೆಗಾಗಿ ಸುರೇಂದ್ರರವರು ರಚಿಸಿದ ಈ ಚಿತ್ರ ಸರ್ಕಾರದ ಕಾರ್ಯವೈಖರಿಯನ್ನು ಸಮಗ್ರವಾಗಿ ವಿಶ್ಲೇಷಿಸುತ್ತದೆ.

ಈ ರೀತಿಯ ಪರಿಣಾಮಕಾರಿ ರೈತ ಹೋರಾಟದ ಚಿತ್ರಗಳು ನಿಮ್ಮ ಗಮನಕ್ಕೆ ಬಂದಿದ್ದರೆ ಅದನ್ನು ಕಮೆಂಟ್ ಮಾಡಿ.


ಇದನ್ನೂ ಓದಿ; ರೈತರ ಹೋರಾಟವನ್ನು ಬೆಂಬಲಿಸಿದ ನಟಿ ಪ್ರಿಯಾಂಕಾ ಚೋಪ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...