Homeಮುಖಪುಟಕಾರ್ಟೂನಿಸ್ಟ್‌ಗಳ ಕಣ್ಣಲ್ಲಿ ರೈತ ಹೋರಾಟ: ವೈರಲ್ ಆದ ಹೋರಾಟದ ಚಿತ್ರಗಳು

ಕಾರ್ಟೂನಿಸ್ಟ್‌ಗಳ ಕಣ್ಣಲ್ಲಿ ರೈತ ಹೋರಾಟ: ವೈರಲ್ ಆದ ಹೋರಾಟದ ಚಿತ್ರಗಳು

ಈ ರೀತಿಯ ಪರಿಣಾಮಕಾರಿ ರೈತ ಹೋರಾಟದ ಚಿತ್ರಗಳು ನಿಮ್ಮ ಗಮನಕ್ಕೆ ಬಂದಿದ್ದರೆ ಅದನ್ನು ಕಮೆಂಟ್ ಮಾಡಿ.

- Advertisement -
- Advertisement -

ದೆಹಲಿಯಲ್ಲಿ ಅನ್ನದಾತ ರೈತರು ನಡೆಸುತ್ತಿರುವ ಧಿರೋಧಾತ್ತ ಹೋರಾಟ ಸತತ 12 ನೇ ದಿನಕ್ಕೆ ಕಾಲಿಟ್ಟಿದೆ. ವಿವಾದಾತ್ಮಕ ಕೃಷಿ ಕಾಯ್ದೆಗಳು ರೈತರನ್ನು ಬೀದಿಗೆ ತಳ್ಳಲ್ಲಿದ್ದು ಅವುಗಳನ್ನು ಸರ್ಕಾರ ಹಿಂಪಡೆಯದಿದ್ದರೆ ಹೋರಾಟ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ರೈತರು ಪಣ ತೊಟ್ಟಿದ್ದಾರೆ. ಇನ್ನೊಂದೆಡೆ ಸರ್ಕಾರ ಕಾಯ್ದೆಗಳಲ್ಲಿ ಬದಲಾವಣೆ ತರುತ್ತೇವೆಯೇ ಹೊರತು ಹಿಂಪಡೆಯುವುದಿಲ್ಲ ಎಂದು ಹಠ ಹಿಡಿದಿದೆ ಮಾತ್ರವಲ್ಲ ರೈತರ ಮೇಲೆ ತೀವ್ರ ಹಲ್ಲೆ ನಡೆಸಿ ಹೋರಾಟ ದಮನಗೊಳಿಸಲು ಮುಂದಾಗಿದೆ.

ರೈತರು ನಡೆಸುತ್ತಿರುವ ಹೋರಾಟಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ದೆಹಲಿಯಲ್ಲಿ ಹೋರಾಟನಿರತ ರೈತರನ್ನು ಬೆಂಬಲಿಸಿ ದೇಶ ವಿದೇಶಗಳಲ್ಲಿ ಸಾವಿರಾರು ಪ್ರತಿಭಟನೆಗಳು ದಾಖಲಾಗಿವೆ. ಸಾಮಾಜಿಕ ಜಾಲತಾಣದಲ್ಲಿ ನಿತ್ಯ ನಿರಂತರ ಬೆಂಬಲ ಹರಿದು ಬರುತ್ತಿದೆ. ಎಲೆಕ್ಟ್ರಾನಿಕ್ ಮಾಧ್ಯಮಗಳು ಸರ್ಕಾರದ ಪರ ಇದ್ದಾವೆ ಎಂಬ ಆರೋಪ ದಟ್ಟವಾಗಿ ಕೇಳಿಬಂದಿದೆ. ಆದರೆ ಮುದ್ರಣ ಮಾಧ್ಯಮಗಳು ರೈತರ ಹೋರಾಟವನ್ನು ಜನರಿಗೆ ಮುಟ್ಟಿಸಿವೆ. ಕಾರ್ಟೂನಿಸ್ಟ್‌ಗಳ ರೈತರ ಸಂಕಷ್ಟಗಳನ್ನು ಚಿತ್ರರೂಪದಲ್ಲಿ ವ್ಯಕ್ತಪಡಿಸಿದ್ದಾರೆ. ಕೆಲವು ಫೋಟೊ ಜರ್ನಲಿಸ್ಟ್‌ಗಳು ಹೋರಾಟದ ಕಿಚ್ಚಿನ ಫೋಟೊಗಳನ್ನು ಸೆರೆಹಿಡಿದಿದ್ದಾರೆ. ವೈರಲ್ ಆದ ಚಿತ್ರಗಳು, ಟ್ವೀಟ್‌ಗಳು ಇಲ್ಲಿವೆ ನೋಡಿ.

ಗಂಧಾಮದನ್ ಎಂಬುವವರು ಬಿಡಿಸಿರುವ ಚಿತ್ರ ಹೇಗೆ ಮೋದಿ ಸರ್ಕಾರ ರೈತರನ್ನು ಒದೆಯುತ್ತಿದೆ ಮತ್ತು ಆ ಮೂಲಕ ತಾನೂ ಪ್ರಪಾತಕ್ಕೆ ಬೀಳಲಿದೆ ಎಂಬುದನ್ನು ಪರಿಣಾಮಕಾರಿಯಾಗಿ ತಿಳಿಸುತ್ತದೆ. ಇದು ನಿನ್ನೆ ಮತ್ತು ಇಂದು ಲಕ್ಷಾಂತರ ಸಂಖ್ಯೆಯಲ್ಲಿ ಷೇರ್ ಆಗಿದೆ.

ಮಿರ್ ಸುಹೈಲ್ ಎಂಬುವವರು ಹೇಗೆ ಭಾರತೀಯ ಮಾಧ್ಯಮಗಳು ಹೋರಾಟನಿರತ ರೈತರನ್ನು ಭಯೋತ್ಪಾದಕರಂತೆ ಬಿಂಬಿಸುತ್ತಿವೆ ಎಂದು ಈ ಚಿತ್ರದ ಮೂಲಕ ತಿಳಿಸಿಕೊಟ್ಟಿದ್ದಾರೆ. ಕೆಲ ಬಿಜೆಪಿ ನಾಯಕರು ರೈತರನ್ನು ಖಲಿಸ್ತಾನಿಗಳು, ಭಯೋತ್ಪಾದಕರು ಎಂದು ಕರೆದಿದ್ದನ್ನೇ ಈ ಮಾಧ್ಯಮಗಳು ಹೇಗೆ ದಿನವಿಡೀ ತೋರಿಸಿ ರೈತರಿಗೆ ದ್ರೋಹ ಬಗೆದರು ಎಂಬುದಕ್ಕೆ ಈ ಚಿತ್ರಕ್ಕಿಂತ ಮತ್ತೊಂದು ಉದಾಹರಣೆ ಬೇಕಿಲ್ಲ. ವಾಸ್ತವದಲ್ಲಿ ಹೆಗಲ ಮೇಲೆ ನೇಗಿಲ ಹೊತ್ತ ರೈತರನ್ನು ಮಾಧ್ಯಮಗಳು ಹೆಗಲಮೇಲೆ ಬಂದೂಕು ಹೊತ್ತಿರುವಂತೆ ಚಿತ್ರಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ದೇಶ-ವಿದೇಶಗಳಲ್ಲಿ ಹೆಸರು ಗಳಿಸಿರುವ ಕರ್ನಾಟಕದ ಖ್ಯಾತ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯ ಮನ ಮಿಡಿಯುವ ಹತ್ತಾರು ಕಾರ್ಟೂನ್‌ಗಳನ್ನು ರಚಿಸಿದ್ದಾರೆ. ಅದರಲ್ಲಿ ಚಳಿಯಲ್ಲಿ ನಡುಗುತ್ತಾ ಹೋರಾಟದಲ್ಲಿ ತೊಡಗಿರುವ ರೈತರ ಬಗೆ ಇಡೀ ಭಾರತ ಹೇಗೆ ಕಾಳಜಿವಹಿಸುತ್ತದೆ ಎಂದು ಬಿಂಬಿಸುವ ಚಿತ್ರವನ್ನು ಸಾವಿರಾರು ಜನ ಹಂಚಿಕೊಂಡಿದ್ದಾರೆ.

ಹೋರಾಟನಿರತ ರೈತರ ಮೇಲೆ ಪೊಲೀಸರು ಕ್ರೂರವಾಗಿ ಥಳಿಸಿ, ಜಲಫಿರಂಗಿ, ಅಶ್ರವಾಯು ಸಿಡಿಸಿದರೂ ರೈತರ ಹೃದಯ ಮಾತ್ರ ವಿಶಾಲವಾದುದು. ರೈತರು ಪೊಲೀಸರಿಗೂ ಅನ್ನ-ನೀರು ನೀಡಿ ಮಾನವೀಯತೆ ಮೆರದಿದ್ದಾರೆ ಎಂದು ತಿಳಿಸುವ ಸತೀಶ್ ಆಚಾರ್ಯರವರ ಚಿತ್ರ ಇದು.

ಕನ್ನಡದ ಪ್ರತಿಭಾವಂತ ವ್ಯಂಗ್ಯಚಿತ್ರಕಾರ ಪಿ ಮಹಮ್ಮದ್‌ರವರು ರೈತರ ಮೇಲೆ ದಾಳಿ ನಡೆಯುತ್ತಿದ್ದಾಗ ಮೋದಿ ಏನು ಮಾಡುತ್ತಿದ್ದರು ಎಂದು ಚಿತ್ರಿಸಿದ್ದಾರೆ.

ಮುಸ್ಲಿಂ ರೈತರು ನಮಾಜ್ ಮಾಡುವಾಗ ಸಿಖ್ ಯುವಕರು ಗೋಡೆಯಾಗಿ ಅವರಿಗೆ ರಕ್ಷಣೆ ನೀಡಿದ್ದು.

ಗಾಯಗೊಂಡ ಸಿಂಹದ ರೀತಿ ರೈತರನ್ನು ಚಿತ್ರಸಿರುವುದು..

ದಿ ಹಿಂದೂ ಪತ್ರಿಕೆಗಾಗಿ ಸುರೇಂದ್ರರವರು ರಚಿಸಿದ ಈ ಚಿತ್ರ ಸರ್ಕಾರದ ಕಾರ್ಯವೈಖರಿಯನ್ನು ಸಮಗ್ರವಾಗಿ ವಿಶ್ಲೇಷಿಸುತ್ತದೆ.

ಈ ರೀತಿಯ ಪರಿಣಾಮಕಾರಿ ರೈತ ಹೋರಾಟದ ಚಿತ್ರಗಳು ನಿಮ್ಮ ಗಮನಕ್ಕೆ ಬಂದಿದ್ದರೆ ಅದನ್ನು ಕಮೆಂಟ್ ಮಾಡಿ.


ಇದನ್ನೂ ಓದಿ; ರೈತರ ಹೋರಾಟವನ್ನು ಬೆಂಬಲಿಸಿದ ನಟಿ ಪ್ರಿಯಾಂಕಾ ಚೋಪ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...