Homeಮುಖಪುಟಕಾರ್ಟೂನಿಸ್ಟ್‌ಗಳ ಕಣ್ಣಲ್ಲಿ ರೈತ ಹೋರಾಟ: ವೈರಲ್ ಆದ ಹೋರಾಟದ ಚಿತ್ರಗಳು

ಕಾರ್ಟೂನಿಸ್ಟ್‌ಗಳ ಕಣ್ಣಲ್ಲಿ ರೈತ ಹೋರಾಟ: ವೈರಲ್ ಆದ ಹೋರಾಟದ ಚಿತ್ರಗಳು

ಈ ರೀತಿಯ ಪರಿಣಾಮಕಾರಿ ರೈತ ಹೋರಾಟದ ಚಿತ್ರಗಳು ನಿಮ್ಮ ಗಮನಕ್ಕೆ ಬಂದಿದ್ದರೆ ಅದನ್ನು ಕಮೆಂಟ್ ಮಾಡಿ.

- Advertisement -
- Advertisement -

ದೆಹಲಿಯಲ್ಲಿ ಅನ್ನದಾತ ರೈತರು ನಡೆಸುತ್ತಿರುವ ಧಿರೋಧಾತ್ತ ಹೋರಾಟ ಸತತ 12 ನೇ ದಿನಕ್ಕೆ ಕಾಲಿಟ್ಟಿದೆ. ವಿವಾದಾತ್ಮಕ ಕೃಷಿ ಕಾಯ್ದೆಗಳು ರೈತರನ್ನು ಬೀದಿಗೆ ತಳ್ಳಲ್ಲಿದ್ದು ಅವುಗಳನ್ನು ಸರ್ಕಾರ ಹಿಂಪಡೆಯದಿದ್ದರೆ ಹೋರಾಟ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ರೈತರು ಪಣ ತೊಟ್ಟಿದ್ದಾರೆ. ಇನ್ನೊಂದೆಡೆ ಸರ್ಕಾರ ಕಾಯ್ದೆಗಳಲ್ಲಿ ಬದಲಾವಣೆ ತರುತ್ತೇವೆಯೇ ಹೊರತು ಹಿಂಪಡೆಯುವುದಿಲ್ಲ ಎಂದು ಹಠ ಹಿಡಿದಿದೆ ಮಾತ್ರವಲ್ಲ ರೈತರ ಮೇಲೆ ತೀವ್ರ ಹಲ್ಲೆ ನಡೆಸಿ ಹೋರಾಟ ದಮನಗೊಳಿಸಲು ಮುಂದಾಗಿದೆ.

ರೈತರು ನಡೆಸುತ್ತಿರುವ ಹೋರಾಟಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ದೆಹಲಿಯಲ್ಲಿ ಹೋರಾಟನಿರತ ರೈತರನ್ನು ಬೆಂಬಲಿಸಿ ದೇಶ ವಿದೇಶಗಳಲ್ಲಿ ಸಾವಿರಾರು ಪ್ರತಿಭಟನೆಗಳು ದಾಖಲಾಗಿವೆ. ಸಾಮಾಜಿಕ ಜಾಲತಾಣದಲ್ಲಿ ನಿತ್ಯ ನಿರಂತರ ಬೆಂಬಲ ಹರಿದು ಬರುತ್ತಿದೆ. ಎಲೆಕ್ಟ್ರಾನಿಕ್ ಮಾಧ್ಯಮಗಳು ಸರ್ಕಾರದ ಪರ ಇದ್ದಾವೆ ಎಂಬ ಆರೋಪ ದಟ್ಟವಾಗಿ ಕೇಳಿಬಂದಿದೆ. ಆದರೆ ಮುದ್ರಣ ಮಾಧ್ಯಮಗಳು ರೈತರ ಹೋರಾಟವನ್ನು ಜನರಿಗೆ ಮುಟ್ಟಿಸಿವೆ. ಕಾರ್ಟೂನಿಸ್ಟ್‌ಗಳ ರೈತರ ಸಂಕಷ್ಟಗಳನ್ನು ಚಿತ್ರರೂಪದಲ್ಲಿ ವ್ಯಕ್ತಪಡಿಸಿದ್ದಾರೆ. ಕೆಲವು ಫೋಟೊ ಜರ್ನಲಿಸ್ಟ್‌ಗಳು ಹೋರಾಟದ ಕಿಚ್ಚಿನ ಫೋಟೊಗಳನ್ನು ಸೆರೆಹಿಡಿದಿದ್ದಾರೆ. ವೈರಲ್ ಆದ ಚಿತ್ರಗಳು, ಟ್ವೀಟ್‌ಗಳು ಇಲ್ಲಿವೆ ನೋಡಿ.

ಗಂಧಾಮದನ್ ಎಂಬುವವರು ಬಿಡಿಸಿರುವ ಚಿತ್ರ ಹೇಗೆ ಮೋದಿ ಸರ್ಕಾರ ರೈತರನ್ನು ಒದೆಯುತ್ತಿದೆ ಮತ್ತು ಆ ಮೂಲಕ ತಾನೂ ಪ್ರಪಾತಕ್ಕೆ ಬೀಳಲಿದೆ ಎಂಬುದನ್ನು ಪರಿಣಾಮಕಾರಿಯಾಗಿ ತಿಳಿಸುತ್ತದೆ. ಇದು ನಿನ್ನೆ ಮತ್ತು ಇಂದು ಲಕ್ಷಾಂತರ ಸಂಖ್ಯೆಯಲ್ಲಿ ಷೇರ್ ಆಗಿದೆ.

ಮಿರ್ ಸುಹೈಲ್ ಎಂಬುವವರು ಹೇಗೆ ಭಾರತೀಯ ಮಾಧ್ಯಮಗಳು ಹೋರಾಟನಿರತ ರೈತರನ್ನು ಭಯೋತ್ಪಾದಕರಂತೆ ಬಿಂಬಿಸುತ್ತಿವೆ ಎಂದು ಈ ಚಿತ್ರದ ಮೂಲಕ ತಿಳಿಸಿಕೊಟ್ಟಿದ್ದಾರೆ. ಕೆಲ ಬಿಜೆಪಿ ನಾಯಕರು ರೈತರನ್ನು ಖಲಿಸ್ತಾನಿಗಳು, ಭಯೋತ್ಪಾದಕರು ಎಂದು ಕರೆದಿದ್ದನ್ನೇ ಈ ಮಾಧ್ಯಮಗಳು ಹೇಗೆ ದಿನವಿಡೀ ತೋರಿಸಿ ರೈತರಿಗೆ ದ್ರೋಹ ಬಗೆದರು ಎಂಬುದಕ್ಕೆ ಈ ಚಿತ್ರಕ್ಕಿಂತ ಮತ್ತೊಂದು ಉದಾಹರಣೆ ಬೇಕಿಲ್ಲ. ವಾಸ್ತವದಲ್ಲಿ ಹೆಗಲ ಮೇಲೆ ನೇಗಿಲ ಹೊತ್ತ ರೈತರನ್ನು ಮಾಧ್ಯಮಗಳು ಹೆಗಲಮೇಲೆ ಬಂದೂಕು ಹೊತ್ತಿರುವಂತೆ ಚಿತ್ರಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ದೇಶ-ವಿದೇಶಗಳಲ್ಲಿ ಹೆಸರು ಗಳಿಸಿರುವ ಕರ್ನಾಟಕದ ಖ್ಯಾತ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯ ಮನ ಮಿಡಿಯುವ ಹತ್ತಾರು ಕಾರ್ಟೂನ್‌ಗಳನ್ನು ರಚಿಸಿದ್ದಾರೆ. ಅದರಲ್ಲಿ ಚಳಿಯಲ್ಲಿ ನಡುಗುತ್ತಾ ಹೋರಾಟದಲ್ಲಿ ತೊಡಗಿರುವ ರೈತರ ಬಗೆ ಇಡೀ ಭಾರತ ಹೇಗೆ ಕಾಳಜಿವಹಿಸುತ್ತದೆ ಎಂದು ಬಿಂಬಿಸುವ ಚಿತ್ರವನ್ನು ಸಾವಿರಾರು ಜನ ಹಂಚಿಕೊಂಡಿದ್ದಾರೆ.

ಹೋರಾಟನಿರತ ರೈತರ ಮೇಲೆ ಪೊಲೀಸರು ಕ್ರೂರವಾಗಿ ಥಳಿಸಿ, ಜಲಫಿರಂಗಿ, ಅಶ್ರವಾಯು ಸಿಡಿಸಿದರೂ ರೈತರ ಹೃದಯ ಮಾತ್ರ ವಿಶಾಲವಾದುದು. ರೈತರು ಪೊಲೀಸರಿಗೂ ಅನ್ನ-ನೀರು ನೀಡಿ ಮಾನವೀಯತೆ ಮೆರದಿದ್ದಾರೆ ಎಂದು ತಿಳಿಸುವ ಸತೀಶ್ ಆಚಾರ್ಯರವರ ಚಿತ್ರ ಇದು.

ಕನ್ನಡದ ಪ್ರತಿಭಾವಂತ ವ್ಯಂಗ್ಯಚಿತ್ರಕಾರ ಪಿ ಮಹಮ್ಮದ್‌ರವರು ರೈತರ ಮೇಲೆ ದಾಳಿ ನಡೆಯುತ್ತಿದ್ದಾಗ ಮೋದಿ ಏನು ಮಾಡುತ್ತಿದ್ದರು ಎಂದು ಚಿತ್ರಿಸಿದ್ದಾರೆ.

ಮುಸ್ಲಿಂ ರೈತರು ನಮಾಜ್ ಮಾಡುವಾಗ ಸಿಖ್ ಯುವಕರು ಗೋಡೆಯಾಗಿ ಅವರಿಗೆ ರಕ್ಷಣೆ ನೀಡಿದ್ದು.

ಗಾಯಗೊಂಡ ಸಿಂಹದ ರೀತಿ ರೈತರನ್ನು ಚಿತ್ರಸಿರುವುದು..

ದಿ ಹಿಂದೂ ಪತ್ರಿಕೆಗಾಗಿ ಸುರೇಂದ್ರರವರು ರಚಿಸಿದ ಈ ಚಿತ್ರ ಸರ್ಕಾರದ ಕಾರ್ಯವೈಖರಿಯನ್ನು ಸಮಗ್ರವಾಗಿ ವಿಶ್ಲೇಷಿಸುತ್ತದೆ.

ಈ ರೀತಿಯ ಪರಿಣಾಮಕಾರಿ ರೈತ ಹೋರಾಟದ ಚಿತ್ರಗಳು ನಿಮ್ಮ ಗಮನಕ್ಕೆ ಬಂದಿದ್ದರೆ ಅದನ್ನು ಕಮೆಂಟ್ ಮಾಡಿ.


ಇದನ್ನೂ ಓದಿ; ರೈತರ ಹೋರಾಟವನ್ನು ಬೆಂಬಲಿಸಿದ ನಟಿ ಪ್ರಿಯಾಂಕಾ ಚೋಪ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...