Homeಮುಖಪುಟಕಾರ್ಟೂನಿಸ್ಟ್‌ಗಳ ಕಣ್ಣಲ್ಲಿ ರೈತ ಹೋರಾಟ: ವೈರಲ್ ಆದ ಹೋರಾಟದ ಚಿತ್ರಗಳು

ಕಾರ್ಟೂನಿಸ್ಟ್‌ಗಳ ಕಣ್ಣಲ್ಲಿ ರೈತ ಹೋರಾಟ: ವೈರಲ್ ಆದ ಹೋರಾಟದ ಚಿತ್ರಗಳು

ಈ ರೀತಿಯ ಪರಿಣಾಮಕಾರಿ ರೈತ ಹೋರಾಟದ ಚಿತ್ರಗಳು ನಿಮ್ಮ ಗಮನಕ್ಕೆ ಬಂದಿದ್ದರೆ ಅದನ್ನು ಕಮೆಂಟ್ ಮಾಡಿ.

- Advertisement -
- Advertisement -

ದೆಹಲಿಯಲ್ಲಿ ಅನ್ನದಾತ ರೈತರು ನಡೆಸುತ್ತಿರುವ ಧಿರೋಧಾತ್ತ ಹೋರಾಟ ಸತತ 12 ನೇ ದಿನಕ್ಕೆ ಕಾಲಿಟ್ಟಿದೆ. ವಿವಾದಾತ್ಮಕ ಕೃಷಿ ಕಾಯ್ದೆಗಳು ರೈತರನ್ನು ಬೀದಿಗೆ ತಳ್ಳಲ್ಲಿದ್ದು ಅವುಗಳನ್ನು ಸರ್ಕಾರ ಹಿಂಪಡೆಯದಿದ್ದರೆ ಹೋರಾಟ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ರೈತರು ಪಣ ತೊಟ್ಟಿದ್ದಾರೆ. ಇನ್ನೊಂದೆಡೆ ಸರ್ಕಾರ ಕಾಯ್ದೆಗಳಲ್ಲಿ ಬದಲಾವಣೆ ತರುತ್ತೇವೆಯೇ ಹೊರತು ಹಿಂಪಡೆಯುವುದಿಲ್ಲ ಎಂದು ಹಠ ಹಿಡಿದಿದೆ ಮಾತ್ರವಲ್ಲ ರೈತರ ಮೇಲೆ ತೀವ್ರ ಹಲ್ಲೆ ನಡೆಸಿ ಹೋರಾಟ ದಮನಗೊಳಿಸಲು ಮುಂದಾಗಿದೆ.

ರೈತರು ನಡೆಸುತ್ತಿರುವ ಹೋರಾಟಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ದೆಹಲಿಯಲ್ಲಿ ಹೋರಾಟನಿರತ ರೈತರನ್ನು ಬೆಂಬಲಿಸಿ ದೇಶ ವಿದೇಶಗಳಲ್ಲಿ ಸಾವಿರಾರು ಪ್ರತಿಭಟನೆಗಳು ದಾಖಲಾಗಿವೆ. ಸಾಮಾಜಿಕ ಜಾಲತಾಣದಲ್ಲಿ ನಿತ್ಯ ನಿರಂತರ ಬೆಂಬಲ ಹರಿದು ಬರುತ್ತಿದೆ. ಎಲೆಕ್ಟ್ರಾನಿಕ್ ಮಾಧ್ಯಮಗಳು ಸರ್ಕಾರದ ಪರ ಇದ್ದಾವೆ ಎಂಬ ಆರೋಪ ದಟ್ಟವಾಗಿ ಕೇಳಿಬಂದಿದೆ. ಆದರೆ ಮುದ್ರಣ ಮಾಧ್ಯಮಗಳು ರೈತರ ಹೋರಾಟವನ್ನು ಜನರಿಗೆ ಮುಟ್ಟಿಸಿವೆ. ಕಾರ್ಟೂನಿಸ್ಟ್‌ಗಳ ರೈತರ ಸಂಕಷ್ಟಗಳನ್ನು ಚಿತ್ರರೂಪದಲ್ಲಿ ವ್ಯಕ್ತಪಡಿಸಿದ್ದಾರೆ. ಕೆಲವು ಫೋಟೊ ಜರ್ನಲಿಸ್ಟ್‌ಗಳು ಹೋರಾಟದ ಕಿಚ್ಚಿನ ಫೋಟೊಗಳನ್ನು ಸೆರೆಹಿಡಿದಿದ್ದಾರೆ. ವೈರಲ್ ಆದ ಚಿತ್ರಗಳು, ಟ್ವೀಟ್‌ಗಳು ಇಲ್ಲಿವೆ ನೋಡಿ.

ಗಂಧಾಮದನ್ ಎಂಬುವವರು ಬಿಡಿಸಿರುವ ಚಿತ್ರ ಹೇಗೆ ಮೋದಿ ಸರ್ಕಾರ ರೈತರನ್ನು ಒದೆಯುತ್ತಿದೆ ಮತ್ತು ಆ ಮೂಲಕ ತಾನೂ ಪ್ರಪಾತಕ್ಕೆ ಬೀಳಲಿದೆ ಎಂಬುದನ್ನು ಪರಿಣಾಮಕಾರಿಯಾಗಿ ತಿಳಿಸುತ್ತದೆ. ಇದು ನಿನ್ನೆ ಮತ್ತು ಇಂದು ಲಕ್ಷಾಂತರ ಸಂಖ್ಯೆಯಲ್ಲಿ ಷೇರ್ ಆಗಿದೆ.

ಮಿರ್ ಸುಹೈಲ್ ಎಂಬುವವರು ಹೇಗೆ ಭಾರತೀಯ ಮಾಧ್ಯಮಗಳು ಹೋರಾಟನಿರತ ರೈತರನ್ನು ಭಯೋತ್ಪಾದಕರಂತೆ ಬಿಂಬಿಸುತ್ತಿವೆ ಎಂದು ಈ ಚಿತ್ರದ ಮೂಲಕ ತಿಳಿಸಿಕೊಟ್ಟಿದ್ದಾರೆ. ಕೆಲ ಬಿಜೆಪಿ ನಾಯಕರು ರೈತರನ್ನು ಖಲಿಸ್ತಾನಿಗಳು, ಭಯೋತ್ಪಾದಕರು ಎಂದು ಕರೆದಿದ್ದನ್ನೇ ಈ ಮಾಧ್ಯಮಗಳು ಹೇಗೆ ದಿನವಿಡೀ ತೋರಿಸಿ ರೈತರಿಗೆ ದ್ರೋಹ ಬಗೆದರು ಎಂಬುದಕ್ಕೆ ಈ ಚಿತ್ರಕ್ಕಿಂತ ಮತ್ತೊಂದು ಉದಾಹರಣೆ ಬೇಕಿಲ್ಲ. ವಾಸ್ತವದಲ್ಲಿ ಹೆಗಲ ಮೇಲೆ ನೇಗಿಲ ಹೊತ್ತ ರೈತರನ್ನು ಮಾಧ್ಯಮಗಳು ಹೆಗಲಮೇಲೆ ಬಂದೂಕು ಹೊತ್ತಿರುವಂತೆ ಚಿತ್ರಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ದೇಶ-ವಿದೇಶಗಳಲ್ಲಿ ಹೆಸರು ಗಳಿಸಿರುವ ಕರ್ನಾಟಕದ ಖ್ಯಾತ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯ ಮನ ಮಿಡಿಯುವ ಹತ್ತಾರು ಕಾರ್ಟೂನ್‌ಗಳನ್ನು ರಚಿಸಿದ್ದಾರೆ. ಅದರಲ್ಲಿ ಚಳಿಯಲ್ಲಿ ನಡುಗುತ್ತಾ ಹೋರಾಟದಲ್ಲಿ ತೊಡಗಿರುವ ರೈತರ ಬಗೆ ಇಡೀ ಭಾರತ ಹೇಗೆ ಕಾಳಜಿವಹಿಸುತ್ತದೆ ಎಂದು ಬಿಂಬಿಸುವ ಚಿತ್ರವನ್ನು ಸಾವಿರಾರು ಜನ ಹಂಚಿಕೊಂಡಿದ್ದಾರೆ.

ಹೋರಾಟನಿರತ ರೈತರ ಮೇಲೆ ಪೊಲೀಸರು ಕ್ರೂರವಾಗಿ ಥಳಿಸಿ, ಜಲಫಿರಂಗಿ, ಅಶ್ರವಾಯು ಸಿಡಿಸಿದರೂ ರೈತರ ಹೃದಯ ಮಾತ್ರ ವಿಶಾಲವಾದುದು. ರೈತರು ಪೊಲೀಸರಿಗೂ ಅನ್ನ-ನೀರು ನೀಡಿ ಮಾನವೀಯತೆ ಮೆರದಿದ್ದಾರೆ ಎಂದು ತಿಳಿಸುವ ಸತೀಶ್ ಆಚಾರ್ಯರವರ ಚಿತ್ರ ಇದು.

ಕನ್ನಡದ ಪ್ರತಿಭಾವಂತ ವ್ಯಂಗ್ಯಚಿತ್ರಕಾರ ಪಿ ಮಹಮ್ಮದ್‌ರವರು ರೈತರ ಮೇಲೆ ದಾಳಿ ನಡೆಯುತ್ತಿದ್ದಾಗ ಮೋದಿ ಏನು ಮಾಡುತ್ತಿದ್ದರು ಎಂದು ಚಿತ್ರಿಸಿದ್ದಾರೆ.

ಮುಸ್ಲಿಂ ರೈತರು ನಮಾಜ್ ಮಾಡುವಾಗ ಸಿಖ್ ಯುವಕರು ಗೋಡೆಯಾಗಿ ಅವರಿಗೆ ರಕ್ಷಣೆ ನೀಡಿದ್ದು.

ಗಾಯಗೊಂಡ ಸಿಂಹದ ರೀತಿ ರೈತರನ್ನು ಚಿತ್ರಸಿರುವುದು..

ದಿ ಹಿಂದೂ ಪತ್ರಿಕೆಗಾಗಿ ಸುರೇಂದ್ರರವರು ರಚಿಸಿದ ಈ ಚಿತ್ರ ಸರ್ಕಾರದ ಕಾರ್ಯವೈಖರಿಯನ್ನು ಸಮಗ್ರವಾಗಿ ವಿಶ್ಲೇಷಿಸುತ್ತದೆ.

ಈ ರೀತಿಯ ಪರಿಣಾಮಕಾರಿ ರೈತ ಹೋರಾಟದ ಚಿತ್ರಗಳು ನಿಮ್ಮ ಗಮನಕ್ಕೆ ಬಂದಿದ್ದರೆ ಅದನ್ನು ಕಮೆಂಟ್ ಮಾಡಿ.


ಇದನ್ನೂ ಓದಿ; ರೈತರ ಹೋರಾಟವನ್ನು ಬೆಂಬಲಿಸಿದ ನಟಿ ಪ್ರಿಯಾಂಕಾ ಚೋಪ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...