Homeಮುಖಪುಟಹರಿಯಾಣದ ಈ ಹಳ್ಳಿಯಲ್ಲಿ ನಿತ್ಯವೂ ರೈತ ಹೋರಾಟ: ಹೊರರಾಜ್ಯಗಳಿಂದಲೂ ಬರುವ ಪ್ರತಿಭಟನಾಕಾರರು

ಹರಿಯಾಣದ ಈ ಹಳ್ಳಿಯಲ್ಲಿ ನಿತ್ಯವೂ ರೈತ ಹೋರಾಟ: ಹೊರರಾಜ್ಯಗಳಿಂದಲೂ ಬರುವ ಪ್ರತಿಭಟನಾಕಾರರು

ಪ್ರತಿದಿನ ರೈತರ ಹೋರಾಟಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮದ ಒಬ್ಬರು ಉಪವಾಸ ಸತ್ಯಾಗ್ರಹ ಆಚರಿಸಿತ್ತಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ದೆಹಲಿಯ ಗಡಿಗಳಲ್ಲಿ ಲಕ್ಷಾಂತರ ರೈತರು ಹೋರಾಡುತ್ತಿರುವುದು ನಿಮಗೆ ಗೊತ್ತೆ ಇದೆ. ಅದೇ ಮಾದರಿಯಲ್ಲಿ ಹರಿಯಾಣದ ಪಲ್ವಾಲ್ ಜಿಲ್ಲೆಯ ಬ್ರಿಸ್ಲಾ ಗ್ರಾಮದಲ್ಲಿಯೂ ಸಹ ಕಳೆದ 65 ದಿನಗಳಿಂದ ರೈತರು ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸುತ್ತಿದ್ದಾರೆ. ಈ ಪ್ರತಿಭಟನಾ ಸ್ಥಳಕ್ಕೆ ಹೊರರಾಜ್ಯಗಳಿಂದಲೂ ಪ್ರತಿಭಟನಾಕಾರರು ಬಂದು ಭಾಗವಹಿಸಿ ಬೆಂಬಲ ನೀಡುತ್ತಿದ್ದಾರೆ.

ಬ್ರಿಸ್ಲಾ ಗ್ರಾಮದ ರಸ್ತೆಯಲ್ಲಿ ದೆಹಲಿ ಮಾದರಿಯಲ್ಲಿಯೇ ಟೆಂಟ್ ಒಂದನ್ನು ಹಾಕಲಾಗಿದೆ. ರಾಷ್ಟ್ರೀಯ ಕಿಸಾನ್ – ಮಜ್ದೂರ್ ಮಹಾಸಂಘವು ಸಂಯುಕ್ತ ಕಿಸಾನ್ ಮೋರ್ಚಾ ನೇತೃತ್ವದಲ್ಲಿ ಪ್ರತಿದಿನವೂ ಪ್ರತಿಭಟನೆ ನಡೆಯುತ್ತಿದ್ದು, ರಾತ್ರಿವೇಳೆ ಕೆಲವರು ಅಲ್ಲಿಯೇ ಉಳಿಯುತ್ತಿದ್ದಾರೆ.

ಗ್ರಾಮದ ಸರಪಂಚರು ಸಹ ಪ್ರತಿದಿನ ಪ್ರತಿಭಟನೆಯಲ್ಲಿ ಭಾಗವಹಿಸುತ್ತಾರೆ. ಅವರ ನೇತೃತ್ವದಲ್ಲಿಯೇ ಹೋರಾಟ ಆರಂಭವಾಗಿದೆ. ಅಲ್ಲದೆ ಪ್ರತಿದಿನ ರೈತರ ಹೋರಾಟಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮದ ಒಬ್ಬರು ಉಪವಾಸ ಸತ್ಯಾಗ್ರಹ ಆಚರಿಸಿತ್ತಾರೆ. ಈಗಾಗಲೇ 60ಕ್ಕು ಹೆಚ್ಚು ಜನರು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ ಎಂದು ಅಲ್ಲಿನ ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಇನ್ನು ಇಲ್ಲಿನ ಪ್ರತಿಭಟನೆಗೆ ಗುಜರಾತ್, ರಾಜಸ್ಥಾನದ ಜನರೂ ಸಹ ಬಂದು ಬೆಂಬಲ ವ್ಯಕ್ತಪಡಿಸಿದ್ದಾರೆ. ಪಲ್ವಾಲ್‌ನ ಹೈವೆಗಳಲ್ಲಿ ಇಂತಹ ಹಲವು ಪ್ರತಿಭಟನೆಗಳು ನಡೆಯುತ್ತಿವೆ. ಪಲ್ವಾಲ್‌ಗೆ ಭೇಟಿ ಕೊಟ್ಟವರೆಲ್ಲಾ ಇಲ್ಲಿಗೂ ಬರುತ್ತಾರೆ.

ಗುಜರಾತ್‌ನ ಸೂರತ್ ನಿಂದ ಬಂದಿರುವ ತಬ್ಸುಮ್ ಚೌಹಾಣ್‌ರವರು ಹೋರಾಟದ ಕುರಿತು ಮಾತನಾಡಿ “ನಾನು ಈ ಆಂದೋಲನವನ್ನು ಬೆಂಬಲಿಸಲು ಬಂದಿದ್ದೇನೆ, ಏಕೆಂದರೆ ನಾನು ರೈತನ ಮಗಳು. ನಮ್ಮ ದೇಶದಲ್ಲಿ ರೈತ ಮತ್ತು ಕೃಷಿ ಸುರಕ್ಷಿತವಾಗಿಲ್ಲದಿದ್ದರೆ ನಮ್ಮ ದೇಶ ಸುರಕ್ಷಿತವಾಗಿರುವುದು ಹೇಗೆ? ನಮ್ಮ ಪ್ರಧಾನಿ ಮೋದಿಯವರು ಅಂಬಾನಿ ಮತ್ತು ಅದಾನಿಯನ್ನು ಬೆಳೆಸುವುದಕ್ಕಾಗಿ ಈ ಕಾಯ್ದೆಗಳನ್ನು ತಂದಿದ್ದಾರೆ. ಇನ್ನು ಅಂಬಾನಿ ಅದಾನಿಯವರು ಸಿಮ್‌ ಕಾರ್ಡ್ ತರ ಆಹಾರ ತಯಾರಿಸುವ ಉಪಕರಣ ಕಂಡುಹಿಡಿಯಬಲ್ಲರೆ? ಕೃಷಿ ಮಾಡದೇ ಕೇವಲ ಹಣ ಹಾಕಿದರೆ ಆಹಾರ ಕೊಡುವಂತ ಉಪಕರಣ ತಯಾರಿಸುತ್ತಾರೆಯೇ?” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರೈತರು ಇಲ್ಲದಿದ್ದರೆ ಸರ್ಕಾರ ಮಣ್ಣು ತಿನ್ನಬೇಕಾಗುತ್ತದೆ. ಇಂದು ರೈತರ ಕಷ್ಟ ಗೊತ್ತಿಲ್ಲದವರು ಕೃಷಿ ಮಂತ್ರಿಗಳಾಗಿದ್ದಾರೆ. ಇನ್ನು ಮೋದಿಯವರು ಮನ್ ಕಿ ಬಾತ್ ಆಡುತ್ತಾರೆಯೇ ಹೊರತು ಜನರ ಮಾತು ಕೇಳಿಸಿಕೊಳ್ಳುವುದಿಲ್ಲ. ನಾನು ಒಬ್ಬ ರೈತನ ಮಗಳು. ನನ್ನ ಮಾತನ್ನು ಅವರು ಕೇಳಿಸಿಕೊಳ್ಳಬೇಕು. ರೈತರು ಸಣ್ಣ ವ್ಯಕ್ತಿಗಳಲ್ಲ. ಅವರು ಬೆಳೆಯದೆ ಇದ್ದರೆ ನಾವು ಏನು ತಿನ್ನಲು ಸಾಧ್ಯವಿಲ್ಲ. ನೀವು ಆಹಾರವನ್ನು ಗೌರವಿಸುವುದಾದರೆ ರೈತರನ್ನು ಗೌರವಿಸಬೇಕು. ಕೇಂದ್ರ ಸರ್ಕಾರ ರೈತರೊಂದಿಗೆ ಮಾತನಾಡುತ್ತೇವೆ ಅನ್ನುತ್ತಾರೆ ಈ ಕಾನೂನುಗಳನ್ನು ತರುವ ಮುಂಚೆಯೇ ಮಾತನಾಡಬಹುದಿತ್ತಲ್ಲವೇ? ಈಗಲಾದರೂ ಅವರು ರೈತನ ಮಾತುಗಳನ್ನು ಕೇಳಬೇಕು” ಎಂದು ಒತ್ತಾಯಿಸಿದ್ದಾರೆ.

ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತ‌ ಹೋರಾಟವನ್ನು ಬೆಂಬಲಿಸಿ ಹರಿಯಾಣದ ಪಲ್ವಾಲ್‌ ಜಿಲ್ಲೆಯ ಹೈವೆಯಲ್ಲಿಯೂ ಸಹ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ ತೀವ್ರಗೊಳಿಸಲು ನಿರ್ಧಾರ: ದೇಶವ್ಯಾಪಿ ‘ಸಂಚಾರ ಸ್ಥಗಿತ ಚಳವಳಿ’ಗೆ ಕರೆರೈತ ಚಳುವಳಿಯನ್ನು ಕೆಣಕುವ ಸಂಚು ಈಗ ಬಹಿರಂಗವಾಗಿದೆ - ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....