Homeಮುಖಪುಟಹರಿಯಾಣದ ಈ ಹಳ್ಳಿಯಲ್ಲಿ ನಿತ್ಯವೂ ರೈತ ಹೋರಾಟ: ಹೊರರಾಜ್ಯಗಳಿಂದಲೂ ಬರುವ ಪ್ರತಿಭಟನಾಕಾರರು

ಹರಿಯಾಣದ ಈ ಹಳ್ಳಿಯಲ್ಲಿ ನಿತ್ಯವೂ ರೈತ ಹೋರಾಟ: ಹೊರರಾಜ್ಯಗಳಿಂದಲೂ ಬರುವ ಪ್ರತಿಭಟನಾಕಾರರು

ಪ್ರತಿದಿನ ರೈತರ ಹೋರಾಟಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮದ ಒಬ್ಬರು ಉಪವಾಸ ಸತ್ಯಾಗ್ರಹ ಆಚರಿಸಿತ್ತಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ದೆಹಲಿಯ ಗಡಿಗಳಲ್ಲಿ ಲಕ್ಷಾಂತರ ರೈತರು ಹೋರಾಡುತ್ತಿರುವುದು ನಿಮಗೆ ಗೊತ್ತೆ ಇದೆ. ಅದೇ ಮಾದರಿಯಲ್ಲಿ ಹರಿಯಾಣದ ಪಲ್ವಾಲ್ ಜಿಲ್ಲೆಯ ಬ್ರಿಸ್ಲಾ ಗ್ರಾಮದಲ್ಲಿಯೂ ಸಹ ಕಳೆದ 65 ದಿನಗಳಿಂದ ರೈತರು ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸುತ್ತಿದ್ದಾರೆ. ಈ ಪ್ರತಿಭಟನಾ ಸ್ಥಳಕ್ಕೆ ಹೊರರಾಜ್ಯಗಳಿಂದಲೂ ಪ್ರತಿಭಟನಾಕಾರರು ಬಂದು ಭಾಗವಹಿಸಿ ಬೆಂಬಲ ನೀಡುತ್ತಿದ್ದಾರೆ.

ಬ್ರಿಸ್ಲಾ ಗ್ರಾಮದ ರಸ್ತೆಯಲ್ಲಿ ದೆಹಲಿ ಮಾದರಿಯಲ್ಲಿಯೇ ಟೆಂಟ್ ಒಂದನ್ನು ಹಾಕಲಾಗಿದೆ. ರಾಷ್ಟ್ರೀಯ ಕಿಸಾನ್ – ಮಜ್ದೂರ್ ಮಹಾಸಂಘವು ಸಂಯುಕ್ತ ಕಿಸಾನ್ ಮೋರ್ಚಾ ನೇತೃತ್ವದಲ್ಲಿ ಪ್ರತಿದಿನವೂ ಪ್ರತಿಭಟನೆ ನಡೆಯುತ್ತಿದ್ದು, ರಾತ್ರಿವೇಳೆ ಕೆಲವರು ಅಲ್ಲಿಯೇ ಉಳಿಯುತ್ತಿದ್ದಾರೆ.

ಗ್ರಾಮದ ಸರಪಂಚರು ಸಹ ಪ್ರತಿದಿನ ಪ್ರತಿಭಟನೆಯಲ್ಲಿ ಭಾಗವಹಿಸುತ್ತಾರೆ. ಅವರ ನೇತೃತ್ವದಲ್ಲಿಯೇ ಹೋರಾಟ ಆರಂಭವಾಗಿದೆ. ಅಲ್ಲದೆ ಪ್ರತಿದಿನ ರೈತರ ಹೋರಾಟಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮದ ಒಬ್ಬರು ಉಪವಾಸ ಸತ್ಯಾಗ್ರಹ ಆಚರಿಸಿತ್ತಾರೆ. ಈಗಾಗಲೇ 60ಕ್ಕು ಹೆಚ್ಚು ಜನರು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ ಎಂದು ಅಲ್ಲಿನ ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಇನ್ನು ಇಲ್ಲಿನ ಪ್ರತಿಭಟನೆಗೆ ಗುಜರಾತ್, ರಾಜಸ್ಥಾನದ ಜನರೂ ಸಹ ಬಂದು ಬೆಂಬಲ ವ್ಯಕ್ತಪಡಿಸಿದ್ದಾರೆ. ಪಲ್ವಾಲ್‌ನ ಹೈವೆಗಳಲ್ಲಿ ಇಂತಹ ಹಲವು ಪ್ರತಿಭಟನೆಗಳು ನಡೆಯುತ್ತಿವೆ. ಪಲ್ವಾಲ್‌ಗೆ ಭೇಟಿ ಕೊಟ್ಟವರೆಲ್ಲಾ ಇಲ್ಲಿಗೂ ಬರುತ್ತಾರೆ.

ಗುಜರಾತ್‌ನ ಸೂರತ್ ನಿಂದ ಬಂದಿರುವ ತಬ್ಸುಮ್ ಚೌಹಾಣ್‌ರವರು ಹೋರಾಟದ ಕುರಿತು ಮಾತನಾಡಿ “ನಾನು ಈ ಆಂದೋಲನವನ್ನು ಬೆಂಬಲಿಸಲು ಬಂದಿದ್ದೇನೆ, ಏಕೆಂದರೆ ನಾನು ರೈತನ ಮಗಳು. ನಮ್ಮ ದೇಶದಲ್ಲಿ ರೈತ ಮತ್ತು ಕೃಷಿ ಸುರಕ್ಷಿತವಾಗಿಲ್ಲದಿದ್ದರೆ ನಮ್ಮ ದೇಶ ಸುರಕ್ಷಿತವಾಗಿರುವುದು ಹೇಗೆ? ನಮ್ಮ ಪ್ರಧಾನಿ ಮೋದಿಯವರು ಅಂಬಾನಿ ಮತ್ತು ಅದಾನಿಯನ್ನು ಬೆಳೆಸುವುದಕ್ಕಾಗಿ ಈ ಕಾಯ್ದೆಗಳನ್ನು ತಂದಿದ್ದಾರೆ. ಇನ್ನು ಅಂಬಾನಿ ಅದಾನಿಯವರು ಸಿಮ್‌ ಕಾರ್ಡ್ ತರ ಆಹಾರ ತಯಾರಿಸುವ ಉಪಕರಣ ಕಂಡುಹಿಡಿಯಬಲ್ಲರೆ? ಕೃಷಿ ಮಾಡದೇ ಕೇವಲ ಹಣ ಹಾಕಿದರೆ ಆಹಾರ ಕೊಡುವಂತ ಉಪಕರಣ ತಯಾರಿಸುತ್ತಾರೆಯೇ?” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರೈತರು ಇಲ್ಲದಿದ್ದರೆ ಸರ್ಕಾರ ಮಣ್ಣು ತಿನ್ನಬೇಕಾಗುತ್ತದೆ. ಇಂದು ರೈತರ ಕಷ್ಟ ಗೊತ್ತಿಲ್ಲದವರು ಕೃಷಿ ಮಂತ್ರಿಗಳಾಗಿದ್ದಾರೆ. ಇನ್ನು ಮೋದಿಯವರು ಮನ್ ಕಿ ಬಾತ್ ಆಡುತ್ತಾರೆಯೇ ಹೊರತು ಜನರ ಮಾತು ಕೇಳಿಸಿಕೊಳ್ಳುವುದಿಲ್ಲ. ನಾನು ಒಬ್ಬ ರೈತನ ಮಗಳು. ನನ್ನ ಮಾತನ್ನು ಅವರು ಕೇಳಿಸಿಕೊಳ್ಳಬೇಕು. ರೈತರು ಸಣ್ಣ ವ್ಯಕ್ತಿಗಳಲ್ಲ. ಅವರು ಬೆಳೆಯದೆ ಇದ್ದರೆ ನಾವು ಏನು ತಿನ್ನಲು ಸಾಧ್ಯವಿಲ್ಲ. ನೀವು ಆಹಾರವನ್ನು ಗೌರವಿಸುವುದಾದರೆ ರೈತರನ್ನು ಗೌರವಿಸಬೇಕು. ಕೇಂದ್ರ ಸರ್ಕಾರ ರೈತರೊಂದಿಗೆ ಮಾತನಾಡುತ್ತೇವೆ ಅನ್ನುತ್ತಾರೆ ಈ ಕಾನೂನುಗಳನ್ನು ತರುವ ಮುಂಚೆಯೇ ಮಾತನಾಡಬಹುದಿತ್ತಲ್ಲವೇ? ಈಗಲಾದರೂ ಅವರು ರೈತನ ಮಾತುಗಳನ್ನು ಕೇಳಬೇಕು” ಎಂದು ಒತ್ತಾಯಿಸಿದ್ದಾರೆ.

ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತ‌ ಹೋರಾಟವನ್ನು ಬೆಂಬಲಿಸಿ ಹರಿಯಾಣದ ಪಲ್ವಾಲ್‌ ಜಿಲ್ಲೆಯ ಹೈವೆಯಲ್ಲಿಯೂ ಸಹ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ ತೀವ್ರಗೊಳಿಸಲು ನಿರ್ಧಾರ: ದೇಶವ್ಯಾಪಿ ‘ಸಂಚಾರ ಸ್ಥಗಿತ ಚಳವಳಿ’ಗೆ ಕರೆರೈತ ಚಳುವಳಿಯನ್ನು ಕೆಣಕುವ ಸಂಚು ಈಗ ಬಹಿರಂಗವಾಗಿದೆ - ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...