Homeಮುಖಪುಟಹರಿಯಾಣದ ಈ ಹಳ್ಳಿಯಲ್ಲಿ ನಿತ್ಯವೂ ರೈತ ಹೋರಾಟ: ಹೊರರಾಜ್ಯಗಳಿಂದಲೂ ಬರುವ ಪ್ರತಿಭಟನಾಕಾರರು

ಹರಿಯಾಣದ ಈ ಹಳ್ಳಿಯಲ್ಲಿ ನಿತ್ಯವೂ ರೈತ ಹೋರಾಟ: ಹೊರರಾಜ್ಯಗಳಿಂದಲೂ ಬರುವ ಪ್ರತಿಭಟನಾಕಾರರು

ಪ್ರತಿದಿನ ರೈತರ ಹೋರಾಟಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮದ ಒಬ್ಬರು ಉಪವಾಸ ಸತ್ಯಾಗ್ರಹ ಆಚರಿಸಿತ್ತಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ದೆಹಲಿಯ ಗಡಿಗಳಲ್ಲಿ ಲಕ್ಷಾಂತರ ರೈತರು ಹೋರಾಡುತ್ತಿರುವುದು ನಿಮಗೆ ಗೊತ್ತೆ ಇದೆ. ಅದೇ ಮಾದರಿಯಲ್ಲಿ ಹರಿಯಾಣದ ಪಲ್ವಾಲ್ ಜಿಲ್ಲೆಯ ಬ್ರಿಸ್ಲಾ ಗ್ರಾಮದಲ್ಲಿಯೂ ಸಹ ಕಳೆದ 65 ದಿನಗಳಿಂದ ರೈತರು ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸುತ್ತಿದ್ದಾರೆ. ಈ ಪ್ರತಿಭಟನಾ ಸ್ಥಳಕ್ಕೆ ಹೊರರಾಜ್ಯಗಳಿಂದಲೂ ಪ್ರತಿಭಟನಾಕಾರರು ಬಂದು ಭಾಗವಹಿಸಿ ಬೆಂಬಲ ನೀಡುತ್ತಿದ್ದಾರೆ.

ಬ್ರಿಸ್ಲಾ ಗ್ರಾಮದ ರಸ್ತೆಯಲ್ಲಿ ದೆಹಲಿ ಮಾದರಿಯಲ್ಲಿಯೇ ಟೆಂಟ್ ಒಂದನ್ನು ಹಾಕಲಾಗಿದೆ. ರಾಷ್ಟ್ರೀಯ ಕಿಸಾನ್ – ಮಜ್ದೂರ್ ಮಹಾಸಂಘವು ಸಂಯುಕ್ತ ಕಿಸಾನ್ ಮೋರ್ಚಾ ನೇತೃತ್ವದಲ್ಲಿ ಪ್ರತಿದಿನವೂ ಪ್ರತಿಭಟನೆ ನಡೆಯುತ್ತಿದ್ದು, ರಾತ್ರಿವೇಳೆ ಕೆಲವರು ಅಲ್ಲಿಯೇ ಉಳಿಯುತ್ತಿದ್ದಾರೆ.

ಗ್ರಾಮದ ಸರಪಂಚರು ಸಹ ಪ್ರತಿದಿನ ಪ್ರತಿಭಟನೆಯಲ್ಲಿ ಭಾಗವಹಿಸುತ್ತಾರೆ. ಅವರ ನೇತೃತ್ವದಲ್ಲಿಯೇ ಹೋರಾಟ ಆರಂಭವಾಗಿದೆ. ಅಲ್ಲದೆ ಪ್ರತಿದಿನ ರೈತರ ಹೋರಾಟಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮದ ಒಬ್ಬರು ಉಪವಾಸ ಸತ್ಯಾಗ್ರಹ ಆಚರಿಸಿತ್ತಾರೆ. ಈಗಾಗಲೇ 60ಕ್ಕು ಹೆಚ್ಚು ಜನರು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ ಎಂದು ಅಲ್ಲಿನ ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಇನ್ನು ಇಲ್ಲಿನ ಪ್ರತಿಭಟನೆಗೆ ಗುಜರಾತ್, ರಾಜಸ್ಥಾನದ ಜನರೂ ಸಹ ಬಂದು ಬೆಂಬಲ ವ್ಯಕ್ತಪಡಿಸಿದ್ದಾರೆ. ಪಲ್ವಾಲ್‌ನ ಹೈವೆಗಳಲ್ಲಿ ಇಂತಹ ಹಲವು ಪ್ರತಿಭಟನೆಗಳು ನಡೆಯುತ್ತಿವೆ. ಪಲ್ವಾಲ್‌ಗೆ ಭೇಟಿ ಕೊಟ್ಟವರೆಲ್ಲಾ ಇಲ್ಲಿಗೂ ಬರುತ್ತಾರೆ.

ಗುಜರಾತ್‌ನ ಸೂರತ್ ನಿಂದ ಬಂದಿರುವ ತಬ್ಸುಮ್ ಚೌಹಾಣ್‌ರವರು ಹೋರಾಟದ ಕುರಿತು ಮಾತನಾಡಿ “ನಾನು ಈ ಆಂದೋಲನವನ್ನು ಬೆಂಬಲಿಸಲು ಬಂದಿದ್ದೇನೆ, ಏಕೆಂದರೆ ನಾನು ರೈತನ ಮಗಳು. ನಮ್ಮ ದೇಶದಲ್ಲಿ ರೈತ ಮತ್ತು ಕೃಷಿ ಸುರಕ್ಷಿತವಾಗಿಲ್ಲದಿದ್ದರೆ ನಮ್ಮ ದೇಶ ಸುರಕ್ಷಿತವಾಗಿರುವುದು ಹೇಗೆ? ನಮ್ಮ ಪ್ರಧಾನಿ ಮೋದಿಯವರು ಅಂಬಾನಿ ಮತ್ತು ಅದಾನಿಯನ್ನು ಬೆಳೆಸುವುದಕ್ಕಾಗಿ ಈ ಕಾಯ್ದೆಗಳನ್ನು ತಂದಿದ್ದಾರೆ. ಇನ್ನು ಅಂಬಾನಿ ಅದಾನಿಯವರು ಸಿಮ್‌ ಕಾರ್ಡ್ ತರ ಆಹಾರ ತಯಾರಿಸುವ ಉಪಕರಣ ಕಂಡುಹಿಡಿಯಬಲ್ಲರೆ? ಕೃಷಿ ಮಾಡದೇ ಕೇವಲ ಹಣ ಹಾಕಿದರೆ ಆಹಾರ ಕೊಡುವಂತ ಉಪಕರಣ ತಯಾರಿಸುತ್ತಾರೆಯೇ?” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರೈತರು ಇಲ್ಲದಿದ್ದರೆ ಸರ್ಕಾರ ಮಣ್ಣು ತಿನ್ನಬೇಕಾಗುತ್ತದೆ. ಇಂದು ರೈತರ ಕಷ್ಟ ಗೊತ್ತಿಲ್ಲದವರು ಕೃಷಿ ಮಂತ್ರಿಗಳಾಗಿದ್ದಾರೆ. ಇನ್ನು ಮೋದಿಯವರು ಮನ್ ಕಿ ಬಾತ್ ಆಡುತ್ತಾರೆಯೇ ಹೊರತು ಜನರ ಮಾತು ಕೇಳಿಸಿಕೊಳ್ಳುವುದಿಲ್ಲ. ನಾನು ಒಬ್ಬ ರೈತನ ಮಗಳು. ನನ್ನ ಮಾತನ್ನು ಅವರು ಕೇಳಿಸಿಕೊಳ್ಳಬೇಕು. ರೈತರು ಸಣ್ಣ ವ್ಯಕ್ತಿಗಳಲ್ಲ. ಅವರು ಬೆಳೆಯದೆ ಇದ್ದರೆ ನಾವು ಏನು ತಿನ್ನಲು ಸಾಧ್ಯವಿಲ್ಲ. ನೀವು ಆಹಾರವನ್ನು ಗೌರವಿಸುವುದಾದರೆ ರೈತರನ್ನು ಗೌರವಿಸಬೇಕು. ಕೇಂದ್ರ ಸರ್ಕಾರ ರೈತರೊಂದಿಗೆ ಮಾತನಾಡುತ್ತೇವೆ ಅನ್ನುತ್ತಾರೆ ಈ ಕಾನೂನುಗಳನ್ನು ತರುವ ಮುಂಚೆಯೇ ಮಾತನಾಡಬಹುದಿತ್ತಲ್ಲವೇ? ಈಗಲಾದರೂ ಅವರು ರೈತನ ಮಾತುಗಳನ್ನು ಕೇಳಬೇಕು” ಎಂದು ಒತ್ತಾಯಿಸಿದ್ದಾರೆ.

ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತ‌ ಹೋರಾಟವನ್ನು ಬೆಂಬಲಿಸಿ ಹರಿಯಾಣದ ಪಲ್ವಾಲ್‌ ಜಿಲ್ಲೆಯ ಹೈವೆಯಲ್ಲಿಯೂ ಸಹ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ ತೀವ್ರಗೊಳಿಸಲು ನಿರ್ಧಾರ: ದೇಶವ್ಯಾಪಿ ‘ಸಂಚಾರ ಸ್ಥಗಿತ ಚಳವಳಿ’ಗೆ ಕರೆರೈತ ಚಳುವಳಿಯನ್ನು ಕೆಣಕುವ ಸಂಚು ಈಗ ಬಹಿರಂಗವಾಗಿದೆ - ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...