Homeಮುಖಪುಟಹರಿಯಾಣದ ಈ ಹಳ್ಳಿಯಲ್ಲಿ ನಿತ್ಯವೂ ರೈತ ಹೋರಾಟ: ಹೊರರಾಜ್ಯಗಳಿಂದಲೂ ಬರುವ ಪ್ರತಿಭಟನಾಕಾರರು

ಹರಿಯಾಣದ ಈ ಹಳ್ಳಿಯಲ್ಲಿ ನಿತ್ಯವೂ ರೈತ ಹೋರಾಟ: ಹೊರರಾಜ್ಯಗಳಿಂದಲೂ ಬರುವ ಪ್ರತಿಭಟನಾಕಾರರು

ಪ್ರತಿದಿನ ರೈತರ ಹೋರಾಟಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮದ ಒಬ್ಬರು ಉಪವಾಸ ಸತ್ಯಾಗ್ರಹ ಆಚರಿಸಿತ್ತಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ದೆಹಲಿಯ ಗಡಿಗಳಲ್ಲಿ ಲಕ್ಷಾಂತರ ರೈತರು ಹೋರಾಡುತ್ತಿರುವುದು ನಿಮಗೆ ಗೊತ್ತೆ ಇದೆ. ಅದೇ ಮಾದರಿಯಲ್ಲಿ ಹರಿಯಾಣದ ಪಲ್ವಾಲ್ ಜಿಲ್ಲೆಯ ಬ್ರಿಸ್ಲಾ ಗ್ರಾಮದಲ್ಲಿಯೂ ಸಹ ಕಳೆದ 65 ದಿನಗಳಿಂದ ರೈತರು ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸುತ್ತಿದ್ದಾರೆ. ಈ ಪ್ರತಿಭಟನಾ ಸ್ಥಳಕ್ಕೆ ಹೊರರಾಜ್ಯಗಳಿಂದಲೂ ಪ್ರತಿಭಟನಾಕಾರರು ಬಂದು ಭಾಗವಹಿಸಿ ಬೆಂಬಲ ನೀಡುತ್ತಿದ್ದಾರೆ.

ಬ್ರಿಸ್ಲಾ ಗ್ರಾಮದ ರಸ್ತೆಯಲ್ಲಿ ದೆಹಲಿ ಮಾದರಿಯಲ್ಲಿಯೇ ಟೆಂಟ್ ಒಂದನ್ನು ಹಾಕಲಾಗಿದೆ. ರಾಷ್ಟ್ರೀಯ ಕಿಸಾನ್ – ಮಜ್ದೂರ್ ಮಹಾಸಂಘವು ಸಂಯುಕ್ತ ಕಿಸಾನ್ ಮೋರ್ಚಾ ನೇತೃತ್ವದಲ್ಲಿ ಪ್ರತಿದಿನವೂ ಪ್ರತಿಭಟನೆ ನಡೆಯುತ್ತಿದ್ದು, ರಾತ್ರಿವೇಳೆ ಕೆಲವರು ಅಲ್ಲಿಯೇ ಉಳಿಯುತ್ತಿದ್ದಾರೆ.

ಗ್ರಾಮದ ಸರಪಂಚರು ಸಹ ಪ್ರತಿದಿನ ಪ್ರತಿಭಟನೆಯಲ್ಲಿ ಭಾಗವಹಿಸುತ್ತಾರೆ. ಅವರ ನೇತೃತ್ವದಲ್ಲಿಯೇ ಹೋರಾಟ ಆರಂಭವಾಗಿದೆ. ಅಲ್ಲದೆ ಪ್ರತಿದಿನ ರೈತರ ಹೋರಾಟಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮದ ಒಬ್ಬರು ಉಪವಾಸ ಸತ್ಯಾಗ್ರಹ ಆಚರಿಸಿತ್ತಾರೆ. ಈಗಾಗಲೇ 60ಕ್ಕು ಹೆಚ್ಚು ಜನರು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ ಎಂದು ಅಲ್ಲಿನ ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಇನ್ನು ಇಲ್ಲಿನ ಪ್ರತಿಭಟನೆಗೆ ಗುಜರಾತ್, ರಾಜಸ್ಥಾನದ ಜನರೂ ಸಹ ಬಂದು ಬೆಂಬಲ ವ್ಯಕ್ತಪಡಿಸಿದ್ದಾರೆ. ಪಲ್ವಾಲ್‌ನ ಹೈವೆಗಳಲ್ಲಿ ಇಂತಹ ಹಲವು ಪ್ರತಿಭಟನೆಗಳು ನಡೆಯುತ್ತಿವೆ. ಪಲ್ವಾಲ್‌ಗೆ ಭೇಟಿ ಕೊಟ್ಟವರೆಲ್ಲಾ ಇಲ್ಲಿಗೂ ಬರುತ್ತಾರೆ.

ಗುಜರಾತ್‌ನ ಸೂರತ್ ನಿಂದ ಬಂದಿರುವ ತಬ್ಸುಮ್ ಚೌಹಾಣ್‌ರವರು ಹೋರಾಟದ ಕುರಿತು ಮಾತನಾಡಿ “ನಾನು ಈ ಆಂದೋಲನವನ್ನು ಬೆಂಬಲಿಸಲು ಬಂದಿದ್ದೇನೆ, ಏಕೆಂದರೆ ನಾನು ರೈತನ ಮಗಳು. ನಮ್ಮ ದೇಶದಲ್ಲಿ ರೈತ ಮತ್ತು ಕೃಷಿ ಸುರಕ್ಷಿತವಾಗಿಲ್ಲದಿದ್ದರೆ ನಮ್ಮ ದೇಶ ಸುರಕ್ಷಿತವಾಗಿರುವುದು ಹೇಗೆ? ನಮ್ಮ ಪ್ರಧಾನಿ ಮೋದಿಯವರು ಅಂಬಾನಿ ಮತ್ತು ಅದಾನಿಯನ್ನು ಬೆಳೆಸುವುದಕ್ಕಾಗಿ ಈ ಕಾಯ್ದೆಗಳನ್ನು ತಂದಿದ್ದಾರೆ. ಇನ್ನು ಅಂಬಾನಿ ಅದಾನಿಯವರು ಸಿಮ್‌ ಕಾರ್ಡ್ ತರ ಆಹಾರ ತಯಾರಿಸುವ ಉಪಕರಣ ಕಂಡುಹಿಡಿಯಬಲ್ಲರೆ? ಕೃಷಿ ಮಾಡದೇ ಕೇವಲ ಹಣ ಹಾಕಿದರೆ ಆಹಾರ ಕೊಡುವಂತ ಉಪಕರಣ ತಯಾರಿಸುತ್ತಾರೆಯೇ?” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರೈತರು ಇಲ್ಲದಿದ್ದರೆ ಸರ್ಕಾರ ಮಣ್ಣು ತಿನ್ನಬೇಕಾಗುತ್ತದೆ. ಇಂದು ರೈತರ ಕಷ್ಟ ಗೊತ್ತಿಲ್ಲದವರು ಕೃಷಿ ಮಂತ್ರಿಗಳಾಗಿದ್ದಾರೆ. ಇನ್ನು ಮೋದಿಯವರು ಮನ್ ಕಿ ಬಾತ್ ಆಡುತ್ತಾರೆಯೇ ಹೊರತು ಜನರ ಮಾತು ಕೇಳಿಸಿಕೊಳ್ಳುವುದಿಲ್ಲ. ನಾನು ಒಬ್ಬ ರೈತನ ಮಗಳು. ನನ್ನ ಮಾತನ್ನು ಅವರು ಕೇಳಿಸಿಕೊಳ್ಳಬೇಕು. ರೈತರು ಸಣ್ಣ ವ್ಯಕ್ತಿಗಳಲ್ಲ. ಅವರು ಬೆಳೆಯದೆ ಇದ್ದರೆ ನಾವು ಏನು ತಿನ್ನಲು ಸಾಧ್ಯವಿಲ್ಲ. ನೀವು ಆಹಾರವನ್ನು ಗೌರವಿಸುವುದಾದರೆ ರೈತರನ್ನು ಗೌರವಿಸಬೇಕು. ಕೇಂದ್ರ ಸರ್ಕಾರ ರೈತರೊಂದಿಗೆ ಮಾತನಾಡುತ್ತೇವೆ ಅನ್ನುತ್ತಾರೆ ಈ ಕಾನೂನುಗಳನ್ನು ತರುವ ಮುಂಚೆಯೇ ಮಾತನಾಡಬಹುದಿತ್ತಲ್ಲವೇ? ಈಗಲಾದರೂ ಅವರು ರೈತನ ಮಾತುಗಳನ್ನು ಕೇಳಬೇಕು” ಎಂದು ಒತ್ತಾಯಿಸಿದ್ದಾರೆ.

ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತ‌ ಹೋರಾಟವನ್ನು ಬೆಂಬಲಿಸಿ ಹರಿಯಾಣದ ಪಲ್ವಾಲ್‌ ಜಿಲ್ಲೆಯ ಹೈವೆಯಲ್ಲಿಯೂ ಸಹ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ ತೀವ್ರಗೊಳಿಸಲು ನಿರ್ಧಾರ: ದೇಶವ್ಯಾಪಿ ‘ಸಂಚಾರ ಸ್ಥಗಿತ ಚಳವಳಿ’ಗೆ ಕರೆರೈತ ಚಳುವಳಿಯನ್ನು ಕೆಣಕುವ ಸಂಚು ಈಗ ಬಹಿರಂಗವಾಗಿದೆ - ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...