Homeಮುಖಪುಟರೈತ ಹೋರಾಟ ಪ್ರಜಾಪ್ರಭುತ್ವವನ್ನು ಬಲಗೊಳಿಸುತ್ತಿದೆ: ಹೋರಾಟಗಾರ್ತಿ ಮೇಧಾ ಪಾಟ್ಕರ್‌

ರೈತ ಹೋರಾಟ ಪ್ರಜಾಪ್ರಭುತ್ವವನ್ನು ಬಲಗೊಳಿಸುತ್ತಿದೆ: ಹೋರಾಟಗಾರ್ತಿ ಮೇಧಾ ಪಾಟ್ಕರ್‌

- Advertisement -
- Advertisement -

ಭಾನುವಾರ ಜೈಪುರ ದೆಹಲಿ ಗಡಿಯಲ್ಲಿರುವ ಶಹಜಹಾನ್‌ಪುರ್‌ ರೈತ ಹೋರಾಟ ಸ್ಥಳಕ್ಕೆ ಭೇಟಿ ನೀಡಿದ ನರ್ಮದಾ ಬಚಾವೋ ಆಂದೋಲನದ ನಾಯಕಿ ಮೇಧಾ ಪಾಟ್ಕರ್‌ ಹೋರಾಟ ನಿರತ ರೈತರಿಗೆ ಬೆಂಬಲ ಸೂಚಿಸಿ ಬಿಜೆಪಿ ನೇತೃತ್ವದ ಸರ್ಕಾರವನ್ನು ತೀವ್ರವಾಗಿ ಟೀಕಿಸಿದರು.

ರೈತ ವಿರೋಧಿ ಕಾನೂನುಗಳನ್ನು ಲಾಕ್‌ಡೌನ್‌ ಅವಧಿಯಲ್ಲಿ ಅವಸರದಲ್ಲಿ ಜಾರಿಗೆ ತಂದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮೇಧಾ ಪಾಟ್ಕರ್‌ “ಇತ್ತ ಬಿಜೆಪಿ ಸರ್ಕಾರ ಕಾನೂನುಗಳನ್ನು ಜಾರಿಗೆ ತಂದು, ಮಧ್ಯಪ್ರದೇಶದಲ್ಲಿ ಅಧಿಕಾರದಲ್ಲಿರುವ ಇದೇ ಪಕ್ಷದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌‌, ತಮ್ಮ ಉತ್ಪನ್ನಗಳನ್ನು ರಾಜ್ಯದಲ್ಲಿ ಮಾರಾಟ ಮಾಡಲು ಬರಲಿ ಅವರನ್ನು ಬಂಧಿಸಲಾಗುವುದು ಎಂದು ಹೇಳಿಕೆ ನೀಡುತ್ತಿದ್ದಾರೆ. ಇದು ಬಿಜೆಪಿ ಉದ್ದೇಶವನ್ನು ಸ್ಪಷ್ಟವಾಗಿ ತಿಳಿಸುತ್ತದೆ” ಎಂದು ಹೇಳಿದರು.

‘ಇಂಥ ಕಾನೂನು ವಿರೋಧಿಸಿ ರೈತರು ನಡೆಸಿರುವ ಈ ಮಹಾ ಹೋರಾಟ, ದೇಶದ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯುತ್ತದೆ ಮತ್ತು ಶೋಷಿತರು ದನಿ ಎತ್ತುವುದಕ್ಕೆ ನೆರವಾಗುತ್ತಿದೆ’ ಎಂದು ಹೇಳಿದರು.

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ರೈತರು ದೆಹಲಿಯ ಸಿಂಘು ಗಡಿಯಲ್ಲಿ ಸುಮಾರು ಎರಡು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದು, ಅವರಲ್ಲಿ 40 ವರ್ಷದ ರೈತರೊಬ್ಬರು ಶನಿವಾರ ವಿಷ ಸೇವಿಸಿ ಪ್ರಾಣತ್ಯಾಗ ಮಾಡಿದ್ದಾರೆ.

ಅಮರಿಂದರ್ ಸಿಂಗ್ ಎಂದು ಗುರುತಿಸಲಾಗಿರುವ ರೈತ, ಕೇಂದ್ರ ಸರ್ಕಾರವು ರೈತರ ಬೇಡಿಕೆಗಳನ್ನು ಆಲಿಸುತ್ತಿಲ್ಲ. ನನ್ನ ಸಾವು ರೈತ ಆಂದೋಲನಕ್ಕೆ ಯಶಸ್ಸನ್ನು ತರುತ್ತದೆ ಎನ್ನುವ ಕಾರಣಕ್ಕೆ ಪ್ರಾಣತ್ಯಾಗ ಮಾಡುವುದಾಗಿ ತನ್ನ ಸ್ನೇಹಿತರ ಬಳಿ ಹೇಳಿಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ.

ರೈತರ ಈ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ರೈತ ಒಕ್ಕೂಟ, ಕೇಂದ್ರ ಸರ್ಕಾರ ಮತ್ತು ಮೋದಿಯ ಮೌನವನ್ನು ಪ್ರಶ್ನಿಸಿ #FarmerSuicideModiQuiet ಎನ್ನುವ ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿದೆ. ಈ ಹ್ಯಾಶ್‌ಟ್ಯಾಗ್ ಬಳಸಿ 1,00,000 ಕ್ಕೂ ಅಧಿಕ ಜನ ಟ್ವೀಟ್ ಮಾಡಿದ್ದು, ಟ್ವಿಟರ್ ಟ್ರೆಂಡಿಂಗ್‌ನಲ್ಲಿ ಮೂರನೇ ಸ್ಥಾನದಲ್ಲಿದೆ.


ಇದನ್ನೂ ಓದಿ: ರೈತ ಹೋರಾಟದಲ್ಲಿ ಮಾವೋವಾದಿಗಳಿಲ್ಲ ಎಂದ ಗೃಹ ಸಚಿವಾಲಯ: ಬಿಜೆಪಿ ನಾಯಕನಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...