Homeಕರ್ನಾಟಕಪೆದ್ದನಹಳ್ಳಿಯಲ್ಲಿ ದಲಿತರ ಕೊಲೆ: ಲಿಂಗಾಯತ ಜಾತಿಯ ಆರೋಪಿ ಸೇರಿ ಕೆಲವರ ಬಂಧನ

ಪೆದ್ದನಹಳ್ಳಿಯಲ್ಲಿ ದಲಿತರ ಕೊಲೆ: ಲಿಂಗಾಯತ ಜಾತಿಯ ಆರೋಪಿ ಸೇರಿ ಕೆಲವರ ಬಂಧನ

- Advertisement -
- Advertisement -

ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಪೆದ್ದನಹಳ್ಳಿಯಲ್ಲಿ ಇಬ್ಬರು ದಲಿತ ಯುವಕರ ಕೊಲೆಯಾಗಿದ್ದು ಲಿಂಗಾಯತ ಸಮುದಾಯದ ಆರೋಪಿ ಸೇರಿದಂತೆ ಕೆಲವರನ್ನು ಗುಬ್ಬಿ ಪೊಲೀಸರು ಬಂಧಿಸಿದ್ದಾರೆ.

ಪೆದ್ದನಹಳ್ಳಿಯ ಪರಿಶಿಷ್ಟ ಜಾತಿ ಮಾದಿಗ ಸಮುದಾಯಕ್ಕೆ ಸೇರಿದ ಪಿ.ಎಂ.ಗಿರೀಶ್‌ (32), ಮಂಚಲದೊರೆ ಗ್ರಾಮದ ಪರಿಶಿಷ್ಟ ಪಂಗಡ ನಾಯಕ ಸಮುದಾಯಕ್ಕೆ ಸೇರಿದ ಗಿರೀಶ್‌ ಅವರನ್ನು ಕೊಲೆ ಮಾಡಿರುವ ಸಂಬಂಧ ದೂರು ಸಲ್ಲಿಕೆಯಾಗಿದ್ದು, ಪೆದ್ದನಹಳ್ಳಿ ಗ್ರಾಮದ ಲಿಂಗಾಯತ ಜಾತಿಗೆ ಸೇರಿದ ನಂದೀಶ್‌ ಮತ್ತು ಇತರ ಕೆಲವರ ವಿರುದ್ಧ ಪ್ರಕರಣ ದಾಖಲಾಗಿದೆ. ಎಫ್‌ಐಆರ್‌ನಲ್ಲಿ ನಂದೀಶ್ ಹೆಸರು ಮಾತ್ರ ಉಲ್ಲೇಖವಾಗಿದ್ದು, ಇತರರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಐಪಿಸಿ ಸೆಕ್ಷನ್‌ 302, 201 ಹಾಗೂ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆಯ ಹಿಂದಿನ ರಾತ್ರಿ ಆರೋಪಿ ನಂದೀಶ್‌, ಪೆದ್ದನಹಳ್ಳಿಯ ಪಿ.ಎಂ.ಗಿರೀಶ್‌ ಮನೆಗೆ ಬಂದು ಅವರನ್ನು ಕರೆದುಕೊಂಡು ಹೋಗಿದ್ದಾನೆ. ಆದರೆ ಶುಕ್ರವಾರ ಬೆಳಿಗ್ಗೆ ಗ್ರಾಮದ ನೀರಿನ ಕಟ್ಟೆಯಲ್ಲಿ ಗಿರೀಶ್ ಶವ ಪತ್ತೆಯಾಗಿದ್ದು, ದಾರಿಹೋಕರು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಸ್ವಲ್ಪ ದೂರದಲ್ಲಿ ಹಾಗಲವಾಡಿ ಹೋಬಳಿಯ ಮಂಚಲದೊರೆ ಗ್ರಾಮದ ಮತ್ತೊಬ್ಬ ಯುವಕ ಗಿರೀಶ್‌ ಶವ ದೊರೆತಿದೆ. ಇಬ್ಬರ ದೇಹದ ಮೇಲೂ ಗಾಯದ ಗುರುತುಗಳು ಕಂಡು ಬಂದಿವೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಪೆದ್ದನಹಳ್ಳಿಯ ಗಿರೀಶ್ ಸಹೋದರ ಪಿ.ಎಂ.ಶ್ರೀಧರ್‌ ದೂರು ನೀಡಿದ್ದು, “ನಂದೀಶ್‌ ಹಾಗೂ ಇತರರು ಸೇರಿಕೊಂಡು ಈ ಇಬ್ಬರನ್ನೂ ಕೊಂದಿದ್ದಾರೆ” ಎಂದು ಉಲ್ಲೇಖಿಸಿದ್ದಾರೆ.

ಲೇಟ್‌ ಮೂಡ್ಲಗಿರಿಯಪ್ಪ ದಂಪತಿಗೆ ಐವರು ಮಕ್ಕಳಿದ್ದು, ಮೊದಲನೆಯವರು ಶ್ರೀಧರ್‌ ಪಿ.ಎಂ., ಕೊಲೆಯಾಗಿರುವ ಗಿರೀಶ್ ಅವಿವಾಹಿತರಾಗಿದ್ದರು. ತಾಯಿ ಗೌರಮ್ಮ ಕೂಲಿ ಮಾಡಿಕೊಂಡು ಊರಿನಲ್ಲಿ ವಾಸವಿದ್ದಾರೆ.

ನಿಟ್ಟೂರು ಹೋಬಳಿ ಅದಲಗೆರೆ ಗ್ರಾಮದಲ್ಲಿ ಅಜ್ಜಿಯ ಮನೆಯಲ್ಲಿ ಸಂಸಾರ ಸಮೇತ ಪಿ.ಎಂ.ಶ್ರೀಧರ್‌ ವಾಸವಿದ್ದು, ದಿನಾಂಕ 22.04.2022ರಂದು ತಾಯಿ ಗೌರಮ್ಮನವರು ಬೆಳಿಗ್ಗೆ 6 ಗಂಟೆ ಸುಮಾರಿಗೆ ಶ್ರೀಧರ್‌ಗೆ ಕರೆ ವಿಷಯ ತಿಳಿಸಿದ್ದಾರೆ.

“ದಿನಾಂಕ 21.04.2022ರಂದು ರಾತ್ರಿ 8.30ರಿಂದ 9 ಗಂಟೆ ಸಮಯದಲ್ಲಿ ಮನೆಯ ಬಳಿ ಬಂದ ಪೆದ್ದನಹಳ್ಳಿ ನಿವಾಸಿ, ಲಿಂಗಾಯತ ಜಾತಿಗೆ ಸೇರಿದ ಪರಮೇಶ್ವರಪ್ಪನವರ ಮಗ ನಂದೀಶ್‌ ಮತ್ತು ಇತರರು ಗಿರೀಶ್‌ ಅವರನ್ನು ಮನೆಯಿಂದ ಕರೆದುಕೊಂಡು ಹೋಗಿದ್ದಾರೆ. ವಾಪಸ್ ಮನೆಗೆ ಬಂದಿರಲಿಲ್ಲ. ಸಹೋದರ ಗಿರೀಶ್‌ ಶವ ಶಿರಾ- ನೆಲ್ಲಿಗೆರೆ ರಸ್ತೆಯಲ್ಲಿನ ಪೆದ್ದನಹಳ್ಳಿ ಗ್ರಾಮ ಸಮೀಪದ ಗುಂಡಿಯ ನೀರಿನಲ್ಲಿ ಪತ್ತೆಯಾದರೆ, ಇಲ್ಲಿಂದ ಸುಮಾರು ದೂರದಲ್ಲಿ ಮತ್ತೊಬ್ಬರನ್ನು ಕೊಲೆ ಮಾಡಿ ಕಾಲುವೆ ದಂಡೆಗೆ ಹೋಗುವ ಮಣ್ಣಿನ ರಸ್ತೆಯಲ್ಲಿ ಹಾಕಿದ್ದಾರೆ” ಎಂದು ಎಫ್‌ಆರ್‌ಐನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿರಿ: ಗುಬ್ಬಿ: ಇಬ್ಬರು ದಲಿತ ಯುವಕರ ಭೀಕರ ಹತ್ಯೆ; ಖೈರ್ಲಾಂಜಿ ಮಾದರಿ ಪ್ರಕರಣ?

“ಈ ಇಬ್ಬರನ್ನು ನಂದೀಶ್‌ ಮತ್ತು ಇತರರು ದಿನಾಂಕ 21.04.2022ರಂದು ರಾತ್ರಿ ಯಾವುದೋ ಸಮಯದಲ್ಲಿ ಯಾವುದೋ ಉದ್ದೇಶದಿಂದ ಯಾವುದೋ ಆಯುಧಗಳಿಂದ ಎಲ್ಲಿಯೋ ಹೊಡೆದು ಕೊಲೆ ಮಾಡಿ ಸತ್ಯ ಸಂಗತಿಯನ್ನು ಮರೆಮಾಚಲು ಪಿ.ಎಂ.ಗಿರೀಶ್ ಅವರ ಶವವನ್ನು ಮಟ್ಟದ ಗುಂಡಿಯ ನೀರಿನ ಅಂಚಿಗೆ ಹಾಕಿರುತ್ತಾರೆ. ಮಂಚಲಗೆರೆ ಗಿರೀಶ್‌ ಅವರನ್ನು ಮಟ್ಟದ ಗುಂಡಿಯಿಂದ ಸುಮಾರು 150 ಅಡಿ ದೂರದ ಬಂಡಿ ರಸ್ತೆಯ ಮೇಲೆ ಕೊಲೆ ಮಾಡಿ ಹಾಕಿರುತ್ತಾರೆ” ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಗ್ರಾಮಕ್ಕೆ ಶ್ವಾನದಳ ಕರೆಸಿದ್ದಾಗ, ಶ್ವಾನಗಳು ಹಲವು ಮನೆಗಳ ಬಳಿ ಹೋಗಿದ್ದವು. ಇದರಿಂದ ಕೆಲವರು ಪರಾರಿಯಾಗಿದ್ದಾರೆ. ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕೊಲೆಯಾದವರ ಮೇಲೆ ಕಳ್ಳತನದ ಆರೋಪ ಹೊರಿಸಿ ಪ್ರಕರಣವನ್ನು ತಿರುಚುವ ಯತ್ನ ಮಾಡಲಾಗುತ್ತಿದೆ ಎಂಬ ಆರೋಪಗಳು ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....