Homeಕರ್ನಾಟಕಪೆದ್ದನಹಳ್ಳಿಯಲ್ಲಿ ದಲಿತರ ಕೊಲೆ: ಲಿಂಗಾಯತ ಜಾತಿಯ ಆರೋಪಿ ಸೇರಿ ಕೆಲವರ ಬಂಧನ

ಪೆದ್ದನಹಳ್ಳಿಯಲ್ಲಿ ದಲಿತರ ಕೊಲೆ: ಲಿಂಗಾಯತ ಜಾತಿಯ ಆರೋಪಿ ಸೇರಿ ಕೆಲವರ ಬಂಧನ

- Advertisement -
- Advertisement -

ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಪೆದ್ದನಹಳ್ಳಿಯಲ್ಲಿ ಇಬ್ಬರು ದಲಿತ ಯುವಕರ ಕೊಲೆಯಾಗಿದ್ದು ಲಿಂಗಾಯತ ಸಮುದಾಯದ ಆರೋಪಿ ಸೇರಿದಂತೆ ಕೆಲವರನ್ನು ಗುಬ್ಬಿ ಪೊಲೀಸರು ಬಂಧಿಸಿದ್ದಾರೆ.

ಪೆದ್ದನಹಳ್ಳಿಯ ಪರಿಶಿಷ್ಟ ಜಾತಿ ಮಾದಿಗ ಸಮುದಾಯಕ್ಕೆ ಸೇರಿದ ಪಿ.ಎಂ.ಗಿರೀಶ್‌ (32), ಮಂಚಲದೊರೆ ಗ್ರಾಮದ ಪರಿಶಿಷ್ಟ ಪಂಗಡ ನಾಯಕ ಸಮುದಾಯಕ್ಕೆ ಸೇರಿದ ಗಿರೀಶ್‌ ಅವರನ್ನು ಕೊಲೆ ಮಾಡಿರುವ ಸಂಬಂಧ ದೂರು ಸಲ್ಲಿಕೆಯಾಗಿದ್ದು, ಪೆದ್ದನಹಳ್ಳಿ ಗ್ರಾಮದ ಲಿಂಗಾಯತ ಜಾತಿಗೆ ಸೇರಿದ ನಂದೀಶ್‌ ಮತ್ತು ಇತರ ಕೆಲವರ ವಿರುದ್ಧ ಪ್ರಕರಣ ದಾಖಲಾಗಿದೆ. ಎಫ್‌ಐಆರ್‌ನಲ್ಲಿ ನಂದೀಶ್ ಹೆಸರು ಮಾತ್ರ ಉಲ್ಲೇಖವಾಗಿದ್ದು, ಇತರರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಐಪಿಸಿ ಸೆಕ್ಷನ್‌ 302, 201 ಹಾಗೂ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆಯ ಹಿಂದಿನ ರಾತ್ರಿ ಆರೋಪಿ ನಂದೀಶ್‌, ಪೆದ್ದನಹಳ್ಳಿಯ ಪಿ.ಎಂ.ಗಿರೀಶ್‌ ಮನೆಗೆ ಬಂದು ಅವರನ್ನು ಕರೆದುಕೊಂಡು ಹೋಗಿದ್ದಾನೆ. ಆದರೆ ಶುಕ್ರವಾರ ಬೆಳಿಗ್ಗೆ ಗ್ರಾಮದ ನೀರಿನ ಕಟ್ಟೆಯಲ್ಲಿ ಗಿರೀಶ್ ಶವ ಪತ್ತೆಯಾಗಿದ್ದು, ದಾರಿಹೋಕರು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಸ್ವಲ್ಪ ದೂರದಲ್ಲಿ ಹಾಗಲವಾಡಿ ಹೋಬಳಿಯ ಮಂಚಲದೊರೆ ಗ್ರಾಮದ ಮತ್ತೊಬ್ಬ ಯುವಕ ಗಿರೀಶ್‌ ಶವ ದೊರೆತಿದೆ. ಇಬ್ಬರ ದೇಹದ ಮೇಲೂ ಗಾಯದ ಗುರುತುಗಳು ಕಂಡು ಬಂದಿವೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಪೆದ್ದನಹಳ್ಳಿಯ ಗಿರೀಶ್ ಸಹೋದರ ಪಿ.ಎಂ.ಶ್ರೀಧರ್‌ ದೂರು ನೀಡಿದ್ದು, “ನಂದೀಶ್‌ ಹಾಗೂ ಇತರರು ಸೇರಿಕೊಂಡು ಈ ಇಬ್ಬರನ್ನೂ ಕೊಂದಿದ್ದಾರೆ” ಎಂದು ಉಲ್ಲೇಖಿಸಿದ್ದಾರೆ.

ಲೇಟ್‌ ಮೂಡ್ಲಗಿರಿಯಪ್ಪ ದಂಪತಿಗೆ ಐವರು ಮಕ್ಕಳಿದ್ದು, ಮೊದಲನೆಯವರು ಶ್ರೀಧರ್‌ ಪಿ.ಎಂ., ಕೊಲೆಯಾಗಿರುವ ಗಿರೀಶ್ ಅವಿವಾಹಿತರಾಗಿದ್ದರು. ತಾಯಿ ಗೌರಮ್ಮ ಕೂಲಿ ಮಾಡಿಕೊಂಡು ಊರಿನಲ್ಲಿ ವಾಸವಿದ್ದಾರೆ.

ನಿಟ್ಟೂರು ಹೋಬಳಿ ಅದಲಗೆರೆ ಗ್ರಾಮದಲ್ಲಿ ಅಜ್ಜಿಯ ಮನೆಯಲ್ಲಿ ಸಂಸಾರ ಸಮೇತ ಪಿ.ಎಂ.ಶ್ರೀಧರ್‌ ವಾಸವಿದ್ದು, ದಿನಾಂಕ 22.04.2022ರಂದು ತಾಯಿ ಗೌರಮ್ಮನವರು ಬೆಳಿಗ್ಗೆ 6 ಗಂಟೆ ಸುಮಾರಿಗೆ ಶ್ರೀಧರ್‌ಗೆ ಕರೆ ವಿಷಯ ತಿಳಿಸಿದ್ದಾರೆ.

“ದಿನಾಂಕ 21.04.2022ರಂದು ರಾತ್ರಿ 8.30ರಿಂದ 9 ಗಂಟೆ ಸಮಯದಲ್ಲಿ ಮನೆಯ ಬಳಿ ಬಂದ ಪೆದ್ದನಹಳ್ಳಿ ನಿವಾಸಿ, ಲಿಂಗಾಯತ ಜಾತಿಗೆ ಸೇರಿದ ಪರಮೇಶ್ವರಪ್ಪನವರ ಮಗ ನಂದೀಶ್‌ ಮತ್ತು ಇತರರು ಗಿರೀಶ್‌ ಅವರನ್ನು ಮನೆಯಿಂದ ಕರೆದುಕೊಂಡು ಹೋಗಿದ್ದಾರೆ. ವಾಪಸ್ ಮನೆಗೆ ಬಂದಿರಲಿಲ್ಲ. ಸಹೋದರ ಗಿರೀಶ್‌ ಶವ ಶಿರಾ- ನೆಲ್ಲಿಗೆರೆ ರಸ್ತೆಯಲ್ಲಿನ ಪೆದ್ದನಹಳ್ಳಿ ಗ್ರಾಮ ಸಮೀಪದ ಗುಂಡಿಯ ನೀರಿನಲ್ಲಿ ಪತ್ತೆಯಾದರೆ, ಇಲ್ಲಿಂದ ಸುಮಾರು ದೂರದಲ್ಲಿ ಮತ್ತೊಬ್ಬರನ್ನು ಕೊಲೆ ಮಾಡಿ ಕಾಲುವೆ ದಂಡೆಗೆ ಹೋಗುವ ಮಣ್ಣಿನ ರಸ್ತೆಯಲ್ಲಿ ಹಾಕಿದ್ದಾರೆ” ಎಂದು ಎಫ್‌ಆರ್‌ಐನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿರಿ: ಗುಬ್ಬಿ: ಇಬ್ಬರು ದಲಿತ ಯುವಕರ ಭೀಕರ ಹತ್ಯೆ; ಖೈರ್ಲಾಂಜಿ ಮಾದರಿ ಪ್ರಕರಣ?

“ಈ ಇಬ್ಬರನ್ನು ನಂದೀಶ್‌ ಮತ್ತು ಇತರರು ದಿನಾಂಕ 21.04.2022ರಂದು ರಾತ್ರಿ ಯಾವುದೋ ಸಮಯದಲ್ಲಿ ಯಾವುದೋ ಉದ್ದೇಶದಿಂದ ಯಾವುದೋ ಆಯುಧಗಳಿಂದ ಎಲ್ಲಿಯೋ ಹೊಡೆದು ಕೊಲೆ ಮಾಡಿ ಸತ್ಯ ಸಂಗತಿಯನ್ನು ಮರೆಮಾಚಲು ಪಿ.ಎಂ.ಗಿರೀಶ್ ಅವರ ಶವವನ್ನು ಮಟ್ಟದ ಗುಂಡಿಯ ನೀರಿನ ಅಂಚಿಗೆ ಹಾಕಿರುತ್ತಾರೆ. ಮಂಚಲಗೆರೆ ಗಿರೀಶ್‌ ಅವರನ್ನು ಮಟ್ಟದ ಗುಂಡಿಯಿಂದ ಸುಮಾರು 150 ಅಡಿ ದೂರದ ಬಂಡಿ ರಸ್ತೆಯ ಮೇಲೆ ಕೊಲೆ ಮಾಡಿ ಹಾಕಿರುತ್ತಾರೆ” ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಗ್ರಾಮಕ್ಕೆ ಶ್ವಾನದಳ ಕರೆಸಿದ್ದಾಗ, ಶ್ವಾನಗಳು ಹಲವು ಮನೆಗಳ ಬಳಿ ಹೋಗಿದ್ದವು. ಇದರಿಂದ ಕೆಲವರು ಪರಾರಿಯಾಗಿದ್ದಾರೆ. ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕೊಲೆಯಾದವರ ಮೇಲೆ ಕಳ್ಳತನದ ಆರೋಪ ಹೊರಿಸಿ ಪ್ರಕರಣವನ್ನು ತಿರುಚುವ ಯತ್ನ ಮಾಡಲಾಗುತ್ತಿದೆ ಎಂಬ ಆರೋಪಗಳು ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...