Homeಮುಖಪುಟಪೆಗಾಸಸ್ ಪ್ರಕರಣ | ದೇಶದ ಭದ್ರತೆ, ಸಾರ್ವಭೌಮತೆಗೆ ಸಂಬಂಧಿಸಿದ ಯಾವುದೇ ವರದಿಯನ್ನು ಬಹಿರಂಗಪಡಿಸುವುದಿಲ್ಲ ಎಂದ ಸುಪ್ರೀಂ...

ಪೆಗಾಸಸ್ ಪ್ರಕರಣ | ದೇಶದ ಭದ್ರತೆ, ಸಾರ್ವಭೌಮತೆಗೆ ಸಂಬಂಧಿಸಿದ ಯಾವುದೇ ವರದಿಯನ್ನು ಬಹಿರಂಗಪಡಿಸುವುದಿಲ್ಲ ಎಂದ ಸುಪ್ರೀಂ ಕೋರ್ಟ್

- Advertisement -
- Advertisement -

ದೇಶದ “ಭದ್ರತೆ ಮತ್ತು ಸಾರ್ವಭೌಮತ್ವ”ಕ್ಕೆ ಸಂಬಂಧಿಸಿದ ಯಾವುದೇ ವರದಿಯನ್ನು ಸಾರ್ವಜನಿಕಗೊಳಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಏ.29) ಹೇಳಿದೆ.

ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಎನ್. ಕೋಟಿಶ್ವರ್ ಸಿಂಗ್ ಅವರ ಪೀಠವು ಗೌಪ್ಯತೆಯ ಉಲ್ಲಂಘನೆಯ ವೈಯಕ್ತಿಕ ಆತಂಕಗಳನ್ನು ಪರಿಹರಿಸಬಹುದು. ಆದರೆ,ತಾಂತ್ರಿಕ ಸಮಿತಿಯ ವರದಿಯ ಕುರಿತು ಬೀದಿಯಲ್ಲಿ ಚರ್ಚಿಸಲು ಅದು ಯಾವುದೇ ದಾಖಲೆಯಲ್ಲ ಎಂದು ಹೇಳಿದೆ.

“ದೇಶದ ಭದ್ರತೆ ಮತ್ತು ಸಾರ್ವಭೌಮತ್ವಕ್ಕೆ ಸಂಬಂಧಿಸಿದ ಯಾವುದೇ ವರದಿಯನ್ನು ಸಾರ್ವಜನಿಕಗೊಳಿಸುವುದಿಲ್ಲ.ಆದರೆ, ನಾವು ಕೂಡ ಸೇರಿದ್ದೇವೆಯೇ ಎಂದು ತಿಳಿಯ ಬಯಸುವ ವ್ಯಕ್ತಿಗಳಿಗೆ ಅದನ್ನು ತಿಳಿಸಬಹುದು. ಹೌದು, ವೈಯಕ್ತಿಕ ಆತಂಕವನ್ನು ಪರಿಹರಿಸಬೇಕು, ಆದರೆ ವರದಿಯ ಕುರಿತ ಬೀದಿ ಚರ್ಚೆಗೆ ಅದನ್ನು ದಾಖಲೆಯನ್ನಾಗಿ ಮಾಡಲು ಸಾಧ್ಯವಿಲ್ಲ” ಎಂದು ಪೀಠ ಪುನರುಚ್ಚರಿಸಿದೆ.

ತಾಂತ್ರಿಕ ಸಮಿತಿಯ ವರದಿಯನ್ನು ಸಾರ್ವಜನಿಕವಾಗಿ ಎಷ್ಟರ ಮಟ್ಟಿಗೆ ಹಂಚಿಕೊಳ್ಳಬಹುದು ಎಂಬುದನ್ನು ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

ಅರ್ಜಿದಾರರಲ್ಲಿ ಒಬ್ಬರ ಪರವಾಗಿ ಹಾಜರಾದ ವಕೀಲ ದಿನೇಶ್ ದ್ವಿವೇದಿ, ಸರ್ಕಾರವು ಸ್ಪೈವೇರ್ ಅನ್ನು ಹೊಂದಿದ್ದು, ಅದನ್ನು ಬಳಸಿದೆಯೇ ಎಂಬುದು ಪ್ರಶ್ನೆಯಾಗಿದೆ ಎಂದು ತಿಳಿಸಿದ್ದಾರೆ ,”ಅವರು ಅದನ್ನು ಹೊಂದಿದ್ದರೆ, ಇಂದಿಗೂ ಅದನ್ನು ನಿರಂತರವಾಗಿ ಬಳಸುವುದನ್ನು ತಡೆಯಲು ಏನೂ ಇಲ್ಲ” ಎಂದು ಹೇಳಿದ್ದಾರೆ.

“ವ್ಯಕ್ತಿಗಳಿಗೆ ಸಂಬಂಧಿಸಿದ ಮಾಹಿತಿ ಬೇಕಿದ್ದರೆ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಿ. ಇತ್ತೀಚಿನ ದಿನಗಳಲ್ಲಿ ನಾವು ಎದುರಿಸುತ್ತಿರುವ ಸನ್ನಿವೇಶದಲ್ಲಿ, ನಾವು ಸ್ವಲ್ಪ ಜವಾಬ್ದಾರಿಯುತವಾಗಿರೋಣ… ವರದಿಯನ್ನು ಎಷ್ಟರ ಮಟ್ಟಿಗೆ ಹಂಚಿಕೊಳ್ಳಬಹುದು ಎಂಬುದನ್ನು ನಾವು ನೋಡುತ್ತೇವೆ” ಎಂದು ಪೀಠ ಪ್ರತಿಕ್ರಿಯಿಸಿದೆ.

“ದೇಶವು ಭಯೋತ್ಪಾದಕರ ವಿರುದ್ಧ ಸ್ಪೈವೇರ್ ಬಳಸುತ್ತಿದ್ದರೆ ಏನು ತಪ್ಪು? ಸ್ಪೈವೇರ್ ಹೊಂದಿರುವುದು ತಪ್ಪಲ್ಲ, ನೀವು ಯಾರ ವಿರುದ್ಧ ಅದನ್ನು ಬಳಸುತ್ತಿದ್ದೀರಿ ಎಂಬುದು ಪ್ರಶ್ನೆ. ರಾಷ್ಟ್ರದ ಭದ್ರತೆಯೊಂದಿಗೆ ನೀವು ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ನಾಗರಿಕರ ಗೌಪ್ಯತೆಯ ಹಕ್ಕನ್ನುಸಂವಿಧಾನದ ಅಡಿಯಲ್ಲಿ ರಕ್ಷಿಸಲಾಗುತ್ತದೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಪತ್ರಕರ್ತ ಪರಂಜಯ್ ಗುಹಾ ತಕುರ್ತಾ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಅಮೆರಿಕದ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಉಲ್ಲೇಖಿಸಿದ್ದಾರೆ. ಹ್ಯಾಕಿಂಗ್ ಆಗಿದೆ ಎಂದು ವಾಟ್ಸಾಪ್ ಸ್ವತಃ ಒಪ್ಪಿಕೊಂಡಿದೆ. ವಾಟ್ಸಾಪ್ ಮೂಲಕ ಅದಕ್ಕೆ ಪುರಾವೆಗಳಿವೆ ಎಂದಿದ್ದಾರೆ.

ಈ ವೇಳೆ ಪ್ರತಿಕ್ರಿಯಿಸಿದ ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಭಯೋತ್ಪಾದಕರ ವಿರುದ್ದ ಸ್ಪೈವೇರ್ ಬಳಸುವುದು ತಪ್ಪಲ್ಲ ಮತ್ತು ಅವರಿಗೆ ಗೌಪ್ಯತೆಯ ಹಕ್ಕಿಲ್ಲ ಎಂದು ವಾದಿಸಿದ್ದಾರೆ.

ಅರ್ಜಿದಾರರಲ್ಲಿ ಒಬ್ಬರ ಪರ ಹಿರಿಯ ವಕೀಲ ಶ್ಯಾಮ್ ದಿವಾನ್, ತಾಂತ್ರಿಕ ಸಮಿತಿಯ ವರದಿಯನ್ನು ಯಾವುದೇ ಪರಿಷ್ಕರಣೆ ಮಾಡದೆ ಬಹಿರಂಗಪಡಿಸಬೇಕು ಎಂದು ಮನವಿ ಮಾಡಿದ್ದಾರೆ.

ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಜುಲೈ 30ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಅಲಿಘಢ| ಪಾಕ್‌ ಧ್ವಜದ ಮೇಲೆ ಮೂತ್ರ ವಿಸರ್ಜಿಸುವಂತೆ ಬಾಲಕನಿಗೆ ಬಲಪಂಥೀಯ ಗುಂಪಿನಿಂದ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...