Homeಮುಖಪುಟಪೆಗಾಸಸ್ ಪ್ರಕರಣ | ದೇಶದ ಭದ್ರತೆ, ಸಾರ್ವಭೌಮತೆಗೆ ಸಂಬಂಧಿಸಿದ ಯಾವುದೇ ವರದಿಯನ್ನು ಬಹಿರಂಗಪಡಿಸುವುದಿಲ್ಲ ಎಂದ ಸುಪ್ರೀಂ...

ಪೆಗಾಸಸ್ ಪ್ರಕರಣ | ದೇಶದ ಭದ್ರತೆ, ಸಾರ್ವಭೌಮತೆಗೆ ಸಂಬಂಧಿಸಿದ ಯಾವುದೇ ವರದಿಯನ್ನು ಬಹಿರಂಗಪಡಿಸುವುದಿಲ್ಲ ಎಂದ ಸುಪ್ರೀಂ ಕೋರ್ಟ್

- Advertisement -
- Advertisement -

ದೇಶದ “ಭದ್ರತೆ ಮತ್ತು ಸಾರ್ವಭೌಮತ್ವ”ಕ್ಕೆ ಸಂಬಂಧಿಸಿದ ಯಾವುದೇ ವರದಿಯನ್ನು ಸಾರ್ವಜನಿಕಗೊಳಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಏ.29) ಹೇಳಿದೆ.

ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಎನ್. ಕೋಟಿಶ್ವರ್ ಸಿಂಗ್ ಅವರ ಪೀಠವು ಗೌಪ್ಯತೆಯ ಉಲ್ಲಂಘನೆಯ ವೈಯಕ್ತಿಕ ಆತಂಕಗಳನ್ನು ಪರಿಹರಿಸಬಹುದು. ಆದರೆ,ತಾಂತ್ರಿಕ ಸಮಿತಿಯ ವರದಿಯ ಕುರಿತು ಬೀದಿಯಲ್ಲಿ ಚರ್ಚಿಸಲು ಅದು ಯಾವುದೇ ದಾಖಲೆಯಲ್ಲ ಎಂದು ಹೇಳಿದೆ.

“ದೇಶದ ಭದ್ರತೆ ಮತ್ತು ಸಾರ್ವಭೌಮತ್ವಕ್ಕೆ ಸಂಬಂಧಿಸಿದ ಯಾವುದೇ ವರದಿಯನ್ನು ಸಾರ್ವಜನಿಕಗೊಳಿಸುವುದಿಲ್ಲ.ಆದರೆ, ನಾವು ಕೂಡ ಸೇರಿದ್ದೇವೆಯೇ ಎಂದು ತಿಳಿಯ ಬಯಸುವ ವ್ಯಕ್ತಿಗಳಿಗೆ ಅದನ್ನು ತಿಳಿಸಬಹುದು. ಹೌದು, ವೈಯಕ್ತಿಕ ಆತಂಕವನ್ನು ಪರಿಹರಿಸಬೇಕು, ಆದರೆ ವರದಿಯ ಕುರಿತ ಬೀದಿ ಚರ್ಚೆಗೆ ಅದನ್ನು ದಾಖಲೆಯನ್ನಾಗಿ ಮಾಡಲು ಸಾಧ್ಯವಿಲ್ಲ” ಎಂದು ಪೀಠ ಪುನರುಚ್ಚರಿಸಿದೆ.

ತಾಂತ್ರಿಕ ಸಮಿತಿಯ ವರದಿಯನ್ನು ಸಾರ್ವಜನಿಕವಾಗಿ ಎಷ್ಟರ ಮಟ್ಟಿಗೆ ಹಂಚಿಕೊಳ್ಳಬಹುದು ಎಂಬುದನ್ನು ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

ಅರ್ಜಿದಾರರಲ್ಲಿ ಒಬ್ಬರ ಪರವಾಗಿ ಹಾಜರಾದ ವಕೀಲ ದಿನೇಶ್ ದ್ವಿವೇದಿ, ಸರ್ಕಾರವು ಸ್ಪೈವೇರ್ ಅನ್ನು ಹೊಂದಿದ್ದು, ಅದನ್ನು ಬಳಸಿದೆಯೇ ಎಂಬುದು ಪ್ರಶ್ನೆಯಾಗಿದೆ ಎಂದು ತಿಳಿಸಿದ್ದಾರೆ ,”ಅವರು ಅದನ್ನು ಹೊಂದಿದ್ದರೆ, ಇಂದಿಗೂ ಅದನ್ನು ನಿರಂತರವಾಗಿ ಬಳಸುವುದನ್ನು ತಡೆಯಲು ಏನೂ ಇಲ್ಲ” ಎಂದು ಹೇಳಿದ್ದಾರೆ.

“ವ್ಯಕ್ತಿಗಳಿಗೆ ಸಂಬಂಧಿಸಿದ ಮಾಹಿತಿ ಬೇಕಿದ್ದರೆ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಿ. ಇತ್ತೀಚಿನ ದಿನಗಳಲ್ಲಿ ನಾವು ಎದುರಿಸುತ್ತಿರುವ ಸನ್ನಿವೇಶದಲ್ಲಿ, ನಾವು ಸ್ವಲ್ಪ ಜವಾಬ್ದಾರಿಯುತವಾಗಿರೋಣ… ವರದಿಯನ್ನು ಎಷ್ಟರ ಮಟ್ಟಿಗೆ ಹಂಚಿಕೊಳ್ಳಬಹುದು ಎಂಬುದನ್ನು ನಾವು ನೋಡುತ್ತೇವೆ” ಎಂದು ಪೀಠ ಪ್ರತಿಕ್ರಿಯಿಸಿದೆ.

“ದೇಶವು ಭಯೋತ್ಪಾದಕರ ವಿರುದ್ಧ ಸ್ಪೈವೇರ್ ಬಳಸುತ್ತಿದ್ದರೆ ಏನು ತಪ್ಪು? ಸ್ಪೈವೇರ್ ಹೊಂದಿರುವುದು ತಪ್ಪಲ್ಲ, ನೀವು ಯಾರ ವಿರುದ್ಧ ಅದನ್ನು ಬಳಸುತ್ತಿದ್ದೀರಿ ಎಂಬುದು ಪ್ರಶ್ನೆ. ರಾಷ್ಟ್ರದ ಭದ್ರತೆಯೊಂದಿಗೆ ನೀವು ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ನಾಗರಿಕರ ಗೌಪ್ಯತೆಯ ಹಕ್ಕನ್ನುಸಂವಿಧಾನದ ಅಡಿಯಲ್ಲಿ ರಕ್ಷಿಸಲಾಗುತ್ತದೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಪತ್ರಕರ್ತ ಪರಂಜಯ್ ಗುಹಾ ತಕುರ್ತಾ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಅಮೆರಿಕದ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಉಲ್ಲೇಖಿಸಿದ್ದಾರೆ. ಹ್ಯಾಕಿಂಗ್ ಆಗಿದೆ ಎಂದು ವಾಟ್ಸಾಪ್ ಸ್ವತಃ ಒಪ್ಪಿಕೊಂಡಿದೆ. ವಾಟ್ಸಾಪ್ ಮೂಲಕ ಅದಕ್ಕೆ ಪುರಾವೆಗಳಿವೆ ಎಂದಿದ್ದಾರೆ.

ಈ ವೇಳೆ ಪ್ರತಿಕ್ರಿಯಿಸಿದ ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಭಯೋತ್ಪಾದಕರ ವಿರುದ್ದ ಸ್ಪೈವೇರ್ ಬಳಸುವುದು ತಪ್ಪಲ್ಲ ಮತ್ತು ಅವರಿಗೆ ಗೌಪ್ಯತೆಯ ಹಕ್ಕಿಲ್ಲ ಎಂದು ವಾದಿಸಿದ್ದಾರೆ.

ಅರ್ಜಿದಾರರಲ್ಲಿ ಒಬ್ಬರ ಪರ ಹಿರಿಯ ವಕೀಲ ಶ್ಯಾಮ್ ದಿವಾನ್, ತಾಂತ್ರಿಕ ಸಮಿತಿಯ ವರದಿಯನ್ನು ಯಾವುದೇ ಪರಿಷ್ಕರಣೆ ಮಾಡದೆ ಬಹಿರಂಗಪಡಿಸಬೇಕು ಎಂದು ಮನವಿ ಮಾಡಿದ್ದಾರೆ.

ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಜುಲೈ 30ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಅಲಿಘಢ| ಪಾಕ್‌ ಧ್ವಜದ ಮೇಲೆ ಮೂತ್ರ ವಿಸರ್ಜಿಸುವಂತೆ ಬಾಲಕನಿಗೆ ಬಲಪಂಥೀಯ ಗುಂಪಿನಿಂದ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...