Homeಮುಖಪುಟಪೆಗಾಸಸ್ ಪ್ರಕರಣ | ದೇಶದ ಭದ್ರತೆ, ಸಾರ್ವಭೌಮತೆಗೆ ಸಂಬಂಧಿಸಿದ ಯಾವುದೇ ವರದಿಯನ್ನು ಬಹಿರಂಗಪಡಿಸುವುದಿಲ್ಲ ಎಂದ ಸುಪ್ರೀಂ...

ಪೆಗಾಸಸ್ ಪ್ರಕರಣ | ದೇಶದ ಭದ್ರತೆ, ಸಾರ್ವಭೌಮತೆಗೆ ಸಂಬಂಧಿಸಿದ ಯಾವುದೇ ವರದಿಯನ್ನು ಬಹಿರಂಗಪಡಿಸುವುದಿಲ್ಲ ಎಂದ ಸುಪ್ರೀಂ ಕೋರ್ಟ್

- Advertisement -
- Advertisement -

ದೇಶದ “ಭದ್ರತೆ ಮತ್ತು ಸಾರ್ವಭೌಮತ್ವ”ಕ್ಕೆ ಸಂಬಂಧಿಸಿದ ಯಾವುದೇ ವರದಿಯನ್ನು ಸಾರ್ವಜನಿಕಗೊಳಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಏ.29) ಹೇಳಿದೆ.

ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಎನ್. ಕೋಟಿಶ್ವರ್ ಸಿಂಗ್ ಅವರ ಪೀಠವು ಗೌಪ್ಯತೆಯ ಉಲ್ಲಂಘನೆಯ ವೈಯಕ್ತಿಕ ಆತಂಕಗಳನ್ನು ಪರಿಹರಿಸಬಹುದು. ಆದರೆ,ತಾಂತ್ರಿಕ ಸಮಿತಿಯ ವರದಿಯ ಕುರಿತು ಬೀದಿಯಲ್ಲಿ ಚರ್ಚಿಸಲು ಅದು ಯಾವುದೇ ದಾಖಲೆಯಲ್ಲ ಎಂದು ಹೇಳಿದೆ.

“ದೇಶದ ಭದ್ರತೆ ಮತ್ತು ಸಾರ್ವಭೌಮತ್ವಕ್ಕೆ ಸಂಬಂಧಿಸಿದ ಯಾವುದೇ ವರದಿಯನ್ನು ಸಾರ್ವಜನಿಕಗೊಳಿಸುವುದಿಲ್ಲ.ಆದರೆ, ನಾವು ಕೂಡ ಸೇರಿದ್ದೇವೆಯೇ ಎಂದು ತಿಳಿಯ ಬಯಸುವ ವ್ಯಕ್ತಿಗಳಿಗೆ ಅದನ್ನು ತಿಳಿಸಬಹುದು. ಹೌದು, ವೈಯಕ್ತಿಕ ಆತಂಕವನ್ನು ಪರಿಹರಿಸಬೇಕು, ಆದರೆ ವರದಿಯ ಕುರಿತ ಬೀದಿ ಚರ್ಚೆಗೆ ಅದನ್ನು ದಾಖಲೆಯನ್ನಾಗಿ ಮಾಡಲು ಸಾಧ್ಯವಿಲ್ಲ” ಎಂದು ಪೀಠ ಪುನರುಚ್ಚರಿಸಿದೆ.

ತಾಂತ್ರಿಕ ಸಮಿತಿಯ ವರದಿಯನ್ನು ಸಾರ್ವಜನಿಕವಾಗಿ ಎಷ್ಟರ ಮಟ್ಟಿಗೆ ಹಂಚಿಕೊಳ್ಳಬಹುದು ಎಂಬುದನ್ನು ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

ಅರ್ಜಿದಾರರಲ್ಲಿ ಒಬ್ಬರ ಪರವಾಗಿ ಹಾಜರಾದ ವಕೀಲ ದಿನೇಶ್ ದ್ವಿವೇದಿ, ಸರ್ಕಾರವು ಸ್ಪೈವೇರ್ ಅನ್ನು ಹೊಂದಿದ್ದು, ಅದನ್ನು ಬಳಸಿದೆಯೇ ಎಂಬುದು ಪ್ರಶ್ನೆಯಾಗಿದೆ ಎಂದು ತಿಳಿಸಿದ್ದಾರೆ ,”ಅವರು ಅದನ್ನು ಹೊಂದಿದ್ದರೆ, ಇಂದಿಗೂ ಅದನ್ನು ನಿರಂತರವಾಗಿ ಬಳಸುವುದನ್ನು ತಡೆಯಲು ಏನೂ ಇಲ್ಲ” ಎಂದು ಹೇಳಿದ್ದಾರೆ.

“ವ್ಯಕ್ತಿಗಳಿಗೆ ಸಂಬಂಧಿಸಿದ ಮಾಹಿತಿ ಬೇಕಿದ್ದರೆ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಿ. ಇತ್ತೀಚಿನ ದಿನಗಳಲ್ಲಿ ನಾವು ಎದುರಿಸುತ್ತಿರುವ ಸನ್ನಿವೇಶದಲ್ಲಿ, ನಾವು ಸ್ವಲ್ಪ ಜವಾಬ್ದಾರಿಯುತವಾಗಿರೋಣ… ವರದಿಯನ್ನು ಎಷ್ಟರ ಮಟ್ಟಿಗೆ ಹಂಚಿಕೊಳ್ಳಬಹುದು ಎಂಬುದನ್ನು ನಾವು ನೋಡುತ್ತೇವೆ” ಎಂದು ಪೀಠ ಪ್ರತಿಕ್ರಿಯಿಸಿದೆ.

“ದೇಶವು ಭಯೋತ್ಪಾದಕರ ವಿರುದ್ಧ ಸ್ಪೈವೇರ್ ಬಳಸುತ್ತಿದ್ದರೆ ಏನು ತಪ್ಪು? ಸ್ಪೈವೇರ್ ಹೊಂದಿರುವುದು ತಪ್ಪಲ್ಲ, ನೀವು ಯಾರ ವಿರುದ್ಧ ಅದನ್ನು ಬಳಸುತ್ತಿದ್ದೀರಿ ಎಂಬುದು ಪ್ರಶ್ನೆ. ರಾಷ್ಟ್ರದ ಭದ್ರತೆಯೊಂದಿಗೆ ನೀವು ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ನಾಗರಿಕರ ಗೌಪ್ಯತೆಯ ಹಕ್ಕನ್ನುಸಂವಿಧಾನದ ಅಡಿಯಲ್ಲಿ ರಕ್ಷಿಸಲಾಗುತ್ತದೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಪತ್ರಕರ್ತ ಪರಂಜಯ್ ಗುಹಾ ತಕುರ್ತಾ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಅಮೆರಿಕದ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಉಲ್ಲೇಖಿಸಿದ್ದಾರೆ. ಹ್ಯಾಕಿಂಗ್ ಆಗಿದೆ ಎಂದು ವಾಟ್ಸಾಪ್ ಸ್ವತಃ ಒಪ್ಪಿಕೊಂಡಿದೆ. ವಾಟ್ಸಾಪ್ ಮೂಲಕ ಅದಕ್ಕೆ ಪುರಾವೆಗಳಿವೆ ಎಂದಿದ್ದಾರೆ.

ಈ ವೇಳೆ ಪ್ರತಿಕ್ರಿಯಿಸಿದ ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಭಯೋತ್ಪಾದಕರ ವಿರುದ್ದ ಸ್ಪೈವೇರ್ ಬಳಸುವುದು ತಪ್ಪಲ್ಲ ಮತ್ತು ಅವರಿಗೆ ಗೌಪ್ಯತೆಯ ಹಕ್ಕಿಲ್ಲ ಎಂದು ವಾದಿಸಿದ್ದಾರೆ.

ಅರ್ಜಿದಾರರಲ್ಲಿ ಒಬ್ಬರ ಪರ ಹಿರಿಯ ವಕೀಲ ಶ್ಯಾಮ್ ದಿವಾನ್, ತಾಂತ್ರಿಕ ಸಮಿತಿಯ ವರದಿಯನ್ನು ಯಾವುದೇ ಪರಿಷ್ಕರಣೆ ಮಾಡದೆ ಬಹಿರಂಗಪಡಿಸಬೇಕು ಎಂದು ಮನವಿ ಮಾಡಿದ್ದಾರೆ.

ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಜುಲೈ 30ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಅಲಿಘಢ| ಪಾಕ್‌ ಧ್ವಜದ ಮೇಲೆ ಮೂತ್ರ ವಿಸರ್ಜಿಸುವಂತೆ ಬಾಲಕನಿಗೆ ಬಲಪಂಥೀಯ ಗುಂಪಿನಿಂದ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...