Homeಮುಖಪುಟಪೆಗಾಸಸ್‌: ನ್ಯೂಯಾರ್ಕ್ ಟೈಮ್ಸ್‌ ವರದಿ ಪರಿಶೀಲಿಸುವಂತೆ ಸುಪ್ರೀಂಕೋರ್ಟ್‌‌ಗೆ ಎಡಿಟರ್ಸ್ ಗಿಲ್ಡ್‌‌ ಪತ್ರ

ಪೆಗಾಸಸ್‌: ನ್ಯೂಯಾರ್ಕ್ ಟೈಮ್ಸ್‌ ವರದಿ ಪರಿಶೀಲಿಸುವಂತೆ ಸುಪ್ರೀಂಕೋರ್ಟ್‌‌ಗೆ ಎಡಿಟರ್ಸ್ ಗಿಲ್ಡ್‌‌ ಪತ್ರ

- Advertisement -
- Advertisement -

ಪೆಗಾಸಸ್ ಸ್ಪೈವೇರ್ ಬಳಸಿ ಗೂಢಚಾರಿಕೆ ಮಾಡಲಾಗಿದೆ ಎಂಬ ಆರೋಪಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ನೇಮಿಸಿರುವ ಸಮಿತಿಯು ದಿ ನ್ಯೂಯಾರ್ಕ್ ಟೈಮ್ಸ್‌ನ ತನಿಖಾ ವರದಿಯನ್ನೂ ಪರಿಶೀಲಿಸಬೇಕು ಎಂದು ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಒತ್ತಾಯಿಸಿದೆ.

ಭಾರತ ಸರ್ಕಾರವು 2017ರಲ್ಲಿ ಇಸ್ರೇಲ್‌ನಿಂದ ಪೆಗಾಸಸ್ ಸ್ಪೈವೇರ್ ಅನ್ನು ಖರೀದಿಸಿದೆ ಎಂದು ನ್ಯೂಯಾರ್ಕ್ ಟೈಮ್ಸ್‌ ವರದಿ ಮಾಡಿದೆ. ಸುಮಾರು 2 ಶತಕೋಟಿ ಡಾಲರ್‌‌ ಮೌಲ್ಯದ ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಮತ್ತು ಗುಪ್ತಚರ ಸಾಧನಗಳ ಪ್ಯಾಕೇಜ್‌ನ ಭಾಗವಾಗಿ ಭಾರತವು ಸ್ಪೈವೇರ್ ಖರೀದಿಸಿದೆ ಎಂದು ವರದಿ ಉಲ್ಲೇಖಿಸಿದೆ.

NSO ಗ್ರೂಪ್ ಅಭಿವೃದ್ಧಿಪಡಿಸಿದ ಪೆಗಾಸಸ್ ಬಳಕೆಯ ಕುರಿತು ಪ್ರಪಂಚದಾದ್ಯಂತದ ಹಲವಾರು ಮಾಧ್ಯಮ ಸಂಸ್ಥೆಗಳು ವರದಿ ಮಾಡಿದ್ದವು. ಭಾರತದಲ್ಲಿಯೂ ಅನೇಕ ಗಣ್ಯರ ಮೇಲೆ ಗೂಢಚಾರಿಕೆ ಮಾಡಲಾಗುತ್ತಿದೆ ಎಂಬ ವರದಿಯನ್ನು ಸುದ್ದಿಜಾಲತಾಣ, ‘ದಿ ವೈರ್‌‌’ ವರದಿ ಮಾಡಿದೆ.

ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಆರ್‌.ವಿ.ರವೀಂದ್ರನ್‌ ಅವರಿಗೆ ಪತ್ರ ಬರೆದಿರುವ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ, ನ್ಯೂಯಾರ್ಕ್ ಟೈಮ್ಸ್‌ ವರದಿಯನ್ನು ಉಲ್ಲೇಖೀಸಿದೆ. ಕೇಂದ್ರ ಸರ್ಕಾರ, ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಆಫ್ ಇಂಡಿಯಾ ಮತ್ತು ಆಪಾದಿತ ಸಚಿವಾಲಯಗಳ ಕಾರ್ಯದರ್ಶಿಗಳಿಂದ ಪ್ರತಿಕ್ರಿಯೆ ಕೇಳುವಂತೆ ಸಮಿತಿಗೆ ಮನವಿ ಮಾಡಿದೆ.

ಪೆಗಾಸಸ್ ಸ್ಪೈವೇರ್ ಬಗ್ಗೆ ತನಿಖೆ ಮಾಡಲು ಅಕ್ಟೋಬರ್ 27ರಂದು ಸುಪ್ರೀಂ ಕೋರ್ಟ್ ನೇಮಿಸಿದ ಮೂವರು ಸದಸ್ಯರ ತಾಂತ್ರಿಕ ಸಮಿತಿಗೆ ನ್ಯಾಯಮೂರ್ತಿ ರವೀಂದ್ರನ್ ಮುಖ್ಯಸ್ಥರಾಗಿದ್ದಾರೆ.

ಪತ್ರಕರ್ತರು, ಭಿನ್ನಮತೀಯರನ್ನು ಗುರಿಯಾಗಿಸಲು ಮೆಕ್ಸಿಕೋ ದೇಶ ಪೆಗಾಸಸ್ ಬಳಸಿದೆ. ಸೌದಿ ಅರೇಬಿಯಾ ದೇಶಯು ಮಹಿಳಾ ಹಕ್ಕುಗಳ ಕಾರ್ಯಕರ್ತರು ಮತ್ತು ಸೌದಿ ಕಾರ್ಯಕರ್ತರಿಂದ ಕೊಲ್ಲಲ್ಪಟ್ಟ ಅಂಕಣಕಾರ ಜಮಾಲ್ ಖಶೋಗಿಯ ಸಹಚರರ ವಿರುದ್ಧ ಸ್ಪೈವೇರ್ ಬಳಸಿದೆ ಎಂದು ನ್ಯೂಯಾರ್ಕ್ ಟೈಮ್ಸ್‌ ವರದಿ ಹೇಳಿದೆ. ಇಸ್ರೇಲಿ ರಕ್ಷಣಾ ಸಚಿವಾಲಯದಿಂದ ಪರವಾನಗಿ ಪಡೆದ ಹೊಸ ಒಪ್ಪಂದಗಳ ಅಡಿಯಲ್ಲಿ, ಪೋಲೆಂಡ್, ಹಂಗೇರಿ, ಭಾರತ ಮತ್ತು ಇತರ ದೇಶಗಳಿಗೆ ಪೆಗಾಸಸ್ ಅನ್ನು ಒದಗಿಸಲಾಗಿದೆ ಎಂದು ತನಿಖಾ ವರದಿ ಮಾಡಲಾಗಿದೆ.

ಜುಲೈ 2017ರಲ್ಲಿ ಇಸ್ರೇಲ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದರು. ಆಗಿನ ಒಪ್ಪಂದಗಳತ್ತ ತನಿಖಾ ವರದಿ ಬೆರಳು ತೋರಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯು ಐತಿಹಾಸಿಕವಾಗಿ ಗಮನ ಸೆಳೆಯಿತು. ಅಲ್ಲದೆ ಸೌಹಾರ್ದಯುತವಾಗಿತ್ತು. ಮೋದಿ ಹಾಗೂ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಸ್ಥಳೀಯ ಕಡಲತೀರದಲ್ಲಿ ಬರಿಗಾಲಿನಲ್ಲಿ ತಿರುಗಾಡಿದ್ದರು. ಸುಮಾರು 2 ಬಿಲಿಯನ್ ಡಾಲರ್‌ ಮೌಲ್ಯದ ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಮತ್ತು ಗುಪ್ತಚರ ಸಾಧನಗಳ ಪ್ಯಾಕೇಜ್ ಅನ್ನು ಮಾರಾಟ ಮಾಡಲು ಉಭಯ ದೇಶಗಳು ಒಪ್ಪಿಕೊಂಡವು ಎಂದು ವರದಿ ಹೇಳುತ್ತದೆ.

ತಿಂಗಳುಗಳ ನಂತರ ಆ ಸಮಯದಲ್ಲಿ ಇಸ್ರೇಲಿ ಪ್ರಧಾನಿ ನೆತನ್ಯಾಹು ಅವರು ಭಾರತಕ್ಕೆ ಅಪರೂಪದ ಭೇಟಿ ನೀಡಿದರು. ಜೂನ್ 2019ರಲ್ಲಿ ಭಾರತವು ಯುಎನ್‌ನ ಆರ್ಥಿಕ ಮತ್ತು ಸಾಮಾಜಿಕ ಮಂಡಳಿಯಲ್ಲಿ ವೀಕ್ಷಕ ಸ್ಥಾನಮಾನವನ್ನು ನಿರಾಕರಿಸಲು ಇಸ್ರೇಲ್‌ಗೆ ಬೆಂಬಲವಾಗಿ ಮತ ಹಾಕಿತು ಎಂದು ವರದಿ ಉಲ್ಲೇಖಿಸಿದೆ.


ಇದನ್ನೂ ಓದಿರಿ: ಬಜೆಟ್ ಅಧಿವೇಶನ: ಪೆಗಾಸಸ್‌‌ ಗೂಢಚಾರಿಕೆ ಪ್ರಶ್ನಿಸಲು ಪ್ರತಿಪಕ್ಷಗಳು ಸಜ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...