Homeಮುಖಪುಟಪೆಗಾಸಸ್ ಪ್ರಾಜೆಕ್ಟ್: ಶೀಘ್ರದಲ್ಲೇ ನ್ಯಾಯಾಧೀಶರ ಹೆಸರು ಬಹಿರಂಗ!

ಪೆಗಾಸಸ್ ಪ್ರಾಜೆಕ್ಟ್: ಶೀಘ್ರದಲ್ಲೇ ನ್ಯಾಯಾಧೀಶರ ಹೆಸರು ಬಹಿರಂಗ!

- Advertisement -
- Advertisement -

‘ಪೆಗಾಸಸ್’ ತಂತ್ರಾಂಶವನ್ನು ಬಳಸಿಕೊಂಡು ಭಾರತದ ವಿರೋಧ ಪಕ್ಷಗಳ ನಾಯಕರು, ಪತ್ರಕರ್ತರು, ಸಚಿವರ ಫೋನ್‌ಗಳನ್ನು ಟ್ಯಾಪ್‌ ಮಾಡಲಾಗುತ್ತಿದೆ ಎಂದು ಪ್ಯಾರಿಸ್ ಮೂಲದ ಪಾರ್ಬಿಡನ್ ಸ್ಟೋರಿಸ್ ತನಿಖಾ ವರದಿ ಬಹಿರಂಗ ಪಡಿಸಿದೆ. ಈಗಾಗಲೆ ಹ್ಯಾಕ್ ಮಾಡಲಾಗಿರುವ ಕೆಲವು ಪತ್ರಕರ್ತರ ಹೆಸರನ್ನು ವರದಿಯು ಬಿಡುಗಡೆ ಮಾಡಿದೆ. ಜೊತೆಗೆ ಪೆಗಾಸಸ್‌ ಹ್ಯಾಕ್‌ ಮಾಡಿರುವ ನ್ಯಾಯಾಧೀಶರ ಮತ್ತು ಇತರ ಹೆಸರುಗಳು ಶೀಘ್ರವೇ ಬಿಡುಗಡೆಯಾಗಲಿದೆ ಎಂದು ‘ದಿ ವೈರ್‌’ ಸುದ್ದಿ ಸಂಸ್ಥೆಯ ಸಂಪಾದಕ ಎಂಕೆ ವೇಣು ಸೋಮವಾರ ಹೇಳಿದ್ದಾರೆ.

ವಿಶ್ವದಾದ್ಯಂತ 50,000 ಫೋನ್‌ಗಳನ್ನು ಪೆಗಾಸಸ್‌‌ ತಂತ್ರಾಂಶವು ಟ್ಯಾಪ್‌ ಮಾಡಿದೆ ಎನ್ನಲಾಗಿದ್ದು, ತನಿಖಾ ವರದಿಗೆ ‘ಪೆಗಾಸಸ್‌ ಪ್ರಾಜೆಕ್ಟ್‌’ ಎಂದು ಕರೆಯಲಾಗಿದೆ. ತನಿಖಾ ವರದಿಯನ್ನು ಪ್ಯಾರಿಸ್‌ ಮೂಲದ ಲಾಭರಹಿತ ಮಾಧ್ಯಮ ಸಂಸ್ಥೆ ‘ಫಾರ್ಬಿಡೆನ್‌ ಸ್ಟೋರಿಸ್‌’, ಅಮ್ನೆಸ್ಟಿ ಇಂಟರ್‌ನ್ಯಾಷನಲ್‌, ಲೆ ಮಾಂಡೆ, ದಿ ಗಾರ್ಡಿಯನ್‌, ವಾಷಿಂಗ್ಟನ್‌ ಪೋಸ್ಟ್‌ ಸೇರಿದಂತೆ ಒಟ್ಟು 16 ಮೆಕ್ಸಿಕನ್‌, ಅರಬ್‌ ಮತ್ತು ಯುರೋಪಿನ ಸುದ್ದಿ ಸಂಸ್ಥೆಗಳು ಜಂಟಿಯಾಗಿ ನಡೆಸಿದೆ. ಈ ಜಂಟಿ ತನಿಖೆಯಲ್ಲಿ ಭಾರತದ ಆನ್‌ಲೈನ್‌ ಸುದ್ದಿ ಸಂಸ್ಥೆ ದಿ ವೈರ್‌ ಕೂಡಾ ಸೇರಿದೆ.

ಇದನ್ನೂ ಓದಿ: ಅವರು ಏನನ್ನು ಓದುತ್ತಿದ್ದಾರೆ ಎಂದು ನಮಗೆ ಗೊತ್ತು!: ‘ಪೆಗಾಸಸ್‌ ಪ್ರಾಜೆಕ್ಟ್‌’ಗೆ ರಾಹುಲ್ ಗಾಂಧಿ

‘ಪೆಗಾಸಸ್’ ಇಸ್ರೇಲಿ ಕಂಪನಿ ಎನ್‌ಎಸ್‌ಒ ಗ್ರೂಪ್‌ನ ಗೂಢಚರ್ಯೆ ತಂತ್ರಾಂಶವಾಗಿದೆ. ಈ ತಂತ್ರಾಂಶವನ್ನು ಪರವಾನಗಿ ಪಡೆದಿರುವ ಅಧಿಕೃತ ಸರಕಾರಿ ಏಜೆನ್ಸಿಗಳಿಗೆ ಅಥವಾ ಗುಪ್ತಚರ ಸಂಸ್ಥೆಗಳಿಗೆ ಮಾತ್ರವೇ ಮಾರುತ್ತೇವೆ ಎಂದು ಎನ್‌ಎಸ್‌ಒ ಹೇಳಿತ್ತು. ಪೆಗಾಸಸ್ ತಂತ್ರಾಂಗಳನ್ನು ಬಳಸಿಕೊಂಡು ಫೋನ್‌‌ಗಳನ್ನು ಹ್ಯಾಕ್ ಮಾಡಲಾಗಿದೆ ಎಂದು 2019 ರಲ್ಲಿ ಕೂಡಾ ವರದಿಯಾಗಿತ್ತು.

ತಮ್ಮ ತನಿಖಾ ವರದಿಯ ಬಗ್ಗೆ ಎನ್‌ಡಿಟಿವಿ ಜೊತೆ ಮಾತನಾಡಿದ ದಿವೈರ್‌ ಸಂಸ್ಥಾಪಕ ಸಂಪಾದಕ ಎಂಕೆ ವೇಣು, “ಪೆಗಾಸಸ್ ಹ್ಯಾಕ್ ಮಾಡಿರುವ ನ್ಯಾಯಾಧೀಶರ ಮತ್ತು ಇತರರ ಹೆಸರನ್ನು ಶೀಘ್ರವೇ ಬಹಿರಂಗಪಡಿಸಲಾಗುವುದು. ಇದು 2019 ರಲ್ಲಿ ಬಿಡುಗಡೆಯಾದ ಪಟ್ಟಿಗಿಂತ ಉದ್ದವಾಗಿದೆ. ಈ ಜನರನ್ನು ಕಣ್ಗಾವಲು ಯಾಕೆ ಮಾಡುತ್ತಿದ್ದೇವೆ ಎಂದು ಸರ್ಕಾರ ವಿವರಿಸಬೇಕು” ಎಂದು ಹೇಳಿದ್ದಾರೆ.

ಆದರೆ ಒಕ್ಕೂಟ ಸರ್ಕಾವು, ತನಿಖಾ ವರದಿಯನ್ನು ನಿರಾಕರಿಸಿದ್ದು, ನಿರ್ದಿಷ್ಟ ಜನರ ಮೇಲೆ ಸರ್ಕಾರ ಕಣ್ಗಾವಲು ಇಟ್ಟಿದೆ ಎಂಬುವುದಕ್ಕೆ ಯಾವುದೇ ದೃಡವಾದ ಆಧಾರವಿಲ್ಲ ಎಂದು ಹೇಳಿದೆ.

ತನಿಖಾ ವರದಿಯಲ್ಲಿ, ನರೇಂದ್ರ ಮೋದಿ ಸರ್ಕಾರದ ಇಬ್ಬರು ಸಚಿವರು, ಮೂವರು ವಿರೋಧ ಪಕ್ಷದ ನಾಯಕರು, ಒಬ್ಬ ನ್ಯಾಯಾಂಗದ ವ್ಯಕ್ತಿ, 40 ಪತ್ರಕರ್ತರು, ವಿಜ್ಞಾನಿಗಳು ಹಾಗೂ ಮಾನವ ಹಕ್ಕುಗಳ ಹೋರಾಟಗಾರರು ಸೇರಿದಂತೆ ಹಲವು ಉದ್ಯಮಿಗಳ ಫೋನ್‌‌ಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಇಸ್ರೇಲ್ ಮೂಲದ ಕಂಪೆನಿಯಿಂದ ಭಾರತದ 300 ಗಣ್ಯರ ಫೋನ್‌ಗಳು ಹ್ಯಾಕ್‌!

2019 ರ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ, ಸುಪ್ರೀಂ ಕೋರ್ಟ್ ನ್ಯಾಯಾಧೀಶರು, ನರೇಂದ್ರ ಮೋದಿ ಸರ್ಕಾರದಲ್ಲಿ ಸೇವೆ ಸಲ್ಲಿಸುತ್ತಿದ್ದ ಮಂತ್ರಿಗಳು ಸೇರಿದಂತೆ 2018 ಮತ್ತು 2019 ರ ನಡುವೆ ಹೆಚ್ಚಿನ ಜನರನ್ನು ಗುರಿಯಾಗಿಸಲಾಗಿತ್ತು ಎಂದು ದಿ ವೈರ್‌ ವರದಿ ಹೇಳಿದೆ.

ಇಷ್ಟೇ ಅಲ್ಲದೆ, ಭೀಮಾ ಕೋರೆಗಾಂವ್‌ ಪ್ರಕರಣದ ಆರೋಪಿಗಳಾದ 12 ಹೋರಾಟಗಾರರ ಫೋನ್‌ಗಳನ್ನು ಹ್ಯಾಕ್‌ ಮಾಡಲಾಗಿದ್ದು ಅವರ ಮೇಲೆ ಕಣ್ಗಾವಲು ಇಡಲಾಗಿದೆ ಎಂಬ ತನಿಖಾ ವರದಿಯು ಹೇಳಿದೆ. ವರದಿಯು ‘ಜಾಗತಿಕ ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಉಲ್ಲೇಖಿಸಿದೆ.

ಫೋನ್‌ ಹ್ಯಾಕ್ ಮಾಡಲಾಗಿರುವ ಭಾರತೀಯ ಪತ್ರಕರ್ತರಲ್ಲಿ ಸುಶಾಂತ್ ಸಿಂಗ್, ಜೆ. ಗೋಪಿಕೃಷ್ಣನ್‌, ಶಿಶಿರ್‌ ಗುಪ್ತಾ, ರಿತಿಕಾ ಚೋಪ್ರಾ, ಪ್ರಶಾಂತ್‌ ಝಾ, ಪ್ರೇಮ್‌ ಶಂಕರ್‌ ಝಾ, ಸ್ವಾತಿ ಚತುರ್ವೇದಿ, ರಾಹುಲ್‌ ಸಿಂಗ್‌, ಮುಜಮ್ಮಿಲ್‌ ಜಲೀಲ್‌, ಇಫ್ತಿಕಾರ್‌ ಗೀಲಾನಿ, ಸಂದೀಪ್‌ ಉನ್ನಿತಾನ್‌, ದಿ ವೈರ್‌ನ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಮತ್ತು ಎಂ.ಕೆ.ವೇಣು ಮುಂತಾದವರು ಸೇರಿದ್ದಾರೆ.

ಇದನ್ನೂ ಓದಿ: ಬಿಜೆಪಿ ಮುಗಿಸಲು ನಳಿನ್ ಕುಮಾರ್ ಕಟೀಲ್ ಒಬ್ಬರೇ ಸಾಕು: ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...