Homeಮುಖಪುಟಪೆಗಾಸಸ್ ಪ್ರಾಜೆಕ್ಟ್: ಶೀಘ್ರದಲ್ಲೇ ನ್ಯಾಯಾಧೀಶರ ಹೆಸರು ಬಹಿರಂಗ!

ಪೆಗಾಸಸ್ ಪ್ರಾಜೆಕ್ಟ್: ಶೀಘ್ರದಲ್ಲೇ ನ್ಯಾಯಾಧೀಶರ ಹೆಸರು ಬಹಿರಂಗ!

- Advertisement -
- Advertisement -

‘ಪೆಗಾಸಸ್’ ತಂತ್ರಾಂಶವನ್ನು ಬಳಸಿಕೊಂಡು ಭಾರತದ ವಿರೋಧ ಪಕ್ಷಗಳ ನಾಯಕರು, ಪತ್ರಕರ್ತರು, ಸಚಿವರ ಫೋನ್‌ಗಳನ್ನು ಟ್ಯಾಪ್‌ ಮಾಡಲಾಗುತ್ತಿದೆ ಎಂದು ಪ್ಯಾರಿಸ್ ಮೂಲದ ಪಾರ್ಬಿಡನ್ ಸ್ಟೋರಿಸ್ ತನಿಖಾ ವರದಿ ಬಹಿರಂಗ ಪಡಿಸಿದೆ. ಈಗಾಗಲೆ ಹ್ಯಾಕ್ ಮಾಡಲಾಗಿರುವ ಕೆಲವು ಪತ್ರಕರ್ತರ ಹೆಸರನ್ನು ವರದಿಯು ಬಿಡುಗಡೆ ಮಾಡಿದೆ. ಜೊತೆಗೆ ಪೆಗಾಸಸ್‌ ಹ್ಯಾಕ್‌ ಮಾಡಿರುವ ನ್ಯಾಯಾಧೀಶರ ಮತ್ತು ಇತರ ಹೆಸರುಗಳು ಶೀಘ್ರವೇ ಬಿಡುಗಡೆಯಾಗಲಿದೆ ಎಂದು ‘ದಿ ವೈರ್‌’ ಸುದ್ದಿ ಸಂಸ್ಥೆಯ ಸಂಪಾದಕ ಎಂಕೆ ವೇಣು ಸೋಮವಾರ ಹೇಳಿದ್ದಾರೆ.

ವಿಶ್ವದಾದ್ಯಂತ 50,000 ಫೋನ್‌ಗಳನ್ನು ಪೆಗಾಸಸ್‌‌ ತಂತ್ರಾಂಶವು ಟ್ಯಾಪ್‌ ಮಾಡಿದೆ ಎನ್ನಲಾಗಿದ್ದು, ತನಿಖಾ ವರದಿಗೆ ‘ಪೆಗಾಸಸ್‌ ಪ್ರಾಜೆಕ್ಟ್‌’ ಎಂದು ಕರೆಯಲಾಗಿದೆ. ತನಿಖಾ ವರದಿಯನ್ನು ಪ್ಯಾರಿಸ್‌ ಮೂಲದ ಲಾಭರಹಿತ ಮಾಧ್ಯಮ ಸಂಸ್ಥೆ ‘ಫಾರ್ಬಿಡೆನ್‌ ಸ್ಟೋರಿಸ್‌’, ಅಮ್ನೆಸ್ಟಿ ಇಂಟರ್‌ನ್ಯಾಷನಲ್‌, ಲೆ ಮಾಂಡೆ, ದಿ ಗಾರ್ಡಿಯನ್‌, ವಾಷಿಂಗ್ಟನ್‌ ಪೋಸ್ಟ್‌ ಸೇರಿದಂತೆ ಒಟ್ಟು 16 ಮೆಕ್ಸಿಕನ್‌, ಅರಬ್‌ ಮತ್ತು ಯುರೋಪಿನ ಸುದ್ದಿ ಸಂಸ್ಥೆಗಳು ಜಂಟಿಯಾಗಿ ನಡೆಸಿದೆ. ಈ ಜಂಟಿ ತನಿಖೆಯಲ್ಲಿ ಭಾರತದ ಆನ್‌ಲೈನ್‌ ಸುದ್ದಿ ಸಂಸ್ಥೆ ದಿ ವೈರ್‌ ಕೂಡಾ ಸೇರಿದೆ.

ಇದನ್ನೂ ಓದಿ: ಅವರು ಏನನ್ನು ಓದುತ್ತಿದ್ದಾರೆ ಎಂದು ನಮಗೆ ಗೊತ್ತು!: ‘ಪೆಗಾಸಸ್‌ ಪ್ರಾಜೆಕ್ಟ್‌’ಗೆ ರಾಹುಲ್ ಗಾಂಧಿ

‘ಪೆಗಾಸಸ್’ ಇಸ್ರೇಲಿ ಕಂಪನಿ ಎನ್‌ಎಸ್‌ಒ ಗ್ರೂಪ್‌ನ ಗೂಢಚರ್ಯೆ ತಂತ್ರಾಂಶವಾಗಿದೆ. ಈ ತಂತ್ರಾಂಶವನ್ನು ಪರವಾನಗಿ ಪಡೆದಿರುವ ಅಧಿಕೃತ ಸರಕಾರಿ ಏಜೆನ್ಸಿಗಳಿಗೆ ಅಥವಾ ಗುಪ್ತಚರ ಸಂಸ್ಥೆಗಳಿಗೆ ಮಾತ್ರವೇ ಮಾರುತ್ತೇವೆ ಎಂದು ಎನ್‌ಎಸ್‌ಒ ಹೇಳಿತ್ತು. ಪೆಗಾಸಸ್ ತಂತ್ರಾಂಗಳನ್ನು ಬಳಸಿಕೊಂಡು ಫೋನ್‌‌ಗಳನ್ನು ಹ್ಯಾಕ್ ಮಾಡಲಾಗಿದೆ ಎಂದು 2019 ರಲ್ಲಿ ಕೂಡಾ ವರದಿಯಾಗಿತ್ತು.

ತಮ್ಮ ತನಿಖಾ ವರದಿಯ ಬಗ್ಗೆ ಎನ್‌ಡಿಟಿವಿ ಜೊತೆ ಮಾತನಾಡಿದ ದಿವೈರ್‌ ಸಂಸ್ಥಾಪಕ ಸಂಪಾದಕ ಎಂಕೆ ವೇಣು, “ಪೆಗಾಸಸ್ ಹ್ಯಾಕ್ ಮಾಡಿರುವ ನ್ಯಾಯಾಧೀಶರ ಮತ್ತು ಇತರರ ಹೆಸರನ್ನು ಶೀಘ್ರವೇ ಬಹಿರಂಗಪಡಿಸಲಾಗುವುದು. ಇದು 2019 ರಲ್ಲಿ ಬಿಡುಗಡೆಯಾದ ಪಟ್ಟಿಗಿಂತ ಉದ್ದವಾಗಿದೆ. ಈ ಜನರನ್ನು ಕಣ್ಗಾವಲು ಯಾಕೆ ಮಾಡುತ್ತಿದ್ದೇವೆ ಎಂದು ಸರ್ಕಾರ ವಿವರಿಸಬೇಕು” ಎಂದು ಹೇಳಿದ್ದಾರೆ.

ಆದರೆ ಒಕ್ಕೂಟ ಸರ್ಕಾವು, ತನಿಖಾ ವರದಿಯನ್ನು ನಿರಾಕರಿಸಿದ್ದು, ನಿರ್ದಿಷ್ಟ ಜನರ ಮೇಲೆ ಸರ್ಕಾರ ಕಣ್ಗಾವಲು ಇಟ್ಟಿದೆ ಎಂಬುವುದಕ್ಕೆ ಯಾವುದೇ ದೃಡವಾದ ಆಧಾರವಿಲ್ಲ ಎಂದು ಹೇಳಿದೆ.

ತನಿಖಾ ವರದಿಯಲ್ಲಿ, ನರೇಂದ್ರ ಮೋದಿ ಸರ್ಕಾರದ ಇಬ್ಬರು ಸಚಿವರು, ಮೂವರು ವಿರೋಧ ಪಕ್ಷದ ನಾಯಕರು, ಒಬ್ಬ ನ್ಯಾಯಾಂಗದ ವ್ಯಕ್ತಿ, 40 ಪತ್ರಕರ್ತರು, ವಿಜ್ಞಾನಿಗಳು ಹಾಗೂ ಮಾನವ ಹಕ್ಕುಗಳ ಹೋರಾಟಗಾರರು ಸೇರಿದಂತೆ ಹಲವು ಉದ್ಯಮಿಗಳ ಫೋನ್‌‌ಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಇಸ್ರೇಲ್ ಮೂಲದ ಕಂಪೆನಿಯಿಂದ ಭಾರತದ 300 ಗಣ್ಯರ ಫೋನ್‌ಗಳು ಹ್ಯಾಕ್‌!

2019 ರ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ, ಸುಪ್ರೀಂ ಕೋರ್ಟ್ ನ್ಯಾಯಾಧೀಶರು, ನರೇಂದ್ರ ಮೋದಿ ಸರ್ಕಾರದಲ್ಲಿ ಸೇವೆ ಸಲ್ಲಿಸುತ್ತಿದ್ದ ಮಂತ್ರಿಗಳು ಸೇರಿದಂತೆ 2018 ಮತ್ತು 2019 ರ ನಡುವೆ ಹೆಚ್ಚಿನ ಜನರನ್ನು ಗುರಿಯಾಗಿಸಲಾಗಿತ್ತು ಎಂದು ದಿ ವೈರ್‌ ವರದಿ ಹೇಳಿದೆ.

ಇಷ್ಟೇ ಅಲ್ಲದೆ, ಭೀಮಾ ಕೋರೆಗಾಂವ್‌ ಪ್ರಕರಣದ ಆರೋಪಿಗಳಾದ 12 ಹೋರಾಟಗಾರರ ಫೋನ್‌ಗಳನ್ನು ಹ್ಯಾಕ್‌ ಮಾಡಲಾಗಿದ್ದು ಅವರ ಮೇಲೆ ಕಣ್ಗಾವಲು ಇಡಲಾಗಿದೆ ಎಂಬ ತನಿಖಾ ವರದಿಯು ಹೇಳಿದೆ. ವರದಿಯು ‘ಜಾಗತಿಕ ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಉಲ್ಲೇಖಿಸಿದೆ.

ಫೋನ್‌ ಹ್ಯಾಕ್ ಮಾಡಲಾಗಿರುವ ಭಾರತೀಯ ಪತ್ರಕರ್ತರಲ್ಲಿ ಸುಶಾಂತ್ ಸಿಂಗ್, ಜೆ. ಗೋಪಿಕೃಷ್ಣನ್‌, ಶಿಶಿರ್‌ ಗುಪ್ತಾ, ರಿತಿಕಾ ಚೋಪ್ರಾ, ಪ್ರಶಾಂತ್‌ ಝಾ, ಪ್ರೇಮ್‌ ಶಂಕರ್‌ ಝಾ, ಸ್ವಾತಿ ಚತುರ್ವೇದಿ, ರಾಹುಲ್‌ ಸಿಂಗ್‌, ಮುಜಮ್ಮಿಲ್‌ ಜಲೀಲ್‌, ಇಫ್ತಿಕಾರ್‌ ಗೀಲಾನಿ, ಸಂದೀಪ್‌ ಉನ್ನಿತಾನ್‌, ದಿ ವೈರ್‌ನ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಮತ್ತು ಎಂ.ಕೆ.ವೇಣು ಮುಂತಾದವರು ಸೇರಿದ್ದಾರೆ.

ಇದನ್ನೂ ಓದಿ: ಬಿಜೆಪಿ ಮುಗಿಸಲು ನಳಿನ್ ಕುಮಾರ್ ಕಟೀಲ್ ಒಬ್ಬರೇ ಸಾಕು: ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....