Homeಮುಖಪುಟಪೆಗಾಸಸ್ ಪ್ರಾಜೆಕ್ಟ್: ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಕಾಂಗ್ರೆಸ್ ಒತ್ತಾಯ

ಪೆಗಾಸಸ್ ಪ್ರಾಜೆಕ್ಟ್: ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಕಾಂಗ್ರೆಸ್ ಒತ್ತಾಯ

- Advertisement -
- Advertisement -

ಪೆಗಾಸಸ್ ಗೂಢಚರ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಮಂಗಳವಾರ ಪ್ರತಿಪಕ್ಷ ಕಾಂಗ್ರೆಸ್ ಒಕ್ಕೂಟ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದೆ. ಜಂಟಿ ಸಂಸದೀಯ ಸಮಿತಿಯ ತನಿಖೆಗೆ ವಹಿಸಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ. ವಿಪಕ್ಷಗಳು ಉಭಯ ಸದನಗಳಲ್ಲಿ ಪೆಗಾಸಸ್ ಪ್ರಾಜೆಕ್ಟ್‌ ಬಗ್ಗೆ ಚರ್ಚೆಗೆ ಒತ್ತಾಯಿಸಿದವು.

ಪ್ರತಿಪಕ್ಷದ ಸದಸ್ಯರು ಉಭಯ ಸದನಗಳಲ್ಲಿ ಪೆಗಾಸಸ್ ಪ್ರಾಜೆಕ್ಟ್‌ ಬಗ್ಗೆ ಗದ್ದಲ ನಡೆಸಿದ್ದಾರೆ. ಇಸ್ರೇಲಿ ಪೆಗಾಸಸ್ ಸ್ಪೈವೇರ್ ಬಳಸಿ ಪತ್ರಕರ್ತರು, ರಾಜಕಾರಣಿಗಳು, ಮಂತ್ರಿಗಳು, ನ್ಯಾಯಾಧೀಶರು ಮತ್ತು ಇತರರ ಮೇಲೆ  ಗೂಢಚರ್ಯೆ ನಡೆಸಿರುವ ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಸಂಸತ್ತಿನ ಉಭಯ ಸದನಗಳಲ್ಲಿ ಚರ್ಚೆಯನ್ನು ಪ್ರಾರಂಭಿಸುವ ಮೊದಲು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸಭೆ ಸೇರಿ ಈ ವಿಷಯದ ಬಗ್ಗೆ ತಮ್ಮ ಯೋಜನೆಯನ್ನು ನಿರ್ಧರಿಸಿದ್ದರು. ಈ ಬಗ್ಗೆ ಚರ್ಚಿಸಲು ಒತ್ತಾಯಿಸಿ ಹಲವರು ಉಭಯ ಸದನಗಳಲ್ಲಿ ಮುಂದೂಡಿಕೆ ನೋಟಿಸ್ ನೀಡಿದ್ದರು.

ಇದನ್ನೂ ಓದಿ: ಅವರು ಏನನ್ನು ಓದುತ್ತಿದ್ದಾರೆ ಎಂದು ನಮಗೆ ಗೊತ್ತು!: ‘ಪೆಗಾಸಸ್‌ ಪ್ರಾಜೆಕ್ಟ್‌’ಗೆ ರಾಹುಲ್ ಗಾಂಧಿ

ಕಾಂಗ್ರೆಸ್ ವಕ್ತಾರ ಶಕ್ತಿಸಿನ್ಹಾ ಗೋಹಿಲ್, “ಪೆಗಾಸಸ್ ಸ್ಪೈವೇರ್ ಖರೀದಿಸಿದ್ದಾರೋ ಇಲ್ಲವೋ ಎಂಬುದನ್ನು ಸರ್ಕಾರ ಸ್ಪಷ್ಟವಾಗಿ ಹೇಳಬೇಕು ಮತ್ತು ಜಂಟಿ ಸಂಸದೀಯ ತನಿಖೆ ನಡೆಸಬೇಕು. ಗೂಢಚರ್ಯೆ ಮತ್ತು ಫೋನ್ ಟ್ಯಾಪಿಂಗ್ ವಿಷಯದ ಬಗ್ಗೆ ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಸರ್ಕಾರ ಆದೇಶಿಸಬೇಕು ಎಂಬುದು ಪಕ್ಷದ ಬೇಡಿಕೆಯಾಗಿದೆ” ಎಂದು ಹೇಳಿದ್ದಾರೆ.

ಫೋನ್ ಟ್ಯಾಪಿಂಗ್ ವಿಷಯದಲ್ಲಿ ರಾಷ್ಟ್ರೀಯ ಭದ್ರತೆ ಮತ್ತು ಸಂವಿಧಾನದ ಅಡಿಯಲ್ಲಿರುವ ಮೂಲಭೂತ ಹಕ್ಕುಗಳ ಉಲ್ಲಂಘನೆ ಕುರಿತು ಚರ್ಚೆ ನಡೆಸಲು ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಮುಂದೂಡಿಕೆ ನೋಟಿಸ್ ನೀಡಿದ್ದೇವೆ ಎಂದು ಶಕ್ತಿಸಿನ್ಹಾ ಗೋಹಿಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಪೆಗಾಸಸ್ ಸಾಫ್ಟ್‌ವೇರ್ ಬಳಸಿ ರಾಜಕಾರಣಿಗಳು, ಪತ್ರಕರ್ತರು ಮತ್ತು ಇತರರ ಮೇಲೆ ಗೂಢಚರ್ಯೆ ನಡೆಸಿರುವ ಆರೋಪಗಳನ್ನು ಒಕ್ಕೂಟ ಸರ್ಕಾರ ಸೋಮವಾರ ಸ್ಪಷ್ಟವಾಗಿ ತಿರಸ್ಕರಿಸಿದೆ ಎಂದು ಆರೋಪಿಸಿದ್ದಾರೆ.

ಇಸ್ರೇಲಿ ಕಂಪನಿ ಎನ್‌ಎಸ್‌ಒ ಗ್ರೂಪ್‌ನ ಪೆಗಾಸಸ್ ಗೂಢಚರ್ಯೆ ತಂತ್ರಾಂಶ ಬಳಸಿಕೊಂಡು ಪ್ರಸ್ತುತ ಸಂಪುಟದಲ್ಲಿರುವ ಇಬ್ಬರು ಮಂತ್ರಿಗಳು, 40 ಕ್ಕೂ ಹೆಚ್ಚು ಪತ್ರಕರ್ತರು, ಮೂವರು ವಿರೋಧ ಪಕ್ಷದ ನಾಯಕರು ಮತ್ತು ಒಬ್ಬ ನ್ಯಾಯಾಧೀಶರು, ಹಲವಾರು ಉದ್ಯಮಿಗಳು ಮತ್ತು  ಹೋರಾಟಗಾರರು ಸೇರಿದಂತೆ 300 ಕ್ಕೂ ಹೆಚ್ಚು ಜನರ ಮೊಬೈಲ್ ಫೋನ್ ಸಂಖ್ಯೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಪ್ಯಾರಿಸ್ ಮೂಲದ ಫಾರ್ಬಿಡನ್ ಸ್ಟೋರೀಸ್‌ ಸಂಸ್ಥೆ ನಡೆಸಿದ ತನಿಖೆಯಿಂದ ಬಹಿರಂಗಗೊಂಡಿದೆ.


ಇದನ್ನೂ ಓದಿ: ನ್ಯಾ. ರಂಜನ್ ಗೊಗೊಯ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾಕೆಯ ಇಡೀ ಕುಟುಂಬದ ಮೇಲೆ ಪೆಗಾಸಸ್ ಕಣ್ಗಾವಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...