Homeಮುಖಪುಟಪೆಗಾಸಸ್ ಪ್ರಕರಣ: ಸ್ವತಂತ್ರ ತನಿಖೆ ನಡೆಸಲಿರುವ ಸಮಿತಿ ಸದಸ್ಯರು ಇವರು

ಪೆಗಾಸಸ್ ಪ್ರಕರಣ: ಸ್ವತಂತ್ರ ತನಿಖೆ ನಡೆಸಲಿರುವ ಸಮಿತಿ ಸದಸ್ಯರು ಇವರು

- Advertisement -
- Advertisement -

ಇಸ್ರೇಲ್ ಮೂಲದ NSO ಸಂಸ್ಥೆಯ ಗೂಢಚಾರ ತಂತ್ರಾಂಶವಾದ ಪೆಗಾಸಸ್ ಅನ್ನು ಬಳಸಿಕೊಂಡು ಭಾರತದ ಗಣ್ಯ ವ್ಯಕ್ತಿಗಳು, ರಾಜಕಾರಣಿಗಳು ಮತ್ತು ಪತ್ರಕರ್ತರ ಮೇಲೆ ಕಣ್ಗಾವಲು ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವತಂತ್ರ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಬುಧವಾರ ಮೂರು ಸದಸ್ಯರ ಸಮಿತಿ ನೇಮಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಈ ಆದೇಶ ಹೊರಡಿಸಿದೆ. ಮೂವರು ಸದಸ್ಯರ ಸಮಿತಿಯನ್ನು ನಿವೃತ್ತ ನ್ಯಾಯಮೂರ್ತಿ ಆರ್‌.ವಿ.ರವೀಂದ್ರನ್ ಮೇಲ್ವಿಚಾರಣೆ ನಡೆಸಲಿದೆ.

ಡಾ. ನವೀನ್ ಕುಮಾರ್ ಚೌಧರಿ, ಗಾಂಧಿನಗರದ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ಡೀನ್, ಡಾ. ಪ್ರಭಾಹರನ್ ಪಿ, ಕೇರಳದ ಅಮೃತ ವಿಶ್ವ ವಿದ್ಯಾಪೀಠದ ಪ್ರಾಧ್ಯಾಪಕ ಮತ್ತು ಡಾ. ಅಶ್ವಿನ್ ಅನಿಲ್ ಗುಮಸ್ತೆ, ಬಾಂಬೆಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಇನ್‌ಸ್ಟಿಟ್ಯೂಟ್ ಚೇರ್ ಅಸೋಸಿಯೇಟ್ ಪ್ರೊಫೆಸರ್ ಈ ಮೂವರು ಸಮಿತಿ ಸದಸ್ಯರಾಗಿದ್ದಾರೆ.

ಇದನ್ನೂ ಓದಿ: ಪೆಗಾಸಸ್ ಹಗರಣ ತನಿಖೆಗೆ ಸಮಿತಿ ರಚನೆ: ಸುಪ್ರೀಂ ಹೇಳಿಕೆ

ಸಮಿತಿಯ ಮೇಲ್ವಿಚಾರಣೆ ನಡೆಸಲಿರುವ ನಿವೃತ್ತ ನ್ಯಾಯಮೂರ್ತಿ ಆರ್. ವಿ. ರವೀಂದ್ರನ್, ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರು. ಇತ್ತೀಚೆಗೆ ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರು “ಭಾರತದ ಸುಪ್ರೀಂ ಕೋರ್ಟ್‌ನ ಪ್ರತಿಷ್ಠೆಯನ್ನು ಹೆಚ್ಚಿಸಿದ ದಂತಕಥೆಗಳಲ್ಲಿ ಒಬ್ಬರು” ಎಂದು ಉಲ್ಲೇಖಿಸಿದ್ದರು.

ಪ್ರೊ.ಡಾ.ನವೀನ್ ಕುಮಾರ್ ಚೌಧರಿ: ಸೈಬರ್ ಸೆಕ್ಯುರಿಟಿ, ಇ-ಆಡಳಿತ, ಡಿಜಿಟಲ್ ಫೊರೆನ್ಸಿಕ್ಸ್, ನೆಟ್‌ವರ್ಕ್ ಸೆಕ್ಯುರಿಟಿ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಪರಿಣಿತರಾಗಿದ್ದಾರೆ. ಪ್ರೊ.ಚೌಧರಿ ಯುಜಿಸಿ ಸಮಿತಿಯ ಸದಸ್ಯರೂ ಆಗಿದ್ದಾರೆ. ಜೊತೆಗೆ ಗುಜರಾತ್‌ನ ಗಾಂಧಿನಗರದಲ್ಲಿರುವ ರಾಷ್ಟ್ರೀಯ ವಿಧಿವಿಜ್ಞಾನ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಡೀನ್ ಆಗಿದ್ದಾರೆ.

ಡಾ. ಅಶ್ವಿನ್ ಅನಿಲ್ ಗುಮಸ್ತೆ: ಇವರು ಐಐಟಿ ಬಾಂಬೆಯಲ್ಲಿ ಇನ್ಸ್ಟಿಟ್ಯೂಟ್ ಚೇರ್ ಅಸೋಸಿಯೇಟ್ ಪ್ರೊಫೆಸರ್ (ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್) ಹುದ್ದೆಯನ್ನು ಹೊಂದಿದ್ದಾರೆ. ವಿಜ್ಞಾನ ಮತ್ತು ತಂತ್ರಜ್ಞಾನದ ಕೊಡುಗೆಗಾಗಿ 2018 ರಲ್ಲಿ ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿಯನ್ನು ಪಡೆದಿದ್ದಾರೆ. ಆಪ್ಟಿಕಲ್ ನೆಟ್‌ವರ್ಕ್‌ಗಳು, ಬ್ರಾಡ್‌ಬ್ಯಾಂಡ್ ಸಂವಹನ, ಎಂಡ್-ಟು-ಎಂಡ್ ನೆಟ್‌ವರ್ಕ್‌ಗಳು ಇವರು ಪರಿಣತಿ ಹೊಂದಿರುವ ಕೆಲವು ಕ್ಷೇತ್ರಗಳಾಗಿವೆ.

ಡಾ. ಪ್ರಭಾಹರನ್ ಪಿ: ಕೇರಳದ ಅಮೃತ ವಿಶ್ವ ವಿದ್ಯಾಪೀಠಂ ಸ್ಕೂಲ್ ಆಫ್ ಎಂಜಿನಿಯರಿಂಗ್‌ನಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಸೈಬರ್ ಸೆಕ್ಯೂರಿಟಿಯಲ್ಲಿ ಪರಿಣತಿ ಹೊಂದಿದ್ದಾರೆ.

ನಿವೃತ್ತ ನ್ಯಾಯಮೂರ್ತಿ ಆರ್‌.ವಿ.ರವೀಂದ್ರನ್ ಅವರ ಮೇಲ್ವಿಚಾರಣೆಯ ತ್ರಿಸದಸ್ಯ ಸಮಿತಿ ಪೆಗಾಸಸ್ ಕುರಿತಾದ ಆರೋಪಗಳನ್ನು ಕೂಲಂಕುಷವಾಗಿ ಮತ್ತು ತ್ವರಿತವಾಗಿ ಪರಿಶೀಲಿಸಿ ವರದಿ ಸಲ್ಲಿಸುವಂತೆ ನ್ಯಾಯಾಲಯ ಹೇಳಿದೆ.  ಎಂಟು ವಾರಗಳ ನಂತರ ನ್ಯಾಯಾಲಯವು ಪ್ರಕರಣವನ್ನು ಮತ್ತೊಮ್ಮೆ ವಿಚಾರಣೆ ನಡೆಸಲಿದೆ.

ವಿಚಾರಣೆ ವೇಳೆ, “ಪ್ರಕರಣದಲ್ಲಿ ಸರ್ಕಾರದಿಂದ ಅಸ್ಪಷ್ಟ ನಿರಾಕರಣೆ ಸಾಕಾಗುವುದಿಲ್ಲ. ಹೀಗಾಗಿ ಆರೋಪಗಳ ಬಗ್ಗೆ ತನಿಖೆಯಾಗಬೇಕು. ಪದೇ ಪದೇ ಅವಕಾಶ ನೀಡಿದರೂ ಸರ್ಕಾರ ಸ್ಪಷ್ಟತೆ ನೀಡದ ಸೀಮಿತ ಅಫಿಡವಿಟ್ ನೀಡುತ್ತಿದ್ದಾರೆ. ಅವರು ಸ್ಪಷ್ಟನೆ ನೀಡಿದ್ದರೆ ನಮ್ಮ ಮೇಲಿನ ಹೊರೆ ಕಡಿಮೆಯಾಗುತ್ತಿತ್ತು. ನ್ಯಾಯಾಲಯವು ರಾಷ್ಟ್ರೀಯ ಭದ್ರತೆಯನ್ನು ಅತಿಕ್ರಮಿಸುವುದಿಲ್ಲ. ಆದರೆ, ನ್ಯಾಯಾಲಯ ಮೂಕ ಪ್ರೇಕ್ಷಕರಂತೆ ಇರುವುದಿಲ್ಲ’ ಎಂದು ನ್ಯಾಯಪೀಠ ಹೇಳಿದೆ.


ಇದನ್ನೂ ಓದಿ: ಪೆಗಾಸಸ್ ಪ್ರಕರಣ: ಕೇಂದ್ರದ ಅಸ್ಪಷ್ಟ ನಿರಾಕರಣೆ ಸಾಕಾಗದು, ಸ್ವತಂತ್ರ ತನಿಖೆ ಅಗತ್ಯ- ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...