Homeಮುಖಪುಟಪೆಗಾಸಸ್ ಪ್ರಕರಣ: ಸ್ವತಂತ್ರ ತನಿಖೆ ನಡೆಸಲಿರುವ ಸಮಿತಿ ಸದಸ್ಯರು ಇವರು

ಪೆಗಾಸಸ್ ಪ್ರಕರಣ: ಸ್ವತಂತ್ರ ತನಿಖೆ ನಡೆಸಲಿರುವ ಸಮಿತಿ ಸದಸ್ಯರು ಇವರು

- Advertisement -
- Advertisement -

ಇಸ್ರೇಲ್ ಮೂಲದ NSO ಸಂಸ್ಥೆಯ ಗೂಢಚಾರ ತಂತ್ರಾಂಶವಾದ ಪೆಗಾಸಸ್ ಅನ್ನು ಬಳಸಿಕೊಂಡು ಭಾರತದ ಗಣ್ಯ ವ್ಯಕ್ತಿಗಳು, ರಾಜಕಾರಣಿಗಳು ಮತ್ತು ಪತ್ರಕರ್ತರ ಮೇಲೆ ಕಣ್ಗಾವಲು ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವತಂತ್ರ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಬುಧವಾರ ಮೂರು ಸದಸ್ಯರ ಸಮಿತಿ ನೇಮಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಈ ಆದೇಶ ಹೊರಡಿಸಿದೆ. ಮೂವರು ಸದಸ್ಯರ ಸಮಿತಿಯನ್ನು ನಿವೃತ್ತ ನ್ಯಾಯಮೂರ್ತಿ ಆರ್‌.ವಿ.ರವೀಂದ್ರನ್ ಮೇಲ್ವಿಚಾರಣೆ ನಡೆಸಲಿದೆ.

ಡಾ. ನವೀನ್ ಕುಮಾರ್ ಚೌಧರಿ, ಗಾಂಧಿನಗರದ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ಡೀನ್, ಡಾ. ಪ್ರಭಾಹರನ್ ಪಿ, ಕೇರಳದ ಅಮೃತ ವಿಶ್ವ ವಿದ್ಯಾಪೀಠದ ಪ್ರಾಧ್ಯಾಪಕ ಮತ್ತು ಡಾ. ಅಶ್ವಿನ್ ಅನಿಲ್ ಗುಮಸ್ತೆ, ಬಾಂಬೆಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಇನ್‌ಸ್ಟಿಟ್ಯೂಟ್ ಚೇರ್ ಅಸೋಸಿಯೇಟ್ ಪ್ರೊಫೆಸರ್ ಈ ಮೂವರು ಸಮಿತಿ ಸದಸ್ಯರಾಗಿದ್ದಾರೆ.

ಇದನ್ನೂ ಓದಿ: ಪೆಗಾಸಸ್ ಹಗರಣ ತನಿಖೆಗೆ ಸಮಿತಿ ರಚನೆ: ಸುಪ್ರೀಂ ಹೇಳಿಕೆ

ಸಮಿತಿಯ ಮೇಲ್ವಿಚಾರಣೆ ನಡೆಸಲಿರುವ ನಿವೃತ್ತ ನ್ಯಾಯಮೂರ್ತಿ ಆರ್. ವಿ. ರವೀಂದ್ರನ್, ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರು. ಇತ್ತೀಚೆಗೆ ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರು “ಭಾರತದ ಸುಪ್ರೀಂ ಕೋರ್ಟ್‌ನ ಪ್ರತಿಷ್ಠೆಯನ್ನು ಹೆಚ್ಚಿಸಿದ ದಂತಕಥೆಗಳಲ್ಲಿ ಒಬ್ಬರು” ಎಂದು ಉಲ್ಲೇಖಿಸಿದ್ದರು.

ಪ್ರೊ.ಡಾ.ನವೀನ್ ಕುಮಾರ್ ಚೌಧರಿ: ಸೈಬರ್ ಸೆಕ್ಯುರಿಟಿ, ಇ-ಆಡಳಿತ, ಡಿಜಿಟಲ್ ಫೊರೆನ್ಸಿಕ್ಸ್, ನೆಟ್‌ವರ್ಕ್ ಸೆಕ್ಯುರಿಟಿ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಪರಿಣಿತರಾಗಿದ್ದಾರೆ. ಪ್ರೊ.ಚೌಧರಿ ಯುಜಿಸಿ ಸಮಿತಿಯ ಸದಸ್ಯರೂ ಆಗಿದ್ದಾರೆ. ಜೊತೆಗೆ ಗುಜರಾತ್‌ನ ಗಾಂಧಿನಗರದಲ್ಲಿರುವ ರಾಷ್ಟ್ರೀಯ ವಿಧಿವಿಜ್ಞಾನ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಡೀನ್ ಆಗಿದ್ದಾರೆ.

ಡಾ. ಅಶ್ವಿನ್ ಅನಿಲ್ ಗುಮಸ್ತೆ: ಇವರು ಐಐಟಿ ಬಾಂಬೆಯಲ್ಲಿ ಇನ್ಸ್ಟಿಟ್ಯೂಟ್ ಚೇರ್ ಅಸೋಸಿಯೇಟ್ ಪ್ರೊಫೆಸರ್ (ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್) ಹುದ್ದೆಯನ್ನು ಹೊಂದಿದ್ದಾರೆ. ವಿಜ್ಞಾನ ಮತ್ತು ತಂತ್ರಜ್ಞಾನದ ಕೊಡುಗೆಗಾಗಿ 2018 ರಲ್ಲಿ ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿಯನ್ನು ಪಡೆದಿದ್ದಾರೆ. ಆಪ್ಟಿಕಲ್ ನೆಟ್‌ವರ್ಕ್‌ಗಳು, ಬ್ರಾಡ್‌ಬ್ಯಾಂಡ್ ಸಂವಹನ, ಎಂಡ್-ಟು-ಎಂಡ್ ನೆಟ್‌ವರ್ಕ್‌ಗಳು ಇವರು ಪರಿಣತಿ ಹೊಂದಿರುವ ಕೆಲವು ಕ್ಷೇತ್ರಗಳಾಗಿವೆ.

ಡಾ. ಪ್ರಭಾಹರನ್ ಪಿ: ಕೇರಳದ ಅಮೃತ ವಿಶ್ವ ವಿದ್ಯಾಪೀಠಂ ಸ್ಕೂಲ್ ಆಫ್ ಎಂಜಿನಿಯರಿಂಗ್‌ನಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಸೈಬರ್ ಸೆಕ್ಯೂರಿಟಿಯಲ್ಲಿ ಪರಿಣತಿ ಹೊಂದಿದ್ದಾರೆ.

ನಿವೃತ್ತ ನ್ಯಾಯಮೂರ್ತಿ ಆರ್‌.ವಿ.ರವೀಂದ್ರನ್ ಅವರ ಮೇಲ್ವಿಚಾರಣೆಯ ತ್ರಿಸದಸ್ಯ ಸಮಿತಿ ಪೆಗಾಸಸ್ ಕುರಿತಾದ ಆರೋಪಗಳನ್ನು ಕೂಲಂಕುಷವಾಗಿ ಮತ್ತು ತ್ವರಿತವಾಗಿ ಪರಿಶೀಲಿಸಿ ವರದಿ ಸಲ್ಲಿಸುವಂತೆ ನ್ಯಾಯಾಲಯ ಹೇಳಿದೆ.  ಎಂಟು ವಾರಗಳ ನಂತರ ನ್ಯಾಯಾಲಯವು ಪ್ರಕರಣವನ್ನು ಮತ್ತೊಮ್ಮೆ ವಿಚಾರಣೆ ನಡೆಸಲಿದೆ.

ವಿಚಾರಣೆ ವೇಳೆ, “ಪ್ರಕರಣದಲ್ಲಿ ಸರ್ಕಾರದಿಂದ ಅಸ್ಪಷ್ಟ ನಿರಾಕರಣೆ ಸಾಕಾಗುವುದಿಲ್ಲ. ಹೀಗಾಗಿ ಆರೋಪಗಳ ಬಗ್ಗೆ ತನಿಖೆಯಾಗಬೇಕು. ಪದೇ ಪದೇ ಅವಕಾಶ ನೀಡಿದರೂ ಸರ್ಕಾರ ಸ್ಪಷ್ಟತೆ ನೀಡದ ಸೀಮಿತ ಅಫಿಡವಿಟ್ ನೀಡುತ್ತಿದ್ದಾರೆ. ಅವರು ಸ್ಪಷ್ಟನೆ ನೀಡಿದ್ದರೆ ನಮ್ಮ ಮೇಲಿನ ಹೊರೆ ಕಡಿಮೆಯಾಗುತ್ತಿತ್ತು. ನ್ಯಾಯಾಲಯವು ರಾಷ್ಟ್ರೀಯ ಭದ್ರತೆಯನ್ನು ಅತಿಕ್ರಮಿಸುವುದಿಲ್ಲ. ಆದರೆ, ನ್ಯಾಯಾಲಯ ಮೂಕ ಪ್ರೇಕ್ಷಕರಂತೆ ಇರುವುದಿಲ್ಲ’ ಎಂದು ನ್ಯಾಯಪೀಠ ಹೇಳಿದೆ.


ಇದನ್ನೂ ಓದಿ: ಪೆಗಾಸಸ್ ಪ್ರಕರಣ: ಕೇಂದ್ರದ ಅಸ್ಪಷ್ಟ ನಿರಾಕರಣೆ ಸಾಕಾಗದು, ಸ್ವತಂತ್ರ ತನಿಖೆ ಅಗತ್ಯ- ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...