Homeಮುಖಪುಟಪೆಗಾಸಸ್ ಪ್ರಕರಣ: ಸ್ವತಂತ್ರ ತನಿಖೆ ನಡೆಸಲಿರುವ ಸಮಿತಿ ಸದಸ್ಯರು ಇವರು

ಪೆಗಾಸಸ್ ಪ್ರಕರಣ: ಸ್ವತಂತ್ರ ತನಿಖೆ ನಡೆಸಲಿರುವ ಸಮಿತಿ ಸದಸ್ಯರು ಇವರು

- Advertisement -
- Advertisement -

ಇಸ್ರೇಲ್ ಮೂಲದ NSO ಸಂಸ್ಥೆಯ ಗೂಢಚಾರ ತಂತ್ರಾಂಶವಾದ ಪೆಗಾಸಸ್ ಅನ್ನು ಬಳಸಿಕೊಂಡು ಭಾರತದ ಗಣ್ಯ ವ್ಯಕ್ತಿಗಳು, ರಾಜಕಾರಣಿಗಳು ಮತ್ತು ಪತ್ರಕರ್ತರ ಮೇಲೆ ಕಣ್ಗಾವಲು ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವತಂತ್ರ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಬುಧವಾರ ಮೂರು ಸದಸ್ಯರ ಸಮಿತಿ ನೇಮಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಈ ಆದೇಶ ಹೊರಡಿಸಿದೆ. ಮೂವರು ಸದಸ್ಯರ ಸಮಿತಿಯನ್ನು ನಿವೃತ್ತ ನ್ಯಾಯಮೂರ್ತಿ ಆರ್‌.ವಿ.ರವೀಂದ್ರನ್ ಮೇಲ್ವಿಚಾರಣೆ ನಡೆಸಲಿದೆ.

ಡಾ. ನವೀನ್ ಕುಮಾರ್ ಚೌಧರಿ, ಗಾಂಧಿನಗರದ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ಡೀನ್, ಡಾ. ಪ್ರಭಾಹರನ್ ಪಿ, ಕೇರಳದ ಅಮೃತ ವಿಶ್ವ ವಿದ್ಯಾಪೀಠದ ಪ್ರಾಧ್ಯಾಪಕ ಮತ್ತು ಡಾ. ಅಶ್ವಿನ್ ಅನಿಲ್ ಗುಮಸ್ತೆ, ಬಾಂಬೆಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಇನ್‌ಸ್ಟಿಟ್ಯೂಟ್ ಚೇರ್ ಅಸೋಸಿಯೇಟ್ ಪ್ರೊಫೆಸರ್ ಈ ಮೂವರು ಸಮಿತಿ ಸದಸ್ಯರಾಗಿದ್ದಾರೆ.

ಇದನ್ನೂ ಓದಿ: ಪೆಗಾಸಸ್ ಹಗರಣ ತನಿಖೆಗೆ ಸಮಿತಿ ರಚನೆ: ಸುಪ್ರೀಂ ಹೇಳಿಕೆ

ಸಮಿತಿಯ ಮೇಲ್ವಿಚಾರಣೆ ನಡೆಸಲಿರುವ ನಿವೃತ್ತ ನ್ಯಾಯಮೂರ್ತಿ ಆರ್. ವಿ. ರವೀಂದ್ರನ್, ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರು. ಇತ್ತೀಚೆಗೆ ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರು “ಭಾರತದ ಸುಪ್ರೀಂ ಕೋರ್ಟ್‌ನ ಪ್ರತಿಷ್ಠೆಯನ್ನು ಹೆಚ್ಚಿಸಿದ ದಂತಕಥೆಗಳಲ್ಲಿ ಒಬ್ಬರು” ಎಂದು ಉಲ್ಲೇಖಿಸಿದ್ದರು.

ಪ್ರೊ.ಡಾ.ನವೀನ್ ಕುಮಾರ್ ಚೌಧರಿ: ಸೈಬರ್ ಸೆಕ್ಯುರಿಟಿ, ಇ-ಆಡಳಿತ, ಡಿಜಿಟಲ್ ಫೊರೆನ್ಸಿಕ್ಸ್, ನೆಟ್‌ವರ್ಕ್ ಸೆಕ್ಯುರಿಟಿ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಪರಿಣಿತರಾಗಿದ್ದಾರೆ. ಪ್ರೊ.ಚೌಧರಿ ಯುಜಿಸಿ ಸಮಿತಿಯ ಸದಸ್ಯರೂ ಆಗಿದ್ದಾರೆ. ಜೊತೆಗೆ ಗುಜರಾತ್‌ನ ಗಾಂಧಿನಗರದಲ್ಲಿರುವ ರಾಷ್ಟ್ರೀಯ ವಿಧಿವಿಜ್ಞಾನ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಡೀನ್ ಆಗಿದ್ದಾರೆ.

ಡಾ. ಅಶ್ವಿನ್ ಅನಿಲ್ ಗುಮಸ್ತೆ: ಇವರು ಐಐಟಿ ಬಾಂಬೆಯಲ್ಲಿ ಇನ್ಸ್ಟಿಟ್ಯೂಟ್ ಚೇರ್ ಅಸೋಸಿಯೇಟ್ ಪ್ರೊಫೆಸರ್ (ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್) ಹುದ್ದೆಯನ್ನು ಹೊಂದಿದ್ದಾರೆ. ವಿಜ್ಞಾನ ಮತ್ತು ತಂತ್ರಜ್ಞಾನದ ಕೊಡುಗೆಗಾಗಿ 2018 ರಲ್ಲಿ ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿಯನ್ನು ಪಡೆದಿದ್ದಾರೆ. ಆಪ್ಟಿಕಲ್ ನೆಟ್‌ವರ್ಕ್‌ಗಳು, ಬ್ರಾಡ್‌ಬ್ಯಾಂಡ್ ಸಂವಹನ, ಎಂಡ್-ಟು-ಎಂಡ್ ನೆಟ್‌ವರ್ಕ್‌ಗಳು ಇವರು ಪರಿಣತಿ ಹೊಂದಿರುವ ಕೆಲವು ಕ್ಷೇತ್ರಗಳಾಗಿವೆ.

ಡಾ. ಪ್ರಭಾಹರನ್ ಪಿ: ಕೇರಳದ ಅಮೃತ ವಿಶ್ವ ವಿದ್ಯಾಪೀಠಂ ಸ್ಕೂಲ್ ಆಫ್ ಎಂಜಿನಿಯರಿಂಗ್‌ನಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಸೈಬರ್ ಸೆಕ್ಯೂರಿಟಿಯಲ್ಲಿ ಪರಿಣತಿ ಹೊಂದಿದ್ದಾರೆ.

ನಿವೃತ್ತ ನ್ಯಾಯಮೂರ್ತಿ ಆರ್‌.ವಿ.ರವೀಂದ್ರನ್ ಅವರ ಮೇಲ್ವಿಚಾರಣೆಯ ತ್ರಿಸದಸ್ಯ ಸಮಿತಿ ಪೆಗಾಸಸ್ ಕುರಿತಾದ ಆರೋಪಗಳನ್ನು ಕೂಲಂಕುಷವಾಗಿ ಮತ್ತು ತ್ವರಿತವಾಗಿ ಪರಿಶೀಲಿಸಿ ವರದಿ ಸಲ್ಲಿಸುವಂತೆ ನ್ಯಾಯಾಲಯ ಹೇಳಿದೆ.  ಎಂಟು ವಾರಗಳ ನಂತರ ನ್ಯಾಯಾಲಯವು ಪ್ರಕರಣವನ್ನು ಮತ್ತೊಮ್ಮೆ ವಿಚಾರಣೆ ನಡೆಸಲಿದೆ.

ವಿಚಾರಣೆ ವೇಳೆ, “ಪ್ರಕರಣದಲ್ಲಿ ಸರ್ಕಾರದಿಂದ ಅಸ್ಪಷ್ಟ ನಿರಾಕರಣೆ ಸಾಕಾಗುವುದಿಲ್ಲ. ಹೀಗಾಗಿ ಆರೋಪಗಳ ಬಗ್ಗೆ ತನಿಖೆಯಾಗಬೇಕು. ಪದೇ ಪದೇ ಅವಕಾಶ ನೀಡಿದರೂ ಸರ್ಕಾರ ಸ್ಪಷ್ಟತೆ ನೀಡದ ಸೀಮಿತ ಅಫಿಡವಿಟ್ ನೀಡುತ್ತಿದ್ದಾರೆ. ಅವರು ಸ್ಪಷ್ಟನೆ ನೀಡಿದ್ದರೆ ನಮ್ಮ ಮೇಲಿನ ಹೊರೆ ಕಡಿಮೆಯಾಗುತ್ತಿತ್ತು. ನ್ಯಾಯಾಲಯವು ರಾಷ್ಟ್ರೀಯ ಭದ್ರತೆಯನ್ನು ಅತಿಕ್ರಮಿಸುವುದಿಲ್ಲ. ಆದರೆ, ನ್ಯಾಯಾಲಯ ಮೂಕ ಪ್ರೇಕ್ಷಕರಂತೆ ಇರುವುದಿಲ್ಲ’ ಎಂದು ನ್ಯಾಯಪೀಠ ಹೇಳಿದೆ.


ಇದನ್ನೂ ಓದಿ: ಪೆಗಾಸಸ್ ಪ್ರಕರಣ: ಕೇಂದ್ರದ ಅಸ್ಪಷ್ಟ ನಿರಾಕರಣೆ ಸಾಕಾಗದು, ಸ್ವತಂತ್ರ ತನಿಖೆ ಅಗತ್ಯ- ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...