Homeಮುಖಪುಟಪೆಗಾಸಸ್ ಪ್ರಕರಣ: ಸ್ವತಂತ್ರ ತನಿಖೆ ನಡೆಸಲಿರುವ ಸಮಿತಿ ಸದಸ್ಯರು ಇವರು

ಪೆಗಾಸಸ್ ಪ್ರಕರಣ: ಸ್ವತಂತ್ರ ತನಿಖೆ ನಡೆಸಲಿರುವ ಸಮಿತಿ ಸದಸ್ಯರು ಇವರು

- Advertisement -
- Advertisement -

ಇಸ್ರೇಲ್ ಮೂಲದ NSO ಸಂಸ್ಥೆಯ ಗೂಢಚಾರ ತಂತ್ರಾಂಶವಾದ ಪೆಗಾಸಸ್ ಅನ್ನು ಬಳಸಿಕೊಂಡು ಭಾರತದ ಗಣ್ಯ ವ್ಯಕ್ತಿಗಳು, ರಾಜಕಾರಣಿಗಳು ಮತ್ತು ಪತ್ರಕರ್ತರ ಮೇಲೆ ಕಣ್ಗಾವಲು ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವತಂತ್ರ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಬುಧವಾರ ಮೂರು ಸದಸ್ಯರ ಸಮಿತಿ ನೇಮಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಈ ಆದೇಶ ಹೊರಡಿಸಿದೆ. ಮೂವರು ಸದಸ್ಯರ ಸಮಿತಿಯನ್ನು ನಿವೃತ್ತ ನ್ಯಾಯಮೂರ್ತಿ ಆರ್‌.ವಿ.ರವೀಂದ್ರನ್ ಮೇಲ್ವಿಚಾರಣೆ ನಡೆಸಲಿದೆ.

ಡಾ. ನವೀನ್ ಕುಮಾರ್ ಚೌಧರಿ, ಗಾಂಧಿನಗರದ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ಡೀನ್, ಡಾ. ಪ್ರಭಾಹರನ್ ಪಿ, ಕೇರಳದ ಅಮೃತ ವಿಶ್ವ ವಿದ್ಯಾಪೀಠದ ಪ್ರಾಧ್ಯಾಪಕ ಮತ್ತು ಡಾ. ಅಶ್ವಿನ್ ಅನಿಲ್ ಗುಮಸ್ತೆ, ಬಾಂಬೆಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಇನ್‌ಸ್ಟಿಟ್ಯೂಟ್ ಚೇರ್ ಅಸೋಸಿಯೇಟ್ ಪ್ರೊಫೆಸರ್ ಈ ಮೂವರು ಸಮಿತಿ ಸದಸ್ಯರಾಗಿದ್ದಾರೆ.

ಇದನ್ನೂ ಓದಿ: ಪೆಗಾಸಸ್ ಹಗರಣ ತನಿಖೆಗೆ ಸಮಿತಿ ರಚನೆ: ಸುಪ್ರೀಂ ಹೇಳಿಕೆ

ಸಮಿತಿಯ ಮೇಲ್ವಿಚಾರಣೆ ನಡೆಸಲಿರುವ ನಿವೃತ್ತ ನ್ಯಾಯಮೂರ್ತಿ ಆರ್. ವಿ. ರವೀಂದ್ರನ್, ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರು. ಇತ್ತೀಚೆಗೆ ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರು “ಭಾರತದ ಸುಪ್ರೀಂ ಕೋರ್ಟ್‌ನ ಪ್ರತಿಷ್ಠೆಯನ್ನು ಹೆಚ್ಚಿಸಿದ ದಂತಕಥೆಗಳಲ್ಲಿ ಒಬ್ಬರು” ಎಂದು ಉಲ್ಲೇಖಿಸಿದ್ದರು.

ಪ್ರೊ.ಡಾ.ನವೀನ್ ಕುಮಾರ್ ಚೌಧರಿ: ಸೈಬರ್ ಸೆಕ್ಯುರಿಟಿ, ಇ-ಆಡಳಿತ, ಡಿಜಿಟಲ್ ಫೊರೆನ್ಸಿಕ್ಸ್, ನೆಟ್‌ವರ್ಕ್ ಸೆಕ್ಯುರಿಟಿ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಪರಿಣಿತರಾಗಿದ್ದಾರೆ. ಪ್ರೊ.ಚೌಧರಿ ಯುಜಿಸಿ ಸಮಿತಿಯ ಸದಸ್ಯರೂ ಆಗಿದ್ದಾರೆ. ಜೊತೆಗೆ ಗುಜರಾತ್‌ನ ಗಾಂಧಿನಗರದಲ್ಲಿರುವ ರಾಷ್ಟ್ರೀಯ ವಿಧಿವಿಜ್ಞಾನ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಡೀನ್ ಆಗಿದ್ದಾರೆ.

ಡಾ. ಅಶ್ವಿನ್ ಅನಿಲ್ ಗುಮಸ್ತೆ: ಇವರು ಐಐಟಿ ಬಾಂಬೆಯಲ್ಲಿ ಇನ್ಸ್ಟಿಟ್ಯೂಟ್ ಚೇರ್ ಅಸೋಸಿಯೇಟ್ ಪ್ರೊಫೆಸರ್ (ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್) ಹುದ್ದೆಯನ್ನು ಹೊಂದಿದ್ದಾರೆ. ವಿಜ್ಞಾನ ಮತ್ತು ತಂತ್ರಜ್ಞಾನದ ಕೊಡುಗೆಗಾಗಿ 2018 ರಲ್ಲಿ ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿಯನ್ನು ಪಡೆದಿದ್ದಾರೆ. ಆಪ್ಟಿಕಲ್ ನೆಟ್‌ವರ್ಕ್‌ಗಳು, ಬ್ರಾಡ್‌ಬ್ಯಾಂಡ್ ಸಂವಹನ, ಎಂಡ್-ಟು-ಎಂಡ್ ನೆಟ್‌ವರ್ಕ್‌ಗಳು ಇವರು ಪರಿಣತಿ ಹೊಂದಿರುವ ಕೆಲವು ಕ್ಷೇತ್ರಗಳಾಗಿವೆ.

ಡಾ. ಪ್ರಭಾಹರನ್ ಪಿ: ಕೇರಳದ ಅಮೃತ ವಿಶ್ವ ವಿದ್ಯಾಪೀಠಂ ಸ್ಕೂಲ್ ಆಫ್ ಎಂಜಿನಿಯರಿಂಗ್‌ನಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಸೈಬರ್ ಸೆಕ್ಯೂರಿಟಿಯಲ್ಲಿ ಪರಿಣತಿ ಹೊಂದಿದ್ದಾರೆ.

ನಿವೃತ್ತ ನ್ಯಾಯಮೂರ್ತಿ ಆರ್‌.ವಿ.ರವೀಂದ್ರನ್ ಅವರ ಮೇಲ್ವಿಚಾರಣೆಯ ತ್ರಿಸದಸ್ಯ ಸಮಿತಿ ಪೆಗಾಸಸ್ ಕುರಿತಾದ ಆರೋಪಗಳನ್ನು ಕೂಲಂಕುಷವಾಗಿ ಮತ್ತು ತ್ವರಿತವಾಗಿ ಪರಿಶೀಲಿಸಿ ವರದಿ ಸಲ್ಲಿಸುವಂತೆ ನ್ಯಾಯಾಲಯ ಹೇಳಿದೆ.  ಎಂಟು ವಾರಗಳ ನಂತರ ನ್ಯಾಯಾಲಯವು ಪ್ರಕರಣವನ್ನು ಮತ್ತೊಮ್ಮೆ ವಿಚಾರಣೆ ನಡೆಸಲಿದೆ.

ವಿಚಾರಣೆ ವೇಳೆ, “ಪ್ರಕರಣದಲ್ಲಿ ಸರ್ಕಾರದಿಂದ ಅಸ್ಪಷ್ಟ ನಿರಾಕರಣೆ ಸಾಕಾಗುವುದಿಲ್ಲ. ಹೀಗಾಗಿ ಆರೋಪಗಳ ಬಗ್ಗೆ ತನಿಖೆಯಾಗಬೇಕು. ಪದೇ ಪದೇ ಅವಕಾಶ ನೀಡಿದರೂ ಸರ್ಕಾರ ಸ್ಪಷ್ಟತೆ ನೀಡದ ಸೀಮಿತ ಅಫಿಡವಿಟ್ ನೀಡುತ್ತಿದ್ದಾರೆ. ಅವರು ಸ್ಪಷ್ಟನೆ ನೀಡಿದ್ದರೆ ನಮ್ಮ ಮೇಲಿನ ಹೊರೆ ಕಡಿಮೆಯಾಗುತ್ತಿತ್ತು. ನ್ಯಾಯಾಲಯವು ರಾಷ್ಟ್ರೀಯ ಭದ್ರತೆಯನ್ನು ಅತಿಕ್ರಮಿಸುವುದಿಲ್ಲ. ಆದರೆ, ನ್ಯಾಯಾಲಯ ಮೂಕ ಪ್ರೇಕ್ಷಕರಂತೆ ಇರುವುದಿಲ್ಲ’ ಎಂದು ನ್ಯಾಯಪೀಠ ಹೇಳಿದೆ.


ಇದನ್ನೂ ಓದಿ: ಪೆಗಾಸಸ್ ಪ್ರಕರಣ: ಕೇಂದ್ರದ ಅಸ್ಪಷ್ಟ ನಿರಾಕರಣೆ ಸಾಕಾಗದು, ಸ್ವತಂತ್ರ ತನಿಖೆ ಅಗತ್ಯ- ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...