Homeಮುಖಪುಟಪೆಗಾಸಸ್ ಪ್ರಕರಣ: ಕೇಂದ್ರದ ಅಸ್ಪಷ್ಟ ನಿರಾಕರಣೆ ಸಾಕಾಗದು, ಸ್ವತಂತ್ರ ತನಿಖೆ ಅಗತ್ಯ- ಸುಪ್ರೀಂ

ಪೆಗಾಸಸ್ ಪ್ರಕರಣ: ಕೇಂದ್ರದ ಅಸ್ಪಷ್ಟ ನಿರಾಕರಣೆ ಸಾಕಾಗದು, ಸ್ವತಂತ್ರ ತನಿಖೆ ಅಗತ್ಯ- ಸುಪ್ರೀಂ

- Advertisement -
- Advertisement -

ಇಸ್ರೇಲ್ ಮೂಲದ NSO ಸಂಸ್ಥೆಯ ಗೂಢಚಾರ ತಂತ್ರಾಂಶವಾದ ಪೆಗಾಸಸ್ ಅನ್ನು ಬಳಸಿಕೊಂಡು ಭಾರತದ ಗಣ್ಯ ವ್ಯಕ್ತಿಗಳು, ರಾಜಕಾರಣಿಗಳು ಮತ್ತು ಪತ್ರಕರ್ತರ ಮೇಲೆ ಕಣ್ಗಾವಲು ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವತಂತ್ರ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಬುಧವಾರ ತಜ್ಞರ ಸಮಿತಿಯನ್ನು ನೇಮಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಈ ಆದೇಶ ಹೊರಡಿಸಿದೆ.

ನಿವೃತ್ತ ನ್ಯಾಯಮೂರ್ತಿ ಆರ್‌.ವಿ.ರವೀಂದ್ರನ್ ಅವರ ಮೇಲ್ವಿಚಾರಣೆಯ ತ್ರಿಸದಸ್ಯ ಸಮಿತಿಯು ಪೆಗಾಸಸ್ ಕುರಿತಾದ ಆರೋಪಗಳನ್ನು ಕೂಲಂಕುಷವಾಗಿ ಮತ್ತು ತ್ವರಿತವಾಗಿ ಪರಿಶೀಲಿಸಿ ನ್ಯಾಯಾಲಯದ ಮುಂದೆ ವರದಿ ಸಲ್ಲಿಸುವಂತೆ ಕೇಳಿದೆ.  ಎಂಟು ವಾರಗಳ ನಂತರ ನ್ಯಾಯಾಲಯವು ಪ್ರಕರಣವನ್ನು ಮತ್ತೊಮ್ಮೆ ವಿಚಾರಣೆ ನಡೆಸಲಿದೆ.

ಈ ಕುರಿತು ನಡೆಯುತ್ತಿರುವ ವಿಚಾರಣೆ ವೇಳೆ, “ಪ್ರಕರಣದಲ್ಲಿ ಸರ್ಕಾರದಿಂದ ಅಸ್ಪಷ್ಟ ನಿರಾಕರಣೆ ಸಾಕಾಗುವುದಿಲ್ಲ. ಹೀಗಾಗಿ ಆರೋಪಗಳ ಬಗ್ಗೆ ತನಿಖೆಯಾಗಬೇಕು. ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತಜ್ಞರ ಸಮಿತಿಯನ್ನು ನೇಮಿಸಲಾಗುತ್ತದೆ” ಎಂದು ಸುಪ್ರೀಂಕೋರ್ಟ್ ಪೀಠ ಹೇಳಿದೆ.

ಇದನ್ನೂ ಓದಿ: ಪೆಗಾಸಸ್ ಹಗರಣ ತನಿಖೆಗೆ ಸಮಿತಿ ರಚನೆ: ಸುಪ್ರೀಂ ಹೇಳಿಕೆ

ಜೊತೆಗೆ ಈ ಆರೋಪಗಳ ಸ್ವರೂಪ ನೋಡಿದರೆ ಇದು ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ತಿಳಿಸುತ್ತದೆ ಎಂದು ಹೇಳಿದೆ.

“ಪದೇ ಪದೇ ಅವಕಾಶ ನೀಡಿದರೂ ಸರ್ಕಾರ ಸ್ಪಷ್ಟತೆ ನೀಡದ ಸೀಮಿತ ಅಫಿಡವಿಟ್ ನೀಡುತ್ತಿದ್ದಾರೆ. ಅವರು ಸ್ಪಷ್ಟನೆ ನೀಡಿದ್ದರೆ ನಮ್ಮ ಮೇಲಿನ ಹೊರೆ ಕಡಿಮೆಯಾಗುತ್ತಿತ್ತು. ನ್ಯಾಯಾಲಯವು ರಾಷ್ಟ್ರೀಯ ಭದ್ರತೆಯನ್ನು ಅತಿಕ್ರಮಿಸುವುದಿಲ್ಲ. ಆದರೆ, ನ್ಯಾಯಾಲಯ ಮೂಕ ಪ್ರೇಕ್ಷಕರಂತೆ ಇರುವುದಿಲ್ಲ’ ಎಂದು ನ್ಯಾಯಪೀಠ ಹೇಳಿದೆ.

ಪೆಗಾಸಸ್ ಸ್ಪೈವೇರ್ ಪ್ರಕರಣದಲ್ಲಿ ಸ್ವತಂತ್ರ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಕೋರಿ ಅನೇಕ ಮನವಿಗಳನ್ನು  ಸುಪ್ರೀಂಕೋರ್ಟ್‌ಗೆ ಸಲ್ಲಿಸಲಾಗಿತ್ತು.

ರಾಜಕಾರಣಿಗಳು, ಸಾಮಾಜಿಕ ಹೋರಾಟಗಾರರು ಮತ್ತು ಪತ್ರಕರ್ತರ ಮೇಲೆ ಕಣ್ಣಿಡಲು ಸರ್ಕಾರವು ಇಸ್ರೇಲಿ ಸಾಫ್ಟ್‌ವೇರ್ ಪೆಗಾಸಸ್ ಅನ್ನು ಬಳಸುತ್ತಿದೆ ಎಂದು ಆರೋಪಿಸಿರುವ ವರದಿಗಳ ಕುರಿತು ತನಿಖೆ ನಡೆಸಲು ತಜ್ಞರ ಸಮಿತಿಯನ್ನು ರಚಿಸುವ ಉದ್ದೇಶವಿದೆ ಎಂದು ಪೀಠವು ಸೆಪ್ಟಂಬರ್ 23 ರಂದು ಹೇಳಿತ್ತು.

“ಕಳೆದ ವಾರವೇ ಪೆಗಾಸಸ್ ತನಿಖಾ ಸಮಿತಿ ಕುರಿತು ಆದೇಶ ಹೊರಡಿಸಲು ಬಯಸಿದ್ದೆವು. ಆದರೆ ನಾವು ಪರಿಗಣಿಸಿದ್ದ ಕೆಲವು ಸದಸ್ಯರು ವೈಯಕ್ತಿಕ ಕಾರಣಗಳಿಂದಾಗಿ ಈ ಸಮಿತಿಯ ಭಾಗವಾಗಿರಲು ನಿರಾಕರಿಸಿದರು. ಆದ್ದರಿಂದ ವಿಳಂಬವಾಗಿದೆ. ನಾವು ಮುಂದಿನ ವಾರ ಆದೇಶ ರವಾನಿಸಲು ಪ್ರಯತ್ನಿಸುತ್ತೇವೆ” ಎಂದು ಪ್ರಕರಣವೊಂದರ ವಿಚಾರಣೆಯ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ಸೆಪ್ಟಂಬರ್ 23 ರಂದು ಹೇಳಿದ್ದರು.

ಪೆಗಾಸಸ್ ಗೂಢಚಾರ ಹಗರಣದ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ಸುಪ್ರಿಂಕೊರ್ಟ್‌ಗೆ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಪ್ರತಿಕ್ರಿಯೆಯಾಗಿ ವಿವರವಾದ ಅಫಿಡವಿಟ್‌ಗಳನ್ನು ಸಲ್ಲಿಸುವುದಿಲ್ಲ ಎಂದು ಒಕ್ಕೂಟ ಸರ್ಕಾರ ಸೆಪ್ಟಂಬರ್ 13 ರಂದು ಹೇಳಿದೆ.


ಇದನ್ನೂ ಓದಿ: ಪೆಗಾಸಸ್‌ ಹಗರಣ – ಸುಪ್ರೀಂನಲ್ಲಿ ಅಫಿಡವಿಟ್‌ಗಳನ್ನು ಸಲ್ಲಿಸುವುದಿಲ್ಲ ಎಂದ ಒಕ್ಕೂಟ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...