Homeಮುಖಪುಟಪೆಗಾಸಸ್ ಪ್ರಕರಣ: ಕೇಂದ್ರದ ಅಸ್ಪಷ್ಟ ನಿರಾಕರಣೆ ಸಾಕಾಗದು, ಸ್ವತಂತ್ರ ತನಿಖೆ ಅಗತ್ಯ- ಸುಪ್ರೀಂ

ಪೆಗಾಸಸ್ ಪ್ರಕರಣ: ಕೇಂದ್ರದ ಅಸ್ಪಷ್ಟ ನಿರಾಕರಣೆ ಸಾಕಾಗದು, ಸ್ವತಂತ್ರ ತನಿಖೆ ಅಗತ್ಯ- ಸುಪ್ರೀಂ

- Advertisement -
- Advertisement -

ಇಸ್ರೇಲ್ ಮೂಲದ NSO ಸಂಸ್ಥೆಯ ಗೂಢಚಾರ ತಂತ್ರಾಂಶವಾದ ಪೆಗಾಸಸ್ ಅನ್ನು ಬಳಸಿಕೊಂಡು ಭಾರತದ ಗಣ್ಯ ವ್ಯಕ್ತಿಗಳು, ರಾಜಕಾರಣಿಗಳು ಮತ್ತು ಪತ್ರಕರ್ತರ ಮೇಲೆ ಕಣ್ಗಾವಲು ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವತಂತ್ರ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಬುಧವಾರ ತಜ್ಞರ ಸಮಿತಿಯನ್ನು ನೇಮಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಈ ಆದೇಶ ಹೊರಡಿಸಿದೆ.

ನಿವೃತ್ತ ನ್ಯಾಯಮೂರ್ತಿ ಆರ್‌.ವಿ.ರವೀಂದ್ರನ್ ಅವರ ಮೇಲ್ವಿಚಾರಣೆಯ ತ್ರಿಸದಸ್ಯ ಸಮಿತಿಯು ಪೆಗಾಸಸ್ ಕುರಿತಾದ ಆರೋಪಗಳನ್ನು ಕೂಲಂಕುಷವಾಗಿ ಮತ್ತು ತ್ವರಿತವಾಗಿ ಪರಿಶೀಲಿಸಿ ನ್ಯಾಯಾಲಯದ ಮುಂದೆ ವರದಿ ಸಲ್ಲಿಸುವಂತೆ ಕೇಳಿದೆ.  ಎಂಟು ವಾರಗಳ ನಂತರ ನ್ಯಾಯಾಲಯವು ಪ್ರಕರಣವನ್ನು ಮತ್ತೊಮ್ಮೆ ವಿಚಾರಣೆ ನಡೆಸಲಿದೆ.

ಈ ಕುರಿತು ನಡೆಯುತ್ತಿರುವ ವಿಚಾರಣೆ ವೇಳೆ, “ಪ್ರಕರಣದಲ್ಲಿ ಸರ್ಕಾರದಿಂದ ಅಸ್ಪಷ್ಟ ನಿರಾಕರಣೆ ಸಾಕಾಗುವುದಿಲ್ಲ. ಹೀಗಾಗಿ ಆರೋಪಗಳ ಬಗ್ಗೆ ತನಿಖೆಯಾಗಬೇಕು. ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತಜ್ಞರ ಸಮಿತಿಯನ್ನು ನೇಮಿಸಲಾಗುತ್ತದೆ” ಎಂದು ಸುಪ್ರೀಂಕೋರ್ಟ್ ಪೀಠ ಹೇಳಿದೆ.

ಇದನ್ನೂ ಓದಿ: ಪೆಗಾಸಸ್ ಹಗರಣ ತನಿಖೆಗೆ ಸಮಿತಿ ರಚನೆ: ಸುಪ್ರೀಂ ಹೇಳಿಕೆ

ಜೊತೆಗೆ ಈ ಆರೋಪಗಳ ಸ್ವರೂಪ ನೋಡಿದರೆ ಇದು ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ತಿಳಿಸುತ್ತದೆ ಎಂದು ಹೇಳಿದೆ.

“ಪದೇ ಪದೇ ಅವಕಾಶ ನೀಡಿದರೂ ಸರ್ಕಾರ ಸ್ಪಷ್ಟತೆ ನೀಡದ ಸೀಮಿತ ಅಫಿಡವಿಟ್ ನೀಡುತ್ತಿದ್ದಾರೆ. ಅವರು ಸ್ಪಷ್ಟನೆ ನೀಡಿದ್ದರೆ ನಮ್ಮ ಮೇಲಿನ ಹೊರೆ ಕಡಿಮೆಯಾಗುತ್ತಿತ್ತು. ನ್ಯಾಯಾಲಯವು ರಾಷ್ಟ್ರೀಯ ಭದ್ರತೆಯನ್ನು ಅತಿಕ್ರಮಿಸುವುದಿಲ್ಲ. ಆದರೆ, ನ್ಯಾಯಾಲಯ ಮೂಕ ಪ್ರೇಕ್ಷಕರಂತೆ ಇರುವುದಿಲ್ಲ’ ಎಂದು ನ್ಯಾಯಪೀಠ ಹೇಳಿದೆ.

ಪೆಗಾಸಸ್ ಸ್ಪೈವೇರ್ ಪ್ರಕರಣದಲ್ಲಿ ಸ್ವತಂತ್ರ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಕೋರಿ ಅನೇಕ ಮನವಿಗಳನ್ನು  ಸುಪ್ರೀಂಕೋರ್ಟ್‌ಗೆ ಸಲ್ಲಿಸಲಾಗಿತ್ತು.

ರಾಜಕಾರಣಿಗಳು, ಸಾಮಾಜಿಕ ಹೋರಾಟಗಾರರು ಮತ್ತು ಪತ್ರಕರ್ತರ ಮೇಲೆ ಕಣ್ಣಿಡಲು ಸರ್ಕಾರವು ಇಸ್ರೇಲಿ ಸಾಫ್ಟ್‌ವೇರ್ ಪೆಗಾಸಸ್ ಅನ್ನು ಬಳಸುತ್ತಿದೆ ಎಂದು ಆರೋಪಿಸಿರುವ ವರದಿಗಳ ಕುರಿತು ತನಿಖೆ ನಡೆಸಲು ತಜ್ಞರ ಸಮಿತಿಯನ್ನು ರಚಿಸುವ ಉದ್ದೇಶವಿದೆ ಎಂದು ಪೀಠವು ಸೆಪ್ಟಂಬರ್ 23 ರಂದು ಹೇಳಿತ್ತು.

“ಕಳೆದ ವಾರವೇ ಪೆಗಾಸಸ್ ತನಿಖಾ ಸಮಿತಿ ಕುರಿತು ಆದೇಶ ಹೊರಡಿಸಲು ಬಯಸಿದ್ದೆವು. ಆದರೆ ನಾವು ಪರಿಗಣಿಸಿದ್ದ ಕೆಲವು ಸದಸ್ಯರು ವೈಯಕ್ತಿಕ ಕಾರಣಗಳಿಂದಾಗಿ ಈ ಸಮಿತಿಯ ಭಾಗವಾಗಿರಲು ನಿರಾಕರಿಸಿದರು. ಆದ್ದರಿಂದ ವಿಳಂಬವಾಗಿದೆ. ನಾವು ಮುಂದಿನ ವಾರ ಆದೇಶ ರವಾನಿಸಲು ಪ್ರಯತ್ನಿಸುತ್ತೇವೆ” ಎಂದು ಪ್ರಕರಣವೊಂದರ ವಿಚಾರಣೆಯ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ಸೆಪ್ಟಂಬರ್ 23 ರಂದು ಹೇಳಿದ್ದರು.

ಪೆಗಾಸಸ್ ಗೂಢಚಾರ ಹಗರಣದ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ಸುಪ್ರಿಂಕೊರ್ಟ್‌ಗೆ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಪ್ರತಿಕ್ರಿಯೆಯಾಗಿ ವಿವರವಾದ ಅಫಿಡವಿಟ್‌ಗಳನ್ನು ಸಲ್ಲಿಸುವುದಿಲ್ಲ ಎಂದು ಒಕ್ಕೂಟ ಸರ್ಕಾರ ಸೆಪ್ಟಂಬರ್ 13 ರಂದು ಹೇಳಿದೆ.


ಇದನ್ನೂ ಓದಿ: ಪೆಗಾಸಸ್‌ ಹಗರಣ – ಸುಪ್ರೀಂನಲ್ಲಿ ಅಫಿಡವಿಟ್‌ಗಳನ್ನು ಸಲ್ಲಿಸುವುದಿಲ್ಲ ಎಂದ ಒಕ್ಕೂಟ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...